Posts

ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಅಭಿಯಾನಕ್ಕೆ ಚಾಲನೆ

Image
ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿ ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದು, ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.      ಭದ್ರಾವತಿ: ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದು, ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.      ಕಾರ್ಯಕ್ರಮ ಆರಂಭಕ್ಕೂ ಮೊದಲು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿ. ಸುರೇಶ್  ಮಾತನಾಡಿ, ವಿದ್ಯಾರ್ಥಿಗಳು ಮಾದಕವಸ್ತು ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.  ಪ್ರೌಢಶಾಲೆ ಹಾಗು ಕಾಲೇಜು ಅಧ್ಯಯನದ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟವಾದ ಗುರಿಗಳನ್ನು ಹಾಕಿಕೊಂಡು ಆ ನಿಟ್ಟಿನಲ್ಲಿ ಪ್ರಯತ್ನಗಳನ್...

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ೩ ವರ್ಷ ಕಠಿಣ ಜೈಲು ಶಿಕ್ಷೆ, ೩೧ ಸಾವಿರ ರು. ದಂಡ

Image
     ಭದ್ರಾವತಿ :  ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯುವಕನೊಬ್ಬನಿಗೆ ೩ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩೧,೦೦೦ ರು.ದಂಡ ವಿಧಿಸಿ ತೀರ್ಪು ನೀಡಿದೆ.       ೨೦೨೪ರಲ್ಲಿ ತಾಲೂಕಿನ ೨೦ ವರ್ಷದ ಯುವಕನೊಬ್ಬ ೧೬ ವರ್ಷದ ಬಾಲಕಿಯೊಂದಿಗೆ ಗೆಳೆತನ ಬೆಳೆಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.       ಆ ವೇಳೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಠಾಣಾ ಉಪ ನಿರೀಕ್ಷಕಿ ಇ. ಕವಿತಾ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.      ಪ್ರಕರಣದ ವಿಚಾರಣೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಪೇಪರ್‌ಟೌನ್ ಪೊಲೀಸರಿಂದ ಮೇಕೆ ಕಳ್ಳನ ಸೆರೆ

Image
೭೦ ಸಾವಿರ ರು. ಮೌಲ್ಯದ ೫ ಮೇಕೆ ವಶ   ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿ ಮೇಕೆಗಳನ್ನು ಕಳ್ಳತನ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ ಒಟ್ಟು ಸುಮಾರು ೭೦ ಸಾವಿರ ರು. ಮೌಲ್ಯದ ೫ ಮೇಕೆಗಳನ್ನು ವಶಪಡಿಸಿಕೊಳ್ಳುವಲ್ಲಿ ಪೇಪರ್‌ಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ಭದ್ರಾವತಿ: ತಾಲೂಕಿನ ಬಾರಂದೂರು ಗ್ರಾಮದಲ್ಲಿ ಮೇಕೆಗಳನ್ನು ಕಳ್ಳತನ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ ಒಟ್ಟು ಸುಮಾರು ೭೦ ಸಾವಿರ ರು. ಮೌಲ್ಯದ ೫ ಮೇಕೆಗಳನ್ನು ವಶಪಡಿಸಿಕೊಳ್ಳುವಲ್ಲಿ ಪೇಪರ್‌ಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ಬಾರಂದೂರು ಗ್ರಾಮದ ಮನಿಯ ಎಂಬುರಿಗೆ ಸೇರಿದ ಒಟ್ಟು ಸುಮಾರು ೯೦ ಸಾವಿರ ರು. ಮೌಲ್ಯದ ಒಟ್ಟು ೬ ಮೇಕೆಗಳನ್ನು ಇತ್ತೀಚೆಗೆ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ದೂರು ದಾಖಲಾಗಿದ್ದು, ಪ್ರಕರಣ ಭೇದಿಸಿದ ಪೊಲೀಸರು .ತಿಮ್ಲಾಪುರ ತಾಂಡಾ ನಿವಾಸಿ ರವಿಕುಮಾರ್ ಯಾನೆ ಕುಂಟ ರವಿಯನ್ನು ಬಂಧಿಸಿ ಒಟ್ಟು ಸುಮಾರು ೭೦ ಸಾವಿರ ರು. ಮೌಲ್ಯದ ೫ ಮೇಕೆಗಳನ್ನು ವಶಕ್ಕೆ ಪಡೆದಿದ್ದಾರೆ.       ಠಾಣೆಯ ಉಪ ನಿರೀಕ್ಷಕ ಎನ್. ಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಠಾಣೆಯ ಸಹಾಯಕ ಉಪ ನಿರೀಕ್ಷಕ ಕುಮಾರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ನಾಗರಾಜ್, ಬಸವರಾಜ್ ಮತ್ತು ಭರತ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆಯಲ್...

೨ ದಿನಗಳಿಂದ ವ್ಯಾಪಕ ಮಳೆ : ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತ

Image
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಕಳೆದ ಕೆಲವು ದಿನಗಳಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸಾಕಷ್ಟು ನಷ್ಟ ಉಂಟಾಗುತ್ತಿದೆ.       ಭದ್ರಾವತಿ: ಕ್ಷೇತ್ರದಲ್ಲಿ ಶುಕ್ರವಾರ ದಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯವಸ್ತಗೊಂಡಿದೆ.       ಶನಿವಾರ ಸಹ ಮಳೆ ಮುಂದುವರೆದಿದ್ದು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮಳೆಯಲ್ಲಿಯೇ ತೆರಳುವಂತಾಯಿತು. ಸೊಪ್ಪು, ತರಕಾರಿ, ಹಣ್ಣು ಹಾಗು ತಿಂಡಿ ತಿನಿಸುಗಳನ್ನು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳು ಗ್ರಾಹಕರಿಲ್ಲದೆ ಸಂಕಷ್ಟಕ್ಕೆ ಒಳಗಾಗುವಂತಾಯಿತು. ಕೆಲವು ಅಂಗಡಿಮುಗ್ಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಕೆಲವೆಡೆ ಮಣ್ಣಿನ ರಸ್ತೆಗಳು ಕೆಸರುಮಯವಾಗಿದ್ದು, ರಸ್ತೆಯಲ್ಲಿನ ಗುಂಡಿಗೊಟರುಗಳು, ಹಳ್ಳಕೊಳ್ಳಗಳು ಹಾಗು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತು ಕೊಂಡಿದ್ದು, ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಉಳಿದಂತೆ ಯಾವುದೇ ಹಾನಿ ಸಂಭವಿಸಿರುವುದು ತಿಳಿದು ಬಂದಿಲ್ಲ.       ಮಳೆ ವಿಳಂಬವಾಗಿ ಆರಂಭವಾಗಿರುವ ಹಿನ್ನಲೆಯಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಮಳೆ ಇದೆ ರೀತಿ ಮುಂದುವರೆದಲ್ಲಿ ಬೆಳೆ ಹಾನಿ ಸಂಭವಿಸುವ ಭೀತಿ ಎದುರಾಗಿದೆ.  ಮಳೆ ನಡುವೆ ಕೆಲವೆಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದು,  ಸಾಕಷ್ಟು ನಷ್ಟ ಉಂ...

ಆ.೩ರಂದು ಎಸ್‌ಐಆರ್ ಕುರಿತು `ಜಾಗೃತಿ ಬೀದಿನಾಟಕ'

Image
     ಭದ್ರಾವತಿ: ನಗರದ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಸಾಮಾಜಿಕ ಕಳಕಳಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ - ೨೦೨೬ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ `ಜಾಗೃತಿ ಬೀದಿನಾಟಕ' ಕಾರ್ಯಕ್ರಮ ಆ.೩ರ ಸೋಮವಾರ ಆಯೋಜಿಸಲಾಗಿದೆ.    ನಗರದ ರಂಗಪ್ಪ ವೃತ್ತ ಮತ್ತು ಮಾಧವಚಾರ್ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ೩ ಕಡೆ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಚುನಾವಣಾ ಆಯೋಗದ ಆದೇಶದಂತೆ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಜಾನಪದ ಕಲಾಸಂಘ ತೊಡಗಿಸಿಕೊಂಡಿದೆ. ಸಾರ್ವಜನಿಕರು ಈ `ಜಾಗೃತಿ ಬೀದಿನಾಟಕ' ವೀಕ್ಷಿಸಲು ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ  ಕಲಾಸಂಘದ ಕಾರ್ಯದರ್ಶಿಯಾದ ತಮಟೆ ಜಗದೀಶ್ ಕೋರಿದ್ದಾರೆ. 

ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಎಸ್‌ಐಆರ್ ಕಾರ್ಯ

Image
25 ಮತಗಟ್ಟೆ ಅಧಿಕಾರಿಗಳು ಶೇ.100 ಗುರಿ : ಪ್ರಶಂಸೆ, ಸನ್ಮಾನ  ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.       ಭದ್ರಾವತಿ: ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.      112 -ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಟ್ಟು 253 ಮತಗಟ್ಟೆ ಹಾಗು 2,14,907 ಮತದಾರರನ್ನು ಒಳಗೊಂಡಿದೆ. ಸುಮಾರು 15 ದಿನಗಳ ಹಿಂದೆಯೇ ಶೇ.100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಸುಮಾರು 1,69,700 ನಮೂನೆಗಳು ಗಣಕೀಕರಣಗೊಂಡಿವೆ.       ಬಹುತೇಕ ಮತಗಟ್ಟೆ ಅಧಿಕಾರಿಗಳು ಪ್ರಸ್ತುತ ಶೇ.100ರಷ್ಟು ಗುರಿ ತಲುಪುವ ಹಂತದಲ್ಲಿದ್ದಾರೆ. ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಶೇ.೧೦೦ ಗುರಿ ಸಾಧಿಸಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ.  ಮತದಾರರ ನೋಂದ...

ಆ.೨ರಂದು ಓಪನ್ ಜಿಮ್ ಉದ್ಘಾಟನೆ

Image
      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸುಮಾರು ೨೫ ಲಕ್ಷ ರು. ಅನುದಾನದಲ್ಲಿ ನಿರ್ಮಿಸಲಾಗಿರುವ ಓಪನ್ ಜಿಮ್ ಆ.೨ರ ಭಾನುವಾರ ಸಂಜೆ ೪ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ.       ಈ ಹಿಂದೆ ಸೂಡಾ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡ ಎಚ್. ರವಿಕುಮಾರ್‌ರವರ ಮನವಿ ಮೇರೆಗೆ ಉದ್ಯಾನವನದಲ್ಲಿ ಹೊರಾಂಗಣ ವ್ಯಾಯಾಮ ಸಾಮಾಗ್ರಿಗಳನ್ನು ಅಳವಡಿಸಲು ೨೫ ಲಕ್ಷ ರು. ಅನುದಾನ ಮಂಜೂರಾತಿಯಾಗಿತ್ತು. ಕೆಲವು ತಿಂಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆಗೊಳ್ಳುತ್ತಿದೆ.       ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ಸೂಡಾ ಮಾಜಿ ಸದಸ್ಯ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  

ಆ.೨ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Image
     ಭದ್ರಾವತಿ : ಹಳೇನಗರದ ಭಾವಸಾರ ಕ್ಷತ್ರೀಯ ಸಮಾಜದಿಂದ ಆ.೨ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಮಹಾತ್ಮಗಾಂಧಿ ರಸ್ತೆ(ತರೀಕೆರೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.      ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಹಾಗು ಆದರ್ಶ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಉಚಿತ ಹೃದಯ ರೋಗ, ಮಧುಮೇಹ, ರಕ್ತದೊತ್ತಡ, ಬೆನ್ನುಹುರಿ ಹಾಗು ಮೂಲೆ ಮತ್ತು ಕಣ್ಣುಗಳಿಗೆ ಸಂಬಂಧಿಸಿದ ತಪಾಸಣೆ ನಡೆಯಲಿದೆ. ಶಿಬಿರದಲ್ಲಿ ಖ್ಯಾತ ಮೂಳೆಚಿಕಿತ್ಸೆ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಎ.ಸಿ ಪ್ರೇಮರಾಜ್‌ರವರು ರೋಬೊಟೆಕ್ ಸಹಾಯದಿಂದ ಮಂಡಿ ಚಿಪ್ಪು ಮರುಜೋಡಣೆ, ಬೆನ್ನುಮೂಳೆ, ಕಾಲು ಮತ್ತು ಪಾದದ ಶಸ್ತ್ರ ಚಿಕಿತ್ಸೆ, ಮಕ್ಕಳ ಮೂಳೆ ಚಿಕಿತ್ಸೆಗೆ ಸಂಬಂಧಿಸಿದ ವಿಶೇಷ ಸಮಾಲೋಚನೆ ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರರಾವ್ ಕೋರಿದ್ದಾರೆ.   

ಹುತ್ತಾ ಕಾಲೋನಿಯಲ್ಲಿ ಚೆನ್ನಮ್ಮ ದೇವೇಗೌಡರ ಸ್ಮರಣೆ

Image
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ೧೧ನೇ ದಿನದ ಪುಣ್ಯಸ್ಮರಣೆ ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿಯಲ್ಲಿ ನಿವಾಸಿಗಳು ಹಾಗು ಅಭಿಮಾನಿಗಳಿಂದ ನಡೆಸಲಾಯಿತು.       ಭದ್ರಾವತಿ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ೧೧ನೇ ದಿನದ ಪುಣ್ಯಸ್ಮರಣೆ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿಯಲ್ಲಿ ನಿವಾಸಿಗಳು ಹಾಗು ಅಭಿಮಾನಿಗಳಿಂದ ನಡೆಸಲಾಯಿತು.    ಒಂದು ನಿಮಿಷ ಮೌನಾಚರಣೆ ನಡೆಸಿ ಚೆನ್ನಮ್ಮ ದೇವೇಗೌಡರವರ ಆತ್ಮಕ್ಕೆ ಭಗವಂತ ಚಿರಚಿರಶಾಂತಿ ನೀಡಲೆಂದು ಹಾಗೂ ಕುಟುಂಬ ವರ್ಗದವರು ಮತ್ತು ಸಹಸ್ರಾರು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಲಾಯಿತು.  ಸಿಎಂ ರಮೇಶ್, ಅನಿಲ್ ಕುಮಾರ್, ಕೇಶವಮೂರ್ತಿ, ರಾಜಣ್ಣ, ಮಾಯಣ್ಣ, ನಾರಾಯಣಪ್ಪ, ಚೆನ್ನಪ್ಪ ಹಾಗೂ ಹಲವಾರು ಹಿರಿಯರು ಭಾಗವಹಿಸಿದ್ದರು.    

ಆ.೨ರಂದು ಪ್ರಧಾನಿ ಮೋದಿಯವರೊಂದಿಗೆ ಶ್ರೀ ಸತ್ಯಸಾಯಿ ಜ್ಞಾನಪೀಠ ವಿದ್ಯಾರ್ಥಿಗಳು ಸಂವಾದ

Image
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆ.      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಆ.೨ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.       ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ದೇಶದ ಆಯ್ದ  ೧೧ ಶ್ರೀ ಸತ್ಯಸಾಯಿ ಶಾಲೆಗಳ ಮಕ್ಕಳೊಂದಿಗೆ ಬೆಳಿಗ್ಗೆ ೧೦ ರಿಂದ ೧೧.೩೦ರವರೆಗೆ `ನಶ ಮುಕ್ತ ಭಾರತ' ವಿಷಯ ಕುರಿತು ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ. ಈ ಶಾಲೆಗಳ ಪೈಕಿ ನಗರದ ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆ ಸಹ ಒಂದಾಗಿದ್ದು, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವಲಯದಲ್ಲಿ ಸಂತಸವನ್ನುಂಟು ಮಾಡಿದೆ. ಸಂವಾದಲ್ಲಿ ಸುಮಾರು ೨೦೦ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.       ಈ ಕುರಿತು ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ, ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಹಾಗು ಉಪಾಧ್ಯಕ್ಷ ಆರ್. ವಿನಯ್, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಜಂಟಿ ಆಡಳಿತಾಧಿಕಾರಿ ಸೌಮ್ಯ ಪ್ರಭಾಕರ ಬೀರಯ್ಯ ಮತ್ತು ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಪ್ರಮುಖರಾದ...

ಮಾನವ ಕಳ್ಳ ಸಾಗಾಣಿಕೆ ಕುರಿತು ಅರಿವಿನ ರಥ, ಬೈಕ್ ಜಾಥಾ ಮೂಲಕ ಜಾಗೃತಿ

Image
  ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಕಾರ್ಯಕ್ರಮ ಆಯೋಜನೆ  ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಭದ್ರಾವತಿ ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ನಿರ್ಮಲ ಆಸ್ಪತ್ರೆಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಗುರುವಾರ ಅರಿವಿನ ರಥ ಮತ್ತು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.      ಭದ್ರಾವತಿ : ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ನಿರ್ಮಲ ಆಸ್ಪತ್ರೆಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಗುರುವಾರ ಅರಿವಿನ ರಥ ಮತ್ತು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.       ರಂಗಪ್ಪ ವೃತ್ತದಲ್ಲಿ ಬೆಳಿಗ್ಗೆ ಮಹಿಳೆಯರ ಮೇಲಿನ ಅತ್ಯಾಚಾರಗಳು, ದೌರ್ಜನ್ಯಗಳನ್ನು ವಿರೋಧಿಸಿ ಅರಿವು ಮೂಡಿಸುವುದು, ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಬೈಕ್ ಜಾಥಾ ಹಾಗು ಅರಿವಿನ ರಥ ಉದ್ಘಾಟನೆ ನಡೆಯಿತು. ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ, ಕಿರಿಯ ವಿಭಾಗದ ನ್ಯಾಯಾಧೀಶರಾದ ರವಿಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಂಗಪ್ಪ ವೃತ್ತದಿಂದ ಆರಂಭಗೊಳ್ಳುವ ಜಾಥಾ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ಸಾಗಿ ನಂತರ ಹೊಸ ಸೇತುವೆ ರಸ್ತೆ ಮೂಲಕ ನಿರ್ಮಲ ಆಸ್ಪತ್ರೆ ತಲುಪಿತು.      ತಾ...

ಆ.೨ರಂದು `ಭೂಮಿಕಾ' ರಜತ ಮಹೋತ್ಸವ ಸಮಾರಂಭ : ಡಾ. ಕೃಷ್ಣ ಎಸ್. ಭಟ್

Image
     ಭದ್ರಾವತಿ: ಕನ್ನಡ ನಾಡು, ನುಡಿ, ಸಂಸ್ಕೃತಿಯ ಸೇವೆಗೆಂದು ಸಹಮನಸ್ಕರಿಂದ ೨೬ನೇ ಜನವರಿ ೨೦೦೨ ರಂದು ಪ್ರಾರಂಭವಾದ ಭೂಮಿಕಾ ವೇದಿಕೆ ಕಳೆದ ೨೫ ವರ್ಷಗಳಿಂದ ನಿರಂತರವಾಗಿ  ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಆ.೨ರ ಭಾನುವಾರ ವೇದಿಕೆಯ ರಜತ ಮಹೋತ್ಸವ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್ ಭಟ್ ತಿಳಿಸಿದರು.        ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆ ೨೫ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಅವಿಸ್ಮರಣೀಯ ಬೆಳವಣಿಗೆಯಾಗಿದೆ. ಅರ್ಥಪೂರ್ಣ, ಸಾರ್ಥಕ ನಿರಂತರ ಕಾರ್ಯಕ್ರಮಗಳಿಂದಾಗಿ ೨೫ ವರ್ಷಗಳು ಕಳೆದು ಹೋಗಿರುವುದು ಅರಿವಿಗೆ ಬರುತ್ತಿಲ್ಲ. ಹೇಗೆ ಹಕ್ಕಿಯಂತೆ ಹಾರಿ ಹೋಯಿತು ಎಂಬುದು ತಿಳಿಯಲೇ ಇಲ್ಲ ಎಂದರು.       ಕನ್ನಡ ಸಾಹಿತಿಗಳ ಸಂಸ್ಮರಣೆ, ರಸಪ್ರಶ್ನೆ, ಬೇಸಿಗೆ ಶಿಬಿರ, ದೇಶಭಕ್ತಿ ಗೀತೆ, ಕಾವ್ಯ ಗಾಯನ, ಮಹಿಳಾ ದಿನಾಚರಣೆ, ಶಿಕ್ಷಕರ ದಿನಾಚರಣೆ, ಪತ್ರಿಕಾ ದಿನಾಚರಣೆ, ಸಾಹಿತ್ಯ ಸಂಸ್ಕೃತಿ, ನೃತ್ಯ, ಜಾನಪದ, ಯಕ್ಷಗಾನ ಮುಂತಾದ ಸುಮಾರು ೧೫೦ ವಿಭಿನ್ನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸೇರಿದಂತೆ ವೇದಿಕೆ ಎಲ್ಲಾ ಸದಸ್ಯರ ಶ್ರಮ ಹೆಚ್...

ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯರಾಗಿರುವ ಮಹನೀಯರ ಜಯಂತಿಗಳಲ್ಲಿ ಎಲ್ಲರೂ ಪಾಲ್ಗೊಳ್ಳಿ

Image
ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪ್ರದೀಪ್ ದೇವಗಿರಿ ಭದ್ರಾವತಿಯಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ  ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಚನಕಾರ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯರಾಗಿರುವ ಮಹನೀಯರ ಜಯಂತಿಗಳಲ್ಲಿ ಎಲ್ಲಾ ಸಮುದಾಯದ ಜನರು ಪಾಲ್ಗೊಂಡು, ಮಹನೀಯರ ಮೌಲ್ಯಯುತ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಕರೆ ನೀಡಿದರು.       ಅವರು ಬುಧವಾರ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಚನಕಾರ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.        ಮಹನೀಯರ ಜಯಂತಿ ಕಾರ್ಯಕ್ರಮಗಳು ಸಾರ್ಥಕಗೊಳ್ಳಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹನೀಯರ ವಿಚಾರಧಾರೆಗಳನ್ನು ಅರಿತುಕೊಳ್ಳುವ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.       ಸಮಾಜದ ವಿದ್ಯಾರ್ಥಿನಿ ವೈ. ರಕ್ಷಿ...

ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರ, ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ ಗುರು ಪೂರ್ಣಿಮೆ

Image
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರು ಪೂರ್ಣಿಮೆ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಅದ್ದೂರಿಯಾಗಿ ಜರುಗಿತು.      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರು ಪೂರ್ಣಿಮೆ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಅದ್ದೂರಿಯಾಗಿ ಜರುಗಿತು.        ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರ ಸಂಕೀರ್ತನೆ, ೯.೩೦ರಿಂದ ಬಾಲವಿಕಾಸ ಮಕ್ಕಳಿಂದ ಗುರುಗಳಿಗೆ ಪಾದಪೂಜೆ ನೆರವೇರಿತು. ನಂತರ ಶ್ರೀ ಸಾಯಿ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಸಾಯಿ ಸಹಸ್ರನಾಮ ಅರ್ಚನೆ ಹಾಗು ಮಧ್ಯಾಹ್ನ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಜರುಗಿತು.       ಸಂಜೆ ವೇದಪಠಣ, ಶ್ರೀ ಸಾಯಿ ಪಾದುಕ ಅಷ್ಟೋತ್ತರ, ಭಜನೆ ಮತ್ತು ಚಿಂತನ, ಮಂಗಳಾರತಿ ಹಾಗು ಪ್ರದಾದ ವಿನಿಯೋಗ ಸೇರಿದಂತೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು.  ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ ಬೆಳಿಗ್ಗೆ ೭ ಗಂಟೆಯಿಂದ ವಿಶೇಷ ಆಲಂಕಾರದೊಂದಿಗೆ ಶಿರಡಿ ಸಾಯಿ ಬಾಬಾರವರ ...

ಶ್ರೀ ದತ್ತಾಶ್ರಮದಲ್ಲಿ ಆದ್ದೂರಿಯಾಗಿ ಜರುಗಿದ ಗುರು ಪೂರ್ಣಿಮಾ ಮಹೋತ್ಸವ

Image
ಶ್ರೀ ಕಾಂತಾನಂದ ಸರಸ್ವತೀ ಭಗವಾನ್ ಮಹಾರಾಜ್ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಭದ್ರಾವತಿ ನಗರದ ನ್ಯೂಟೌನ್ ಶ್ರೀ ದತ್ತಾಶ್ರಮದಲ್ಲಿ ಬುಧವಾರ ಗುರು ಪೂರ್ಣಿಮಾ ಮಹೋತ್ಸವ ಆಚರಿಸಲಾಯಿತು.       ಭದ್ರಾವತಿ : ಶ್ರೀ ಕಾಂತಾನಂದ ಸರಸ್ವತೀ ಭಗವಾನ್ ಮಹಾರಾಜ್ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಗರದ ನ್ಯೂಟೌನ್ ಶ್ರೀ ದತ್ತಾಶ್ರಮದಲ್ಲಿ ಬುಧವಾರ ಗುರು ಪೂರ್ಣಿಮಾ ಮಹೋತ್ಸವ ಆಚರಿಸಲಾಯಿತು.       ನಗರಕ್ಕೆ ಆಗಮಿಸಿದ ಶ್ರೀಗಳನ್ನು ಬೆಳಿಗ್ಗೆ ಪೂರ್ಣ ಕುಂಭದ ಮೂಲಕ ಭಕ್ತರು ಅದ್ದೂರಿಯಾಗಿ ಸ್ವಾಗತಿಸಿದರು. ನಂತರ ಶ್ರೀಗಳಿಂದ ವ್ಯಾಸ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಗುರುಭಿಕ್ಷೆ ಹಾಗು ಮಧ್ಯಾಹ್ನ ಮಹಾಪ್ರಸಾದ ನೆರವೇರಿತು. ಶ್ರೀಗಳ ಚಾತುರ್ಮಾಸದ ಅಂಗವಾಗಿ ಸೆ.೨೯ರವರೆಗೆ ಪ್ರತಿದಿನ ಬೆಳಿಗ್ಗೆ ೧೦ ಗಂಟೆಯಿಂದ ಲಲಿತ ಸಹಸ್ರನಾಮ, ಭಜನೆ ಮತ್ತು ಶ್ರೀಗಳವರ ಪಾದಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.      ವಿಶೇಷ ಎಂದರೆ ೨೯ ಜುಲೈ ೨೦೦೭ರಂದು ಹಿರಿಯ ಶ್ರೀಗಳಾದ ಶ್ರೀ ವಿರಜಾನಂದ ಸರಸ್ವತೀ ಮಹಾರಾಜ್ ಸ್ವಾಮೀಜಿಯರು ನಗರಕ್ಕೆ ಆಗಮಿಸಿದ್ದರು. ಶ್ರೀಗಳ ದಿವ್ಯಸಾನಿಧ್ಯದಲ್ಲಿ ಗುರು ಪೂರ್ಣಿಮಾ ಮಹೋತ್ಸವ ಜರುಗಿತ್ತು. ಇವರ ಶಿಷ್ಯರಾದ ಶ್ರೀ ಕಾಂತಾನಂದ ಸರಸ್ವತೀ ಭಗವಾನ್ ಮಹಾರಾಜ್ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಈ ಬಾರಿ ಗುರು ಪೂರ್ಣಿಮಾ ಮಹೋತ್ಸವ ಅದ...

ಧಾರ್ಮಿಕ ಸಾಮರಸ್ಯದೊಂದಿಗೆ ಸಂಸ್ಥಾಪನಾ ದಿನ ಆಚರಿಸಿದ ಸಿಆರ್‌ಪಿಎಫ್

Image
ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ ೯೭ ಆರ್‌ಎಎಫ್ ಬೆಟಾಲಿಯನ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ತನ್ನ ೮೮ನೇ ಸ್ಥಾಪನಾ ದಿನವನ್ನು ದೇಶಭಕ್ತಿಯ ಉತ್ಸಾಹ ಮತ್ತು ಕೋಮು ಸೌಹಾರ್ದತೆಯೊಂದಿಗೆ ಆಚರಿಸಿತು.      ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್ ೯೭ ಆರ್‌ಎಎಫ್ ಬೆಟಾಲಿಯನ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ತನ್ನ ೮೮ನೇ ಸ್ಥಾಪನಾ ದಿನವನ್ನು ದೇಶಭಕ್ತಿಯ ಉತ್ಸಾಹ ಮತ್ತು ಕೋಮು ಸೌಹಾರ್ದತೆಯೊಂದಿಗೆ ಆಚರಿಸಿತು.       ರಾಷ್ಟ್ರೀಯ ಏಕತೆ ಮತ್ತು ಜಾತ್ಯಾತೀತ ಮೌಲ್ಯಗಳಿಗೆ ಪಡೆಯ ಬದ್ಧತೆಯನ್ನು ಎತ್ತಿ ತೋರಿಸಲು ಪ್ರಮುಖ ಧಾರ್ಮಿಕ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆರಂಭದಲ್ಲಿ ರಾಷ್ಟ್ರದ ಸೇವೆಯಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಧೈರ್ಯಶಾಲಿ ಸಿಬ್ಬಂದಿಗೆ ಗೌರವ ಸಲ್ಲಿಸಲು ಹುತಾತ್ಮರ ಸ್ಮಾರಕದಲ್ಲಿ ಮಾಲಾರ್ಪಣೆ ಮಾಡಲಾಯಿತು.       ೯೭ ಆರ್‌ಎಎಫ್ ಬೆಟಾಲಿಯನ್ ಪಿಎಂಜಿ ಕಮಾಂಡೆಂಟ್ ದೇವಂದರ್ ಸಿಂಗ್ ಕಸ್ವಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಸಿಆರ್‌ಪಿಎಫ್ ತನ್ನದೇ ಆದ ಅದ್ಭುತ ಇತಿಹಾಸ ಹೊಂದಿದೆ. ಜುಲೈ ೨೭, ೧೯೩೯ರಂದು ಸ್ಥಾಪನೆಯಾದಾಗಿನಿಂದ ಆಂತರಿಕ ಭದ್ರತೆ, ವಿಪತ್ತು ಪರಿಹಾರ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅದರ ಪಾತ್ರ ಹೆಚ್ಚಿದ್ದಾಗಿದೆ ಎಂದರು.  ಸಿಆರ್‌ಪಿಎಫ್ ಯಾವಾಗಲೂ "ಸೇವೆ ಮತ್ತು ನಿಷ್ಠೆ"ಗಾಗಿ ನಿಂತಿದೆ ಮತ್ತು ವೈವ...

ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಅಂತರರಾಷ್ಟ್ರೀಯ ಹಿರಿಯರ ದಿನಾಚರಣೆ

Image
ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ಅಂತರರಾಷ್ಟ್ರೀಯ ಹಿರಿಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.       ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಭಾನುವಾರ ಅಂತರರಾಷ್ಟ್ರೀಯ ಹಿರಿಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.       ``ನಾನು ನಿಮ್ಮನ್ನು ಎಂದಿಗೂ ಮರೆಯುವುದಿಲ್ಲ'' ಎಂಬ ಧ್ಯೇಯ ವಾಕ್ಯದಡಿ ಹಿರಿಯರ ದಿನವನ್ನು ಪ್ರಾರ್ಥನಾಪೂರ್ವಕ ಗೌರವದೊಂದಿಗೆ ಆಚರಿಸಿದರು. ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ ರವರಿಂದ ಪೂಜಾ ವಿಧಿ-ವಿಧಾನಗಳು ನೆರವೇರಿದವು. ಚಿಕ್ಕ ಮಕ್ಕಳಿಂದ ಪ್ರಾರ್ಥನಾ ಭಾಗಗಳಿಗೆ ಸಹಕರಿಸಲಾಯಿತು. ಮಕ್ಕಳಿಂದ ನೆರೆದಂತ ಹಿರಿಯರಿಗೆ ಗೌರವಾಯುತ ಉಡುಗೊರೆಗಳನ್ನು ನೀಡಲಾಯಿತು.       ಧರ್ಮೋಪದೇಶದ ನಿರ್ದೇಶಕಿ ಸಿಸ್ಟರ್ ತೆರೇಸಾ ಮಸ್ಕರೇನಸ್‌ರವರ ಮಾರ್ಗದರ್ಶನದಲ್ಲಿ ಮಕ್ಕಳು ಪ್ರಾರ್ಥನೆ ಮತ್ತು ಗಾಯಕವೃಂದದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.       ಹಿರಿಯರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ, ಸುಃಖ, ಶಾಂತಿ, ನೆಮ್ಮದಿ ಹಾಗು ದೈವಿಕ ರಕ್ಷಣೆ ದೊರೆಯುವಂತೆ ಪ್ರಾರ್ಥನೆಯೊಂದಿಗೆ ಕೋರಲಾಯಿತು.       ಮಕ್ಕಳು ಕಾಮನಬಿಲ್ಲಿನ ಏಳು ಬಣ್ಣಗಳ ಧ್ವಜಗಳನ್ನು ಹಿಡಿದು ಪ್ರ...

ಡಿಜಿ ಪೇ ಲೈಟ್ ಸೇವೆಗೆ ಚಾಲನೆ

Image
ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯೋಜನಾ ಕಚೇರಿ-೧ರ ವ್ಯಾಪ್ತಿಯ ತಾಲೂಕಿನ ಜನ್ನಾಪುರ ವಲಯದ ಸಿರಿಯೂರು ಸಾಮಾನ್ಯ ಸೇವಾ ಕೇಂದ್ರದಲ್ಲಿ ಡಿಜಿ ಪೇ ಲೈಟ್ ಸೇವೆಗೆ ಚಾಲನೆ ನೀಡಲಾಯಿತು.      ಭದ್ರಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯೋಜನಾ ಕಚೇರಿ-೧ರ ವ್ಯಾಪ್ತಿಯ ತಾಲೂಕಿನ ಜನ್ನಾಪುರ ವಲಯದ ಸಿರಿಯೂರು ಸಾಮಾನ್ಯ ಸೇವಾ ಕೇಂದ್ರದಲ್ಲಿ ಡಿಜಿ ಪೇ ಲೈಟ್ ಸೇವೆಗೆ ಚಾಲನೆ ನೀಡಲಾಯಿತು.      ಡಿಜಿ ಪೇ ಲೈಟ್ ಸೇವೆಯಲ್ಲಿ ಡೆಬಿಟ್ ಕಾರ್ಡ್ ಮೂಲಕ ಗ್ರಾಮ ಪಂಚಾಯತಿ ಅಧ್ಯಕ್ಷ ಆನಂದ್ ರವರು ೫,೦೦೦ ರು.  ನಗದು ಹಣ ಪಡೆದುಕೊಂಡರು.  ಯೋಜನಾಧಿಕಾರಿ ಹರೀಶ್ ಕುಮಾರ್ ಶೆಟ್ಟಿರವರು ಸಾಮಾನ್ಯ ಸೇವಾ ಕೇಂದ್ರದಲ್ಲಿ ಡಿಜಿ ಪೇ ಲೈಟ್ ಕಾರ್ಯ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಮಾರ್ಗದರ್ಶನ ನೀಡಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.       ಮೇಲ್ವಿಚಾರಕರಾದ ಸಿ.ಎಚ್ ದಯಾನಂದ, ಟಿ.ಎನ್.ಓ ಸ್ವಾಮಿ, ಸೇವಾಪ್ರತಿನಿಧಿಗಳು, ಸಾಮಾನ್ಯ ಸೇವಾ ಕೇಂದ್ರದ ಸೇವಾದಾರರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜು.೩೦ರಂದು ಅರಿವಿನ ರಥ, ಬೈಕ್ ಜಾಥಾ

Image
     ಭದ್ರಾವತಿ : ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ನಿರ್ಮಲ ಆಸ್ಪತ್ರೆಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಜು.೩೦ರಂದು ಅರಿವಿನ ರಥ ಮತ್ತು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.       ರಂಗಪ್ಪ ವೃತ್ತದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಮಹಿಳೆಯರ ಮೇಲಿನ ಅತ್ಯಾಚಾರಗಳು, ದೌರ್ಜನ್ಯಗಳನ್ನು ವಿರೋಧಿಸಿ ಅರಿವು ಮೂಡಿಸುವುದು, ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಬೈಕ್ ಜಾಥಾ ನಡೆಸುವುದು ಹಾಗು ಅರಿವಿನ ರಥ ಉದ್ಘಾಟನೆ ನಡೆಯಲಿದೆ. ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ, ಕಿರಿಯ ವಿಭಾಗದ ನ್ಯಾಯಾಧೀಶರಾದ ರವಿಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.       ರಂಗಪ್ಪ ವೃತ್ತದಿಂದ ಆರಂಭಗೊಳ್ಳುವ ಜಾಥಾ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ಸಾಗಿ ನಂತರ ಹೊಸ ಸೇತುವೆ ರಸ್ತೆ ಮೂಲಕ ನಿರ್ಮಲ ಆಸ್ಪತ್ರೆ ತಲುಪಲಿದೆ. ವಿವಿಧ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೇವಾ ಕೇಂದ್ರದ ನಿರ್ದೇಶಕಿ ಸಿಸ್ಟರ್ ತೆರೇಸ ಮಸ್ಕರೇನ್ಹಸ್ ಕೋರಿದ್ದಾರೆ. 

ನಗರಸಭೆ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನ ನೀಡಿ

Image
ದಲಿತ ಮುಖಂಡರ ನೇತೃತ್ವದಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷ, ಪೌರಾಯುಕ್ತರಿಗೆ ಮನವಿ  ರಾಜ್ಯ ಸರ್ಕಾರ ವಿವಿಧ ಅನುಸೂಚಿತ ಉದ್ದಿಮೆಗಳಿಗೆ ಏಕ ರೂಪ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಿ ಹೊರಡಿಸಿರುವ ಅಧಿಸೂಚನೆ ಅನ್ವಯ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಸ್ವಚ್ಚತಾ ಕಾರ್ಮಿಕರು, ಗುತ್ತಿಗೆ ಹಾಗು ಹೊರ ಗುತ್ತಿಗೆ ಕಾರ್ಮಿಕರು, ನೇರಪಾವತಿ ಸೌಲಭ್ಯ ಪಡೆಯುತ್ತಿರುವ ಕಾರ್ಮಿಕರು, ಚಾಲಕರು, ಸಹಾಯಕರು ಹಾಗು ಕ್ಲೀನರ್‌ಗಳಿಗೆ ಕನಿಷ್ಠ ವೇತನ ಪಾವತಿಸುವಂತೆ ಆಗ್ರಹಿಸಿ ಸೋಮವಾರ ದಲಿತ ಮುಖಂಡರ ನೇತೃತ್ವದಲ್ಲಿ ಭದ್ರಾವತಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಹಾಗು ಉಪಾಧ್ಯಕ್ಷ ಬಷೀರ್ ಅಹಮದ್ ಮತ್ತು ಪೌರಾಯುಕ್ತ ಕೆ.ಎನ್ ಹೇಮಂತ್ ಅವರಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ : ರಾಜ್ಯ ಸರ್ಕಾರ ವಿವಿಧ ಅನುಸೂಚಿತ ಉದ್ದಿಮೆಗಳಿಗೆ ಏಕ ರೂಪ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಿ ಹೊರಡಿಸಿರುವ ಅಧಿಸೂಚನೆ ಅನ್ವಯ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಸ್ವಚ್ಚತಾ ಕಾರ್ಮಿಕರು, ಗುತ್ತಿಗೆ ಹಾಗು ಹೊರ ಗುತ್ತಿಗೆ ಕಾರ್ಮಿಕರು, ನೇರಪಾವತಿ ಸೌಲಭ್ಯ ಪಡೆಯುತ್ತಿರುವ ಕಾರ್ಮಿಕರು, ಚಾಲಕರು, ಸಹಾಯಕರು ಹಾಗು ಕ್ಲೀನರ್‌ಗಳಿಗೆ ಕನಿಷ್ಠ ವೇತನ ಪಾವತಿಸುವಂತೆ ಆಗ್ರಹಿಸಿ ಸೋಮವಾರ ದಲಿತ ಮುಖಂಡರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಹಾಗು ಉಪಾಧ್ಯಕ...

ಜೆ.ಎಂ.ಎಫ್.ಸಿ ನ್ಯಾಯಾಲದ ಆವರಣದಲ್ಲಿ ಇ-ಸೇವಾ ಕೇಂದ್ರ

Image
ಭದ್ರಾವತಿ ನಗರದ ರಂಗಪ್ಪ ವೃತ್ತದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ಮುನಿರಾಜು ಇ- ಸೇವಾ ಕೇಂದ್ರ ಉದ್ಘಾಟಿಸಿದರು.      ಭದ್ರಾವತಿ: ನಗರದ ರಂಗಪ್ಪ ವೃತ್ತದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ಮುನಿರಾಜು ಇ- ಸೇವಾ ಕೇಂದ್ರ ಉದ್ಘಾಟಿಸಿದರು.      ಬಹುನಿರೀಕ್ಷಿತ ಇ-ಸೇವಾ ಕೇಂದ್ರದಿಂದ ಹೆಚ್ಚಿನ ಅನುಕೂಲವಾಗಲಿದ್ದು, ಪ್ರತಿಯೊಬ್ಬರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂಬ ಆಶಯ ವ್ಯಕ್ತಪಡಿಸಲಾಯಿತು. ಪ್ರಧಾನ ಹಿರಿಯ ವಿಭಾಗದ ನ್ಯಾಯಾಧೀಶರಾದ ಡಿ. ರಾಘವೇಂದ್ರ, ಹೆಚ್ಚುವರಿ ಹಿರಿಯ ವಿಭಾಗದ ನ್ಯಾಯಾಧೀಶರಾದ ಜಿ.ಎಚ್ ಹನುಮಂತ, ಪ್ರಧಾನ ಕಿರಿಯ ವಿಭಾಗದ ನ್ಯಾಯಾಧೀಶರಾದ ವಿ. ರವಿಕುಮಾರ್, ಒಂದನೇ ಹೆಚ್ಚುವರಿ ಕಿರಿಯ ವಿಭಾಗದ ನ್ಯಾಯಾಧೀಶರಾದ ನಾಶೀರ ಬಾನು, ಎರಡನೇ ಹೆಚ್ಚುವರಿ ಕಿರಿಯ ವಿಭಾಗದ ನ್ಯಾಯಾಧೀಶರಾದ ಚೇತನಾ ಹಾಗೂ ನಾಲ್ಕನೇ ಹೆಚ್ಚುವರಿ ಕಿರಿಯ ವಿಭಾಗದ ನ್ಯಾಯಾಧೀಶರಾದ ಎನ್. ಗಿರಿಜಾ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಸಿ ಕೇಶವಮೂರ್ತಿ, ಉಪಾಧ್ಯಕ್ಷ ರಾಜು ಹಾಗೂ ಕಾರ್ಯದರ್ಶಿ ಎಂ. ಶಿವಕುಮಾರ್ ಮತ್ತು ನ್ಯಾಯದ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಕೀಲರು ಉಪಸ್ಥಿತರಿದ್ದರು.

ಸರ್ಕಾರಿ ಶಾಲಾ ಮಕ್ಕಳಿಗೆ ಕರಾಟೆ ತರಬೇತಿ : ಸಹಕಾರ ನೀಡಲು ಮನವಿ

Image
ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆಗೆ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಬೆಂಬಲ ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ, ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಸುಮಾರು ೪೦ ಕರಾಟೆ ವಿದ್ಯಾರ್ಥಿಗಳ ಪೈಕಿ ೧೦ ಮಂದಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ಓರ್ವ ವಿದ್ಯಾರ್ಥಿ ೩ನೇ ಸೌತ್ ಇಂಡಿಯನ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯ ಕಥಾ ಹಾಗೂ ಫೈಟ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ.      ಭದ್ರಾವತಿ: ನಗರಸಭೆ ವ್ಯಾಪ್ತಿಯ ಹೊಸಮನೆ, ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಸುಮಾರು ೪೦ ಕರಾಟೆ ವಿದ್ಯಾರ್ಥಿಗಳ ಪೈಕಿ ೧೦ ಮಂದಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.      ಮುಖ್ಯೋಪಾಧ್ಯಾಯ ನಾಗರಾಜ್ ರವರ ಪ್ರೋತ್ಸಾಹದಿಂದ ಶಾಲೆಯ ಸುಮಾರು ೪೦ ವಿದ್ಯಾರ್ಥಿಗಳು ಕರಾಟೆ ಕ್ರೀಡೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ವಿದ್ಯಾರ್ಥಿಗಳ ಈ ಪೈಕಿ ಓರ್ವ ವಿದ್ಯಾರ್ಥಿ ೩ನೇ ಸೌತ್ ಇಂಡಿಯನ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯ ಕಥಾ ಹಾಗೂ ಫೈಟ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಅಲ್ಲದೆ ೧೦ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು, ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ. ಕರಾಟೆ ತರಬೇತುದಾರ...

ಲೈಂಗಿಕ ಕಿರುಕುಳ : ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ದಂಡ

Image
     ಭದ್ರಾವತಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 31,000 ರು.  ದಂಡ ವಿಧಿಸಿ ತೀರ್ಪು ನೀಡಿದೆ. 2024ರಲ್ಲಿ ತಾಲೂಕಿನ 20 ವರ್ಷದ ಯುವಕನೊಬ್ಬ, 16 ವರ್ಷದ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಸಂತ್ರಸ್ತೆಯ ಕಡೆಯವರು ನೀಡಿದ ದೂರಿನ ಮೇರೆಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.      ಪ್ರಕರಣದ ತನಿಖೆ ಕೈಗೊಂಡಿದ್ದ ಆಗಿನ ತನಿಖಾಧಿಕಾರಿ ಇ. ಕವಿತಾ ರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ  ವಿಚಾರಣೆ ನಡೆಸಿದ  ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ರವರು, ಆರೋಪಿ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ  ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.  ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.

ಪೇಪರ್ ಟೌನ್, ಸಂಚಾರಿ ಪೊಲೀಸ್ ಠಾಣೆಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಭೇಟಿ

Image
ವಾರ್ಷಿಕ ಪರಿವೀಕ್ಷಣೆ ನಡೆಸಿ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸಲಹೆ, ಸೂಚನೆ  ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಶುಕ್ರವಾರ ಭದ್ರಾವತಿ ನಗರದ  ಪೇಪರ್ ಟೌನ್ ಹಾಗು ಸಂಚಾರಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.       ಭದ್ರಾವತಿ : ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಶುಕ್ರವಾರ ನಗರದ  ಪೇಪರ್ ಟೌನ್ ಹಾಗು ಸಂಚಾರಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.       ಎರಡು ಠಾಣೆಗಳಲ್ಲಿ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಂದ ಗೌರವ ವಂದನೆಗಳನ್ನು ಸ್ವೀಕರಿಸಿದರು. ನಂತರ  ನಂತರ ಠಾಣಾ ಕಾರ್ಯವೈಖರಿ, ದಾಖಲಾತಿ ಹಾಗೂ ಕಡತ ನಿರ್ವಹಣೆ ಮತ್ತು ಇತರೆ ಪ್ರಮುಖ ವಿಷಯಗಳನ್ನು ಪರಿಶೀಲಿಸಿದರು. ಅಲ್ಲದೆ ಅಧಿಕಾರಿಗಳು ಹಾಗು ಸಿಬ್ಬಂದಿಗಳ ಕುಂದು-ಕೊರತೆಗಳನ್ನು ಆಲಿಸಿ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ ಸಲಹೆ ಸೂಚನೆಗಳನ್ನು  ನೀಡಿದರು.       ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಚಿದಾನಂದ ಹಾಗು ಎರಡು ಠಾಣೆಗಳ ಉಪ ನಿರೀಕ್ಷಕರು ಮತ್ತು ಸಹಾಯಕ ಉಪ ನಿರೀಕ್ಷಕರು ಉಪಸ್ಥಿತರಿದ್ದರು. 

ಬಿಜೆಪಿ ಓಬಿಸಿ ಮೋರ್ಚಾ ಪದಗ್ರಹಣ, ಕಾರ್ಯಕಾರಿಣಿ ಸಭೆ : ಪಕ್ಷ ಬಲವರ್ಧನೆಗೆ ಶ್ರಮಿಸಿ

Image
ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮನವಿ  ಭದ್ರಾವತಿಯಲ್ಲಿ ನಗರ ಹಾಗೂ ಗ್ರಾಮಾಂತರ ಬಿಜೆಪಿ ಮಂಡಲಗಳ ಓಬಿಸಿ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕಾರಿಣಿ ಸಭೆ ಶುಕ್ರವಾರ ನಡೆಯಿತು.       ಭದ್ರಾವತಿ: ನಗರ ಮತ್ತು ಗ್ರಾಮಾಂತರ ಓಬಿಸಿ ಮೋರ್ಚಾಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮನವಿ ಮಾಡಿದರು.       ಅವರು ಶುಕ್ರವಾರ ನಗರ ಹಾಗೂ ಗ್ರಾಮಾಂತರ ಮಂಡಲಗಳ ಓಬಿಸಿ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.       ಪಕ್ಷ ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿದ್ದು, ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ವಿಶೇಷವಾಗಿ ದಲಿತ ಹಾಗು ಹಿಂದುಳಿದ ವರ್ಗಗಳಿಗಾಗಿ ಜಾರಿಗೊಳಿಸಿದೆ. ಇವುಗಳ ಸದ್ಬಳಕೆ ಕುರಿತು ಜನರಿಗೆ ಅರಿವು ಮೂಡಿಸುವ ಜೊತೆಗೆ ಪಕ್ಷ ಸಂಘಟನೆಗೆ ಕೈಜೋಡಿಸಬೇಕೆಂದರು.       ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ಬಿಜೆಪಿ ಪಕ್ಷ "ಸರ್ವವ್ಯಾಪಿ-ಸರ್ವಸ್ಪರ್ಶಿ" ತತ್ವದಡಿ ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಯನ್ನು ಬಲಪಡಿಸುತ್ತಿದೆ. ಜಿಲ್ಲೆಯಿಂದ ದೊರೆಯುವ ಮ...

ಹುತ್ತಾಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಅನುಮತಿ

Image
ಭದ್ರಾವತಿ ಹುತ್ತಾಕಾಲೋನಿ ಸರ್ಕಾರಿ ಪ್ರೌಢಶಾಲೆ.       ಭದ್ರಾವತಿ : ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೩೩ರ ಹುತ್ತಾಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.          ಈ ಶಾಲೆ ಇತ್ತೀಚಿನ ವರ್ಷಗಳಲ್ಲಿ ಶೈಕ್ಷಣಿಕವಾಗಿ ಗಣನೀಯ ಸಾಧನೆ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಸಂಬಂಧ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕೆಲವು ಷರತ್ತುಗಳೊಂದಿಗೆ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ವಿಭಾಗಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.       ಪ್ರಸಕ್ತ ಸಾಲಿನಲ್ಲಿ ಕನ್ನಡ ಮಾಧ್ಯಮ ವಿಭಾಗಗಳ ಜೊತೆಗೆ ೮, ೯ ಮತ್ತು ೧೦ನೇ ತರಗತಿಗಳಲ್ಲಿ ತಲಾ ಒಂದೊಂದು ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಅನುಮತಿಸಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಜ್ಞಾಪನ ಪತ್ರ ಹೊರಡಿಸಿದ್ದಾರೆ.  ಶಾಲೆಯ ಮುಖ್ಯ ಶಿಕ್ಷಕ ಪರಶುರಾಮರಾವ್ ಪತ್ರಿಕೆಗೆ ಪ್ರತಿಕ್ರಿಯಿಸಿ, ಶಾಲೆಯ ದಾಖಲಾತಿಯಲ್ಲಿ ಸುಧಾರಣೆ ಕಾಯ್ದುಕೊಳ್ಳಲಾಗಿದೆ. ಕಳೆದ ೨ ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ `ಎ' ಗ್ರೇಡ್ ಮೌಲ್ಯಂಕನದೊಂದಿಗೆ ಶೇ.೧೦೦ರಷ್ಟು ಫಲಿಶಾಂಶ ಪಡೆದಿದೆ. ಪರಿಣಿತ...

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Image
ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟ : ಬಲ್ಕೀಶ್ ಬಾನು   ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಸಿರುವ ಪೊಲೀಸ್ ದೌರ್ಜನ್ಯ ಹಾಗು ಗೂಂಡಾಗಳ ಹಲ್ಲೆ ಖಂಡಿಸಿ ಗುರುವಾರ ಎನ್‌ಎಸ್‌ಯುಐ ಹಾಗು ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.      ಭದ್ರಾವತಿ : ಪ್ರಶ್ನೆ ಪ್ರತಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಾಗು ಗೂಂಡಾಗಳನ್ನು ಬಳಸಿ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರತಿಭಟಿಸುವ ಹಕ್ಕು ಕಸಿದುಕೊಳ್ಳಲು ಯತ್ನಿಸುತ್ತಿದ್ದು, ಅಲ್ಲದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಆರೋಪಿಸಿದರು.       ಅವರು ಗುರುವಾರ ಎನ್‌ಎಸ್‌ಯುಐ ಹಾಗು ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.         ವಿದ್ಯಾರ್ಥಿಗಳು ತಮಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರ ಹೋರಾಟಕ್ಕೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ವಿನಾಕಾರಣ ದೌರ್ಜನ್ಯ ನಡೆಸುತ್ತಿದೆ. ಹೋರಾಟ ಮೊಟಕುಗೊಳಿಸಲು ಮುಂದಾಗಿದ್ದು, ಆದರೆ ಇದಕ್ಕೆ ಕಾಂಗ್ರೆಸ್ ಅವಕಾಶ ನ...

ಕನ್ನಡನಾಡು, ಕನ್ನಡಿಗರ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದ ಡಾ. ಎಸ್. ಜಾನಕಿ

Image
ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದಿಂದ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ನುಡಿ ಗೀತಾ ನಮನ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಉದ್ಘಾಟಿಸಿದರು.       ಭದ್ರಾವತಿ: ಖ್ಯಾತ ಗಾಯಕಿ ದಿವಂಗತ ಡಾ. ಎಸ್. ಜಾನಕಿ ಅವರು ಕನ್ನಡನಾಡು, ಕನ್ನಡಿಗರ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದರು. ಅಲ್ಲದೆ ಈ ನಾಡಿನ ಮಣ್ಣಿನಲ್ಲಿಯೇ ಮಣ್ಣಾದರು ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.       ಅವರು ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದಿಂದ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ನುಡಿ ಗೀತಾ ನಮನ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.       ಡಾ. ಎಸ್. ಜಾನಕಿಯವರು ತಮ್ಮ ಸುಮಧುರವಾದ ಕಂಠದ ಮೂಲಕ ದೇಶಾದ್ಯಂತ ಮನೆಮಾತಾಗಿದ್ದರು. ವಿಶೇಷವಾಗಿ ಕನ್ನಡನಾಡು, ಕನ್ನಡಿಗರ ಬಗ್ಗೆ ಪ್ರೀತಿ, ಅಭಿಮಾನ ಹೊಂದುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಈ ನಾಡಿನ ಪ್ರತಿಯೊಬ್ಬರು ಇವರ ಸ್ಮರಣೆ ಮಾಡಬೇಕೆಂದರು.       ಉದ್ಯಮಿ ಬಿ.ಕೆ ಜಗನ್ನಾಥ್, ಡಾ. ಎಸ್. ಜಾನಕಿಯವರ ಹಲವು ವಿಷಯಗಳ ಕುರ...

ಸಂಚಾರಿ ನಿಯಮ ಉಲ್ಲಂಘನೆ : ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ

Image
ಭದ್ರಾವತಿ ನಗರದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ಸಂಖ್ಯೆ ಫಲಕ(ನಂಬರ್ ಫ್ಲೇಟ್) ಹೊಂದಿಲ್ಲದ ಹಾಗು ದೋಷಪೂರಿತ ಸೈಲೆನ್ಸರ್ ಹೊಂದಿರುವ ಸುಮಾರು ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.       ಭದ್ರಾವತಿ : ನಗರದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ಸಂಖ್ಯೆ ಫಲಕ(ನಂಬರ್ ಫ್ಲೇಟ್) ಹೊಂದಿಲ್ಲದ ಹಾಗು ದೋಷಪೂರಿತ ಸೈಲೆನ್ಸರ್ ಹೊಂದಿರುವ ಸುಮಾರು ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.       ಪೊಲೀಸ್ ನಗರ ವೃತ್ತ ನಿರೀಕ್ಷಕಿ ನಾಗಮ್ಮರವರ ನೇತೃತ್ವದಲ್ಲಿ ಸಂಚಾರಿ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರ ನಾಯ್ಕ ಹಾಗು ರಾಜೇಶ್ ಸಂಗೊಳ್ಳಿ ಮತ್ತು ಸಿಬ್ಬಂದಿಗಳು ವಿಶೇಷ ಕಾರ್ಯಚರಣೆ ನಡೆಸಿದ್ದು, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ವಾಹನ ಚಾಲಕರು ಮತ್ತು ಮಾಲೀಕರ ವಾಹನ ದಾಖಲಾತಿಗಳನ್ನು ಪರಿಶೀಲಿಸಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.       ಇತ್ತೀಚಿನ ವರ್ಷಗಳಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಅಲ್ಲದೆ ಅಪಘಾತ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಿಂದ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಚಾಲಕರು...

ಬೃಹತ್ ರಕ್ತದಾನ ಶಿಬಿರ ಆಯೋಜನೆ : ಪತ್ರಕರ್ತರ ಸಂಘದ ಕಾರ್ಯಕ್ಕೆ ಶ್ಲಾಘನೆ

Image
ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಆರಂಭಕ್ಕೂ ಮೊದಲು ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹಾಗು ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ರಕ್ತದಾನ ಮಾಡಿದರು.       ಭದ್ರಾವತಿ : ಸರ್ಕಾರಿ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಿ ಯಶಸ್ವಿಗೊಳಿಸುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ ಇತರರಿಗೆ ಮಾದರಿಯಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.       ಅವರು ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.       ಪತ್ರಕರ್ತರ ಬದ್ದತೆ ಹಾಗು ಸಾಮಾಜಿಕ ಕಳಕಳಿಯನ್ನು ಪ್ರಶಂಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಪತ್ರಕರ್ತರು ಕೈಗೊಳ್ಳುವ ಕಾರ್ಯಕ್ರಮಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದಕ್ಕೂ ಮೊದಲು ರಕ್ತದಾನ ಮಾಡುವ ಮೂಲಕ ಯುವ ಸಮುದಾಯಕ್ಕೆ ರಕ್ತದಾನ...

ಎಸ್ಐಆರ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಗೆ ನಾಯಿ ಕಡಿತ

Image
ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇನಗರದ ಖಾಜಿಮೊಹಲ್ಲಾ-ಕೋಟೆ ಏರಿಯಾ ಭಾಗದಲ್ಲಿ ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ತಾಲ್ಲೂಕು  ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು . ಭದ್ರಾವತಿ:    ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇನಗರದ ಖಾಜಿಮೊಹಲ್ಲಾ-ಕೋಟೆ ಏರಿಯಾ ಭಾಗದಲ್ಲಿ ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ.  ನಗರಸಭೆ 5ನೇ ವಾರ್ಡಿನ ಖಾಜಿಮೊಹಲ್ಲಾ-ಕೋಟೆ ಏರಿಯಾ 3ನೇ ತಿರುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತಗಟ್ಟೆ ಅಧಿಕಾರಿ ರಹಮತುಲ್ಲಾ ಅವರ ಕಾಲಿಗೆ ಮನೆಯೊಂದರ ನಾಯಿ ಕಚ್ಚಿದ್ದು,  ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇವರು ತಕ್ಷಣ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.       ಮಾಹಿತಿ ತಿಳಿದ ತಕ್ಷಣ ಉಪತಹಸೀಲ್ದಾರ್ ಮಂಜಾನಾಯ್ಕರವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು. ಸಾರ್ವಜನಿಕರು ಇತರರ ಮೇಲೆ ದಾಳಿ ಮಾಡುವ ತಮ್ಮ ಸಾಕು ನಾಯಿಗಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. 

ಗಾಣಿಗ ಸಂಘದ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ

Image
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಟಿ. ವೆಂಕಟೇಶ್ ಆಗ್ರಹ  ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಗಾಣಿಗರ ಸಂಘ ಪ್ರಮುಖರು ಮಾತನಾಡಿದರು.               ಭದ್ರಾವತಿ: ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ರಾಜಕಾರಣದಲ್ಲಿ ಹೆಚ್ಚಿನ ಅನುಭವ ಹೊಂದಿರುವ ಗಾಣಿಗ ಸಮಾಜದ ಹಿರಿಯರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಗಾಣಿಗರ ಸಂಘ ಆಗ್ರಹಿಸಿದೆ.       ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಟಿ. ವೆಂಕಟೇಶ್, ಸರ್ವ ಜನಾಂಗವನ್ನು ಪ್ರೀತಿಸುವ ಜೊತೆಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿರುವ, ಅಭಿವೃದ್ಧಿ ಹರಿಗಾರರಾಗಿರುವ ಗಾಣಿಗರ ಸಮಾಜದ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.       ಸಂಘದ ಇನ್ನಿತರ ಪದಾಧಿಕಾರಿಗಳು, ಪ್ರಮುಖರು ಮಾತನಾಡಿ, ಕ್ಷೇತ್ರದಲ್ಲಿ ಸುಮಾರು ೩೦೦೦ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ೭೫೦ ಕುಟುಂಬಗಳಿವೆ. ಈ ಪೈಕಿ ಸಂಘದಲ್ಲಿ ೧೬೦೦ ಜನ ಸದಸ್ಯರಿದ್ದಾರೆ. ಕಳೆದ ೧೪ ವರ್ಷಗಳಿಂದ ಬಿ.ಕೆ ಸಂಗಮೇಶ್ವರ್ ಅವರು ಸಂಘದ ಗೌರವಾಧ್ಯಕ್ಷರಾಗಿ ಗಾ...

೧೦ ಸಾವಿರು ರು. ಲಂಚ ಸ್ವೀಕರಿಸುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

Image
20 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಮದೇವ್  ಭದ್ರಾವತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ನಾಮದೇವ್.       ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.       ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಸಿ. ಮೇಘರಾಜ್ ಅವರು ತಮ್ಮ ಪುತ್ರಿ ದೀಕ್ಷಾ ಅವರನ್ನು ವಸತಿ ಶಾಲೆಯ ೭ನೇ ತರಗತಿಗೆ ದಾಖಲಿಸಲು ಪ್ರಾಂಶುಪಾಲರನ್ನು ಸಂಪರ್ಕಿಸಿದ್ದರು. ಈ ವೇಳೆ ಶಾಲೆಗೆ ಡ್ರಮ್ ಸೆಟ್ ಖರೀದಿಸುವ ನೆಪವೊಡ್ಡಿದ ಪ್ರಾಂಶುಪಾಲ ನಾಮದೇವ್ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ೨೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.      ಈ ಸಂಬಂಧ ಮೇಘರಾಜ್ ಅವರು ಜು. ೧೮ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಪ್ರಾಂಶುಪಾಲನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-೧೯೮೮ (ತಿದ್ದುಪಡಿ-೨೦೧೮)ರ ಕಲಂ ೭(೩) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ...

ದೊಣಬಘಟ್ಟ, ಬಿಳಿಕಿ ಗ್ರಾಮ ಪಂಚಾಯಿತಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಡಿಪಿಆರ್

Image
ಸೂಕ್ತ ಕ್ರಮ ಕೈಗೊಳ್ಳಲು ಕುಡಿಯುವ ನೀರು, ನೈರ್ಮಲ್ಯ ಇಲಾಖೆಗೆ ಮನವಿ       ಭದ್ರಾವತಿ : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಣಬಘಟ್ಟ ಹಾಗು ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಸಂಬಂಧ ಕಾಮಗಾರಿ ಕೈಗೊಳ್ಳಲು ಅಂದಾಜು ಪಟ್ಟಿ(ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆ ಗುರುತಿಸಲು ಪ್ರಸ್ತಾವನೆ ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಭಾರ ಪ್ರಧಾನ ಅಭಿಯಂತರರಾದ ಎ. ಸುನಂದ ಅವರಿಗೆ ನಗರದ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.       ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪ್ರಸ್ತುತ ಬಿಳಿಕಿ ಕೆರೆಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಕೆರೆಯಲ್ಲಿ ಜಡ್ಡು ವಿಪರೀತ ಪ್ರಮಾಣದಲ್ಲಿ ಬೆಳೆದಿರುವುದರಿಂದ, ಮೀನು ಸಾಕಾಣಿಕೆ ಮಾಡುತ್ತಿರುವುದರಿಂದ ಹಾಗೂ ವ್ಯವಸಾಯಕ್ಕೆ ಬಳಸಲಾದ ರಾಸಾಯನಿಕ ಗೊಬ್ಬರ, ಕೀಟನಾಶಕಗಳು, ಕೆರೆಯ ನೀರಲ್ಲಿ ಸೇರ್ಪಡೆಯಾಗುತ್ತಿರುವುದರಿಂದ, ಸತ್ತ ಪ್ರಾಣಿಗಳು ಕೆರೆಯಲ್ಲಿ ಕಂಡು ಬರುತ್ತಿರುವುದರಿಂದ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ.       ಗ್ರಾಮಸ್ಥರಿಗೆ  ಕುಡಿಯಲ...

ಸುದ್ದಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಗಮನ ಹರಿಸಿ : ಸಂಸದ ಬಿ.ವೈ ರಾಘವೇಂದ್ರ

Image
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಆಶಾಕಿರಣ ಮಾದಕ ಮತ್ತು ಮದ್ಯ ವ್ಯಸನಗಳ ಸಮಗ್ರ ಪುನರ್ವತಿ ಕೇಂದ್ರದ ಫಾ. ಪ್ರಕಾಶ್ ಕೊಲಾಕೊ, ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಗದ್ದುಗೆ ಮಠದ ತಿಪ್ಪೇಸ್ವಾಮಿ(ರುದ್ರೇಶ ಶಾಸ್ತ್ರಿ) ಮತ್ತು ಜಮಾಹತೆ ಇಸ್ಲಾಮಿ-ಇ-ಹಿಂದ್ ಅಧ್ಯಕ್ಷ ಸುಲ್ತಾನ್ ಬೇಗ್ ಸರ್ವಧರ್ಮಿಯರು ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು.       ಭದ್ರಾವತಿ: ವೇಗವಾಗಿ ಸುದ್ದಿ ನೀಡುವುದ್ದಕ್ಕಿಂತ ಸುದ್ದಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಗಮನ ಹರಿಸಬೇಕು. ವಸ್ತುನಿಷ್ಠ ಹಾಗು ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವ ಗಟ್ಟಿಗೊಳಿಸುತ್ತದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.      ಅವರು ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಉದ್ಘಾಟಿಸಿ ಮಾತನಾಡಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ...