ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಿ : ಶ್ರೀ ಯಾದವಾನಂದ ಮಹಾಸ್ವಾಮಿ
ಭದ್ರಾವತಿ ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ಸಮೀಪ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನದ ೨ನೇ ವರ್ಷದ ವಾರ್ಷಿಕೋತ್ಸವ, ರಥೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ : ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಶಿಕ್ಷಣವಂತರನ್ನಾಗಿಸಿ ಎಂದು ಚಿತ್ರದುರ್ಗ, ಗೊಲ್ಲಗಿರಿ, ಅಖಿಲ ಭಾರತ ಯಾದವ ಮಹಾಸಂಸ್ಥಾನದ ಶ್ರೀ ಯಾದವಾನಂದ ಮಹಾಸ್ವಾಮಿಗಳು ಕರೆ ನೀಡಿದರು. ಶ್ರೀಗಳು ಭಾನುವಾರ ನಗರದ ನ್ಯೂಟೌನ್ ವಿಐಎಸ್ಎಲ್ ಆಸ್ಪತ್ರೆ ಸಮೀಪ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನದ ೨ನೇ ವರ್ಷದ ವಾರ್ಷಿಕೋತ್ಸವ, ರಥೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಪ್ರಸ್ತುತ ಸಮಾಜದಲ್ಲಿ ಮಾನವೀಯ ಗುಣಗಳು ಕಣ್ಮರೆಯಾಗುತ್ತಿವೆ. ಮಕ್ಕಳು ಮೊದಲು ಮಾನವ ಧರ್ಮ ಪ್ರೀತಿಸುವಂತವರಾಗಬೇಕು. ಉತ್ತಮ ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಎಲ್ಲರೊಂದಿಗೆ ಸೌಹಾರ್ದತೆಯಿಂದ ಬದುಕಲು ಸಾಧ್ಯ. ಸಮಾಜವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಜಗತ್ತಿಗೆ ಶ್ರೀ ಕೃಷ್ಣನ ...