ಇನ್ನೂ ಹೆಚ್ಚು ಸದೃಢಗೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಿ : ಬಿ.ಎಸ್ ಗಣೇಶ್
ಭದ್ರಾವತಿ ನಗರದ ಹೊಸ ಬುಳ್ಳಾಪುರ, ಗಾಣಿಗರ ಸಂಘದಿಂದ ಭಾನುವಾರ ಆಯೋಜಿಸಲಾಗಿದ್ದ ಗಾಣಿಗರ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಸಮುದಾಯ ಭವನದ ಪ್ರಥಮ ಹಂತದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಮತ್ತು ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ : ಗಾಣಿಗರ ಸಮಾಜ ಇನ್ನೂ ಹೆಚ್ಚು ಸಂಘಟಿತರಾಗುವ ಮೂಲಕ ಸದೃಢಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದವರು ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು. ಅವರು ನಗರದ ಹೊಸ ಬುಳ್ಳಾಪುರ, ಗಾಣಿಗರ ಸಂಘದಿಂದ ಭಾನುವಾರ ಆಯೋಜಿಸಲಾಗಿದ್ದ ಗಾಣಿಗರ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಸಮುದಾಯ ಭವನದ ಪ್ರಥಮ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಾಸಕರು ಗಾಣಿಗರ ಸಮಾಜದ ಅಭಿವೃದ್ಧಿಗೆ ಬದ್ದರಾಗಿದ್ದು, ಸಮಾಜದ ಮುಖ್ಯ ವಾಹಿನಿಯಲ್ಲಿ ಗಾಣಿಗರು ಸಹ ಗುರುತಿಸಿಕೊಳ್ಳುವ ಮೂಲಕ ಹೆಚ್ಚು ಸಂಘಟಿತರ...