ಭದ್ರಾವತಿಯಲ್ಲಿ ಶಾಲಾ-ಕಾಲೇಜು ಸೇರಿದಂತೆ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ಭದ್ರಾವತಿ ನಗರದ ಹೊಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು. ಭದ್ರಾವತಿ : ನಗರದ ವಿವಿಧೆಡೆ ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳು, ವಿವಿಧ ಸಂಘ-ಸಂಸ್ಥೆಗಳಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿ ಅರಿವು ಮೂಡಿಸುವ ಜೊತೆಗೆ ಪರಿಸರ ರಕ್ಷಣೆಗೆ ಜಾಗೃತಿವಹಿಸುವಂತೆ ಕರೆ ನೀಡಲಾಯಿತು. ಹೆಬ್ಬೂರು ಮಹಾವಿದ್ಯಾಲಯ: ತಾಲೂಕು ಉಚಿತ ಕಾನೂನು ಸೇವಾ ಸಮಿತಿ ಹಾಗು ತಾಲೂಕು ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ನೇತೃತ್ವದಲ್ಲಿ ನಗರದ ಕೆಎಸ್ಆರ್ಟಿಸಿ ಬಸ್ ಘಟಕದ ಸಮೀಪದ ಡಿ.ಕೆ ಶಿವಕುಮಾರ್ ಹೆಬ್ಬೂರು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಜೆಎಂಎಫ್ಸಿ ಕಿರಿಯ ವಿಭಾಗದ ಹಿರಿಯ ನ್ಯಾಯಾಧೀಶರಾದ ರವಿಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೇಶವಮೂರ್ತಿ, ಮಹಾವಿದ್ಯಾಲಯದ ಜಿ.ಆರ್ ಹೆಬ್ಬೂರು, ವಲಯ ಅರಣ್ಯಾಧಿಕಾರಿಗಳಾದ ಕೆ.ಆರ್ ರಾಜೇಶ್, ಬಿ.ಆರ್ ದಿನೇಶ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ವರ್ಗದವರು, ವಕೀಲರು ಹಾಗು ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವಿಶ್ವೇಶ್ವರಾಯ ವಿದ್ಯಾಸಂಸ್ಥೆ : ...