ಭದ್ರಾವತಿ ತಾಲೂಕಿನಲ್ಲಿ ಜೂ.೨೦ ರಿಂದ ಎಸ್ಐಆರ್ ಪ್ರಕ್ರಿಯೆಗಳು ಆರಂಭ
ಜೂ.೩೦ ರಿಂದ ಜು.೨೯ರವರೆಗೆ ಮನೆ ಮನೆಗೆ, ಅ.೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ ಭದ್ರಾವತಿ : ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಹಂತ-ಹಂತವಾಗಿ ಮತದಾರರ ಪಟ್ಟಿ ವಿಶೇಷ ಸಮU ಪರಿಷ್ಕರಣೆ(ಎಸ್ಐಆರ್) ಮಾಡಲು ಉದ್ದೇಶಿಸಿದ್ದು, ತಾಲೂಕಿನಲ್ಲಿ ಜೂ.೨೦ರಿಂದ ಈ ಸಂಬಂಧ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ತಿಳಿಸಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿ ಮಾಹಿತಿ ನೀಡಿದರು. ಜೂ.೨೦ರಿಂದ ೨೯ರವರೆಗೆ ಸಿದ್ದತೆ, ತರಬೇತಿ ಹಾಗು ಮುದ್ರಣ ಕಾರ್ಯಗಳು ನಡೆಯಲಿವೆ. ಜೂ.೩೦ ರಿಂದ ಜು.೨೯ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಆ.೫ರಂದು ಮತದಾರರ ಪಟ್ಟಿ ಬಿಡುಗಡೆಗೊಳಿಸಲಿದ್ದು, ಸೆ.೪ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅ.೩ರವರೆಗೆ ಆಕ್ಷೇಪಣೆಗಳ ಪರಿಶೀಲನೆ ನಡೆಯಲಿದ್ದು, ಅ.೭ರಂದು ಅಂತಿಮ ಮತದಾರರ ಪಟ್ಟಿ ಬಿಡುಯಾಗಲಿದೆ ಎಂದರು. ಮತದಾರರ ಪಟ್ಟಿಯನ್ನು ದೋಷರಹಿತವಾಗಿ ರೂಪಿಸುವುದು. ೧೮ ವರ್ಷ ಪೂರ್ಣಗೊಳಿಸಿದ ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರಿಸುವುದು ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಏಜೆಂ...