ಶಾಸಕ ಸಂಗಮೇಶ್ವರ್ಗೆ ಸಚಿವ ಸ್ಥಾನ ನೀಡಿ : ತೆಲುಗು ಕ್ರಿಶ್ಚಿಯನ್ ವೆಲ್ಫೇರ್ ಅಸೋಯೇಷನ್ ಆಗ್ರಹ
ಭದ್ರಾವತಿ : ಎಲ್ಲಾ ಧರ್ಮದ, ಎಲ್ಲಾ ಸಮುದಾಯದ, ಜಾತಿ-ಜನಾಂಗದವರನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ತೆಲುಗು ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಜೆ. ಭಾಸ್ಕರ್ ಬಾಬು ಆಗ್ರಹಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯಾ ಸಮಯ, ಸಂದರ್ಭಗಳಿಗೆ ತಕ್ಕಂತೆ ಸಮುದಾಯದ ಏಳಿಗೆಗಾಗಿ ಅಸೋಸಿಯೇಷನ್ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುತ್ತಾ ಬಂದಿದೆ. ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕ್ಷೇತ್ರಕ್ಕೆ ಈ ಬಾರಿ ಮಂತ್ರಿ ಸ್ಥಾನ ಲಭಿಸಬೇಕು. ಈ ಹಿನ್ನಲೆಯಲ್ಲಿ ೪ ಬಾರಿ ಗೆಲುವು ಸಾಧಿಸಿ ಶಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಸೋಸಿಯೇಷನ್ ಆಗ್ರಹಿಸುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಆರ್. ಜಯರಾವ್, ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ್ ಬಾಬು, ಖಜಾಂಚಿ ರಾಜು, ಡಿ. ಸಿರಿಲ್, ಟಿ. ಪ್ರಭುದಾಸ್, ಕೆ. ಅಂತೋಣಿ, ಪಾಸ್ಟರ್ ರೆವರೆಂಡ್ ಜಯರಾಮ್ ಹಾಗು ನಗರಸಭೆ ಸದಸ್ಯ ಎಂ.ಜಿ ರಾಮಚಂದ್ರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಡಿ೨-ಬಿಡಿವಿಟಿ೨ ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತೆಲುಗು ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ಅ...