Posts

ಮೂಲ ಸೌಕರ್ಯ ಕಲ್ಪಿಸಿ, ಹೊಸದಾಗಿ ೧೮ ಮಕ್ಕಳನ್ನು ದಾಖಲಿಸಿ ಸರ್ಕಾರಿ ಶಾಲೆ ಉಳಿಸಿಕೊಳ್ಳಲಾಯಿತು : ಸೈಯದ್ ಆಸಿಫ್

Image
ಭದ್ರಾವತಿ ಜಟ್‌ಪಟ್ ನಗರ ಆಶ್ರಯ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸೈಯದ್ ಆಸಿಫ್ ಮತ್ತು ಶಿಕ್ಷಕ ಜೆ. ಮಂಜುನಾಥ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.       ಭದ್ರಾವತಿ : ಕೇವಲ ೬ ಮಕ್ಕಳ ದಾಖಲಾತಿ ಹೊಂದುವ ಮೂಲಕ ಮುಚ್ಚುವ ಸ್ಥಿತಿ ತಲುಪಿದ್ದ ಜಟ್‌ಪಟ್ ನಗರ ಆಶ್ರಯ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸಹಕಾರ ಹಾಗು ಪರಿಶ್ರಮದಿಂದ ಉಳಿಸಿಕೊಳ್ಳಲಾಯಿತು. ಭವಿಷ್ಯದಲ್ಲಿ ಈ ಶಾಲೆ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಹೊಂದುವ ಮೂಲಕ ಮಾದರಿಯಾಗಬೇಕೆಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೈಯದ್ ಆಸಿಫ್ ಹೇಳಿದರು.       ಅವರು ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿ,  ಈ ಶಾಲೆಯಲ್ಲಿ ೨೦೨೪-೨೫ರ ಸಾಲಿನಲ್ಲಿ ಕೇವಲ ೬ ಮಕ್ಕಳು ದಾಖಲಾಗಿದ್ದರು. ಈ ಸಂದರ್ಭದಲ್ಲಿ ಶಾಲೆಯನ್ನು ಮುಚ್ಚಲು ಆಶ್ರಯ ಬಡಾವಣೆಯಲ್ಲಿ ಗುಸು ಗುಸು ಚರ್ಚೆ ನಡೆಯುತ್ತಿತ್ತು. ಇಂತಹ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶಾಲೆಗೆ ಅನುದಾನ ಬಿಡುಗಡೆಗೊಳಿಸಿದರು. ಅಲ್ಲದೆ ಈ ಭಾಗದ ನಗರಸಭಾ ಸದಸ್ಯ ಬಿ.ಎಂ ಮಂಜುನಾಥ್( ಟೀಕು) ಹೆಚ್ಚಿನ ಸಹಕಾರ ನೀಡಿದ ಹಿನ್ನಲೆಯಲ್ಲಿ ಶಾಲೆಯ ಮೂಲಬೋತ ಸೌಕರ್ಯಗಳಾದ ಕುಡಿಯುವ ನೀರು, ವ...

ಮತದಾರರಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಎ-೨ ಪಾತ್ರ ಮುಖ್ಯ : ಎನ್.ಕೆ ಜಗದೀಶ್

Image
ಮತದಾರರಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವೈಸ್) ಕುರಿತು ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಬಿಎಲ್‌ಎ-೨ ಕಾರ್ಯಗಾರದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಪಾಲ್ಗೊಂಡು ಮಾತನಾಡಿದರು.      ಭದ್ರಾವತಿ : ಮತದಾರರಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವೈಸ್)ದಲ್ಲಿ  ಬಿಎಲ್‌ಎ-೨ ಪಾತ್ರ ಮುಖ್ಯವಾಗಿದ್ದು, ಮತದಾರರಿಗೆ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಬೇಕೆಂದು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಕರೆ ನೀಡಿದರು.      ಅವರು ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಬಿಎಲ್‌ಎ-೨ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.  ಚುನಾವಣಾ ಆಯೋಗದ ಈ ಪ್ರಕ್ರಿಯೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ವಿರೋಧಿಸುತ್ತಿದೆ. ಮತದಾರರಪಟ್ಟಿ ಪರಿಷ್ಕರಣಿ ಹಕ್ಕನ್ನು ಸಂವಿಧಾನವೇ ಚುನಾವಣಾ ಆಯೋಗಕ್ಕೆ ನೀಡಿದ್ದು. ಇದನ್ನು ಯಾರು ಪ್ರಶ್ನಿಸುವಂತಿಲ್ಲ ಎಂಬುದಾಗಿ ನ್ಯಾಯಾಲಯ ಆದೇಶ ನೀಡಿದೆ ಎಂದರು.       ಮತ ಚಲಾಯಿಸುವುದು ಭಾರತೀಯ ನಾಗರೀಕರ ಹಕ್ಕು. ದೇಶದ ಭವಿಷ್ಯಕ್ಕಾಗಿ, ಮುಂದಿನ ಪೀಳಿಗೆ ಸುರಕ್ಷತೆಗಾಗಿ ಮತದಾನ ಅತ್ಯಂತ ಅವಶ್ಯಕ. ಇದರಿಂದ ಯಾರು ವಂಚಿತರಾ...

ಫೆ.೧೬ರಂದು ಬಿಇಓ ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ

Image
     ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪದ ಹಲವಾರು ವರ್ಷಗಳಿಂದ ಕಸದ ಕೊಂಪೆಯಂತಿರುವ ಖಾಲಿ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಉದ್ಯಾನವನ ನಿರ್ಮಿಸುವಂತೆ ಆಗ್ರಹಿಸಿ ಫೆ.೧೬ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.       ಡಾ. ಬಿ.ಆರ್ ಅಂಬೇಡ್ಕರ್ ಭವನದ ಆವರಣದ ಪಕ್ಕದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹಿಂಭಾಗ ಬಸವೇಶ್ವರ ವೃತ್ತಕ್ಕೆ ಸಂಪರ್ಕಗೊಂಡಿರುವ ಮುಖ್ಯ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಖಾಲಿ ಜಾಗವಿದ್ದು, ಈ ಜಾಗದಲ್ಲಿ ಗಿಡಗಂಟಿಗಳು ಬೆಳೆದಿವೆ. ಕಸಕಡ್ಡಿ, ತ್ಯಾಜದಿಂದ ಕೂಡಿರುವ ಜಾಗ ಸ್ಮಶಾನದಂತೆ ಗೋಚರಿಸುತ್ತಿದೆ. ಈ ಜಾಗವನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಹುನ್ನಾರ ನಡೆಸುತ್ತಿದ್ದು, ಇದನ್ನು ಸಮಿತಿ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಖಾಲಿ ಜಾಗ ನೀಡಬಾರದು. ಈ ಜಾಗದಲ್ಲಿ ಮಕ್ಕಳಿಗೆ ಉದ್ಯಾನವನ ನಿರ್ಮಿಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ.       ಫೆ.೧೬ರ ಬೆಳಿಗ್ಗೆ ೧೧ ಗಂಟೆಗೆ  ಸತ್ಯಾಗ್ರಹ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ. 

ಫೆ.೧೪ರಂದು ವಿಇಎಸ್ ಸಾಂಸ್ಕೃತಿಕ ಸಂಭ್ರಮ

Image
   ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ವಿಇಎಸ್ ಸಾಂಸ್ಕೃತಿಕ ಸಂಭ್ರಮ ಫೆ.೧೪ರಂದು ಸಂಜೆ ೫ ಗಂಟೆಗೆ ನಡೆಯಲಿದೆ.     ವಿಶ್ವೇಶ್ವರಾಯ ಕನ್ನಡ ಮತ್ತು ಆಂಗ್ಲ ಪೂರ್ವ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗು ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮತ್ತು ವಿಶ್ವೇಶ್ವರಾಯ ಬಿ.ಇಡಿ ಕಾಲೇಜು ಸಹಯೋಗದೊಂದಿಗೆ ಸಾಂಸ್ಕೃತಿ ಸಂಭ್ರಮ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅವರಣದಲ್ಲಿ ಹಮ್ಮಿಕೊಳ್ಳಲಾಗಿದೆ.     ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಪೂರ್‍ಯಾನಾಯ್ಕ, ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ವಿದ್ಯಾಸಂಸ್ಥೆ ಮಹಾಪೋಷಕ ಸಿ.ಎಸ್ ಷಡಾಕ್ಷರಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಬಗರ...

ರೇಡಿಯೋ ಕಿಸಾನ್ ದಿವಸ್ ಹಿನ್ನಲೆಯಲ್ಲಿ ಪ್ರಗತಿಪರ ಕೃಷಿಕ ಭಂಡಾರಹಳ್ಳಿ ಶ್ರೀಧರ್‌ಗೆ ಸನ್ಮಾನ

Image
ಭದ್ರಾವತಿ ತಾಲೂಕಿನ ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗು ಶಿವಮೊಗ್ಗ ಕೃಷಿ ತಂತ್ರಜ್ಞರ ಸಂಸ್ಥೆ ಸಹಯೋಗದೊಂದಿಗೆ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಫೆ.೧೫ರಂದು ರೇಡಿಯೋ ಕಿಸಾನ್ ದಿವಸದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿಪರ ಕೃಷಿಕ ಭಂಡಾರಹಳ್ಳಿ ಶ್ರೀಧರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ: ತಾಲೂಕಿನ ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗು ಶಿವಮೊಗ್ಗ ಕೃಷಿ ತಂತ್ರಜ್ಞರ ಸಂಸ್ಥೆ ಸಹಯೋಗದೊಂದಿಗೆ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಫೆ.೧೫ರಂದು ರೇಡಿಯೋ ಕಿಸಾನ್ ದಿವಸದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿಪರ ಕೃಷಿಕ ಭಂಡಾರಹಳ್ಳಿ ಶ್ರೀಧರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.       ೨೦೦೪ರಲ್ಲಿ ದೇಶಾದ್ಯಂತ ಕಿಸಾನ್ ವಾಣಿ ಕಾರ್ಯಕ್ರಮ ಫೆ.೧೫ರಂದು ಪ್ರಾರಂಭಿಸಿದ ಸವಿನೆನಪಿಗಾಗಿ ಪ್ರತಿ ವರ್ಷ ಫೆ.೧೫ ರೇಡಿಯೋ ಕಿಸಾನ್ ದಿವಸ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ರೈತರ ಸಬಲೀಕರಣ, ಯುವ ರೈತರನ್ನು ಪ್ರೋತ್ಸಾಹಿಸಲು ಮತ್ತು ಆಧುನಿಕ ಕೃಷಿ ಪದ್ದತಿ ಪ್ರೋತ್ಸಾಹಿಸುವ ಧ್ಯೇಯವಾಕ್ಯ ಹೊಂದಲಾಗಿದೆ.       ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಸುಮಾರ...

ಭೂ ದಾಖಲೆಗಳನ್ನು ನೀಡುವ ಕಾರ್ಯದಲ್ಲಿ ವಿಳಂಬ : ಸಚಿವರಿಗೆ ಮನವಿ

Image
ಭೂ ದಾಖಲೆಗಳನ್ನು   ನೀಡುವ ಕಾರ್ಯದಲ್ಲಿ ವಿಳಂಬವಾಗುತ್ತಿದ್ದು ,   ಕಂದಾಯ ಇಲಾಖೆ   ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು   ಭದ್ರಾವತಿ    ಪಿ . ಎಲ್ . ಡಿ   ಬ್ಯಾಂಕ್   ಅಧ್ಯಕ್ಷ ಬಿ . ಕೆ ಶಿವಕುಮಾರ್ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ   ಅವರಿಗೆ ಮನವಿ ಸಲ್ಲಿಸಿದ್ದಾರೆ .      ಭದ್ರಾವತಿ : ಭೂ ದಾಖಲೆಗಳನ್ನು ನೀಡುವ ಕಾರ್ಯದಲ್ಲಿ ವಿಳಂಬವಾಗುತ್ತಿದ್ದು , ಇದರಿಂದಾಗಿ  ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ .  ಕಂದಾಯ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕೆಂದು  ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್  ( ಪಿ . ಎಲ್ . ಡಿ ಬ್ಯಾಂಕ್ ) ಅಧ್ಯಕ್ಷ ಬಿ . ಕೆ ಶಿವಕುಮಾರ್ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ .      ಸರ್ಕಾರದ ಅಧಿಕೃತ ಭೂಮಿ ತಂತ್ರಾಂಶದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದು , ಇದರಿಂದಾಗಿ   ರೈತರು ಖಾತೆ , ಪಹಣಿ ಸೇರಿದಂತೆ ಭೂ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ ಅಲೆದಾಡುವಂತಾಗಿದೆ . ರೈತರು ಸಾಲ ಸೌಲಭ್ಯ , ಬೆಳೆವಿಮೆ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ . ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಮನವಿ...

ಫೆ.೧೭ರಂದು ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣರಿಗೆ ನುಡಿನಮನ

Image
ಡಿ.ಸಿ ಮಾಯಣ್ಣ    ಭದ್ರಾವತಿ : ಹಿರಿಯ ರಾಜಕೀಯ ಮುತ್ಸದಿ, ಕಾರ್ಮಿಕರ ಧ್ವನಿಯಾಗಿ ಅವರ ಹಕ್ಕುಗಳಿಗಾಗಿ, ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವುಗಳ ವಿರುದ್ಧ ಮತ್ತು ಕೋಮು ಸಂಘರ್ಷಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುವ ಮೂಲಕ ಹೋರಾಟದ ಬಹು ದೊಡ್ಡ ಶಕ್ತಿಯಾಗಿದ್ದ ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ಗೌರವ ಪೂರ್ವಕ ನುಡಿನಮನಗಳನ್ನು ಸಲ್ಲಿಸಲು ನಗರದ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮುಂದಾಗಿದೆ.      ಸತತ ಸುಮಾರು ೬-೭ ದಶಕಗಳ ಕಾಲ ಹೋರಾಟ ಶಕ್ತಿಯಾಗಿದ್ದ ಡಿ.ಸಿ ಮಾಯಣ್ಣನವರು ಇತ್ತೀಚೆಗೆ ತಮ್ಮ ೯೩ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ನಿಧನಕ್ಕೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಫೆ. ೧೭ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ `ನುಡಿ ನಮನ' ಕಾರ್ಯಕ್ರಮ ಆಯೋಜಿಸಿದೆ.     ಕಾರ್ಯಕ್ರಮವನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಒಕ್ಕೂಟದ ಅಧ್ಯಕ್ಷ ಪ್ರೊ. ಎಂ. ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ, ಸಾಮಾಜಿಕ ಚಿಂತಕ, ಅಂಕಣಕಾರ ಶಿವಸುಂದರ್. ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ, ಚಲನಚಿತ್ರ ನಟ, ವಿಚಾರವಾದಿ ಚೇತನ್ ಅಹಿಂಸಾ, ಡಿಎಸ...

ಬಿ.ಎಚ್ ರಸ್ತೆ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿ ಬೆಂಕಿ : ವಿಐಎಸ್‌ಎಲ್ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

Image
ಜನನಿಬಿಡ ಪ್ರದೇಶವಾದ ಭದ್ರಾವತಿ ನಗರದ ಬಿ.ಎಚ್ ರಸ್ತೆ, ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಬುಧವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.      ಭದ್ರಾವತಿ : ಜನನಿಬಿಡ ಪ್ರದೇಶವಾದ ನಗರದ ಬಿ.ಎಚ್ ರಸ್ತೆ, ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಬುಧವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.       ವಿಐಎಸ್‌ಎಲ್ ಕಾರ್ಖಾನೆ ಕಾಂಪೌಂಡ್‌ಗೆ ಹಾಗು ರೈಲ್ವೆ ಹಳಿಗೆ ಹೊಂದಿಕೊಂಡಿರುವ ಜಾಗದಲ್ಲಿ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಈ ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ಸ್ಥಳದಲ್ಲಿಯೇ ರಸ್ತೆ ಬದಿ ವ್ಯಾಪಾರಿಗಳು ಪೆಟ್ಟಿಗೆ ಅಂಗಡಿ ಜೊತೆಗೆ ಟೆಂಟ್‌ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಅಲ್ಲದೆ ಮತ್ತೊಂದು ಸಮೀಪದಲ್ಲಿ ಆಟೋ ನಿಲ್ದಾಣವಿದೆ. ಇಂತಹ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಆತಂಕ ಉಂಟು ಮಾಡಿದೆ.      ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ  ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಪರಿಣಾಮ...

ತಾಯಿಯ ಅಂತ್ಯಕ್ರಿಯೆಗೆ ತೆರಳಿದ್ದ ಮಗಳ ಮನೆಯಲ್ಲಿ ಸುಮಾರು ೭.೪೪ ಲಕ್ಷ ರು. ಚಿನ್ನಾಭರಣ, ನಗದು ಕಳ್ಳತನ

Image
     ಭದ್ರಾವತಿ : ಅನಾರೋಗ್ಯದಿಂದ ಮೃತಪಟ್ಟಿದ್ದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಗಳ ಮನೆಯಲ್ಲಿ ಲಕ್ಷಾಂತರ ರು. ಚಿನ್ನಾಭರಣ ಹಾಗು ನಗದು ಕಳ್ಳತನ ಮಾಡಿರುವ ಘಟನೆ ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ ಎನ್‌ಟಿಬಿ ಬಡಾವಣೆಯಲ್ಲಿ ನಡೆದಿದೆ.       ಎನ್‌ಟಿಬಿ ಬಡಾವಣೆ ನಿವಾಸಿ ಎಸ್. ಸರೋಜ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಾಗದನಗರದಲ್ಲಿ ವಾಸವಾಗಿರುವ ಸರೋಜರವರ ತಾಯಿ ಲಕ್ಷ್ಮಮ್ಮ ಅನಾರೋಗ್ಯದಿಂದ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಫೆ.೯ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಮಗ ಪ್ರೇಮ್ ಕುಮಾರ್ ಜೊತೆ ದ್ವಿಚಕ್ರ ವಾಹನದಲ್ಲಿ ಸರೋಜರವರು ಕಾಗದನಗರಕ್ಕೆ ಬಂದಿದ್ದು, ಅಂತ್ಯಕ್ರಿಯೆ ಮುಗಿಸಿಕೊಂಡು ಪ್ರೇಮ್‌ಕುಮಾರ್ ರಾತ್ರಿ ಮನೆಗೆ ಹಿಂದಿರುಗಿದಾಗ ಮನೆಯ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ. ತಕ್ಷಣ ಮಾಹಿತಿಯನ್ನು ತಾಯಿ ಸರೋಜರಿಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದು, ಮತ್ತೊಬ್ಬ ಮಗ ಹರೀಶ್ ಜೊತೆ ದ್ವಿಚಕ್ರವಾಹನದಲ್ಲಿ ಮನೆಗೆ ಮರಳಿದ ಸರೋಜರವರು ಒಳಗೆ ಹೋಗಿ ಪರಿಶೀಲಿಸಿದಾಗ ಬೀರುವಿನಲ್ಲಿ ಇಡಲಾಗಿದ್ದ ಚಿನ್ನಾಭರಣ, ನಗದು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.       ೪೦ ಗ್ರಾಂ. ತೂಕದ ಸುಮಾರು ೨ ಲಕ್ಷ ರು. ಮೌಲ್ಯದ ಚಿನ್ನದ ಸರ, ೧೯ ಗ್ರಾಂ. ತೂಕದ  ಸುಮಾರು ೯೫ ಸಾವಿರ ರು. ಮೌಲ್ಯದ ಚಿನ್ನದ ಸರ,  ೪೦ ಗ್ರಾಂ. ...

ಫೆ.೧೪ರಂದು ಸಪ್ತಶಕ್ತಿ ಸಂಗಮ `ಮಾತೆಯರ ಸಮಾವೇಶ'

Image
     ಭದ್ರಾವತಿ: ನಗರದ ಕೇಶವಪುರ ಬಡಾವಣೆ ತರುಣ ಭಾರತಿ ವಿದ್ಯಾಕೇಂದ್ರದಲ್ಲಿ ಫೆ.೧೪ರಂದು ಸಪ್ತಶಕ್ತಿ ಸಂಗಮ `ಮಾತೆಯರ ಸಮಾವೇಶ' ಮಧ್ಯಾಹ್ನ ೧.೪೫ಕ್ಕೆ ಹಮ್ಮಿಕೊಳ್ಳಲಾಗಿದೆ.       ನಗರಸಭೆ ಸದಸ್ಯೆ ಅನುಪಮ ಚನ್ನೇಶ್ ಅಧ್ಯಕ್ಷತೆವಹಿಸಲಿದ್ದು, ಶಿವಮೊಗ್ಗ ಬಾಲಗೋಕುಲ ಸಂಯೋಜಕಿ ಜ್ಯೋತಿ ಬಸವರಾಜ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಂಗಭೂಮಿ ಕ್ಷೇತ್ರದ ಸಾಧಕಿ ನಂದಿನಿ ಮಲ್ಲಿಕಾರ್ಜುನ, ನೃತ್ಯ ಕ್ಷೇತ್ರದ ಸಾಧಕಿ ಪುಷ್ಪ ಕೃಷ್ಣಮೂರ್ತಿ ಮತ್ತು ಸಂಗೀತ ಕ್ಷೇತ್ರದ ಸಾಧಕಿ ಡಿ.ಎಸ್ ಗಾಯಿತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ತರುಣ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಡಿ. ಸವಿತ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

ಸುರಗಿತೋಪು ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಂಪನ್ನ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ರಸ್ತೆಯ ಸುರಗಿತೋಪಿನ ಶ್ರೀ ಚೌಡೇಶ್ವರಿ ದೇವಿ ಹಾಗು ಮುನೇಶ್ವರಸ್ವಾಮಿಯ ೫೦ನೇ ವರ್ಷದ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಯಶಸ್ವಿಯಾಗಿ ಜರುಗಿತು. ಶ್ರೀ ಚೌಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.       ಭದ್ರಾವತಿ : ನಗರಸಭೆ ವ್ಯಾಪ್ತಿಯ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ರಸ್ತೆಯ ಸುರಗಿತೋಪಿನ ಶ್ರೀ ಚೌಡೇಶ್ವರಿ ದೇವಿ ಹಾಗು ಮುನೇಶ್ವರಸ್ವಾಮಿಯ ೫೦ನೇ ವರ್ಷದ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಯಶಸ್ವಿಯಾಗಿ ಜರುಗುವ ಮೂಲಕ ಸಂಪನ್ನಗೊಂಡಿತು.       ಸೋಮವಾರ ಬೆಳಿಗ್ಗೆ ಕಾಗದನಗರ ಎಂಪಿಎಂ ಸೊಸೈಟಿ ಮುಂಭಾಗದ ನಾಗರಕಟ್ಟೆಯಿಂದ ದೇವಸ್ಥಾನಕ್ಕೆ ಗಂಗೆ ತರುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ಚೌಡೇಶ್ವರಿ ದೇವಿಗೆ ಮತ್ತು ಮುನೇಶ್ವರಸ್ವಾಮಿಗೆ ಮಹಾಭಿಷೇಕ ನೆರವೇರಿತು. ನಂತರ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಲಾಯಿತು.  ಶ್ರೀ ಚೌಡೇಶ್ವರಿ ದೇವಿಗೆ ಮತ್ತು ಮುನೇಶ್ವರ ಸ್ವಮಿಗೆ ಮಹಾಮಂಗಳಾರತಿ ನೆರವೇರಿತು.  ಭದ್ರಾವತಿ ನಗರಸಭೆ ವ್ಯಾಪ್ತಿಯ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ರಸ್ತೆಯ ಸುರಗಿತೋಪಿನ ಶ್ರೀ ಚೌಡೇಶ್ವರಿ ದೇವಿ ಹಾಗು ಮುನೇಶ್ವರಸ್ವಾಮಿಯ ೫೦ನೇ ವರ್ಷದ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಯಶಸ್ವಿಯಾ...

ಕ್ಷೇತ್ರದ ಬಹುತೇಕ ವ್ಯಾಪ್ತಿಯಲ್ಲಿ ಫೆ.೧೨ರಂದು ವಿದ್ಯುತ್ ವ್ಯತ್ಯಯ

Image
     ಭದ್ರಾವತಿ: ಶಿವಮೊಗ್ಗ ಎಮ್.ಆರ್.ಎಸ್ ೨೨೦ ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾರ್ಗ ಮುಕ್ತತೆ ಪಡೆಯಲು ನಗರದ ಜೆ.ಪಿ.ಎಸ್ ಕಾಲೋನಿಯಲ್ಲಿರುವ ೧೧೦/೩೩/೧೧ ಕೆವಿ ಹಾಗೂ ಮಾಚೇನಹಳ್ಳಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಫೆ. ೧೨ರ ಗುರುವಾರ ಬೆಳಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಅನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎನ್.ಟಿ.ಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾಕಾಲೋನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ್ಯ, ಹೊಳೆ ಗಂಗೂರು, ಲಕ್ಷ್ಮಿಸಾಗರ (ರಬ್ಬರ್ ಕಾಡು), ಸುಲ್ತಾನಮಟ್ಟಿ, ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ...

ಶ್ರೀ ಕೆರೆ ಏರಿ ಚೌಡೇಶ್ವರಿ ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ

Image
     ಭದ್ರಾವತಿ : ತಾಲೂಕಿನ ತಾಷ್ಕೆಂಟ್‌ನಗರ ಗ್ರಾಮದ ಹೊರಭಾಗದಲ್ಲಿರುವ ಶ್ರೀ ಕೆರೆ ಏರಿ ಚೌಡೇಶ್ವರಿ ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.       ದೇವಸ್ಥಾನದ ಅರ್ಚಕ ಉಮೇಶ್‌ರವರು ಫೆ.೮ರ ಮಧ್ಯಾಹ್ನ ೨.೩೦ ಸಮಯದಲ್ಲಿ ಪೂಜೆ ಮುಗಿಸಿಕೊಂಡು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದು, ಪುನಃ ಮರುದಿನ ಬೆಳಿಗ್ಗೆ ೯ ಗಂಟೆ ಸಮಯದಲ್ಲಿ ದೇವಸ್ಥಾನಕ್ಕೆ ಬಂದಾಗ ದೇವಾಸ್ಥಾನ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಒಳಗೆ ಹೋಗಿ ನೋಡಿದಾಗ ದೇವರ ವಿಗ್ರಹದ ಮೇಲಿದ್ದ ಸುಮಾರು ೮೦ ಗ್ರಾಂ. ತೂಕದ ೪ ಸಾವಿರ ರು. ಮೌಲ್ಯದ ಬೆಳ್ಳಿಯ ಕಿರೀಟ, ಸುಮಾರು ೪೦ ಗ್ರಾಂ. ತೂಕದ ೨ ಸಾವಿರ ರು. ಮೌಲ್ಯದ ಬೆಳ್ಳಿಯ ತ್ರಿಶೂಲ ಹಾಗು ಒಟ್ಟು ೧೬ ಸಾವಿರ ರು. ಮೌಲ್ಯದ ತಲಾ ೧ ಗ್ರಾಂ. ತೂಕದ ೨ ಚಿನ್ನದ ತಾಳಿ, ಸುಮಾರು ೬ ಗ್ರಾಂ. ತೂಕದ ೪೫ ಸಾವಿರ ರು. ಮೌಲ್ಯದ ಚಿನ್ನದ ಮೂಗುತಿ ಹಾಗು ಭಕ್ತರಿಗೆ ಆಶೀರ್ವಾದ ಮಾಡಲು ಬಳಸುವ ಸುಮಾರು ೨೫೦ ಗ್ರಾಂ. ತೂಕದ ೨೨ ಸಾವಿರ ರು. ಮೌಲ್ಯದ ಬೆಳ್ಳಿಯ ಕಿರೀಟ ಸೇರಿದಂತೆ ಒಟ್ಟು ೮೯ ಸಾವಿರ ರು. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ.       ಈ ಸಂಬಂಧ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಪಿ ಲಿಂಗೇಶ್ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂ...

ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲ : ಬಿ.ಕೆ ಸಂಗಮೇಶ್ವರ್

Image
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಮಂಗಳವಾರ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಭೆಯನ್ನು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.       ಭದ್ರಾವತಿ: ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಮಂಗಳವಾರ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಭೆಯನ್ನು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.        ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ರಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ. ಈ ನಡುವೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದೆ. ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿಗಳನ್ನು ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಬಿ.ಎಸ್ ಗಣೇಶ್ ಪಾತ್ರ ಹೆಚ್ಚಿನ ಶ್ರಮವಹಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರ...

ಕಾಮ್ರೇಡ್ ಡಿ.ಸಿ ಮಾಯಣ್ಣರಿಗೆ ಪದ್ಮಶ್ರೀ, ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹ

Image
ಪ್ರಧಾನಿ, ಮುಖ್ಯಮಂತ್ರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಮನವಿ  ಭದ್ರಾವತಿ ನಗರದ ಹಿರಿಯ ರಾಜಕೀಯ ಮುತ್ಸದ್ಧಿ, ಕಾರ್ಮಿಕ ಮುಖಂಡ ಹಾಗು ಪ್ರಜ್ಞಾವಂತ ಮತ್ತು ಪ್ರಬುದ್ಧ ಹೋರಾಟಗಾರ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಸಮಾಜ ಸೇವೆಯನ್ನು ಗೌರವಿಸಿ ರಾಜ್ಯ ಸರ್ಕಾರ ಕರ್ನಾಟಕ ರತ್ನ ಮತ್ತು ಕೇಂದ್ರ ಸರ್ಕಾರ ಪ್ರದ್ಮಶ್ರೀ ಅತ್ಯುನ್ನತ ನಾಗರೀಕ ಪ್ರಶಸ್ತಿಗಳನ್ನು ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಉಪ ತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಪ್ರಧಾನ ಮಂತ್ರಿ ಹಾಗು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.  ಭದ್ರಾವತಿ: ನಗರದ ಹಿರಿಯ ರಾಜಕೀಯ ಮುತ್ಸದ್ಧಿ,  ಕಾರ್ಮಿಕ ಮುಖಂಡ ಹಾಗು ಪ್ರಜ್ಞಾವಂತ ಮತ್ತು ಪ್ರಬುದ್ಧ ಹೋರಾಟಗಾರ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಸಮಾಜ ಸೇವೆಯನ್ನು ಗೌರವಿಸಿ  ರಾಜ್ಯ ಸರ್ಕಾರ ಕರ್ನಾಟಕ ರತ್ನ ಮತ್ತು ಕೇಂದ್ರ ಸರ್ಕಾರ ಪ್ರದ್ಮಶ್ರೀ ಅತ್ಯುನ್ನತ ನಾಗರೀಕ ಪ್ರಶಸ್ತಿಗಳನ್ನು ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಉಪ ತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಪ್ರಧಾನ ಮಂತ್ರಿ ಹಾಗು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.  ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಹಾಗು ನಗರಸಭೆ ಮಾಜಿ ಅಧ್ಯಕ್ಷ ಆರ್. ಕರು...

ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪರಮೇಶ್, ಉಪಾಧ್ಯಕ್ಷರಾಗಿ ಎನ್. ಶ್ರೀನಿವಾಸ್

Image
ಪರಮೇಶ್       ಭದ್ರಾವತಿ : ನಗರದ ಅಪ್ಪರ್ ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಲೋಯರ್ ಹುತ್ತಾ ನಿವಾಸಿ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಹುತ್ತಾ ಕಾಲೋನಿ ನಿವಾಸಿ ಎನ್. ಶ್ರೀನಿವಾಸ್ ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.  ಸಂಘದಲ್ಲಿ ಒಟ್ಟು ೧೪ ನಿರ್ದೇಶಕ ಸ್ಥಾನಗಳಿದ್ದು, ಜ.೨೫ರಂದು ಚುನಾವಣೆ ನಡೆದು ನ್ಯೂಕಾಲೋನಿ ನಿವಾಸಿ ಸಾಮಾನ್ಯ ಸ್ಥಾನದಿಂದ ಕೆಂಪಯ್ಯ, ಗೊಂದಿ ನಿವಾಸಿ ಜಯರಾಮ್ ಗೊಂದಿ, ಹುತ್ತಾ ಕಾಲೋನಿ ನಿವಾಸಿ ಬಿ.ಎಲ್ ನಾಗಭೂಷಣ, ಲೋಯರ್ ಹುತ್ತಾ ನಿವಾಸಿ ಪರಮೇಶ್, ಉಜ್ಜನಿಪುರ ನಿವಾಸಿ ಆರ್. ಪ್ರಕಾಶ್, ಹುತ್ತಾಕಾಲೋನಿ ನಿವಾಸಿ ಎನ್. ಶ್ರೀನಿವಾಸ್, ಮಲ್ಲೇಶ್ ಮತ್ತು ಹಿಂದುಳಿದ ವರ್ಗ ಎ ಸ್ಥಾನದಿಂದ ಹುತ್ತಾ ಕಾಲೋನಿ ನಿವಾಸಿ ಜೆ. ನಾಗಯ್ಯ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಕಬಳಿಕಟ್ಟೆ ನಿವಾಸಿ ಆರ್. ನಾಗೇಶ್, ಪರಿಶಿಷ್ಟ ಜಾತಿ ಸ್ಥಾನದಿಂದ ಜನ್ನಾಪುರ ಟಿ. ನಾರಾಯಣ, ಸಂಪತ್ ಕುಮಾರ್ ಹಾಗು ಮಹಿಳಾ ಸ್ಥಾನದಿಂದ ಹುತ್ತಾ ಕಾಲೋನಿ ನಿವಾಸಿ ಎಸ್. ಭಾಗ್ಯ, ಹೊಸಸಿದ್ದಾಪುರ ನಿವಾಸಿ ವಸಂತ ಆಯ್ಕೆಯಾಗಿದ್ದರು.  ಎನ್. ಶ್ರೀನಿವಾಸ್  ಸಂಘದ ನೂತನ ಉಪಾಧ್ಯಕ್ಷ ಎನ್. ಶ್ರೀನಿವಾಸ್ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದಲ್ಲೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಇನ್ನೂ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ...

ವೇಶ್ಯಾವಾಟಿಕೆ ದಂಧೆ : ಮೂವರು ಮಹಿಳೆಯರಿಗೆ ೧೦ ವರ್ಷ ಕಠಿಣ ಶಿಕ್ಷೆ

Image
ನಗರಸಭೆ ವ್ಯಾಪ್ತಿಯ ಉಜ್ಜನಿಪುರದಲ್ಲಿ ೨೦೨೧ರಲ್ಲಿ ನಡೆದಿದ್ದ ಘಟನೆ       ಭದ್ರಾವತಿ: ಮನೆಗೆ ಮಹಿಳೆಯರನ್ನು ಕರೆದುಕೊಂಡು ಬಲವಂತದಿಂದ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಮಹಿಳೆಯರಿಗೆ ನಗರದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೧೦ ವರ್ಷ ಕಠಿಣ ಸಜೆ ಹಾಗು ತಲಾ ೧.೬೧ ಲಕ್ಷ ರು. ದಂಡ ವಿಧಿಸಿ ತೀರ್ಪು ನೀಡಿದೆ.       ಸುಮಾರು ೫ ವರ್ಷದ ಹಿಂದೆ ೨೪ ಡಿಸೆಂಬರ್ ೨೦೨೧ ರಂದು ಅಂದಿನ ಪ್ರಭಾರ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿತೇಂದ್ರ ಕುಮಾರ್ ದಯಾಮರವರು ಉಜ್ಜನಿಪುರದ ಮಾರಿಯಮ್ಮ ದೇವಸ್ಥಾನದ ಹಿಂಭಾಗ, ೩ನೇ ಕ್ರಾಸ್‌ನಲ್ಲಿರುವ ವಾಸದ ಮನೆಯೊಂದರ ಮೇಲೆ ವೇಶ್ಯಾವಾಟಿಕೆ ದಂಧೆನಡೆಸುತ್ತಿದ್ದ ಆರೋಪದ ಮೇಲೆ ದಾಳಿ ನಡೆಸಿದ್ದರು.       ಚಂದ್ರಕಲಾ ಮತ್ತು ಶಿಲ್ಪಾ ಎಂಬ ಇಬ್ಬರು ಮಹಿಳೆಯರು ಹಣ ಸಂಪಾದನೆ ಮಾಡಲು ಕವಿತಾ ಮತ್ತು ಯೊಗೇಶ್‌ರವರೊಂದಿಗೆ ಸೇರಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ವೇಶ್ಯಾವಾಟಿಕೆ ದಂಧೆ ನಡೆಸುವ ಉದ್ದೇಶದಿಂದ ಶಿಲ್ಪಾರವರ ಮನೆಗೆ ಹೆಣ್ಣು ಮಕ್ಕಳನ್ನು ಕರೆಯಿಸಿಕೊಂಡು ನೊಂದ ಮಹಿಳೆಯರಿಗೆ `ಈ ದಂಧೆಗೆ ನಿಮಗೆ ನಾವು ಹಣ ನೀಡುತ್ತೇವೆ, ಈ ವಿಚಾರ ಮನೆಯವರಿಗೆ ಹೇಳಿದರೆ ಕಿರುಕುಳ ನೀಡುವುದಾಗಿ' ಹೆದರಿಸಿ, ಮನೆಯ ಒಳಗೆ ಇರಿಸಿಕೊಂಡು, ವೇಶ್ಯಾವಾಟಿಕೆ ದಂಧೆ ನಡೆಸಿ, ಹಣ ಸಂಪಾದನೆ ಮಾಡುತ್ತಿದ್ದರು ಎಂ...

ಗಾಂಜಾ ಖರೀದಿಸಿ ಮನೆಯಲ್ಲಿಟ್ಟುಕೊಂಡು ಮಾರಾಟ : ಪ್ರಕರಣ ದಾಖಲು

Image
     ಭದ್ರಾವತಿ :  ಗಾಂಜಾ ಖರೀದಿಸಿ ಮನೆಯಲ್ಲಿಟ್ಟುಕೊಂಡು ಮಾರಾಟ ಮಾಡುವ ಮೂಲಕ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೇಪರ್‌ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.       ಠಾಣೆಯ ಉಪ ನಿರೀಕ್ಷಕ ಕೃಷ್ಣಕುಮಾರ್ ಬಿ. ಮಾನೆ  ಫೆ.೬ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಬಾರಂದೂರು ಗ್ರಾಮದ ತಮಿಳು ಬೀದಿ ವ್ಯಕ್ತಿಯೊಬ್ಬರು ಹಳೇನಗರ ಭೂತನಗುಡಿ ತಮ್ಮ ಸಂಬಂಧಿಕರೊಬ್ಬರಿಂದ ಗಾಂಜಾ ಖರೀದಿಸಿ ಮನೆಯಲ್ಲಿಟ್ಟುಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಚಿಕ್ಕ ಚಿಕ್ಕ ಪ್ಯಾಕೇಟ್ ಮಾಡಿ ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಈ ಸಂಬಂಧ ಗಾಂಜಾ ಮಾರಾಟದಲ್ಲಿ ತೊಡಗಿರುವ ಹಾಗು ಅಕ್ರಮವಾಗಿ ಗಾಂಜಾ ಹೊಂದಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ. 

ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಠಾಣಾಧಿಕಾರಿಗಳಿಗೆ ಗಾಯ : ಪ್ರಕರಣ ದಾಖಲು

Image
     ಭದ್ರಾವತಿ : ದರೋಡೆಗೆ ಯತ್ನಿಸುತ್ತಿದ್ದ ವೇಳೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣಕುಮಾರ್ ಮಾನೆ ಮತ್ತು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಎಂ.ಪಿ ಸಿದ್ದಪ್ಪ ಗಾಯಗೊಂಡಿದ್ದು, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.       ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಾಗು ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡಿದ್ದ ಡಿಚ್ಚಿ ಮುಬಾರಕ್ ಶನಿವಾರ ದರೋಡೆಗೆ ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ತೊಡಗಿದ್ದ ಕೃಷ್ಣಕುಮಾರ್ ಮಾನೆ ಮತ್ತು ಎಂ.ಪಿ ಸಿದ್ದಪ್ಪ ಗಾಯಗೊಂಡಿದ್ದರು. ಈ ನಡುವೆ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಲಾಗಿತ್ತು.       ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣಕುಮಾರ್ ಮಾನೆ ಮತ್ತು ಎಂ.ಪಿ ಸಿದ್ದಪ್ಪ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 

ಪಿ.ಎಂ.ಶ್ರೀ ಸರ್ಕಾರಿ ಶಾಲೆ ಇನ್ನೂ ಹೆಚ್ಚಿನ ಬೆಳವಣಿಗೆಗೆ ಸಹಕರಿಸಿ : ಎಸ್. ಮಣಿಶೇಖರ್

Image
ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನ ಪಕ್ಕದಲ್ಲಿರುವ ಪಿ.ಎಂ.ಶ್ರೀ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.        ಭದ್ರಾವತಿ: ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನ ಪಕ್ಕದಲ್ಲಿರುವ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಪಿ.ಎಂ.ಶ್ರೀ  ಯೋಜನೆಯಡಿ ಆಯ್ಕೆಯಾಗಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಶಾಲೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಪ್ರತಿಯೊಬ್ಬರ ಸಹಕಾರ ಅಗವತ್ಯವಾಗಿದೆ ಎಂದು ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಹೇಳಿದರು.       ಅವರು ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಪಿ.ಎಂ.ಶ್ರೀ ಯೋಜನೆಗೆ ಆಯ್ಕೆಯಾಗಿರುವ ಏಕೈಕ ಸರ್ಕಾರಿ ಶಾಲೆ ಇದಾಗಿದೆ ಎಂದರು.  ಎಲ್.ಕೆ.ಜಿ ಯಿಂದ ೮ನೇ ತರಗತಿವರೆಗೆ ಒಟ್ಟು ಸುಮಾರು ೩೦೦ ಅತಿ ಮಕ್ಕಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಈ ಶಾಲೆ ಪಾತ್ರವಾಗಿದೆ. ಈ ಶಾಲೆಯಲ್ಲಿ ಪರಿಣಿತ ಶಿಕ್ಷಕ ವರ್ಗದವರಿದ್ದು, ಖಾಸಗಿ ಶಾಲೆಗಳನ್ನು ಮೀರಿಸುವ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಶಾಸಕರಾದ ಬಿ.ಕೆ ಸಂಗಮೇಶ್ವರ್‌ರವರು ಈ ಶಾಲೆಯ ಭವಿಷ್ಯದ ಬೆಳವಣಿಗೆಗೆ ಪೂರಕವಾಗಿ ಅಭಿವೃದ್ಧಿಗೊಳಿಸಲು ಸುಮಾರು ೯ ಲಕ್ಷ...

ಪತ್ನಿಯಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಕಿರುಕುಳ

Image
ಪೊಲೀಸರಿಗೆ ದೂರು, ಯಾರು ಈ ರೀತಿ ಮೋಸ ಹೋಗದಿರಿ ಬಿ. ವಿನಯ್-ಪ್ರಿಯತಾ ದಂಪತಿ       ಭದ್ರಾವತಿ: ನನ್ನ ಪತ್ನಿ ತನ್ನಷ್ಟಕ್ಕೆ ತಾನು ಇರದೆ ನನಗೆ ಮತ್ತು ನನ್ನ ಇಬ್ಬರು ಹೆಣ್ಣು ಮಕ್ಕಳಿಗೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದು, ಸಮಾಜದಲ್ಲಿ ಇಂತಹ ಮಹಿಳೆಯರಿಂದ ಎಚ್ಚರಿಕೆವಹಿಸುವಂತೆ ಬಿ. ವಿನಯ್ ಎಂಬುವರು ಮನವಿ ಮಾಡಿದ್ದಾರೆ.       ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ  ನಿವಾಸಿ ಬಿ. ವಿನಯ್ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ೨೦೧೧ರಲ್ಲಿ ನಾನು ಮತ್ತು ಹಾಸನ ಜಿಲ್ಲೆಯ ಆರ್. ಪ್ರಿಯತಾ ಬೇಲೂರು ತಾಲೂಕಿನ ಹಳೇಬೀಡು ಬನಶಂಕರಿ ಕಲ್ಯಾಣ ಮಂಟಪದಲ್ಲಿ ಲಿಂಗಾಯತ ಕುಂಬಾರ ಪದ್ಧತಿಯಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದೇವೆ. ನಮಗೆ ಯೋಜ್ಞಾ (೧೪) ಮತ್ತು ಮನೋಜ್ಞಾ (೮) ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ೨೦೧೫ರಲ್ಲಿ ಶಿವಮೊಗ್ಗದ ಪ್ರತಿಷ್ಠಿತ ಪೋದಾರ್ ಖಾಸಗಿ ಶಾಲೆಯಲ್ಲಿ ಪ್ರಿಯತಾ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದ್ದರು. ಅಂದಿನಿಂದ ನಮ್ಮ ಹಿಂದೂ ಸಂಪ್ರದಾಯ ಬಿಟ್ಟು ಕ್ರಿಶ್ಚಿಯನ್ ಧರ್ಮದ ಕಡೆ ಆಸಕ್ತಿ ಹೊಂದಿದ್ದಾರೆ. ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಮರಿಯಾ ಪ್ರಿಯದರ್ಶಿನಿ ಸಹಾಯದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಗೊಂಡಿದ್ದಾರೆಂದು ವಿ...

ದರೋಡೆಗೆ ಯತ್ನಿಸುತ್ತಿದ್ದ ಯುವಕನ ಕಾಲಿಗೆ ಪೊಲೀಸರಿಂದ ಗುಂಡು : ಆಸ್ಪತ್ರೆಗೆ ದಾಖಲು

Image
     ಭದ್ರಾವತಿ: ತಾಲೂಕಿನ ಗೌರಾಪುರ ಗ್ರಾಮದ ಬಳಿ ದರೋಡೆ ಯತ್ನಿಸುತ್ತಿದ್ದ ಯುವಕನೋರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.       ಹಳೇನಗರದ ಮುಬಾರಕ್(೩೦) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದ್ದು, ಈತನ ವಿರುದ್ಧ ಹಲವಾರು ದರೋಡೆ ಪ್ರಕರಣಗಳು ದಾಖಲಾಗಿದ್ದವು. ಈತನನ್ನು ಪೊಲೀಸರು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಸಿದ್ದು, ಮಾಹಿತಿ ತಿಳಿದ ತಕ್ಷಣ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರ ವೃತ್ತ ನಿರೀಕ್ಷಕಿ ನಾಗಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೪೬ ನಿರ್ಗತಿಕ ಕುಟುಂಬಗಳಿಗೆ ಮಾಸಿಕ ಆರ್ಥಿಕ ನೆರವು, ೪ ಬಡ ಮಹಿಳೆಯರಿಗೆ ಬಟ್ಟೆ ಕಿಟ್

Image
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಭದ್ರಾವತಿ ಯೋಜನಾ ಕಛೇರಿ-೧ರ ವ್ಯಾಪ್ತಿಯ ನಿರ್ಗತಿಕ ಕುಟುಂಬಗಳಿಗೆ ಮಾಸಿಕ ಆರ್ಥಿಕ ನೆರವು ಹಾಗು ಬಡ ಮಹಿಳೆಯರಿಗೆ ಬಟ್ಟೆ ಕಿಟ್‌ಗಳನ್ನು ವಿತರಿಸಲಾಯಿತು.       ಭದ್ರಾವತಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿ-೧ರ ವ್ಯಾಪ್ತಿಯ ನಿರ್ಗತಿಕ ಕುಟುಂಬಗಳಿಗೆ ಮಾಸಿಕ ಆರ್ಥಿಕ ನೆರವು ಹಾಗು ಬಡ ಮಹಿಳೆಯರಿಗೆ ಬಟ್ಟೆ ಕಿಟ್‌ಗಳನ್ನು ವಿತರಿಸಲಾಯಿತು.       ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಯೋಜನಾ ಕಛೇರಿ-೧ ವ್ಯಾಪ್ತಿಯ ೪೬ ನಿರ್ಗತಿಕ ಕುಟುಂಬಗಳಿಗೆ ಪ್ರತಿ ತಿಂಗಳು ೧ ಸಾವಿರ ರು. ಆರ್ಥಿಕ ನೆರವು ನೀಡಲಾಗುತ್ತಿದ್ದು, ಪ್ರಸ್ತುತ ೪ ಜನ ಬಡಮಹಿಳೆಯರನ್ನು ಗುರುತಿಸಿ ಬಟ್ಟೆ ಕಿಟ್ ಯೋಜನೆಗೆ ಆಯ್ಕೆ ಮಾಡಲಾಗಿದೆ. ತಾಲೂಕಿನ ಕಾಳಿಂಗನಹಳ್ಳಿ ಗ್ರಾಮದ ಮಲ್ಲಮ್ಮ ಹಾಗೂ ಬಿ. ಜ್ಯೋತಿ ಹಾಗೂ ಆನೆಕೊಪ್ಪ ಗ್ರಾಮದ ಸರೋಜಮ್ಮ ಮತ್ತು ಕಂಬದಾಳು ಹೊಸೂರು ಗ್ರಾಮದ ಗೌರಮ್ಮ ಅವರಿಗೆ ಬಟ್ಟೆ ಕಿಟ್‌ಗಳನ್ನು ವಿತರಣೆ ಮಾಡಲಾಯಿತು.       ತಾಲೂಕು ಯೋಜನಾಧಿಕಾರಿ ಪ್ರಕಾಶ್ .ವೈ, ಕಾಳಿಂಗನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ, ವೆಂಕಟೇಶ್ ಹಾಗೂ ಯೋಗೀಶ್, ಜ್ಞಾನವಿಕಾಸ ಸಮನ್ವಯಧಿಕಾರಿ ನೇತ್ರಾವತಿ, ಸೇವಾ ಪ್ರತಿನಿಧಿ ದುರ್ಗಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮಹಿಳಾ ಸಂಘ-ಸಂಸ್ಥೆಗಳನ್ನು ತಮ್ಮ ಮನೆಯಂತೆ ಭಾವಿಸಿ : ಫಾದರ್ ಲ್ಯಾನ್ಸಿ ಡಿಸೋಜಾ

Image
ಭದ್ರಾವತಿ ನ್ಯೂಟೌನ್ ಕರುಣಾ ಸೇವಾ ಕೇಂದ್ರ ಹಾಗೂ ಕರುಣಾ ಮಹಿಳಾ ಮಂಡಳಿಗಳ ಒಕ್ಕೂಟಗಳ ಆಶ್ರಯದಲ್ಲಿ ಸೈಂಟ್ ಚಾರ್ಲ್ಸ್ ಶಾಲಾ ಆವರಣದಲ್ಲಿ ಶನಿವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.       ಭದ್ರಾವತಿ : ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತಂದು ಗುರುತಿಸಿಕೊಳ್ಳಲು ನೆರವಾಗುತ್ತಿರುವ ಸಂಘ-ಸಂಸ್ಥೆಗಳನ್ನು ಮಹಿಳೆಯರು ತಮ್ಮ ಮನೆಯಂತೆ ಕಾಣಬೇಕು. ಇಂತಹ ಸಂಘ-ಸಂಸ್ಥೆಗಳು ಬೆಳೆದರೆ ಮಹಿಳೆಯರು ಬೆಳೆದಂತೆ ಎಂದು ನ್ಯೂಟೌನ್ ಅಮಲೋಧ್ಭವಿ ಮಾತೆ ಧರ್ಮಕೇಂದ್ರದ ಗುರುಗಳಾದ ಫಾದರ್ ಲ್ಯಾನ್ಸಿ ಡಿಸೋಜಾ ಹೇಳಿದರು.      ಅವರು ಶನಿವಾರ ಕರುಣಾ ಸೇವಾ ಕೇಂದ್ರ ಹಾಗೂ ಕರುಣಾ ಮಹಿಳಾ ಮಂಡಳಿಗಳ ಒಕ್ಕೂಟಗಳ ಆಶ್ರಯದಲ್ಲಿ ಸೈಂಟ್ ಚಾರ್ಲ್ಸ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.         ಕೆಟ್ಟ ವಿಚಾರವನ್ನು ಬಿಟ್ಟುಬಿಡೋಣ. ಸಂಘ-ಸಂಸ್ಥೆಗಳೆಂದ ಮೇಲೆ ಕೆಟ್ಟದ್ದು, ಒಳ್ಳೆಯದು ಇದ್ದೇ ಇರುತ್ತದೆ. ನಮ್ಮನ್ನು ಬೆಳೆಸುವ ಸಂಘ-ಸಂಸ್ಥೆಗಳ ವಿಚಾರವಾಗಿ ಒಳ್ಳೆಯದನ್ನೆ ಮಾತನಾಡೋಣ, ಒಳ್ಳೆಯದನ್ನೇ ಮಾಡೋಣ. ಇಲ್ಲಿ ಯಾರು ಪರಿಪೂರ್ಣರಲ್ಲ. ಎಲ್ಲರೂ ಬದಲಾಗಬೆಕು ಎಂದರು.       ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ  ಮುಂದಿದ್ದಾರೆ. ಅಂತೆಯೆ ಕುಟುಂಬ ನಿರ್ವಹಣೆಯಲ್ಲಿಯೂ ಅವ...

ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ನಾಗರೀಕ ಪ್ರಶಸ್ತಿ, ಆಶ್ರಯ ಗುಂಪು ಮನೆಗಳಿಗೆ ಹೆಸರು ನಾಮಕರಣಗೊಳಿಸಿ

Image
ಫೆ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ  ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ       ಭದ್ರಾವತಿ : ಹಿರಿಯ ರಾಜಕೀಯ ಮುತ್ಸದ್ದಿ, ಕಾರ್ಮಿಕ ಹೋರಾಟಗಾರ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಸೇವೆಯನ್ನು ಪರಿಗಣಿಸಿ ರಾಜ್ಯ ಹಾಗು ಕೇಂದ್ರ ಸರ್ಕಾರಗಳು ಹಾಗು ಸ್ಥಳೀಯ ಸಂಸ್ಥೆಗಳು ನಾಗರೀಕ ಗೌರವ ಪ್ರಶಸ್ತಿಗಳನ್ನು ನೀಡುವಂತೆ ಹಾಗು ಆಶ್ರಯ ನಿವೇಶನಗಳ ಗುಂಪು ಮನೆಗಳ ಯೋಜನೆಗೆ ಅವರ ಹೆಸರನ್ನು ನಾಮಕರಣಗೊಳಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಫೆ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ಮನವಿ ಸಲ್ಲಿಸಲಾಗುತ್ತದೆ.       ಇತ್ತೀಚೆಗೆ ನಿಧನರಾದ ಕಾರ್ಮಿಕ ಮುಖಂಡರಾದ `ಕಾಮ್ರೇಡ್ ಡಿ.ಸಿ ಮಾಯಣ್ಣ, ಕಾಮ್ರೇಡ್ ಅನಂತ ಸುಬ್ಬರಾವ್, ಕಾಮ್ರೇಡ್ ಕಾಳೇಗೌಡ ಹಾಗು ಕ್ರಾಮ್ರೇಡ್ ಎಸ್. ಆಂಜನೇಯ' ಅವರಿಗೆ ಗೌರವ ಸಲ್ಲಿಸುವಂತಾಗಬೇಕು. ರಾಜ್ಯ ಸರ್ಕಾರ ಸಾಧಕ ಗಣ್ಯರ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕಾರ್ಮಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸಲು ಕಾರ್ಮಿಕ ರತ್ನ ಎಂಬ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುತ್ತಿದ್ದು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕರು, ಹೋರಾಟಗಾರರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಹೆಚ್ಚಿನ ಆಗಮಿಸಿ ಯ...

ಫೆ.೮ರಂದು ರಕ್ತದಾನ, ಉಚಿತ ನೇತ್ರ ತಪಾಸಣಾ ಶಿಬಿರ

Image
     ಭದ್ರಾವತಿ : ಹಳೇನಗರ, ಭೂತನಗುಡಿ, ಶ್ರೀ ಕೃಷ್ಣ ರುಕ್ಷ್ಮಿಣಿ ದೇವಸ್ಥಾನದ ಭಾವಸಾರ ಕ್ಷತ್ರಿಯ ಸಮಾಜ ಹಾಗು ಅಂಗ ಸಂಸ್ಥೆಗಳಿಂದ ಫೆ.೮ರ ಭಾನುವಾರ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಬೃಹತ್ ರಕ್ತದಾನ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ.       ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿ ಕೇಂದ್ರ, ಸ್ಪಂದನ ಹೆಲ್ತ್ ಫೌಂಡೇಷನ್ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ತಪಾಸಣೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಸರ್ಕಾರಿ ಶಾಲೆಯಲ್ಲಿ ಕ್ಯಾನ್ಸರ್ ಅರಿವು ಕಾರ್ಯಕ್ರಮ

Image
ಭದ್ರಾವತಿ ನಗರದ ನ್ಯೂಟೌನ್ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬುಳ್ಳಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ಸರ್  ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ : ನಗರದ ನ್ಯೂಟೌನ್ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬುಳ್ಳಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ಸರ್  ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.       ಬುಳ್ಳಾಪುರ ಸುತ್ತಮುತ್ತಲಿನ ಮಹಿಳೆಯರಿಗೆ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಮೂಲಕ ಕುಟುಂಬ ಸದಸ್ಯರಲ್ಲಿ ಆರೋಗ್ಯದ ಜಾಗೃತಿವಹಿಸುವಂತೆ ಕರೆ ನೀಡಲಾಯಿತು.       ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿ ವೀಣಾ, ಸಂಸ್ಥೆಯ ಸಿಬ್ಬಂದಿಗಳು, ಒಕ್ಕೂಟದ ಪ್ರತಿನಿಧಿಗಳು, ಸಂಘದ ಸದಸ್ಯರು, ಮಕ್ಕಳು, ತಾಯಂದಿರು ಪಾಲ್ಗೊಂಡಿದ್ದರು.  

ಹಂತ ಹಂತವಾಗಿ ಬಿ.ಎಚ್ ರಸ್ತೆ ಅಭಿವೃದ್ಧಿ ಕಾರ್ಯ : ಕವಲಗುಂದಿ ಕಿರುಸೇತುವೆ ನೆಲಸಮ

Image
ಭದ್ರಾವತಿ ಬಿಳಕಿ ವೃತ್ತದಿಂದ ಕೈಗೊಂಡಿರುವ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಕವಲಗುಂದಿ(ಲೋಯರ್ ಹುತ್ತಾ)ವರೆಗೂ ಸಾಗಿದೆ. ಭದ್ರಾ ನದಿಗೆ ಸಂಪರ್ಕಗೊಂಡಿರುವ ಹಳೇಯ ಕಿರು ಸೇತುವೆ ನೆಲಸಮಗೊಳಿಸಿ ಹೊಸದಾಗಿ ರಸ್ತೆಯ ಅಳತೆಗೆ ತಕ್ಕಂತೆ ದೊಡ್ಡ ಸೇತುವೆ ನಿರ್ಮಿಸಲಾಗುತ್ತಿದೆ.       ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಬಿ.ಎಚ್ ರಸ್ತೆಯನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಬಿಳಕಿ ವೃತ್ತದಿಂದ ಕೈಗೊಂಡಿರುವ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಕವಲಗುಂದಿ(ಲೋಯರ್ ಹುತ್ತಾ)ವರೆಗೂ ಸಾಗಿದೆ. ಭದ್ರಾ ನದಿಗೆ ಸಂಪರ್ಕಗೊಂಡಿರುವ ಹಳೇಯ ಕಿರು ಸೇತುವೆ ನೆಲಸಮಗೊಳಿಸಿ ಹೊಸದಾಗಿ ರಸ್ತೆಯ ಅಳತೆಗೆ ತಕ್ಕಂತೆ ದೊಡ್ಡ ಸೇತುವೆ ನಿರ್ಮಿಸಲಾಗುತ್ತಿದೆ.       ಶಿವಮೊಗ್ಗ-ಭದ್ರಾವತಿ ನಡುವಿನ ಪ್ರಮುಖ ಸಂಪರ್ಕಕೊಂಡಿಯಾಗಿರುವ ಬಿ.ಎಚ್ ರಸ್ತೆಯನ್ನು ಸುಮಾರು ಎರಡು ದಶಕಗಳಿಂದ ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ನಡುವೆ ಈ ರಸ್ತೆಯಲ್ಲಿ ಹೊಸದಾಗಿ ಕಡದಕಟ್ಟೆ ಬಳಿ ರೈಲ್ವೆ ಇಲಾಖೆಯಿಂದ ಹೊಸ ಸೇತುವೆ ನಿರ್ಮಿಸಿ ಲೋಕಾರ್ಪಣೆಗೊಳಿಸಲಾಗಿದೆ. ಮತ್ತೊಂದೆಡೆ ಹಳೇಸೇತುವೆ(ಭದ್ರಾ ಸೇತುವೆ)ಬಳಿ ಹೊಸದಾಗಿ `ವಿಶ್ವಕರ್ಮ ಶಿಲ್ಪಿ ಅಮರ ಶಿಲ್ಪಿ ಜಕಣಾಚಾರಿ ಸೇತುವೆ'(ಕಮಾನು ಸೇತುವೆ) ಈಗಾಗಲೇ ನಿರ್ಮಾಣಗೊಂಡು ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ....

ವಿಐಎಸ್‌ಎಲ್ ಮಕ್ಕಳ ಉದ್ಯಾನವನದಲ್ಲಿ ಬೆಂಕಿ : ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ

Image
ಭದ್ರಾವತಿ ನಗರದ  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಕ್ಕಳ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.       ಭದ್ರಾವತಿ: ನಗರದ  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಕ್ಕಳ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.       ಇನ್ನೂ ಬೇಸಿಗೆ ಕಾಲ ಆರಂಭವಾಗಿಲ್ಲ. ಈಗಾಗಲೇ ಬಹುತೇಕ ಕಡೆ ಗಿಡಗಂಟಿಗಳು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾಗುತ್ತಿವೆ. ಈ ನಡುವೆ ಬೆಂಕಿ ಕಾಣಿಸಿಕೊಳ್ಳುವ ಸ್ಥಳಗಳನ್ನು ನಿರ್ಲಕ್ಷ್ಯ ವಹಿಸಿದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.       ಮಕ್ಕಳ ಉದ್ಯಾನವನದ ಹೊರಭಾಗದ ಬೇಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕದಳ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ವೇಳೆ ನಿರ್ಲಕ್ಷ್ಯವಹಿಸಿದ್ದಲ್ಲಿ ಬೆಂಕಿ ಇಡೀ ಉದ್ಯಾನವ...

ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ

Image
ಅಂತರಗಂಗೆ ಗ್ರಾಮ ಪಂಚಾಯಿತಿ ದಾನಿಗಳಿಗೆ ಕೃತಜ್ಞತೆ  ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ದಾನಿಗಳನ್ನು ಬುಧವಾರ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.       ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ದಾನಿಗಳನ್ನು ಬುಧವಾರ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.       ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ರಂಗನಾಥ್ ಬರ್ಗೆಯವರ ಪತ್ನಿ ಮೀನಾಕ್ಷಿಬಾಯಿ ಮತ್ತು ಇವರ ಸಹೋದರಿ ಹೆಸರಿನಲ್ಲಿರುವ ಸುಮಾರು ೬ ಲಕ್ಷ ರು. ಬೆಲೆಬಾಳುವ ೩೦*೪೦ ಅಳತೆಯ ನಿವೇಶನ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ದಾನ ನೀಡಿದ್ದು, ಇದರಿಂದಾಗಿ ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಿದೆ.       ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾಗಿರುವ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು  ರಂಗನಾಥ್ ಬರ್ಗೆ, ಮೀನಾಕ್ಷಿಬಾಯಿ ಮತ್ತು ಇವರ ಸಹೋದರಿಯನ್ನು ಸನ...

ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಆಡಳಿತ ಅಧಿಕಾರಿ ಸೇವೆಯಿಂದ ವಜಾಗೊಳಿಸಿ

Image
ವಿವಿಧ ಸಂಘಟನೆಗಳ ಪ್ರಮುಖರಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ  ಭದ್ರಾವತಿ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಆಡಳಿತ ಅಧಿಕಾರಿ  ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ವಿವಿಧ ಸಂಘಟನೆಗಳ ಪ್ರಮುಖರು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಆಡಳಿತ ಅಧಿಕಾರಿ  ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ವಿವಿಧ ಸಂಘಟನೆಗಳ ಪ್ರಮುಖರು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.       ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಜಿ ಅಭಿಷೇಕ್ ಮಂಗಳವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ವಿರುದ್ಧ ಇಲ್ಲಸಲ್ಲದ ಷಡ್ಯಂತ್ರ ರೂಪಿಸಿ ಕೆಲಸದ ಒತ್ತಡ ಹೇರಿ ಕರ್ತವ್ಯ ನಿರ್ವಹಿಸಲು ಪದೇ ಪದೇ ತೊಂದರೆ ನೀಡುತ...

ಉದ್ಯಮಿ ಟಿ.ಎಸ್ ಈಶ್ವರನ್ ನಿಧನ

Image
ಟಿ.ಎಸ್ ಈಶ್ವರನ್       ಭದ್ರಾವತಿ: ನಗರದ ಅಂಡರ್‌ಬ್ರಿಡ್ಜ್ ಉಂಬ್ಳೆಬೈಲು ರಸ್ತೆ, ಸಂಜಯ್ ನಗರದ ನಿವಾಸಿ, ಉದ್ಯಮಿ ಟಿ.ಎಸ್ ಈಶ್ವರನ್(೭೦) ಬುಧವಾರ ಬೆಳಗಿನ ಜಾವ ನಿಧನ ಹೊಂದಿದರು.       ಪತ್ನಿ, ನಾಲ್ವರು ಪುತ್ರರು ಇದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ಲೋಯರ್ ಹುತ್ತಾ  ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.  ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಮೀನು ಕೃಷಿ ವ್ಯಾಪಾರ ಆರಂಭಿಸಿದ್ದ ಇವರು ನಂತರದ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯಮವನ್ನಾಗಿಸಿಕೊಂಡು ರಾಜ್ಯದ ವಿವಿಧೆಡೆ ಉತ್ತಮ ಹಾಗು ಆರೋಗ್ಯಕರವಾದ ಮೀನು ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದರು. ಅಲ್ಲದೆ ಸಮಾಜ ಸೇವಕರಾಗಿ ಸಹ ಗುರುತಿಸಿ ಕೊಂಡಿದ್ದರು.       ಇವರ ನಿಧನಕ್ಕೆ ಉದ್ಯಮಿ, ಸಮಾಜ ಸೇವಕ ಎ. ಮಾಧು, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮುರುಗನ್, ಶ್ರೀ ತಿರುಮಲ ಫೌಂಡೇಷನ್ ಪ್ರಶಾಂತ್ ಹಾಗು ಮೀನುಗಾರರ ಬೀದಿ ನಿವಾಸಿಗಳು, ವ್ಯಾಪಾರಿಗಳು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ. 

ವಿಐಎಸ್‌ಎಲ್ ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ಮಾಹಿತಿ ನೀಡಿ : ಸಿರಿಗೆರೆ ಶ್ರೀ

Image
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸುವ ಭರವಸೆ  ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು.       ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು.       ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ ರಿಂದ ಫೆ.೧ರವರೆಗೆ ಆಯೋಜಿಸಲಾಗಿದ್ದ ಶ್ರೀ ಮಠದ ಭಾವೈಕ್ಯತಾ ಹಬ್ಬವಾದ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಆಗಮಿಸಿದ್ದ ಶ್ರೀಗಳು ಬಾಳೆಮಾರನಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಲು ಸಾಧ್ಯವಿರುವ ರೂಪುರೇಷೆಗಳ ಕುರಿತ ಯೋಜನಾ ವರದಿಯ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಈ ಸಂಬಂಧ ಚರ್ಚಿಸುವುದಾಗಿ ಭರವಸೆ ...

ತಹಸೀಲ್ದಾರ್ ವಿರುದ್ಧ ಮಾನಸಿಕ ಹಿಂಸೆ ಆರೋಪ

Image
ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ       ಭದ್ರಾವತಿ: ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಕೆಳಹಂತದ ಅಧಿಕಾರಿಯೊಬ್ಬರು ಗಂಭೀರ ಆರೋಪ ಮಾಡುವ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ಎಂ.ಎ ಅಜಿತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮೇಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.          ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಜೆ. ಅಭಿಷೇಕ್ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಇಲ್ಲಸಲ್ಲದ ಆರೋಪ ಮಾಡಿ ಕಳೆದ ೩ ದಿನಗಳಿಂದ ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಪತ್ರದಲ್ಲಿ ಆರೋಪಿಸಲಾಗಿದೆ.       ಈ ನಡುವೆ ಅಭಿಷೇಕ್ ಸಿದ್ದಾಪುರ ಚಾನಲ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದು ಬಂದಿದೆ. ಆದರೆ ಇದುವರೆಗೂ ಈ ಸಂಬಂಧ ಇದುವರೆಗೂ ಯಾವುದೇ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. 

ನಗರ ಆಶ್ರಯ ಸಮಿತಿಗೆ ನಾಲ್ವರು ನೂತನ ಸದಸ್ಯರ ನೇಮಕ : ಪದಗ್ರಹಣ

Image
ಭದ್ರಾವತಿ ನಗರ ಆಶ್ರಯ ಸಮಿತಿಗೆ ಸರ್ಕಾರದಿಂದ ನೂತನವಾಗಿ ನಾಮನಿರ್ದೇಶನಗೊಂಡಿರುವ ೪ ಜನ ಸದಸ್ಯರು ಮಂಗಳವಾರ ನಗರಸಭೆಯಲ್ಲಿ ಪದಗ್ರಹಣ ಸ್ವೀಕರಿಸಿದರು.       ಭದ್ರಾವತಿ: ನಗರ ಆಶ್ರಯ ಸಮಿತಿಗೆ ಸರ್ಕಾರದಿಂದ ನೂತನವಾಗಿ ನಾಮನಿರ್ದೇಶನಗೊಂಡಿರುವ ೪ ಜನ ಸದಸ್ಯರು ಮಂಗಳವಾರ ನಗರಸಭೆಯಲ್ಲಿ ಪದಗ್ರಹಣ ಸ್ವೀಕರಿಸಿದರು.       ಶಿವಾಜಿರಾವ್, ವೆಂಕಟೇಶ್ ಇಮಾನ್ಯುವೆಲ್, ನರಸಿಂಹಮೂರ್ತಿ ಮತ್ತು ಮಂಜಳ ನೂತನವಾಗಿ ನಾಮನಿರ್ದೇಶನಗೊಂಡಿರುವ ಸದಸ್ಯರಾಗಿದ್ದಾರೆ. ಬಿ.ಎಸ್ ಗೋಪಾಲ್ ಸಮಿತಿ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ನೂತನ ಸದಸ್ಯರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಯುವ ಮುಖಂಡ ಬಿ.ಎಸ್ ಬಸವೇಶ್, ನಗರಸಭೆ ಅಧ್ಯಕ್ಷೆ ಜೆ.ಎಸ್ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ. ಗಂಗಾಧರ್, ಮಹಮದ್ ರಫಿ, ರೂಪ ನಾರಾಯಣ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ತರಳಬಾಳು ಹುಣ್ಣಿಮೆ ಮಹೋತ್ಸವ : ಶಾಸಕ ಬಿ.ಕೆ ಸಂಗಮೇಶ್ವರ್ ಕೃತಜ್ಞತೆ

Image
ಬಿ.ಕೆ ಸಂಗಮೇಶ್ವರ್       ಭದ್ರಾವತಿ: ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ ರಿಂದ ಫೆ.೧ರವರೆಗೆ ಆಯೋಜಿಸಲಾಗಿದ್ದ ಸಿರಿಗೆರೆ ತರಳಬಾಳು ಬೃಹನ್ಮಠದ ಭಾವೈಕ್ಯತಾ ಹಬ್ಬವಾದ ತರಳಬಾಳು ಹುಣ್ಣಿಮೆ ಮಹೋತ್ಸವ ಯಶಸ್ವಿಗೆ ಶ್ರಮಿಸಿದ ಆಯೋಜಕರು ಹಾಗು ಸಹಕರಿಸಿದ ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಸಭೆ ಹಾಗು ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಕರ್ನಾಟಕ ಗ್ರಾಮೀನ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಸಂಗಮೇಶ್ವರ್ ಕೃತಜ್ಞತೆ ಸಲ್ಲಿಸಿದ್ದಾರೆ.       ೯ ದಿನಗಳ ಕಾಲ ಜರುಗಿದ ಮಹೋತ್ಸವದ ದಿವ್ಯ ಸಾನಿಧ್ಯವಹಿಸಿದ್ದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಹಾಗು ಮಹೋತ್ಸವಕ್ಕೆ ಆಗಮಿಸಿ ಆಶೀರ್ವಚನ ನೀಡಿದ ನಾಡಿನ ವಿವಿಧ ಮಠಗಳ ಮಠಾಧೀಶರಿಗೆ ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ. ಅಲ್ಲದೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಹಾಗು ರಾಜ್ಯ ಸರ್ಕಾರದ ಸಚಿವರು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು, ನ್ಯಾಯಾಧೀಶರು, ನ್ಯಾಯವಾದಿಗಳು, ಚಿಂತಕರು, ಸಾಹಿತಿಗಳು ಸೇರಿದಂತೆ ಸಂಪನ್ಮೂಲ ವ್ಯಕ್ತಿಗಳಿಗೆ, ಸಾಂಸ್ಕೃತಿಕ ಹಾಗು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಕಲಾವಿದರು, ಕ್ರೀಡಾಪಟುಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ       ಆಯೋಜಕರಾದ ತರಳಬಾಳು ಹುಣ್ಣಿಮೆ ಮಹೋತ್ಸವದ ವಿವಿಧ ಸಮಿತಿಗ...

ರಸ್ತೆಯಲ್ಲಿ ಅಡ್ಡಗಟ್ಟಿ, ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಮಾಡಿದ್ದ ಇಬ್ಬರ ಸೆರೆ

Image
೧.೫೦ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶ, ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ  ಕಳೆದ ೪ ದಿನಗಳ ಹಿಂದೆ ತಾಲೂಕಿನ ಶಂಕರಘಟ್ಟ, ಕುವೆಂಪು ನಗರದ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.     ಭದ್ರಾವತಿ :  ಕಳೆದ ೪ ದಿನಗಳ ಹಿಂದೆ ತಾಲೂಕಿನ ಶಂಕರಘಟ್ಟ, ಕುವೆಂಪು ನಗರದ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.     ತಾಲೂಕಿನ ಮಲ್ಲಿಗೇನಹಳ್ಳಿ ಕ್ಯಾಂಪ್ ನಿವಾಸಿಗಳಾದ ಚಂದನ್ ನಾಯ್ಕ(೨೦) ಮತ್ತು ವೇಣುಗೋಪಾಲ(೨೬) ಬಂಧಿತರಾಗಿದ್ದು, ಸುಲಿಗೆ ಮಾಡಲಾಗಿದ್ದ ೧೦ ಗ್ರಾಂ ಚಿನ್ನಾಭರಣ ಹಾಗು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.  ಘಟನೆ ವಿವರ:     ಜಯಂತ್ ಎಂಬುವರು ಜ.೩೦ ರಂದು ಶಂಕರಘಟ್ಟ, ಕುವೆಂಪು ನಗರ ಸಮೀಪದ ಶಿವಮೊಗ್ಗ-ತರಿಕೆರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಯಾರೋ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ತಡೆದು ಹಲ್ಲೆ ಮಾಡಿ ೧.೫೦ ಲಕ್ಷ ರು. ಮೌಲ್ಯದ ಸುಮಾರು ೧೪ ಗ್ರಾಂ. ತೂಕದ ಚಿನ್ನದ ಸರ ಸುಲಿಗೆ ಮಾಡಿಕೊಂಡು ಹೋಗಿದ್ದು,...

ದೈಹಿಕ ಶಿಕ್ಷಣ ಶಿಕ್ಷಕ ತಿಮ್ಮಪ್ಪ ನಿಧನ

Image
ತಿಮ್ಮಪ್ಪ       ಭದ್ರಾವತಿ: ನಗರದ ಹೊಸಮನೆ ಶ್ರೀ ಕೃಷ್ಣ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತಿಮ್ಮಪ್ಪ(೬೭) ಸೋಮವಾರ ಸಂಜೆ ನಿಧನ ಹೊಂದಿದರು.       ಪತ್ನಿ, ಪುತ್ರ ಹಾಗು ಇಬ್ಬರು ಪುತ್ರಿಯರು ಇದ್ದಾರೆ. ತಿಮ್ಮಪ್ಪ ಬಹಳ ವರ್ಷಗಳವರೆಗೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉತ್ತಮ ತರಬೇತಿ ನೀಡುವ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಹಲವಾರು ಕ್ರೀಡಾಪಟು ರೂಪಿಸಿದ್ದ ತಿಮ್ಮಪ್ಪರವರು ಖೋ-ಖೋ ಭೀಷ್ಮ ಎಂಬ ಬಿರುದು ಪಡೆದುಕೊಂಡಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.       ತಿಮ್ಮಪ್ಪ ಅವರ ನಿಧನಕ್ಕೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು, ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಹಬ್ಬ, ಹರಿದಿನಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ : ಪ್ರಕಾಶ್ ರಾಥೋಡ್

Image
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಸೋಮವಾರ ಪೊಲೀಸ್ ಉಪವಿಭಾಗದಿಂದ ಶಾಂತಿ ಸಭೆ ಆಯೋಜಿಸಲಾಗಿತ್ತು.       ಭದ್ರಾವತಿ : ಪ್ರತಿಯೊಂದು ಮಸೀದಿ, ಮಠ ಮಂದಿರಗಳು, ಹಬ್ಬ, ಹರಿದಿನಗಳು, ಸಹ ತನ್ನದೇ ಆದ ಪರಂಪರೆ, ವೈಶಿಷ್ಟ್ಯತೆ ಹಾಗು ಮಹತ್ವವನ್ನು ಹೊಂದಿವೆ. ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಪ್ರತಿಯೊಂದು ಧರ್ಮದವರು ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬ, ಹರಿದಿನಗಳನ್ನು ಆಚರಿಸಬೇಕೆಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹೇಳಿದರು.       ಅವರು ಸೋಮವಾರ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಉಪವಿಭಾಗದಿಂದ ಅಯೋಜಿಸಲಾಗಿದ್ದ ಶಾಂತಿ ಸಭೆಯ ನೇತೃತ್ವವಹಿಸಿ ಮಾತನಾಡಿದರು. ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ಸುಮಾರು ೬೫ ಮಸೀದಿಗಳು, ೫ ದರ್ಗಾಗಳಿದ್ದು, ಹಬ್ಬ, ಹರಿದಿನಗಳನ್ನು ಸಂತೋಷ, ಸಂಭ್ರಮದಿಂದ ಆಚರಿಸುವ ವಾತಾವರಣ ರೂಪಿಸಿಕೊಳ್ಳಬೇಕು. ವಿನಾಕಾರಣ ಸಂಘರ್ಷಗಳಿಗೆ ಎಡೆಮಾಡಿಕೊಡಬಾರದು. ಒಂದೇ ವೇಳೆ ಗೊಂದಲಗಳು ಉಂಟಾದ್ದಲ್ಲಿ ಸಮುದಾಯದ ಹಿರಿಯರು ಒಗ್ಗೂಡಿ ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು. ಸಂಘರ್ಷಗಳು ಮಿತಿಮೀರಿ ಹೋದಲ್ಲಿ ಇಲಾಖೆ ಮಧ್ಯ ಪ್ರವೇಶಿಸಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.        ದಿನದರ್ಶಿಕೆ ಪ್ರಕಾರ ಫೆ.೪ರಿಂದ ಮುಸ್ಲಿಂ ಸಮುದಾಯದವರ ಹಬ್ಬವಿದ್...