ದೇವರಾಜ ಅರಸುರವರು ಶೋಷಿತರು, ಹಿಂದುಳಿದವರ ಪರವಾದ ನಿಲುವುಗಳನ್ನು ಹೊಂದಿದ್ದರು : ಎ. ಮುರುಗನ್
ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ, ಹಿಂದುಳಿದ ವರ್ಗಗಳ ಒಕ್ಕೂಟ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ದೊಣಬಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎ. ಮುರುಗನ್ ಉಪನ್ಯಾಸ ನೀಡಿದರು. ಭದ್ರಾವತಿ: ಸಮಾಜದಲ್ಲಿನ ಶೋಷಿತರು ಹಾಗು ಹಿಂದುಳಿದವರ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಅವರ ಪರವಾದ ನಿಲುವುಗಳನ್ನು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಹೊಂದಿದ್ದರು. ಈ ಹಿನ್ನಲೆಯಲ್ಲಿ ತಮ್ಮ ಆಡಳಿತ ಅವಧಿಯಲ್ಲಿ ಹಲವು ಜನಪರವಾದ ಯೋಜನೆಗಳನ್ನು ಹಾಗು ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾದರು ಎಂದು ತಾಲೂಕಿನ ದೊಣಬಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎ. ಮುರುಗನ್ ಹೇಳಿದರು. ಅವರು ಗುರುವಾರ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ, ಹಿಂದುಳಿದ ವರ್ಗಗಳ ಒಕ್ಕೂಟ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗ...