Posts

ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ.: ಸ್ಟೀವನ್ ಡೆಸಾ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ. ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಗಾಂಧಿನಗರ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗುರು ಸ್ಟೀವನ್ ಡೆಸಾ ಹೇಳಿದರು.       ಅವರು ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ. ಸಮಾಜದಲ್ಲಿ ತಮ್ಮ ಮೇಲಿನ ಶೋಷಣೆ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಅಶಕ್ತರು, ದೀನದಲಿತರು, ಸಂಕಷ್ಟಕ್ಕೆ ಒಳಗಾದವರ ಸೇವೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕು ಸಾರ್ಥಕಗೊಳ್ಳು...

ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ.: ಸ್ಟೀವನ್ ಡೆಸಾ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ. ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಗಾಂಧಿನಗರ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗುರು ಸ್ಟೀವನ್ ಡೆಸಾ ಹೇಳಿದರು.       ಅವರು ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ. ಸಮಾಜದಲ್ಲಿ ತಮ್ಮ ಮೇಲಿನ ಶೋಷಣೆ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಅಶಕ್ತರು, ದೀನದಲಿತರು, ಸಂಕಷ್ಟಕ್ಕೆ ಒಳಗಾದವರ ಸೇವೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕು ಸಾರ್ಥಕಗೊಳ್ಳು...

ಉಕ್ಕಿನ ನಗರದಲ್ಲಿ ಸಂಚಾರಿ ದಟ್ಟನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅಧಿಸೂಚನೆ : ಉಪಾಧೀಕ್ಷಕ ಪ್ರಕಾಶ್ ರಾಥೋಡ್

Image
ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ಆದೇಶ, ಉಲ್ಲಂಘಿಸಿದ್ದಲ್ಲಿ ಸ್ಥಳದಲ್ಲಿಯೇ ದಂಡ  ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್       ಭದ್ರಾವತಿ : ಸಂಚಾರ ಪೊಲೀಸ್ ಠಾಣಾ ನಗರಸಭೆ ವ್ಯಾಪ್ತಿಯಲ್ಲಿ ದಿನೇ ದಿನೇ ವಾಹನಗಳ ದಟ್ಟನೆ ಮತ್ತು ಸಂಚಾರ ದಟ್ಟನೆ ಹೆಚ್ಚಾಗುತ್ತಿದ್ದು, ಪದೇ ಪದೇ ಟ್ರಾಫಿಕ್ ಜಾಮ್ ಮತ್ತು ಅಪಘಾತದಿಂದಾಗಿ ಅನೇಕ ಸಾವುನೋವುಗಳು ಸಂಭವಿಸುತ್ತಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ವಾಹನ ನಿಲುಗಡೆ ನಿಷೇಧ, ಏಕ ಮುಖ ಸಂಚಾರ ಮತ್ತು ದಿನ ಬಿಟ್ಟು ದಿನ ವಾಹನಗಳ ನಿಲುಗಡೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿಗಳಾದ ಪ್ರಭಲಿಂಗ ಕವಳಿಕಟ್ಟೆಯವರು ಅಧಿಸೂಚನೆ ಹೊರಡಿಸಿ ಆದೇಶಿಸಿದ್ದಾರೆಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ತಿಳಿಸಿದರು.      ಈ ಕುರಿತು ಸೋಮವಾರ ಮಾಹಿತಿ ನೀಡಿ, ಭದ್ರಾವತಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ೩.೩೯,೮೪೬ ಜನಸಂಖ್ಯೆ ಇದ್ದು, ಪ್ರತಿ ದಿನ ಕೆಲಸದ ನಿಮಿತ್ತ ಹೊರಗಿನಿಂದ ಸಾವಿರಾರು ಜನರು ನಗರಕ್ಕೆ ಭೇಟಿ ಕೊಡುತ್ತಿರುತ್ತಾರೆ. ನಗರದಲ್ಲಿ ಒಂದು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-೬೯), ಮೂರು ರಾಜ್ಯ ಹೆದ್ದಾರಿಗಳು (ಎಸ್.ಎಚ್-೬೫, ಎಸ್.ಎಚ್-೬೮ ಮತ್ತು ಎಸ್.ಎಚ್-೧೧೬) ಹಾದು ಹೋಗಿರುತ್ತವೆ. ...

ಮಾ.೧೩ರಂದು ನಗರಸಭೆ ಬಜೆಟ್ ಮಂಡನೆ

Image
     ಭದ್ರಾವತಿ : ನಗರಸಭೆ ೨೦೨೬-೨೭ನೇ ಸಾಲಿನ ಆಯ-ವ್ಯಯ ಮಂಡನೆ ಮಾ.೧೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.       ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ. ಕೆಲವು ಪ್ರಮುಖ ಕಾಮಗಾರಿಗಳು ವಿಳಂಬವಾಗಿ ಆರಂಭಗೊಂಡರೆ, ಮತ್ತೆ ಕೆಲವು ಕಾಮಗಾರಿಗಳು ಅನುದಾನ ಲಭ್ಯತೆ ಇಲ್ಲದೆ ಇನ್ನೂ ಆರಂಭಗೊಂಡಿಲ್ಲ. ಈ ನಡುವೆ ನಗರಸಭೆಯಲ್ಲಿ ಪ್ರತಿ ವರ್ಷ ಆದಾಯಕ್ಕಿಂತ ಖರ್ಚು ಅಧಿಕವಾಗುತ್ತಿದೆ.       ಕುಡಿಯುವ ನೀರು ಪೂರೈಕೆ, ತ್ಯಾಜ್ಯ ನಿರ್ವಹಣೆಗಾಗಿ ಸಾಕಷ್ಟು ಹಣ ವ್ಯಯಿಸಲಾಗುತ್ತಿದೆ. ಆದರೂ ಸಹ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಎಲ್ಲಾ ವಾರ್ಡ್‌ಗಳಲ್ಲೂ ಹಲವಾರು ಸಮಸ್ಯೆಗಳಿದ್ದು, ಈ ಹಿನ್ನಲೆಯಲ್ಲಿ ಈ ಬಾರಿ ಆಯ-ವ್ಯಯ ಗಮನ ಸೆಳೆಯುತ್ತಿದೆ.       ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದು, ಸದಸ್ಯರು ಸಭೆಗೆ ಆಗಮಿಸಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ. 

ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಿ : ಕವಿತಾ

Image
ಬಿಜೆಪಿ ಮಹಿಳಾ ಮೋರ್ಚಾದಿಂದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾರವರು, ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ ಜೀವನದ ನಿರ್ಣಾಯಕ ಘಟ್ಟದಲ್ಲಿರುವ ತಾವೆಲ್ಲರೂ ಶ್ರದ್ದೆಯಿಂದ ಓದಿ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಬೇಕು. ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ಸಮಸ್ಯೆಗಳು ಇದ್ದ...

ವಿಐಎಸ್‌ಎಲ್ ಇಸ್ಪಾತ್ ಮಹಿಳಾ ಸಮಾಜದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Image
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಇಸ್ಪಾತ್ ಮಹಿಳಾ ಸಮಾಜದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.      ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಇಸ್ಪಾತ್ ಮಹಿಳಾ ಸಮಾಜದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.       ಕಾರ್ಖಾನೆ ಕಾರ್ಯಪಾಲಕ ನಿದೇರ್ಶಕ ಅನೂಪ್ ಕುಮಾರ್  ಮಹಿಳಾ ದಿನಾಚರಣೆ ಉದ್ಘಾಟಿಸಿದರು.  ಸಂಘದ ಮಹಿಳೆಯರಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು.  ಮಾನವ ಸಂಪನ್ಮೂಲ ಇಲಾಖೆ ಮುಖ್ಯ ಮಹಾಪ್ರಬಂಧಕ ಬಿ.ವಿಶ್ವನಾಥ್, ಪ್ರಭಾರಿ ಮಹಾಪ್ರಬಂಧಕ (ಸ್ಥಾವರ) ಟಿ. ರವಿಚಂದ್ರನ್, ಇಸ್ಟಾತ್ ಮಹಿಳಾ ಸಮಾಜದ ಅಧ್ಯಕ್ಷೆ ನಿಶಾ ಶ್ರೀವಾಸ್ತವ, ಉಪಾಧ್ಯಕ್ಷೆ ಪಂಕಜ ವಿಶ್ವನಾಥ್, ಕಾರ್ಯದರ್ಶಿ ಈಶ್ವರಿ ಕುತಲನಾಥನ್, ಖಜಾಂಚಿ ವಿನೋದ ಇಳಯರಾಜ, ಸಾಂಸ್ಕೃತಿಕ ಕಾರ್ಯದರ್ಶಿ ಪ್ರತಿಭಾ ರಘುನಾಥ್, ಜಂಟಿ ಕಾರ್ಯದರ್ಶಿ ಶ್ರವಂತಿ ಅನೀಲ್ ರೆಡ್ಡಿ ಉಪಸ್ಥಿತರಿದ್ದರು.      ಮಹಿಳಾ ದಿನಾಚರಣೆ ಆರಂಭಕ್ಕೂ ಮೊದಲು  ಹೊಲಿಗೆ ತರಬೇತಿ ಕೇಂದ್ರ ಉದ್ಘಾಟಿಸಲಾಯಿತು. ಕಾರ್ಖಾನೆಯ ಮಹಿಳಾ ಉದ್ಯೋಗಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

೮೯ನೇ ರಕ್ತದಾನ ಶಿಬಿರ : ೩೦ ಮಂದಿ ರಕ್ತದಾನ

Image
ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ಭದ್ರಾವತಿ ನಗರದ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಬಿ.ಎನ್-೯೭ರ ವತಿಯಿಂದ ಜೀವ ಸಂಜೀವಿನ ರಕ್ತ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ೮೯ನೇ ರಕ್ತದಾನ ಶಿಬಿರದಲ್ಲಿ ಒಟ್ಟು ೩೦ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.       ಭದ್ರಾವತಿ : ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ನಗರದ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಬಿ.ಎನ್-೯೭ರ ವತಿಯಿಂದ ಜೀವ ಸಂಜೀವಿನ ರಕ್ತ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ೮೯ನೇ ರಕ್ತದಾನ ಶಿಬಿರದಲ್ಲಿ ಒಟ್ಟು ೩೦ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.       ಮೈಸೂರು ಕಾಗದ ಕಾರ್ಖಾನೆಯ ಆರ್‌ಎಎಫ್ ಆವರಣದಲ್ಲಿ ೮೭ನೇ ಸಿಆರ್‌ಪಿಎಫ್ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಆರ್‌ಎಎಫ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ರಕ್ತದಾನ ನೆರವೇರಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಿರಂತರವಾಗಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ತುರ್ತು ಸಂದರ್ಭಗಳಿಗೆ ನೆರವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.       ರಕ್ತದಾನ ಹಾಗು ಪರಿಸರ ಪ್ರೇಮಿ ಹೆಡ್‌ಕಾನ್ಸ್‌ಸ್ಟೇಬಲ್ ಹಾಲೇಶಪ್ಪನವರ ನೇತೃತ್ವದಲ್ಲಿ ಶಿಬಿರ ಆಯೋಜಿಸಿಕೊಂಡು ಬರಲಾಗುತ್ತಿದೆ. ಹಾಲೇಶಪ್ಪನವರು ಸುಮಾರು ೫೦ ಬಾರಿ ರಕ್ತದಾನ ಮಾಡ...

ಶ್ರೀ ಮದ್ದೂರಮ್ಮ ದೇವಸ್ಥಾನ ಜಾತ್ರಾ ಮಹೋತ್ಸವ : ಗಮನ ಸೆಳೆದ ಗಾಯಕರ ತಂಡ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನೀಪುರದ ಶ್ರೀ ಮದ್ದೂರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರ್.ಜೆ ಸುಗಮ ಸಂಗೀತ ಕಲಾ ತಂಡದ ಗಾಯಕರು ಭಕ್ತರ ಗಮನ ಸೆಳೆದರು.        ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನೀಪುರದ ಶ್ರೀ ಮದ್ದೂರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರ್.ಜೆ ಸುಗಮ ಸಂಗೀತ ಕಲಾ ತಂಡದ ಗಾಯಕರು ಭಕ್ತರ ಗಮನ ಸೆಳೆದರು.       ಭಕ್ತಿಗೀತೆ, ಭಾವಗೀತೆ, ಜಾನಪದಗೀತೆಗಳ ಸುಮಧುರ ಗಾಯನದ ಮೂಲಕ ಸುಮಾರು ೪ ಗಂಟೆ ಸಮಯ ಭಕ್ತರ ಮನಸ್ಸಿಗೆ ಮುದ ನೀಡುವಲ್ಲಿ ಗಾಯಕರು ಯಶಸ್ವಿಯಾದರು.  ಗಾಯಕ ಡಿ.ಆರ್ ಹರೀಶ್, ಜಾನಪದ ಕಲಾವಿದ ದಿವಾಕರ್, ತಬಲ ಮಾಸ್ಟರ್ ಶಿವರಾಜ್ ಮತ್ತು ರಮೇಶ್ ಅವರನ್ನೊಳಗೊಂಡ ತಂಡ ಭಕ್ತರ ಗಮನ ಸೆಳೆಯಿತು.       ಶ್ರೀ ಮದ್ದೂರಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಉಜ್ಜಿನಿಪುರ, ಕಾಗದನಗರ, ಹುಡ್ಕೋಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.

ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಶ್ರೀ ವಾದಿರಾಜರ ಆರಾಧನೆ

Image
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಶುಕ್ರವಾರ ವಾದಿರಾಜರ ಆರಾಧನೆ ವಿಜೃಂಭಣೆಯಿಂದ ಜರುಗಿತು.       ಭದ್ರಾವತಿ: ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಶುಕ್ರವಾರ ವಾದಿರಾಜರ ಆರಾಧನೆ ವಿಜೃಂಭಣೆಯಿಂದ ಜರುಗಿತು.       ಬೆಳಿಗ್ಗೆ ನಿರ್ಮಾಲ್ಯ ಹಾಗೂ ಅಭಿಷೇಕ ನಡೆಯಿತು. ನಂತರ ಅಲಂಕೃತಗೊಂಡ ರಥದಲ್ಲಿ ಶ್ರೀ ವಾದಿರಾಜರ, ಶ್ರೀ ಗುರುರಾಜರ ಮತ್ತು ಶ್ರೀ ಜಯತೀರ್ಥರ ಬೃಂದಾವನದೊಂದಿಗೆ ಹಾಗು ಶ್ರೀ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಮತ್ತು ನಗರದ ವಿವಿಧ ಭಜನಾ ಮಂಡಳಿಗಳೊಂದಿಗೆ ಇತಿಹಾಸ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದವರೆಗೆ ಉತ್ಸವ ಮೆರವಣಿಗೆ ನಡೆಸಲಾಯಿತು.       ಶ್ರೀನಿವಾಸ್ ಆಚಾರ್ ಅವರಿಂದ ಶ್ರೀ ವಾದಿರಾಜರ ಕುರಿತು ಉಪನ್ಯಾಸ ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನೆರವೇರಿತು. ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್ ಹಾಗೂ ಶ್ರೀನಿವಾಸ್ ಆಚಾರ್ ಧಾರ್ಮಿಕ ಆಚರಣೆಗಳ ನೇತೃತ್ವವಹಿಸಿದ್ದರು.       ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರುಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್ ಹಾಗೂ ನಿರಂಜನಾಚಾರ್ಯ, ಶುಭ ಗುರುರಾಜ ಮಾಧ...

ಶಾಲಾ ಮಕ್ಕಳಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

Image
ಭದ್ರಾವತಿಯಲ್ಲಿ ಅಪ್ಪರ್ ಹುತ್ತಾ  ಗೆಳೆಯರ ಬಳಗ ಟ್ರಸ್ಟ್ ವತಿಯಿಂದ  ಶಿವಮೊಗ್ಗ  ಶಂಕರ ಕಣ್ಣಿನ ಆಸ್ಪತ್ರೆ  ಸಹಯೋಗದೊಂದಿಗೆ ಶುಕ್ರವಾರ ನ್ಯೂಟೌನ್  ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಚಾಲನೆ ನೀಡಿದರು.       ಭದ್ರಾವತಿ : ಅಪ್ಪರ್ ಹುತ್ತಾ  ಗೆಳೆಯರ ಬಳಗ ಟ್ರಸ್ಟ್ ವತಿಯಿಂದ  ಶಿವಮೊಗ್ಗ  ಶಂಕರ ಕಣ್ಣಿನ ಆಸ್ಪತ್ರೆ  ಸಹಯೋಗದೊಂದಿಗೆ ಶುಕ್ರವಾರ ನ್ಯೂಟೌನ್  ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.       ವಿಶೇಷವಾಗಿ ಶಾಲಾ ಮಕ್ಕಳ ಕಣ್ಣಿನ ಆರೋಗ್ಯ ಕುರಿತು ಹೆಚ್ಚಿನ ಕಾಳಜಿವಹಿಸಿ ಅತ್ಯಾಧುನಿಕ ಉಪಕರಣಗಳ ಬಳಕೆ ಮೂಲಕ ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಭವಿಷ್ಯದಲ್ಲಿ ಮಕ್ಕಳಿಗೆ ಎದುರಾಗಬಹುದಾದ ಸಮಸ್ಯೆಗಳಿಂದ ಮುಕ್ತಿ ನೀಡುವುದು ಈ ಶಿಬಿರದ ಉದ್ದೇಶವಾಗಿದೆ.       ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಶಿಬಿರಕ್ಕೆ ಚಾಲನೆ ನೀಡಿದರು. ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ಕಾರ್ಯ...

ಮಾ.೧೧ರಂದು `ಡಿಎಸ್‌ಎಸ್ ಬೆಂಗಳೂರು ಚಲೋ' : ಪೋಸ್ಟರ್ ಬಿಡುಗಡೆ

Image
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ  ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾರ ಭದ್ರಾವತಿ ನಗರದ ತಾಲೂಕು ಕಛೇರಿ ಆವರಣದಲ್ಲಿ `ಡಿಎಸ್‌ಎಸ್ ಬೆಂಗಳೂರು ಚಲೋ' ಪೋಸ್ಟರ್ ಬಿಡುಗಡೆಗೊಳಿಸಲಾಯಿತು.       ಭದ್ರಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ  ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾರ ನಗರದ ತಾಲೂಕು ಕಛೇರಿ ಆವರಣದಲ್ಲಿ `ಡಿಎಸ್‌ಎಸ್ ಬೆಂಗಳೂರು ಚಲೋ' ಪೋಸ್ಟರ್ ಬಿಡುಗಡೆಗೊಳಿಸಲಾಯಿತು.       ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿರುವ ಅನುದಾನ ಇತರೆ ಉದ್ದೇಶಗಳಿಗೆ ಬಳಸಬಾರದು. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ೨೫,೦೦೦ ಕೋ. ರು. ಹಿಂಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ  ಶೇ. ೨೪.೧ ರಷ್ಟು ಅನುದಾನ ಮೀಸಲಿರಿಸಬೇಕೆಂದು ಆಗ್ರಹಿಸಲಾಯಿತು.       ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಒಳಮಿಸಲಾತಿ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.       ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ , ಜ...

ಗುಜರಿ ವಾಹನಗಳಿಗೆ ಬೆಂಕಿ : ಲಕ್ಷಾಂತರ ರು. ನಷ್ಟ

Image
ಭದ್ರಾವತಿ ನಗರದ ತರೀಕೆರೆ ರಸ್ತೆ ಸಾದತ್ ದರ್ಗಾ ಸಮೀಪ ಗುಜರಿಗೆ ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವು ಹಳೆಯ ವಾಹನಗಳು ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ.      ಭದ್ರಾವತಿ: ನಗರದ ತರೀಕೆರೆ ರಸ್ತೆ ಸಾದತ್ ದರ್ಗಾ ಸಮೀಪ ಗುಜರಿಗೆ ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವು ಹಳೆಯ ವಾಹನಗಳು ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ.      ಮುಕ್ರಂ ಖಾನ್ ಎಂಬುವವರು ತರೀಕೆರೆ ರಸ್ತೆಯಲ್ಲಿ ಶೆಡ್ ಕಟ್ಟಿಕೊಂಡು ಗುಜರಿ ವ್ಯಾಪಾರ ನಡೆಸುತ್ತಿದ್ದಾರೆ. ಶೆಡ್ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ಕೂಡ ಇವರು ಹಲವು ಹಳೆಯ ವಾಹನಗಳನ್ನು ನಿಲ್ಲಿಸುತ್ತಿದ್ದರು.      ಗುರುವಾರ ಮಧಾಹ್ನ ೧೨ ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ವಾಹನ ನಿಲ್ಲಿಸಿದ್ದ ಖಾಲಿ ಜಾಗವನ್ನು ಆವರಿಸಿಕೊಂಡಿತು. ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಕ್ಕೆ ಹಬ್ಬುವ ಆತಂಕ ಮನೆಮಾಡಿತ್ತು. ಘಟನೆಯಲ್ಲಿ ಗುಜರಿಗೆ ಹಾಕಲಾಗಿದ್ದ ೨ ಕಾರ್, ೧ ಆಟೋ ರಿಕ್ಷಾ ಹಾಗು ೨೦ ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ.      ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ...

ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ

Image
ಭದ್ರಾವತಿ ಸಿದ್ದಾರೂಢ ನಗರದ ತಾಲೂಕು ಅಧಿಕಾರಿಗಳ ಸಂಘದ ವತಿಯಿಂದ ಸಾಮಾಜಿಕ ಸೇವಾ ಮನೋ ಸಂಕಲ್ಪದೊಂದಿಗೆ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.       ಭದ್ರಾವತಿ : ಸಿದ್ದಾರೂಢ ನಗರದ ತಾಲೂಕು ಅಧಿಕಾರಿಗಳ ಸಂಘದ ವತಿಯಿಂದ ಸಾಮಾಜಿಕ ಸೇವಾ ಮನೋ ಸಂಕಲ್ಪದೊಂದಿಗೆ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.       ಅಧಿಕಾರಿಗಳ ಸಂಘ ಹಲವಾರು ವರ್ಷಗಳಿಂದ ವಿವಿಧ ಸೇವಾ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿದ್ದು, ವಿಕಲಚೇತನರಿಗೆ ನೆರವಾಗುವ ನಿಟ್ಟಿನಲ್ಲಿ ಸಂಘದ ಕಾರ್ಯದರ್ಶಿ ವಿ. ಪ್ರಕಾಶ್‌ರವರು ತಮ್ಮ ಸ್ವಂತ ಹಣದಲ್ಲಿ ಮೂರು ಚಕ್ರದ ಸೈಕಲ್, ವಾಟರ್ ಬೆಡ್,  ಇಸ್ತ್ರಿ ಮಾಡುವ ಟೇಬಲ್ ಸೇರಿದಂತೆ ವಿವಿಧ ಸಲಕರಣೆಗಳನ್ನು ಸಂಘದ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.      ಸಂಘದ ಅಧ್ಯಕ್ಷ, ನಗರಸಭೆ ಪೌರಾಯುಕ್ತ ಕೆ.ಎನ್  ಹೇಮಂತ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಂಘದ ಉಪಾಧ್ಯಕ್ಷ, ನಿವೃತ್ತ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣ ಗೌಡ, ಸಂಘದ ಸಂಸ್ಥಾಪಕ ಸದಸ್ಯ ಎನ್.ಟಿ.ಸಿ ನಾಗೇಶ್, ಖಜಾಂಚಿ, ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ, ನಗರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪಿಡಿಒ ಕೇಶವಮೂರ್ತಿ ವಂದಿಸಿದರು.

ವಿಜೃಂಭಣೆಯಿಂದ ಜರುಗಿದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

Image
ವಿವಿಧ ಧಾರ್ಮಿಕ ಆಚರಣೆಗಳು, ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ  ಭದ್ರಾವತಿ ಶ್ರೀ ಕ್ಷೇತ್ರ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ರಥೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು    ಭದ್ರಾವತಿ: ಶ್ರೀ ಕ್ಷೇತ್ರ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ರಥೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.     ಭದ್ರಾವತಿ-ತರೀಕೆರೆ ರಸ್ತೆ ಮಾರ್ಗ ಮಧ್ಯದಲ್ಲಿರುವ ತಾಲೂಕಿನ ಸುಣ್ಣದಹಳ್ಳಿ ಗ್ರಾಮದ ೮೦೦ ವರ್ಷಗಳ ಇತಿಹಾಸ ಪುರಾಣ ಪ್ರಸಿದ್ದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ.  ಪ್ರತಿ ವರ್ಷದಂತೆ ಈ ಬಾರಿ ಸಹ ದೇವಸ್ಥಾನದ ಆವರಣದಿಂದ ಆರಂಭಗೊಂಡ ರಥೋತ್ಸವ ಮಧ್ಯಾಹ್ನ ೧೨.೪೫ಕ್ಕೆ ಗ್ರಾಮದ ಅಗಸೆ ಬಾಗಿಲಿನವರೆಗೆ ಬಂದು ತಲುಪಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿದರು. ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು. ಸ್ವಾಮಿ ಪ್ರತಿಷ್ಠಾಪನೆಗೊಂಡ ಅಲಂಕೃತ ಭವ್ಯ ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಅಲ್ಲದೆ ಬೃಹತ್ ಓಂಕಾರ ಚಿತ್ತಾರ ಬಿಡಿಸಿ ಕರ್ಪೂರ ಹಚ್ಚಿ ಭಕ್ತಿಯಿಂದ ಕುಣಿದು ಸಂಭ್ರಮಿಸಲಾಯಿತು.     ರಥೋತ್ಸವ ನಂತರ ಅನ್ನ ಸಂತರ್ಪಣೆ ...

ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ

Image
ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಭದ್ರಾವತಿ : ನಗರದ ಚನ್ನಗಿರಿ ರಸ್ತೆಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಬ್ಯಾಂಕಿನ ಅಧ್ಯಕ್ಷ ಬಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೃಷ್ಣಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೃಷ್ಣಪ್ಪ ಬ್ಯಾಂಕಿನ ಹಿರಿಯ ನಿರ್ದೇಶಕರಾಗಿದ್ದು, ಈ ಹಿಂದಿನ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.       ಕಳೆದ ಸುಮಾರು ೧ ವರ್ಷದ ಹಿಂದೆ ನಿರ್ದೇಶಕಿ ಮೀರಾಬಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಅಧಿಕಾರ ಹಂಚಿಕೆ ಸೂತ್ರ ಅನ್ವಯಿಸಿಕೊಂಡು ನಿರ್ದೇಶಕರ ಮಂಡಳಿ ಆಡಳಿತ ಮುನ್ನಡೆಸಿಕೊಂಡು ಹೋಗುತ್ತಿದೆ.       ನೂತನ ಉಪಾಧ್ಯಕ್ಷ ಎಸ್. ಕೃಷ್ಣಪ್ಪರಿಗೆ ಬ್ಯಾಂಕಿನ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಿರ್ದೇಶಕರಾದ ಎಸ್. ವಿರುಪಾಕ್ಷಪ್ಪ, ಜಿ.ಎಂ ಚನ್ನಬಸಪ್ಪ, ಬಿ. ನಾಗೇಶ್, ಎಚ್.ಎಲ್ ಏಕಾಂತ, ಕೆ. ಶ್ರೀನಿವಾಸ್, ಎನ್.ಟಿ ಸಂಗನಾಥ, ಟಿ.ಎಸ್ ಮೌನೇಶ್ವರ, ಕೆ. ...

ಗುರು-ಹಿರಿಯರನ್ನು ಗೌರವಿಸುವ, ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ : ಬಿ.ಕೆ ಶಿವಕುಮಾರ್

Image
ಭದ್ರಾವತಿ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.       ಭದ್ರಾವತಿ: ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಅಲ್ಲದೆ ಹಿರಿಯರು ಅನಾಥಾಶ್ರಮಗಳನ್ನು ಅವಲಂಬಿಸುವ ಅಗತ್ಯತೆ ಇರುವುದಿಲ್ಲ ಎಂದು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು.       ಅವರು ಬುಧವಾರ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.       ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಅಗತ್ಯವಿದೆ. ಮನೆಗಳಲ್ಲಿ ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಹ ವಾತಾವರಣನಿರ್ಮಿಸಿಕೊಳ್ಳಬೇಕಾಗಿದೆ ಎಂದರು.       ಅನಿವಾ...

ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರಿಂದ ಗುರು ನಿವಾಸ ಉದ್ಘಾಟನೆ

Image
ಭದ್ರಾವತಿ ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಭದ್ರಾವತಿ : ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಈ ಸಂಬಂಧ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ,  ಶ್ರೀ ಜಗದ್ಗುರುಗಳ ಉಪಸ್ಥಿತಿಯಲ್ಲಿ ಪೂರ್ಣಾಹುತಿ, ಶ್ರೀ ಗುರುನಿವಾಸದ ಉದ್ಘಾಟನೆ ನಂತರ ಸನ್ನಿಧಿಯಲ್ಲಿ ಧೂಳಿಪಾದಪೂಜೆ, ಭಿಕ್ಷಾವಂದನೆ, ಗುರುಪಾದುಕಾಪೂಜೆ, ವಿವಿಧ ಸಂಘ ಸಂಸ್ಥೆಗಳಿಂದ ಫಲ ಸಮರ್ಪಣೆ ನಂತರ ಶ್ರೀ ಜಗದ್ಗುರುಗಳವರಿಂದ ಫಲ-ಮಂತ್ರಾಕ್ಷತೆ, ರಜತ ಮಹೋತ್ಸವದ ಅಂಗವಾಗಿ ಶ್ರೀಮಠದಲ್ಲಿ ಪ್ರಾರಂಭದಿಂದಲೂ ಹಾಗೂ ಈಗಲೂ ಸೇವೆ ಸಲ್ಲಿಸುತ್ತಿರುವವರಿಗೆ ಗೌರವ ಸಮರ್ಪಣೆ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ಹಾಗೂ ಮಹಾಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.    ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಪ್ರಮುಖರಾದ ಕೆ.ಎಸ್ ನಾಗರಾಜ್, ಶಾಂತಕುಮಾರ್, ಕೆ.ಆರ್ ನಾಗರಾಜ್, ಎ.ಎನ್ ಸುರೇಶ...

ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರಿಂದ ಗುರು ನಿವಾಸ ಉದ್ಘಾಟನೆ

Image
ಭದ್ರಾವತಿ ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಭದ್ರಾವತಿ : ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಈ ಸಂಬಂಧ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ,  ಶ್ರೀ ಜಗದ್ಗುರುಗಳ ಉಪಸ್ಥಿತಿಯಲ್ಲಿ ಪೂರ್ಣಾಹುತಿ, ಶ್ರೀ ಗುರುನಿವಾಸದ ಉದ್ಘಾಟನೆ ನಂತರ ಸನ್ನಿಧಿಯಲ್ಲಿ ಧೂಳಿಪಾದಪೂಜೆ, ಭಿಕ್ಷಾವಂದನೆ, ಗುರುಪಾದುಕಾಪೂಜೆ, ವಿವಿಧ ಸಂಘ ಸಂಸ್ಥೆಗಳಿಂದ ಫಲ ಸಮರ್ಪಣೆ ನಂತರ ಶ್ರೀ ಜಗದ್ಗುರುಗಳವರಿಂದ ಫಲ-ಮಂತ್ರಾಕ್ಷತೆ, ರಜತ ಮಹೋತ್ಸವದ ಅಂಗವಾಗಿ ಶ್ರೀಮಠದಲ್ಲಿ ಪ್ರಾರಂಭದಿಂದಲೂ ಹಾಗೂ ಈಗಲೂ ಸೇವೆ ಸಲ್ಲಿಸುತ್ತಿರುವವರಿಗೆ ಗೌರವ ಸಮರ್ಪಣೆ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ಹಾಗೂ ಮಹಾಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.    ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಪ್ರಮುಖರಾದ ಕೆ.ಎಸ್ ನಾಗರಾಜ್, ಶಾಂತಕುಮಾರ್, ಕೆ.ಆರ್ ನಾಗರಾಜ್, ಎ.ಎನ್ ಸುರೇಶ...

ಗುರು-ಹಿರಿಯರನ್ನು ಗೌರವಿಸುವ, ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ : ಬಿ.ಕೆ ಶಿವಕುಮಾರ್

Image
ಭದ್ರಾವತಿ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.       ಭದ್ರಾವತಿ: ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಅಲ್ಲದೆ ಹಿರಿಯರು ಅನಾಥಾಶ್ರಮಗಳನ್ನು ಅವಲಂಬಿಸುವ ಅಗತ್ಯತೆ ಇರುವುದಿಲ್ಲ ಎಂದು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು.       ಅವರು ಬುಧವಾರ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.       ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಅಗತ್ಯವಿದೆ. ಮನೆಗಳಲ್ಲಿ ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಹ ವಾತಾವರಣನಿರ್ಮಿಸಿಕೊಳ್ಳಬೇಕಾಗಿದೆ ಎಂದರು.       ಅನಿವಾ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ

Image
ಭದ್ರಾವತಿ: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ ದೊಡ್ಡಗೊಪ್ಪೇನ ಹಳ್ಳಿ(ಡಿಜೆ ಹಳ್ಳಿ) ಯಲ್ಲಿ ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ ಸಮಾವೇಶ ಉದ್ಘಾಟಿಸಿದರು. ಗ್ರಾಮದ ಪ್ರಮುಖರಾದ ಶಾಂತಪ್ಪ ಅಧ್ಯಕ್ಷತೆವಹಿಸಿದ್ದರು.  ತಾಲೂಕು ಯೋಜನಾಧಿಕಾರಿ ಪ್ರಕಾಶ್ ನಾಯ್ಕ್ ವೈ, ನ್ಯಾಯವಾದಿ ವಿಶ್ವನಾಥ್, ಗಂಗಣ್ಣ, ನಂಜುಂಡಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.  ದೀಪ ಸ್ವಾಗತಿಸಿ, ಯೋಜನೆಯ ಕೃಷಿ ಮೇಲ್ವಿಚಾರಕರು ಧನಂಜಯ ವಂದಿಸಿರು.    ಡಿ೩-ಬಿಡಿವಿಟಿ೨ ಭದ್ರಾವತಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ ದೊಡ್ಡಗೊಪ್ಪೇನ ಹಳ್ಳಿ(ಡಿಜೆ ಹಳ್ಳಿ) ಯಲ್ಲಿ ನಡೆಯಿತು.  Ananthakumara, Reporter, Kannadaprabha, NDK/31A, Near, Sri Satyasayi Baba school, Newtown, Bhadravathi:-577301(Tq) Shimoga(Dis) Mob: 9738801478 : 9482007466

ಸರ್ಕಾರಿ ಶಾಲೆ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಿಸಿ ಹುಟ್ಟುಹಬ್ಬ ಆಚರಣೆ

Image
ಭದ್ರಾವತಿ ನಗರದ ನ್ಯೂಟೌನ್ ನಿವಾಸಿ, ಸಮಾಜ ಸೇವಕ ಬಿ. ಜಗದೀಶ್-ಪುಷ್ಪ ದಂಪತಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಲೇಖನ ಸಾಮಾಗ್ರಿ ವಿತರಿಸಲಾಯಿತು.       ಭದ್ರಾವತಿ : ನಗರದ ನ್ಯೂಟೌನ್ ನಿವಾಸಿ, ಸಮಾಜ ಸೇವಕ ಬಿ. ಜಗದೀಶ್-ಪುಷ್ಪ ದಂಪತಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಲೇಖನ ಸಾಮಾಗ್ರಿ ವಿತರಿಸಲಾಯಿತು.       ಪುಷ್ಪ ತಮ್ಮ ೪೪ನೇ ವರ್ಷದ ಹುಟ್ಟುಹಬ್ಬಕ್ಕೆ ಮಕ್ಕಳಿಗೆ ಕಾರ್ಡ್ ಬೋರ್ಡ್, ಜಾಮಿಟ್ರಿ ಬಾಕ್ಸ್‌ಗಳನ್ನು ವಿತರಿಸಿ ಸಿಹಿ ಹಂಚಿಕೆ ಮಾಡಿದರು. ಶಾಲಾಭಿವೃದ್ಧಿ ಪ್ರಮುಖರಾದ ಯೇಸು ಮಾತನಾಡಿ, ಹುಟ್ಟುಹಬ್ಬ ಅದ್ದೂರಿ ಎಲ್ಲಾದರೂ ಆಚರಿಸಿಕೊಳ್ಳಬಹುದಾಗಿದೆ. ಆದರೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಸಂಭ್ರಮ ಹಂಚಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.       ದಲಿತ ಮುಖಂಡರಾದ ದಾಸ್, ರವಿಕುಮಾರ್, ಯತೀಶ್, ಬಾಬು, ರಾಘಣ್ಣ, ಪ್ರಭು, ಮಣಿ, ಮಹಂತೇಶ, ವೇಲು, ಪ್ರಶಾಂತ್, ಅಭಿ, ಶ್ಯಾಮ್, ಹೇಮಂತ್, ಶಾಲೆಯ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಟೈಮ್ಸ್ ಸ್ಪೂರ್ತಿ ಇಂಟರ್‌ನ್ಯಾಷನಲ್ ಸ್ಕೂಲ್ ವಾಹನ ಚಾಲಕರು ಸೇರಿದಂತೆ ಇನ್ನಿತರರು ಉಪಸ್ಥ...

ಮಾ.೪ರಂದು ಸುರಕ್ಷಾ ಜೀವನ ವೃದ್ಧಾಶ್ರಮ, ಅನಾಥಾಶ್ರಮದ ವಾರ್ಷಿಕೋತ್ಸವ

Image
ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸುರಕ್ಷಾ ಜೀವನ ಸೇವಾ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಮಾತನಾಡಿದರು.       ಭದ್ರಾವತಿ : ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ವಾರ್ಷಿಕೋತ್ಸವ ಮಾ.೪ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ತಿಳಿಸಿದರು.       ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ೫ ವರ್ಷಗಳಿಂದ ಟ್ರಸ್ಟ್ ವತಿಯಿಂದ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಟ್ರಸ್ಟ್ ಸೇವಾ ಕಾರ್ಯಕ್ಕೆ ಹೆಚ್ಚಿನ ಸಹಕಾರ ಎಲ್ಲೆಡೆ ಲಭಿಸುತ್ತಿದೆ ಎಂದರು.       ಟ್ರಸ್ಟ್ ವಯೋವೃದ್ಧರು ಹಾಗು ಅನಾಥರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ. ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸೇವಾ ಮನೋಭಾವ ಹೊಂದಿರುವ ಕಾರ್ಯಕರ್ತರು ಯಾವುದೇ ಫಲಾಫೇಕ್ಷೆ ಇಲ್ಲದೆ ಕುಟುಂಬ ಸದಸ್ಯರಂತೆ ಒಗ್ಗಟ್ಟಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಂಬಾ ಉತ್ತಮವಾದ ವಾತಾವರಣದಲ್ಲಿ ಟ್ರಸ್ಟ್ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯವಿರುವ ಸೌಕರ್ಯಗಳನ್ನು ಹೊಂದಿದೆ. ಜನಪ್ರತಿನಿಧಿಗಳು, ದಾನಿಗಳು ಸೇರಿದಂತೆ ಸಮಾಜದ ಪ್ರತಿಯೊಬ್ಬರು ಹೆಚ್ಚಿನ ಸಹಕಾರ ನೀಡುವ ಮೂಲಕ ವೃದ್ದರು, ಅನಾ...

ಎತ್ತಿನ ಗಾಡಿಯಿಂದ ಕೆಳಗೆ ಬಿದ್ದು ಕೂಲಿ ಕಾರ್ಮಿಕ ಸಾವು

Image
     ಭದ್ರಾವತಿ: ಅಡಕೆ ಮರ ಕಡಿದುಕೊಂಡು ಎತ್ತಿನ ಗಾಡಿಯಲ್ಲಿ ಕೊಂಡೊಯ್ಯುವಾಗ ಕೂಲಿಕಾರ್ಮಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.       ನಗರದ ಜೇಡಿಕಟ್ಟೆ ಹೊಸೂರಿನಿಂದ ಶರವಣ(೫೩) ಎಂಬ ಕೂಲಿಕಾರ್ಮಿಕ ೨೦ ಅಡಿ ಉದ್ದದ ಅಡಕೆ ಮರ ಕಡಿದು ಎತ್ತಿನಗಾಡಿಯಲ್ಲಿ ಕೊಂಡೊಯ್ಯುವಾಗ ಜೇಡಿಕಟ್ಟೆಯ ವಿನಾಯಕ ಇಂಡಸ್ಟ್ರೀಸ್ ಬಳಿ ಎತ್ತಿನಗಾಡಿಯಿಂದ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ      ಇವರ ಮೃತದೇಹದ ಮರಣೋತ್ತರ ಪರೀಕ್ಷೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ವರದಿ ಬಂದ ನಂತರ ಇವರ ಸಾವಿನ ಕುರಿತು ಖಚಿತ ಮಾಹಿತಿ ಲಭ್ಯವಾಗಲಿದೆ. ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

೧ ಲಕ್ಷ ರು. ಲಂಚ ಪಡೆಯುವಾಗ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

Image
ಎ.ಕೆ ನಾಗೇಂದ್ರಪ್ಪ      ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ೧ ಲಕ್ಷ ರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತರು ನಡೆಸಿದ ದಾಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹಾಗು ಪತ್ರಕರ್ತ ಮಂಜುನಾಥ್ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಸಂಜೆ ನಡೆದಿದೆ.       ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು ಅವರಿಗೆ ೨೦೧೧ನೇ ಸಾಲಿನಿಂದ ೨೦೨೩ನೇ ಸಾಲಿನ ಅವಧಿಯಲ್ಲಿ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಮತ್ತು ಇತರೆ ಭತ್ಯೆಗಳು ಸೇರಿ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನೀಡಲು ೪ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಈ ಪೈಕಿ ೧ ಲಕ್ಷ ರು. ಹಣ ಪಡೆಯುವಾಗ ದಾಳಿ ನಡೆಸಲಾಗಿದೆ.      ಲಿಂಗರಾಜು ಅವರು ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗು ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ಮೇಲಾಧಿಕರಿಗಳಿಗೆ ಮನವಿ ಸಲ್ಲಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪತ್ರಕರ್ತ ಮಂಜುನಾಥ್ ನೆರವಿನೊಂದಿಗೆ ಒಟ್ಟು ೪ ಲಕ್ಷ ರು. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ  ಸಂಜೆ ೭ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕೊಠಡಿಯಲ್ಲಿ ಎ.ಕೆ ನಾಗೇಂದ್ರದಪ್ಪ. ಮತ್ತು...

ಮಾ.೪ರಂದು ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಗುರು ನಿವಾಸ ಉದ್ಘಾಟನೆ

Image
ಕೆ.ಆರ್ ಸುಬ್ಬರಾವ್       ಭದ್ರಾವತಿ : ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಮಾ.೪ರಂದು ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಉದ್ಘಾಟಿಸುವರು ಎಂದು ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ತಿಳಿಸಿದರು.       ಅವರು ಸೋಮವಾರ ಈ ಕುರಿತು ಮಾಹಿತಿ ನೀಡಿ, ಶ್ರೀ ಶಾರದಾ ಮಾತೆ,  ಶ್ರೀ ಚಂದ್ರಮೌಳೀಶ್ವರ, ಶ್ರೀ ಗಣೇಶ ದೇವರುಗಳ ಕೃಪೆಯಿಂದ ಹಾಗೂ ಉಭಯ ಜಗದ್ಗುರುಗಳ ಪರಮಾನುಗ್ರಹದಿಂದ ಮತ್ತು ಭಕ್ತರು, ದಾನಿಗಳ ಸಹಕಾರದಿಂದ ನಗರದಲ್ಲಿ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯನ್ನು ಹೆಚ್ಚಿನ ಶ್ರಮವಹಿಸಿ ಸ್ಥಾಪಿಸಲಾಯಿತು. ದೇವಸ್ಥಾನ, ಗೋ ಶಾಲೆ, ಸಮುದಾಯ ಭವನ, ಪಾಕಶಾಲೆ, ಉದ್ಯಾನವನ ನಿರ್ಮಿಸಲಾಗಿದ್ದು, ಶ್ರೀ ಮಠವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗಿದೆ. ಇದೀಗ ಗುರುನಿವಾಸ ನಿರ್ಮಿಸಲಾಗಿದೆ ಎಂದರು.       ಮಾ.೪ರ ಬುಧವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ, ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಜಗದ್ಗುರುಗಳ ಉಪಸ್ಥಿತಿಯಲ್ಲಿ ಪೂರ್ಣಾಹುತಿ, ಶ್ರೀ ಗುರುನಿವಾಸದ ಉದ್ಘಾಟನೆ ನಂತರ ಸನ್ನಿಧಿಯಲ್ಲಿ ಧೂಳಿಪಾದಪೂಜೆ, ಭಿಕ್ಷಾವಂದನೆ, ಗುರುಪಾದುಕಾಪೂಜೆ, ವಿವಿಧ ಸಂಘ ಸಂಸ್ಥೆಗಳಿಂದ ಫಲ ಸಮರ್...

ಸದಸ್ಯತ್ವ ಅಭಿಯಾನಕ್ಕೆ ಕೈಜೋಡಿಸಿ ಸಂಘಟನೆ ಬಲಪಡಿಸಿ : ಬಿ.ಎ ಮಂಜುನಾಥ್

Image
ಭದ್ರಾವತಿಯಲ್ಲಿ ಬಾಪೂಜಿ ಹರಿಜನ ಮಾದರ ಸೇವಾ ಸಂಘದ ವತಿಯಿಂದ ನಗರಸಭೆ ವ್ಯಾಪ್ತಿಯ ಜಿಂಕಲೈನ್ ಮತ್ತು ಹುತ್ತಾಕಾಲೋನಿ ಭಾಗದ ಸರ್ವಸದಸ್ಯರ ಸಭೆ ಏರ್ಪಡಿಸಲಾಗಿತ್ತು.      ಭದ್ರಾವತಿ: ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯ ಪಡೆಯುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಕೈಜೋಡಿಸುವ ಮೂಲಕ ಸಂಘಟನೆ ಬಲಗೊಳಿಸಬೇಕೆಂದು ನಗರದ ಬಾಪೂಜಿ ಹರಿಜನ ಮಾದರ ಸೇವಾ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಮನವಿ ಮಾಡಿದರು.       ಅವರು ನಗರಸಭೆ ವ್ಯಾಪ್ತಿಯ ಜಿಂಕಲೈನ್ ಮತ್ತು ಹುತ್ತಾಕಾಲೋನಿ ಭಾಗದ ಸರ್ವಸದಸ್ಯರ ಸಭೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಈಗಾಗಲೇ ಸುಮಾರು ೧೫೬ ಕುಟುಂಬಗಳು ಸಂಘದ ಸದಸ್ಯತ್ವ ಪಡೆದುಕೊಂಡಿವೆ. ಮುಂದಿನ ದಿನಗಳಲ್ಲಿ ಬೊಮ್ಮನಕಟ್ಟೆ, ಸಂಜೀವನಗರ, ಸೀಗೆಬಾಗಿ ಗ್ರಾಮಗಳಲ್ಲೂ ಸಹ ಸದಸ್ಯತ್ವ ಅಭಿಯಾನ ನಡೆಸಲಾಗುವುದು ಎಂದರು.        ಸಂಘದಲ್ಲಿ ಸದಸ್ಯತ್ವ ಹೊಂದಿರುವವರು ಒಂದು ವೇಳೆ ಮೃತಪಟ್ಟಲ್ಲಿ ಅವರ ಕುಟುಂಬಸ್ಥರಿಗೆ ಅಂತ್ಯಸಂಸ್ಕಾರಕ್ಕೆ ೫ ಸಾವಿರ ರು. ಆರ್ಥಿಕ ನೆರವು ನೀಡಲಾಗುವುದು. ಅಲ್ಲದೆ ಸಂಘದಿಂದ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.       ಸಭೆಯಲ್ಲಿ ಹಿರಿಯ ದಲಿತ ನಾಯಕ ಎಚ್.ಎನ್ ಶ್ರೀನಿವಾಸ್ ಮಾತನಾಡಿ, ಸಂಘದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು...

ಮಾ.೩ರಿಂದ ೪೧ನೇ ವರ್ಷದ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ

Image
     ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನೀಪುರ ಶ್ರೀ ಮದ್ದೂರಮ್ಮ ಟ್ರಸ್ಟ್ ವತಿಯಿಂದ ಮಾ.೩ ಮತ್ತು ೪ರಂದು ೪೧ನೇ ವರ್ಷದ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ.       ಫೆ.೩ರ ಮಂಗಳವಾರ ಸಂಜೆ ೫ ಗಂಟೆಗೆ ಗಂಗೆಪೂಜೆ ಮತ್ತು ರಾತ್ರಿ ೮ ಗಂಟೆಗೆ ಮಹಾಮಂಗಳಾರತಿ, ೮.೩೦ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ೪ರಂದು ಮಧ್ಯಾಹ್ನ ೧೨.೩೦ಕ್ಕೆ ಆರತಿ ತರುವ ಕಾರ್ಯಕ್ರಮ ನಡೆಯಲಿದೆ. ೨ ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಯೋಧರ ಸೇವೆ ಅನನ್ಯ, ಯೋಧರಾಗುವುದು ಯೋಗ : ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ

Image
ಭದ್ರಾವತಿ ತಾಲೂಕಿನ ಬಿಳಿಕಿ ಗ್ರಾಮದಲ್ಲಿ ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಬಿಳಿಕಿ ಹಿರೇಮಠದಲ್ಲಿ ದೇವತಾ ಕಾರ್ಯ, ವೀರ ಯೋಧರಿಗೆ ಗೌರವ ಗುರುರಕ್ಷೆ ಹಾಗು ಧಾರ್ಮಿಕ ಪೂಜಾ ಸಮಾರಂಭ ಆಯೋಜಿಸಲಾಗಿತ್ತು.       ಭದ್ರಾವತಿ :ಎಲ್ಲರೂ ಯೋಧರಾಗಲು ಸಾಧ್ಯವಿಲ್ಲ. ಯೋಧರಾಗುವುದು ಯೋಗವಿದ್ದಂತೆ. ಯೋಧರಿಂದ ನಾವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದು ತಾಲೂಕಿನ ಬಿಳಿಕಿ ಹಿರೇಮಠ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.       ಶ್ರೀಗಳು ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಮಠದಲ್ಲಿ ಆಯೋಜಿಸಲಾಗಿದ್ದ ದೇವತಾ ಕಾರ್ಯ, ವೀರ ಯೋಧರಿಗೆ ಗೌರವ ಗುರುರಕ್ಷೆ ಹಾಗು ಧಾರ್ಮಿಕ ಪೂಜಾ ಸಮಾರಂಭದ ನೇತೃತ್ವವಹಿಸಿ ಮಾತನಾಡಿದರು.       ಮಠದ ಪರಂಪರೆಯಂತೆ ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವದ ಅಂಗವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಶ್ರೀ ಮಠದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನೆರವು ಹೆಚ್ಚಿನದ್ದಾಗಿದೆ ಎಂದು ಸ್ಮರಿಸಿದರು.       ಈ ಬಾರಿ ವಿಶೇಷ ಎಂದರೆ ವೀರ ಸೈನಿಕರಿಗೆ ಮಠದಿ...

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ವಿಜಯಲಕ್ಷ್ಮೀ

Image
ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ ಆದೇಶ ಹೊರಡಿಸಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ ವಿಜಯಲಕ್ಷ್ಮೀಯವರಿಗೆ ಆದೇಶ ಪತ್ರ ವಿತರಿಸಿದರು.      ಭದ್ರಾವತಿ : ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ ಆದೇಶ ಹೊರಡಿಸಿದ್ದಾರೆ.      ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್‌ರವರ ನಿರ್ದೇಶನದ  ವಿಜಯಲಕ್ಷ್ಮೀ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ. ಹಲವಾರು ವರ್ಷಗಳಿಂದ ವಿಜಯಲಕ್ಷ್ಮೀಯವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದು, ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.     ಶಾಸಕ ಬಿ.ಕೆ.ಸಂಗಮೇಶ್ವರ್ ವಿಜಯಲಕ್ಷ್ಮೀಯವರನ್ನು ಶನಿವಾರ ತಮ್ಮ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಸದಸ್ಯರಾದ ವಿ. ಕದಿರೇಶ್,  ಬಿ.ಕೆ.ಮೋಹನ್, ಸರ್ವಮಂಗಳ ಭೈರಪ್ಪ, ಅನುಸುಧಾ ಮೋಹನ್ ಪಳನಿ, ಮಾಜಿ ಸದಸ್ಯ ಬದರಿನಾರಾಯಣ, ನರಸಿಂಹಮೂರ್ತಿ, ಕುಮಾರ್(ಮಾಸ್...

ಉಕ್ಕಿನ ನಗರದಲ್ಲಿ ಕಣ್ಮನ ಸೆಳೆದ `ಪ್ರೇಮ ಪ್ರವಾಹಿನಿ ರಥಯಾತ್ರೆ'

Image
ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ `ಪ್ರೇಮ ಪ್ರವಾಹಿನಿ ರಥಯಾತ್ರೆ'ಯು ಶನಿವಾರ ಭದ್ರಾವತಿ ನಗರಕ್ಕೆ ಆಗಮಿಸಿತು. ರಥಯಾತ್ರೆಯಲ್ಲಿ ವಿವಿಧ ಕಲಾತಂಡಗಳು, ಸ್ತಬ್ಧಚಿತ್ರಗಳು, ಶಾಲಾ ಮಕ್ಕಳು, ಭಕ್ತರು ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.       ಭದ್ರಾವತಿ : ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ `ಪ್ರೇಮ ಪ್ರವಾಹಿನಿ ರಥಯಾತ್ರೆ'ಯು ಶನಿವಾರ ನಗರಕ್ಕೆ ಆಗಮಿಸಿತು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಸೇರಿದಂತೆ ಇನ್ನಿತರರು ಅದ್ದೂರಿಯಾಗಿ ಸ್ವಾಗತಿಸಿದರು.      ರಥಯಾತ್ರೆ ಬೆಳಿಗ್ಗೆ ಹಳೇನಗರದ ಕನಕಮಂಟಪದಿಂದ ಪ್ರಾರಂಭಗೊಂಡು ಡಾ. ಪುನೀತ್ ರಾಜಕುಮಾರ್ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಡಾ. ರಾಜಕುಮಾರ್ ರಸ್ತೆ, ಹಾಲಪ್ಪ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ಮೂಲಕ ವಿಐಎಸ್‌ಎಲ್ ಡಬ್ಬಲ್ ರಸ್ತೆ ಮೂಲಕ ಮಧ್ಯಾಹ್ನ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾಕ್ಷೇತ್ರಕ್ಕೆ ತಲುಪಿತು.            ಬೃಹತ್ ರಥಯಾತ್ರೆಯಲ್ಲಿ ಡೊಳ್ಳು ಮತ್ತು ವೀರಗಾಸೆ ಹ...

ಮಾಜಿ ಮುಖ್ಯಮುಂತ್ರಿ ಬಿ.ಎಸ್ ಯಡಿಯೂರಪ್ಪ ಜನ್ಮದಿನ : ಶುಭ ಹಾರೈಸಿ ಆಶೀರ್ವದಿಸಿದ ಬಿಳಿಕಿ ಶ್ರೀ

Image
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಶುಕ್ರವಾರ ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠ ಪೀಠಾಧ್ಯಕ್ಷರು, ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಸಹ ಕಾರ್ಯದರ್ಶಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಜನ್ಮ ದಿನದ ಶುಭ ಕೋರುವ ಮೂಲಕ ಆಶೀರ್ವದಿಸಿದರು.       ಭದ್ರಾವತಿ : ದೀನ ದಲಿತರ, ಬಡವರ ಬಂಧು, ರೈತ ನಾಯಕ, ಹೋರಾಟಗಾರ, ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಶುಕ್ರವಾರ ತಾಲೂಕಿನ ಬಿಳಿಕಿ ಹಿರೇಮಠ ಪೀಠಾಧ್ಯಕ್ಷರು, ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಸಹ ಕಾರ್ಯದರ್ಶಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಜನ್ಮ ದಿನದ ಶುಭ ಕೋರುವ ಮೂಲಕ ಆಶೀರ್ವದಿಸಿದರು.       ಶಿಕಾರಿಪುರಕ್ಕೆ ತೆರಳಿದ ಶ್ರೀಗಳು ಜನ್ಮದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಯಡಿಯೂರಪ್ಪನವರಿಗೆ ಭಗವಂತ ದೀರ್ಘಾಯುಷ್ಯ, ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥಿಸಿದರು.      ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯಸ್ವಾಮೀಜಿ,  ಹಾರನಹಳ್ಳಿ ರಾಮಲಿಂಗೇಶ್ವರ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ಪಕ್ಷದ ಮುಖಂಡರು, ಗಣ್ಯರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಬಿಪಿಎಲ್ ಕಾರ್ಡ್ ರದ್ದು : ಬಡ ವರ್ಗದವರು ಬೀದಿಪಾಲು

Image
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ  ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವುದನ್ನು ವಿರೋಧಿಸಿ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಶುಕ್ರವಾರ ಬಿಜೆಪಿ ಪಕ್ಷದ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ರಾಜ್ಯ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ. ಬಡ ವರ್ಗದವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ. ಬಡವರು ತಿನ್ನುವ ಅನ್ನವನ್ನು ಕಸಿಯುತ್ತಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಆರೋಪಿಸಿದರು.       ಅವರು ಶುಕ್ರವಾರ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವುದನ್ನು ವಿರೋಧಿಸಿ ತಾಲೂಕು ಕಛೇರಿ ಮುಂಭಾಗ ಪಕ್ಷದ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದರು.       ಬಡ ವರ್ಗದವರಿಗೆ ರಾಜ್ಯ ಸರ್ಕಾರ ವಿನಾಕಾರಣ ಕಿರುಕುಳ ನೀಡುತ್ತಿದ್ದು, ಅಸಂಬದ್ಧ, ಅವೈಜ್ಞಾನಿಕ ಮಾನದಂಡದ ಮೂಲಕ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವುದು ಖಂಡನೀಯ. ಬಡ ವರ್ಗದವರಿಗೆ ಪ್ರತಿಯೊಂದಕ್ಕೂ ಬಿಪಿಎಲ್ ಕಾರ್ಡ್ ಅತಿ ಅವಶ್ಯಕವಾಗಿದೆ. ಏಕಾಏಕಿ ಕಾರ್ಡ್‌ಗಳನ್ನು ರದ್ದುಪಡಿಸಿರುವುದರಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣ ಅಸಂಬದ್ಧ, ಅವೈಜ್ಞಾನಿಕ ಮಾನದಂಡಗಳನ್ನು ಕೈಬಿಟ್ಟು ನಿಜವ...

ನೆಕ್ಸ್ಟ್ ಜೆನ್ ಇಂಡೋರ್ ಕ್ರಿಕೆಟ್ ಅಕಾಡೆಮಿಗೆ ಚಾಲನೆ

Image
ಕ್ರಿಕೆಟ್ ಆಸಕ್ತ ಮುಂದಿನ ಯುವ ಪೀಳಿಗೆಯ ಕ್ರೀಡಾಪಟುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ತರಬೇತಿ ನೀಡಲು ಭದ್ರಾವತಿಯಲ್ಲಿ ಸುಸಜ್ಜಿತವಾದ ನೆಕ್ಸ್ಟ್ ಜೆನ್ ಇಂಡೋರ್ ಕ್ರಿಕೆಟ್ ಅಕಾಡೆಮಿಗೆ ಗುರುವಾರ ಚಾಲನೆ ನೀಡಲಾಯಿತು.       ಭದ್ರಾವತಿ : ಕ್ರಿಕೆಟ್ ಆಸಕ್ತ ಮುಂದಿನ ಯುವ ಪೀಳಿಗೆಯ ಕ್ರೀಡಾಪಟುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ತರಬೇತಿ ನೀಡಲು ಸುಸಜ್ಜಿತವಾದ ನೆಕ್ಸ್ಟ್ ಜೆನ್ ಇಂಡೋರ್ ಕ್ರಿಕೆಟ್ ಅಕಾಡೆಮಿಗೆ ಗುರುವಾರ ಚಾಲನೆ ನೀಡಲಾಯಿತು.       ನಗರದ ಸಿ.ಎನ್ ರಸ್ತೆ, ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ಬ್ಲಾಕ್-೧೧ರಲ್ಲಿ ಅಕಾಡೆಮಿ ಆರಂಭಗೊಂಡಿದ್ದು, ಅಕಾಡೆಮಿ ವರ್ಷ ಪೂರ್ತಿ ಕಾರ್ಯ ನಿರ್ವಹಿಸಲಿದ್ದು, ೫ ವರ್ಷ ಮೇಲ್ಪಟ್ಟ ಬಾಲಕ ಹಾಗು ಬಾಲಕಿಯರು ಸೇರಿದಂತೆ ಎಲ್ಲಾ ವಯೋಮಾನದವರಿಗೂ ತರಬೇತಿ ನೀಡಲಾಗುತ್ತದೆ. ವೃತಿಪರ ತರಬೇತಿದಾರರಿಂದ ತರಬೇತಿ, ಬೋಲಿಂಗ್ ಮೆಷಿನ್, ಗುಂಪು ತರಬೇತಿ, ಒನ್ ಟು ಒನ್ ತರಬೇತಿ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.       ತರಬೇತಿ ಬೆಳಿಗ್ಗೆ ೭ ಗಂಟೆಯಿಂದ ೮.೩೦ರ ವರೆಗೆ ಹಾಗು ಸಂಜೆ ೪ ರಿಂದ ೬ ಗಂಟೆವರೆಗೆ ನಡೆಯಲಿದೆ. ಕ್ರಿಕೆಟ್ ಆಸಕ್ತರು ಇದರ ಸದುಪಯೋಗಪಡೆದುಕೊಳ್ಳುವಂತೆ ಆಕಾಡೆಮಿ ಮಾಲೀಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ: ೮೧೪೭೧೬೩೫೦೯ ಅಥವಾ ೯೦೧೯೭೯೩೯೨೫ ಸಂಖ್ಯೆಗೆ ಕರೆ ಮಾಡಬಹುದಾಗಿದೆ....