ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮಾಸದ ನೆನಪು
ಪುನಃ ಕುಟುಂಬಕ್ಕೆ ಉಕ್ಕಿನ ನಗರ ಒಲಿಯುವುದೇ ? ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಮುಖ್ಯಾಂಶಗಳು: - ೩ ಬಾರಿ ಕ್ಷೇತ್ರದ ಶಾಸಕರಾಗಿದ್ದ ಎಂ.ಜೆ ಅಪ್ಪಾಜಿ. - ಕಣ್ಮರೆಯಾಗಿ ೬ ವರ್ಷಗಳು ಕಳೆದರೂ ಮಾಸದ ನೆನಪು - ಅಲ್ಪ ಮತಗಳ ಹಿನ್ನಡೆ ಅನುಭವಿಸಿದ ಪತ್ನಿ - ಮುಂಬರುವ ಚುನಾವಣೆಯಲ್ಲಿ ಅದೃಷ್ಟ ಯಾರಿಗೆ? - ಎರಡು ಕುಟುಂಬಗಳ ಪುತ್ರರ ನಡುವೆ ಪೈಪೋಟಿ ನಡೆಯುವುದೇ? * ಅನಂತಕುಮಾರ್ ಭದ್ರಾವತಿ: ಕ್ಷೇತ್ರದ ೩ ದಶಕಗಳ ರಾಜಕೀಯ ಕೊಂಡಿಯೊಂದು ಕಳಚಿ ಹೋಗಿ ಇದೀಗ ೬ ವರ್ಷ ಕಳೆದಿದ್ದು, ಆದರೂ ಸಹ ಜನಮಾನಸದಲ್ಲಿ ಮಾಜಿ ಶಾಸಕ ಎಂ.ಜಿ ಅಪ್ಪಾಜಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ. ಸೆ.೨, ೨೦೨೦ರಂದು ನಡುರಾತ್ರಿ ಅಪ್ಪಾಜಿ ಇಹಲೋಕ ತ್ಯಜಿಸುತ್ತಾರೆಂಬ ಕನಸು ಸಹ ಯಾರಿಗೂ ಇರಲಿಲ್ಲ. ಅವರ ನಿಧನದ ಸುದ್ದಿ ಕ್ಷೇತ್ರದ ಜನತೆಯನ್ನು ಒಮ್ಮೆ ತಲ್ಲಣಗೊಳಿಸಿತ್ತು. ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ೨೦ ರು. ಸಂಬಳಕ್ಕೆ ದುಡಿಯುತ್ತಿದ್ದ ಅಪ್ಪಾಜಿ ಆರಂಭದಲ್ಲಿ ಕಾರ್ಮಿಕ ಹೋರಾಟಗಾರನಾಗಿ ಗುರುತಿಸಿ ಕೊಂಡಿದ್ದರು. ತಿಂಗಳ ಸಂಬಳದಲ್ಲಿ ಜೀವನ ನಡೆಸುವುದೇ ಕಷ್ಟವಿರುವ ಸಂದರ್ಭದಲ್ಲಿ ಜನರು ನೀಡಿದ ದೇಣಿಗೆ ಹಣದಿಂದಲೇ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಜಕೀಯ ಅಸ್ತಿತ್ವ ಕಂಡುಕೊಂಡರು. ನಂತರ ಅವರು ೩ ಬಾರಿ ಶ...