Posts

ಭದ್ರಾವತಿ ನಗರಸಭೆ : ಹಲವು ಹೊಸ ಯೋಜನೆಗಳೊಂದಿಗೆ 1.46 ಕೋ. ರು. ಉಳಿತಾಯ ಬಜೆಟ್ ಮಂಡನೆ

Image
ಹಲವು ಹೊಸ ಯೋಜನೆಗಳೊಂದಿಗೆ ಭದ್ರಾವತಿ ನಗರಸಭೆ ಪ್ರಸ್ತುತ ಅವಧಿಯ ಕೊನೆಯ ಬಜೆಟ್ ಶುಕ್ರವಾರ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಮಂಡಿಸಿದರು.      ಭದ್ರಾವತಿ: ಹಲವು ಹೊಸ ಯೋಜನೆಗಳೊಂದಿಗೆ ನಗರಸಭೆ ಪ್ರಸ್ತುತ ಅವಧಿಯ ಕೊನೆಯ ಬಜೆಟ್ ಶುಕ್ರವಾರ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಮಂಡಿಸಿದರು. ಈ ಬಾರಿ 1.46 ಕೋ. ರು. ಉಳಿತಾಯ ಬಜೆಟ್ ಮಂಡಿಸಲಾಗಿದ್ದು, ನಗರಸಭೆ ಇತಿಹಾದಲ್ಲಿಯೇ ಒಂದೇ ಅವಧಿಯಲ್ಲಿ 2 ಬಾರಿ ಅಧ್ಯಕ್ಷರಾಗಿ, 2 ಬಾರಿ ಬಜೆಟ್ ಮಂಡಿಸಿರುವ ದಾಖಲೆಗೆ ಗೀತಾರಾಜಕುಮಾರ್ ಪಾತ್ರರಾಗಿದ್ದಾರೆ.     ಬಜೆಟ್ ಮಂಡಿಸಿದ ಗೀತಾರಾಜಕುಮಾರ್, ಆರಂಭದಲ್ಲಿ ಈ ಬಾರಿ ಆಯ-ವ್ಯಯದ ಆರಂಭಿಕ ಶಿಲ್ಕು 2,161.44 ಲಕ್ಷ ರು. ಗಳಾಗಿದೆ. ಒಟ್ಟು ಆದಾಯ(ಸ್ವಿಕೃತಿ) 14,808.87 ಲಕ್ಷ ರು.ಗಳಾಗಿದ್ದು, ಇದರಲ್ಲಿ ರಾಜಸ್ವ ಸ್ವಿಕೃತಿಗಳು 5,476.93 ಲಕ್ಷ ರು., ಬಂಡವಾಳ ಸ್ವಿಕೃತಿಗಳು 3,351 ಲಕ್ಷ ರು. ಮತ್ತು ಅಸಾಧಾರಣ ಸ್ವಿಕೃತಿಗಳು 5,980.84 ಲಕ್ಷ ರು. ಸೇರ್ಪಡೆಗೊಂಡಿವೆ. ಈ ಬಾರಿ ಒಟ್ಟು ವೆಚ್ಚ 14,662.87 ಲಕ್ಷ ರು. ಗಳಾಗಿದ್ದು, ಇದರಲ್ಲಿ ರಾಜಸ್ವ ಪಾವತಿಗಳು 517.76 ಲಕ್ಷ ರು., ಬಂಡವಾಳ ಪಾವತಿಗಳು 3,554.18 ಲಕ್ಷ ರು. ಹಾಗು ಅಸಾಧಾರಣ ಪಾವತಿಗಳು 5,980.94 ಲಕ್ಷ ರು. ಒಳಗೊಂಡಿವೆ. ಆಯ-ವ್ಯಯದ ಆಖೈರು ಶಿಲ್ಕು 2,307.44 ಲಕ್ಷ ರು.ಗಳಾಗಿದ್ದು, ಒಟ್ಟು ಉಳಿತಾಯ 146 ಲಕ್ಷ ರು. ಗಳಾಗಿದೆ ಎಂದರು. ...

೪ ತಿಂಗಳ ಹಿಂದಿನ ಮನೆಗಳ್ಳತನ ಪ್ರಕರಣ ಭೇದಿಸಿದ ನ್ಯೂಟೌನ್ ಠಾಣೆ ಪೊಲೀಸರು

Image
ಓರ್ವ ಯುವಕ ಬಂಧನ : ೧.೪೦ ಲಕ್ಷ ರು. ಮೌಲ್ಯದ ಸ್ವತ್ತು ವಶ   ಎಂ. ಸೂರ್ಯ       ಭದ್ರಾವತಿ: ಸುಮಾರು ೪ ತಿಂಗಳ ಹಿಂದೆ ನಗರಸಭೆ ವ್ಯಾಪ್ತಿಯ ಜನ್ನಾಪುರದ ಮನೆಯೊಂದರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಭೇದಿಸುವಲ್ಲಿ ನ್ಯೂಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.       ಝೆಪ್ಟೋ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿರುವ ಬೆಂಗಳೂರು, ವಿವೇಕ ನಗರ, ಸಂಜೀವಪುರಂ ವನ್ನಾರ್ ಪೇಟೆ ನಿವಾಸಿ ಎಂ. ಸೂರ್ಯ(೨೮) ಬಂಧಿತ ಆರೋಪಿಯಾಗಿದ್ದು, ಕಳ್ಳತನ ಮಾಡಲಾಗಿದ್ದ ಸುಮಾರು ೧.೪೦ ಲಕ್ಷ ರು. ಮೌಲ್ಯದ ೧೦ ಗ್ರಾಂ ತೂಕದ ಬಂಗಾರದ ಸರ ಈತನಿಂದ ವಶಪಡಿಸಿಕೊಳ್ಳಲಾಗಿದೆ.        ಜನ್ನಾಪುರ ಎನ್‌ಟಿಬಿ ಕಚೇರಿ ಸಮೀಪ ವಾಸವಾಗಿರುವ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೌಭಾಗ್ಯ ಎಂಬುವರರ ಮನೆಯಲ್ಲಿ ೧೯ ನವೆಂಬರ್ ೨೦೨೫ರಂದು ಮನೆಯ ಡ್ರೆಸ್ಸಿಂಗ್ ಟೇಬಲ್ ಮೇಲೆ ಇಟ್ಟಿದ್ದ ಸುಮಾರು ೧೦ ಗ್ರಾಂ ಬಂಗಾರದ ಸರ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು.      ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ ಕಾರಿಯಪ್ಪ ಮತ್ತು ರಮೇಶ್‌ರವರ ಮಾರ್ಗದರ್ಶನದಲ್ಲಿ ಹಾಗೂ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್...

ಇಂದಿರಾ ಕ್ಯಾಂಟೀನ್‌ನಲ್ಲಿ ಸಿಲಿಂಡರ್ ಬಳಕೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಸಮಸ್ಯೆ

Image
ಕಲ್ಯಾಣಮಂಟಪ ಸೇರಿದಂತೆ ಇನ್ನಿತರೆಡೆ ಆಯೋಜಕರೇ ಸಿಲಿಂಡರ್ ಪೂರೈಸಿಕೊಳ್ಳಬೇಕು       ಭದ್ರಾವತಿ: ಸದ್ಯದ ಪರಿಸ್ಥಿತಿಯಲ್ಲಿ ಪ್ರತಿ ದಿನ ಆಹಾರ ತಯಾರಿಸುವ ಇಂದಿರಾ ಕ್ಯಾಂಟೀನ್‌ನಲ್ಲಿ ಸಿಲಿಂಡರ್ ಬಳಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಉಳಿದಂತೆ ಕಲ್ಯಾಣ ಮಂಟಪ ಸೇರಿದಂತೆ ಇನ್ನಿತರೆ ಸಿಲಿಂಡರ್ ಬಳಕೆ ಕಾರ್ಯಕ್ರಮ ಆಯೋಜಕರೇ ಮಾಡಿಕೊಳ್ಳಬೇಕಾಗಿದೆ. ಅಂಗನವಾಡಿಗಳಿಗೆ ಈಗಾಗಲೇ ಸಿಲಿಂಡರ್ ಪೂರೈಸಲಾಗಿದ್ದು, ಖಾಲಿಯಾಗಲು ಕೆಲವು ದಿನಗಳು ಬೇಕಾಗಿವೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಕಂಡು ಬರುತ್ತಿಲ್ಲ.       ನ್ಯೂಟೌನ್ ಬಂಟರ ಭವನದ ಸುಬ್ಬಣ್ಣ ರೈ ಮಾತನಾಡಿ, ನಾವು ಅಡುಗೆ ತಯಾರಿಕೆಗೆ ಅಗತ್ಯವಿರುವ ಪಾತ್ರೆ ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಒದಗಿಸುತ್ತೇವೆ. ಸಿಲಿಂಡರ್ ವ್ಯವಸ್ಥೆ ಕಾರ್ಯಕ್ರಮ ಆಯೋಜಕರೇ ಮಾಡಿಕೊಳ್ಳಬೇಕು. ಅಡುಗೆ ಮಾಡಲು ಸಿಲಿಂಡರ್ ಬಳಕೆ ಬಿಟ್ಟು ಬೇರೆ ಯಾವುದೇ ವ್ಯವಸ್ಥೆ ಅಳವಡಿಸಿಕೊಂಡಿಲ್ಲ. ಇದುವರೆಗೂ ಸಿಲಿಂಡರ್ ಸಮಸ್ಯೆ ಹಿನ್ನಲೆಯಲ್ಲಿ ನಿಗದಿಯಾಗಿರುವ ಯಾವುದೇ ಕಾರ್ಯಕ್ರಮಗಳು ಮುಂದೂಡಿಲ್ಲ ಎಂದರು.       ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಮಾತನಾಡಿ, ನಗರದಲ್ಲಿ ಎರಡು ಕಡೆ ಇಂದಿರಾ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಒಂದು ಕಡೆ ಮಾತ್ರ ಅಡುಗೆ ಸಿದ್ದಪಡಿಸಲಾಗುತ್ತಿದೆ. ಸದ್ಯಕ್ಕೆ ಸಿಲ...

ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಿ

Image
ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ವ್ಯಾಪ್ತಿಯ ಸ್ತ್ರೀಬಂಧು  ಒಕ್ಕೂಟಗಳಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.      ಭದ್ರಾವತಿ:  ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ವ್ಯಾಪ್ತಿಯ ಸ್ತ್ರೀಬಂಧು  ಒಕ್ಕೂಟಗಳಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.          ಪ್ರತಿಭಟನೆ ನೇತೃತ್ವವಹಿಸಿದ್ದ ಪ್ರಮುಖರು ಮಾತನಾಡಿ,  ತಾಲೂಕಿನಲ್ಲಿ  ಸ್ತ್ರೀಬಂಧು ಒಕ್ಕೂಟಗಳು ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವ-ಸಹಾಯ ಸಂಘಗಳಾಗಿವೆ.  ಕಳೆದ ೧೩ ವರ್ಷಗಳಿಂದ ಮಹಿಳೆಯರ, ಅವರ ಕುಟುಂಬ ಹಾಗೂ ಸಮುದಾಯದ ಅಭಿವೃದ್ಧಿಗಾಗಿ ಮತ್ತು ಸಮುದಾಯದಲ್ಲಿನ ಸಮಸ್ಯೆ ಮತ್ತು ದೌರ್ಜನ್ಯಗಳನ್ನು ಖಂಡಿಸಿ ಶೋಷಿತ, ಬಡ ಬಗ್ಗರ, ದೀನದಲಿತರ, ಮಹಿಳೆಯರ...

ನಗರಸಭೆ ೫ ಮಂದಿ ನಾಮನಿರ್ದೇಶಿತ ಸದಸ್ಯರಿಂದ ಅಧಿಕಾರ ಸ್ವೀಕಾರ

Image
ಭದ್ರಾವತಿ ನಗರಸಭೆಗೆ ಸರ್ಕಾರದಿಂದ ನೂತನವಾಗಿ ನೇಮಕಗೊಂಡಿರುವ ೫ ಜನ ನಾಮನಿರ್ದೇಶಿತ ಸದಸ್ಯರು ಗುರುವಾರ ನಗರಸಭೆ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು.       ಭದ್ರಾವತಿ: ನಗರಸಭೆಗೆ ಸರ್ಕಾರದಿಂದ ನೂತನವಾಗಿ ನೇಮಕಗೊಂಡಿರುವ ೫ ಜನ ನಾಮನಿರ್ದೇಶಿತ ಸದಸ್ಯರು ಗುರುವಾರ ನಗರಸಭೆ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು.       ಹಳೇನಗರ, ಗೌಳಿಗರ ಬೀದಿ ಶ್ರೀ ಚೌಡಮ್ಮ ದೇವಸ್ಥಾನ ಹತ್ತಿರದ ನಿವಾಸಿ ಮಂಜುನಾಥ್, ನ್ಯೂಟೌನ್ ಆಂಜನೇಯ ಅಗ್ರಹಾರ ನಿವಾಸಿ ಎಂ.ಜಿ ರಾಮಚಂದ್ರ, ಬಿಳಿಕಿ ಜೇಡಿಕಟ್ಟೆ ನಿವಾಸಿ ಎಸ್. ವಾಗೀಶ್, ಹಳೇನಗರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಸಮೀಪದ ನಿವಾಸಿ ಸೈಯದ್ ಅಬ್ದುಲ್ ರೆಹಮಾನ್(ದಿಲ್‌ದಾರ್) ಹಾಗು ಹುಡ್ಕೋ ಕಾಲೋನಿ ನಿವಾಸಿ ಎ. ವಿಲ್ಸನ್ ಬಾಬು ನೂತನ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.       ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಮುಖಂಡರು ನೂತನ ನಾಮನಿರ್ದೇಶಿತ ಸದಸ್ಯರನ್ನು ಅಭಿನಂದಿಸಿದ್ದಾರೆ. 

ಅಡುಗೆ ಅನಿಲ ಸಿಲಿಂಡರ್ ಸಮಸ್ಯೆ : ೨-೩ ದಿನಗಳಲ್ಲಿ ಹೋಟೆಲ್‌ಗಳು ಬಂದ್

Image
ಪ್ರಸ್ತುತ ಗೋಡಂಬಿ ಬೀಜದ ಸಿಪ್ಪೆ ಅವಲಂಬಿಸಿ ಕಾರ್ಯಾಚರಣೆ  ಭದ್ರಾವತಿ ಕಾಗದನಗರದ ಜನವಸತಿ ಪ್ರದೇಶದಲ್ಲಿ ಬುಧವಾರ ರಾತ್ರಿ ಕಂಡು ಬಂದ ಸಿಲಿಂಡರ್ ಸರಬರಾಜು ಮಾಡುವ ಲಾರಿ.        ಭದ್ರಾವತಿ: ನಗರದಲ್ಲಿ ಅಡುಗೆ ಅನಿಲ ಸಿಲಿಂಡರ್ ಅವಲಂಬಿಸಿರುವ ಹೋಟೆಲ್‌ಗಳು ಮುಂದಿನ ೨-೩ ದಿನಗಳಲ್ಲಿ ಸಂಪೂರ್ಣವಾಗಿ ಬಂದ್ ಮಾಡುವ ಸ್ಥಿತಿ ಎದುರಾಗಿದ್ದು, ಈಗಾಗಲೇ ವಿತರಕರು ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ.       ಗೌರಿ ಗ್ಯಾಸ್ ವಿತರಕರಾದ ಸೆಲ್ವರಾಜ್ ಮಾತನಾಡಿ, ಈಗಾಗಲೇ ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಗೃಹ ಬಳಕೆ ಸಿಲಿಂಡರ್ ತಿಂಗಳಿಗೆ ೧ ಸಿಲಿಂಡರ್ ಮಾತ್ರ ಸರಬರಾಜು ಮಾಡಲಾಗುವುದು. ಇರಾನ್ ಯುದ್ಧ ಮುಗಿದ ತಕ್ಷಣ ಸಮಸ್ಯೆ ಬಗೆಹರಿಯಲಿದೆ. ಈ ಹಿನ್ನಲೆಯಲ್ಲಿ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.       ಉಳಿದಂತೆ ರಂಗನಾಥ್ ಗ್ಯಾಸ್ ವಿತರಕರಾದ ಮನು ಮಾತನಾಡಿ, ಪ್ರಸ್ತುತ ಗೃಹಬಳಕೆ ಸಿಲಿಂಡರ್‌ಗಳಿಗೂ ಸಮಸ್ಯೆ ಎದುರಾಗುತ್ತಿದೆ. ಗ್ರಾಹಕರು ಬುಕಿಂಗ್ ಮಾಡಲು ತೊಂದರೆಯಾಗುತ್ತಿದ್ದು, ಏಕ ಬಳಕೆ ಸಿಲಿಂಡರ್ ಗ್ರಾಹಕರಿಗೆ ೨೧ ದಿನಗಳ ನಂತರ ಬುಕ್ ಮಾಡುವ ಹಾಗು ಎರಡು ಬಳಕೆ ಸಿಲಿಂಡರ್ ಗ್ರಾಹಕರಿಗೆ ೩೦ ದಿನಗಳ ನಂತರ ಬುಕ್ ಮಾಡುವ ಅವಕಾಶ ನೀಡಲಾಗಿದೆ. ಪರಿಸ್ಥಿತಿ ಇದೆ ರೀತಿ ಮ...

ವಿಐಎಸ್‌ಎಲ್ ನಿವೃತ್ತ ನೌಕರ, ರಂಗಭೂಮಿ ಕಲಾವಿದ ಲಕ್ಷ್ಮೀಪತಿ ನಿಧನ

Image
‌ ಲಕ್ಷ್ಮೀಪತಿ      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ರಂಗಭೂಮಿ ಕಲಾವಿದ ಲಕ್ಷ್ಮೀಪತಿ(೭೬) ಬುಧವಾರ ನಿಧನ ಹೊಂದಿದರು.       ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆಯ ಬ್ಲಾಸ್ಟ್ ಫರ್ನೇಸ್ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ರಂಗಭೂಮಿ ಕಲಾವಿದರಾದ ಇವರು ನವೋದಯ ಕಲಾ ಸಂಘದಲ್ಲಿ ತೊಡಗಿಸಿಕೊಂಡು ಅನೇಕ ನಾಟಕ ಪ್ರದರ್ಶನಗಳಲ್ಲಿ ಅಭಿನಯಿಸುವ ಮೂಲಕ ರಾಜ್ಯಮಟ್ಟದ ಪ್ರಶಸ್ತಿಗೆ ಪುರಸ್ಕೃತರಾಗಿದ್ದರು.       ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ನಿರ್ದೇಶಕ ನರಸಿಂಹಚಾರ್, ನಿವೃತ್ತ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮುಕುಂದಪ್ಪ, ನಿವೃತ್ತ ಕಾರ್ಮಿಕ, ಚಲನಚಿತ್ರ ನಟ ದೊಡ್ಡಣ್ಣ, ಪ್ರಮುಖರಾದ ರಾಜಪ್ಪ, ಚಿಕ್ಕ ಕರಿಯಪ್ಪ, ಈಶ್ವರಪ್ಪ, ಕಾರ್ಮಿಕರ ಸಂಘದ ಅಮೃತ್ , ರಂಗ ಕಲಾವಿದರಾದ ದಿವಾಕರ್‌ ಮತ್ತು  ತಮಟೆ ಜಗದೀಶ್ ಹಾಗು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. 

ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪಿಯುಸಿ ತರಗತಿ ಆರಂಭಿಸಿ

Image
ಸಚಿವ ಮಧುಬಂಗಾರಪ್ಪನವರಿಗೆ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ ಭದ್ರಾವತಿ ಹೊಸಸಿದ್ದಾಪುರ ನೇತಾಜಿ ಎಸ್.ಸಿ.ಬಿ ಸರ್ಕಾರಿ ಪ್ರೌಢಶಾಲೆ.       ಭದ್ರಾವತಿ: ವಿಧಾನಸಭಾ ಕ್ಷೇತ್ರ ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ ನೇತಾಜಿ ಎಸ್.ಸಿ.ಬಿ ಸರ್ಕಾರಿ ಪ್ರೌಢಶಾಲೆ ಶಾಲೆಯನ್ನು ಮೇಲ್ದರ್ಜೆಗೇರಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪಿ.ಯು.ಸಿ ತರಗತಿಗಳನ್ನು ಆರಂಭಿಸುವಂತೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪನವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.       ಪ್ರಸ್ತುತ ಈ ಶಾಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ಸುಮಾರು ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅನುಭವಿ ಶಿಕ್ಷಕ ವರ್ಗದವರನ್ನು ಒಳಗೊಂಡಿದೆ. ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು,  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಶಾಲೆಗೆ ಪ್ರತಿ ವರ್ಷ ಶೇ.೯೦ರಷ್ಟು ಫಲಿತಾಂಶ ಲಭಿಸುತ್ತಿದೆ.  ಶಾಲೆಯು ಸುಸಜ್ಜಿತವಾದ ಗ್ರಂಥಾಲಯ, ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಕೀಡಾಂಗಣವಿದ್ದು, ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳ ಜೊತೆಗೆ ಸಾಂಸ್ಕೃತಿಕ ಚಟುಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇತ ವ...

ನಾಮನಿರ್ದೇಶನ ಸದಸ್ಯರಾಗಿ ವಿಲ್ಸನ್ ಬಾಬು, ಎಂ.ಜಿ ರಾಮಚಂದ್ರ ನೇಮಕ

Image
ಎ. ವಿಲ್ಸನ್ ಬಾಬು      ಭದ್ರಾವತಿ : ನಗರಸಭೆ ಉಳಿದ ಅವಧಿಗೆ ನೂತನ ನಾಮನಿರ್ದೇಶಿತ ಸದಸ್ಯರಾಗಿ ಹುಡ್ಕೋ ಕಾಲೋನಿ ನಿವಾಸಿ, ಯುವ ಮುಖಂಡರಾದ ಎ. ವಿಲ್ಸನ್ ಬಾಬು ಮತ್ತು ನ್ಯೂಟೌನ್ ಆಂಜನೇಯ ಆಗ್ರಹಾರ ನಿವಾಸಿ ಎಂ.ಜಿ ರಾಮಚಂದ್ರ ನೇಮಕಗೊಂಡಿದ್ದಾರೆ.       ನಗರಸಭೆಗೆ ಎ. ವಿಲ್ಸನ್ ಬಾಬು ಮತ್ತು ಎಂ.ಜಿ ರಾಮಚಂದ್ರ ಸೇರಿದಂತೆ ಒಟ್ಟು ೫ ಜನರನ್ನು ನಾಮನಿರ್ದೇಶನಗೊಳಿಸಲಾಗಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.  ಎಂ.ಜಿ ರಾಮಚಂದ್ರ        ನೂತನ ನಾಮನಿರ್ದೇಶಿತ ಸದಸ್ಯರಾದ ವಿಲ್ಸನ್ ಬಾಬು ಮತ್ತು ರಾಮಚಂದ್ರ ಅವರಿಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರಾನ್ಸಿಸ್, ಮುಖಂಡರಾದ ದಾಸ್, ಆನಂದ, ಜಾನ್ಸನ್, ಅಪ್ಪು, ಬ್ಲೆಸ್ಸಿಂಗ್. ಜಿ, ಸುಬ್ರಮಣಿ, ಪ್ರದೀಪ್, ಬಾಬು, ಚಂದ್ರು, ಮುರುಳಿ, ಬಿಪಿಎಲ್ ಸಂಘದ ಅಧ್ಯಕ್ಷ ಸಂಪತ್‌ಕುಮಾರ್, ಅಭಿ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. ಅಲ್ಲದೆ ನಗರಸಭೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕೊಳ್ಳಲು ಕಾರಣಕರ್ತರಾದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಹಿರಿಯ ಸದಸ್ಯರಾದ...

ಗ್ಯಾರಂಟಿ ಯೋಜನೆ ಅನುಷ್ಠಾನ ಪರಿಪೂರ್ಣ : ಮಧ್ಯಮ, ಬಡ ವರ್ಗದವರಿಗೆ ಹೆಚ್ಚಿನ ಅನುಕೂಲ

Image
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್  ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಪಂಚಾಯಿತಿ ವ್ಯಾಪ್ತಿಯ  ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.       ಭದ್ರಾವತಿ : ಸರ್ಕಾರದ ೫ ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಮಧ್ಯಮ ಹಾಗು ಬಡ ವರ್ಗದವರಿಗೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.       ಅವರು ತಾಲೂಕಿನ ಕಂಬದಾಳು ಹೊಸೂರು ಪಂಚಾಯಿತಿ ವ್ಯಾಪ್ತಿಯ  ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದರು.       ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಸರ್ಕಾರ ಕೋಟ್ಯಾಂತರ ರು. ಅನುದಾನ ಬಿಡುಗಡೆಗೊಳಿಸಿದ್ದು, ಬಹುತೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮುಂಬರುವ ...

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.೧೧ರಿಂದ ಮುಷ್ಕರ

Image
ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಅವಕಾಶ       ಭದ್ರಾವತಿ : ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರ ಪ್ರಮುಖ ೧೨ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಮಾ.೧೧ ರಿಂದ ೧೫ರವರೆಗೆ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.       ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ, ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಸೇರಿದಂತೆ ಎಲ್ಲಾ ಸಂಘಟನೆಗಳ ಸಾರಥ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಬಲದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರು ತಮ್ಮ ಕೇಂದ್ರ ಸ್ಥಾನಗಳಲ್ಲಿ ಕಪ್ಪುಪಟ್ಟಿ ಧರಿಸಿ ಹೊರರೋಗಿ ಸೇವೆ ನೀಡದೆ ಕೇವಲ ತುರ್ತು ಸೇವೆ ಒದಗಿಸುವುದರ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವ ಮೂಲಕ ಮುಷ್ಕರ ಬೆಂಬಲಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಗೌರವಾಧ್ಯಕ್ಷರಾದ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಅಧ್ಯಕ್ಷೆ ಕ...

ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ.: ಸ್ಟೀವನ್ ಡೆಸಾ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ. ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಗಾಂಧಿನಗರ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗುರು ಸ್ಟೀವನ್ ಡೆಸಾ ಹೇಳಿದರು.       ಅವರು ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ. ಸಮಾಜದಲ್ಲಿ ತಮ್ಮ ಮೇಲಿನ ಶೋಷಣೆ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಅಶಕ್ತರು, ದೀನದಲಿತರು, ಸಂಕಷ್ಟಕ್ಕೆ ಒಳಗಾದವರ ಸೇವೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕು ಸಾರ್ಥಕಗೊಳ್ಳು...

ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ.: ಸ್ಟೀವನ್ ಡೆಸಾ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ. ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಗಾಂಧಿನಗರ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗುರು ಸ್ಟೀವನ್ ಡೆಸಾ ಹೇಳಿದರು.       ಅವರು ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ. ಸಮಾಜದಲ್ಲಿ ತಮ್ಮ ಮೇಲಿನ ಶೋಷಣೆ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಅಶಕ್ತರು, ದೀನದಲಿತರು, ಸಂಕಷ್ಟಕ್ಕೆ ಒಳಗಾದವರ ಸೇವೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕು ಸಾರ್ಥಕಗೊಳ್ಳು...

ಉಕ್ಕಿನ ನಗರದಲ್ಲಿ ಸಂಚಾರಿ ದಟ್ಟನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅಧಿಸೂಚನೆ : ಉಪಾಧೀಕ್ಷಕ ಪ್ರಕಾಶ್ ರಾಥೋಡ್

Image
ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ಆದೇಶ, ಉಲ್ಲಂಘಿಸಿದ್ದಲ್ಲಿ ಸ್ಥಳದಲ್ಲಿಯೇ ದಂಡ  ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್       ಭದ್ರಾವತಿ : ಸಂಚಾರ ಪೊಲೀಸ್ ಠಾಣಾ ನಗರಸಭೆ ವ್ಯಾಪ್ತಿಯಲ್ಲಿ ದಿನೇ ದಿನೇ ವಾಹನಗಳ ದಟ್ಟನೆ ಮತ್ತು ಸಂಚಾರ ದಟ್ಟನೆ ಹೆಚ್ಚಾಗುತ್ತಿದ್ದು, ಪದೇ ಪದೇ ಟ್ರಾಫಿಕ್ ಜಾಮ್ ಮತ್ತು ಅಪಘಾತದಿಂದಾಗಿ ಅನೇಕ ಸಾವುನೋವುಗಳು ಸಂಭವಿಸುತ್ತಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ವಾಹನ ನಿಲುಗಡೆ ನಿಷೇಧ, ಏಕ ಮುಖ ಸಂಚಾರ ಮತ್ತು ದಿನ ಬಿಟ್ಟು ದಿನ ವಾಹನಗಳ ನಿಲುಗಡೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿಗಳಾದ ಪ್ರಭಲಿಂಗ ಕವಳಿಕಟ್ಟೆಯವರು ಅಧಿಸೂಚನೆ ಹೊರಡಿಸಿ ಆದೇಶಿಸಿದ್ದಾರೆಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ತಿಳಿಸಿದರು.      ಈ ಕುರಿತು ಸೋಮವಾರ ಮಾಹಿತಿ ನೀಡಿ, ಭದ್ರಾವತಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ೩.೩೯,೮೪೬ ಜನಸಂಖ್ಯೆ ಇದ್ದು, ಪ್ರತಿ ದಿನ ಕೆಲಸದ ನಿಮಿತ್ತ ಹೊರಗಿನಿಂದ ಸಾವಿರಾರು ಜನರು ನಗರಕ್ಕೆ ಭೇಟಿ ಕೊಡುತ್ತಿರುತ್ತಾರೆ. ನಗರದಲ್ಲಿ ಒಂದು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-೬೯), ಮೂರು ರಾಜ್ಯ ಹೆದ್ದಾರಿಗಳು (ಎಸ್.ಎಚ್-೬೫, ಎಸ್.ಎಚ್-೬೮ ಮತ್ತು ಎಸ್.ಎಚ್-೧೧೬) ಹಾದು ಹೋಗಿರುತ್ತವೆ. ...

ಮಾ.೧೩ರಂದು ನಗರಸಭೆ ಬಜೆಟ್ ಮಂಡನೆ

Image
     ಭದ್ರಾವತಿ : ನಗರಸಭೆ ೨೦೨೬-೨೭ನೇ ಸಾಲಿನ ಆಯ-ವ್ಯಯ ಮಂಡನೆ ಮಾ.೧೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.       ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ. ಕೆಲವು ಪ್ರಮುಖ ಕಾಮಗಾರಿಗಳು ವಿಳಂಬವಾಗಿ ಆರಂಭಗೊಂಡರೆ, ಮತ್ತೆ ಕೆಲವು ಕಾಮಗಾರಿಗಳು ಅನುದಾನ ಲಭ್ಯತೆ ಇಲ್ಲದೆ ಇನ್ನೂ ಆರಂಭಗೊಂಡಿಲ್ಲ. ಈ ನಡುವೆ ನಗರಸಭೆಯಲ್ಲಿ ಪ್ರತಿ ವರ್ಷ ಆದಾಯಕ್ಕಿಂತ ಖರ್ಚು ಅಧಿಕವಾಗುತ್ತಿದೆ.       ಕುಡಿಯುವ ನೀರು ಪೂರೈಕೆ, ತ್ಯಾಜ್ಯ ನಿರ್ವಹಣೆಗಾಗಿ ಸಾಕಷ್ಟು ಹಣ ವ್ಯಯಿಸಲಾಗುತ್ತಿದೆ. ಆದರೂ ಸಹ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಎಲ್ಲಾ ವಾರ್ಡ್‌ಗಳಲ್ಲೂ ಹಲವಾರು ಸಮಸ್ಯೆಗಳಿದ್ದು, ಈ ಹಿನ್ನಲೆಯಲ್ಲಿ ಈ ಬಾರಿ ಆಯ-ವ್ಯಯ ಗಮನ ಸೆಳೆಯುತ್ತಿದೆ.       ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದು, ಸದಸ್ಯರು ಸಭೆಗೆ ಆಗಮಿಸಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ. 

ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಿ : ಕವಿತಾ

Image
ಬಿಜೆಪಿ ಮಹಿಳಾ ಮೋರ್ಚಾದಿಂದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾರವರು, ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ ಜೀವನದ ನಿರ್ಣಾಯಕ ಘಟ್ಟದಲ್ಲಿರುವ ತಾವೆಲ್ಲರೂ ಶ್ರದ್ದೆಯಿಂದ ಓದಿ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಬೇಕು. ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ಸಮಸ್ಯೆಗಳು ಇದ್ದ...

ವಿಐಎಸ್‌ಎಲ್ ಇಸ್ಪಾತ್ ಮಹಿಳಾ ಸಮಾಜದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Image
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಇಸ್ಪಾತ್ ಮಹಿಳಾ ಸಮಾಜದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.      ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಇಸ್ಪಾತ್ ಮಹಿಳಾ ಸಮಾಜದಲ್ಲಿ ಭಾನುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.       ಕಾರ್ಖಾನೆ ಕಾರ್ಯಪಾಲಕ ನಿದೇರ್ಶಕ ಅನೂಪ್ ಕುಮಾರ್  ಮಹಿಳಾ ದಿನಾಚರಣೆ ಉದ್ಘಾಟಿಸಿದರು.  ಸಂಘದ ಮಹಿಳೆಯರಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು.  ಮಾನವ ಸಂಪನ್ಮೂಲ ಇಲಾಖೆ ಮುಖ್ಯ ಮಹಾಪ್ರಬಂಧಕ ಬಿ.ವಿಶ್ವನಾಥ್, ಪ್ರಭಾರಿ ಮಹಾಪ್ರಬಂಧಕ (ಸ್ಥಾವರ) ಟಿ. ರವಿಚಂದ್ರನ್, ಇಸ್ಟಾತ್ ಮಹಿಳಾ ಸಮಾಜದ ಅಧ್ಯಕ್ಷೆ ನಿಶಾ ಶ್ರೀವಾಸ್ತವ, ಉಪಾಧ್ಯಕ್ಷೆ ಪಂಕಜ ವಿಶ್ವನಾಥ್, ಕಾರ್ಯದರ್ಶಿ ಈಶ್ವರಿ ಕುತಲನಾಥನ್, ಖಜಾಂಚಿ ವಿನೋದ ಇಳಯರಾಜ, ಸಾಂಸ್ಕೃತಿಕ ಕಾರ್ಯದರ್ಶಿ ಪ್ರತಿಭಾ ರಘುನಾಥ್, ಜಂಟಿ ಕಾರ್ಯದರ್ಶಿ ಶ್ರವಂತಿ ಅನೀಲ್ ರೆಡ್ಡಿ ಉಪಸ್ಥಿತರಿದ್ದರು.      ಮಹಿಳಾ ದಿನಾಚರಣೆ ಆರಂಭಕ್ಕೂ ಮೊದಲು  ಹೊಲಿಗೆ ತರಬೇತಿ ಕೇಂದ್ರ ಉದ್ಘಾಟಿಸಲಾಯಿತು. ಕಾರ್ಖಾನೆಯ ಮಹಿಳಾ ಉದ್ಯೋಗಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

೮೯ನೇ ರಕ್ತದಾನ ಶಿಬಿರ : ೩೦ ಮಂದಿ ರಕ್ತದಾನ

Image
ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ಭದ್ರಾವತಿ ನಗರದ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಬಿ.ಎನ್-೯೭ರ ವತಿಯಿಂದ ಜೀವ ಸಂಜೀವಿನ ರಕ್ತ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ೮೯ನೇ ರಕ್ತದಾನ ಶಿಬಿರದಲ್ಲಿ ಒಟ್ಟು ೩೦ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.       ಭದ್ರಾವತಿ : ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗು ನಗರದ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಬಿ.ಎನ್-೯೭ರ ವತಿಯಿಂದ ಜೀವ ಸಂಜೀವಿನ ರಕ್ತ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ೮೯ನೇ ರಕ್ತದಾನ ಶಿಬಿರದಲ್ಲಿ ಒಟ್ಟು ೩೦ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.       ಮೈಸೂರು ಕಾಗದ ಕಾರ್ಖಾನೆಯ ಆರ್‌ಎಎಫ್ ಆವರಣದಲ್ಲಿ ೮೭ನೇ ಸಿಆರ್‌ಪಿಎಫ್ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಆರ್‌ಎಎಫ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ರಕ್ತದಾನ ನೆರವೇರಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಿರಂತರವಾಗಿ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ತುರ್ತು ಸಂದರ್ಭಗಳಿಗೆ ನೆರವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.       ರಕ್ತದಾನ ಹಾಗು ಪರಿಸರ ಪ್ರೇಮಿ ಹೆಡ್‌ಕಾನ್ಸ್‌ಸ್ಟೇಬಲ್ ಹಾಲೇಶಪ್ಪನವರ ನೇತೃತ್ವದಲ್ಲಿ ಶಿಬಿರ ಆಯೋಜಿಸಿಕೊಂಡು ಬರಲಾಗುತ್ತಿದೆ. ಹಾಲೇಶಪ್ಪನವರು ಸುಮಾರು ೫೦ ಬಾರಿ ರಕ್ತದಾನ ಮಾಡ...

ಶ್ರೀ ಮದ್ದೂರಮ್ಮ ದೇವಸ್ಥಾನ ಜಾತ್ರಾ ಮಹೋತ್ಸವ : ಗಮನ ಸೆಳೆದ ಗಾಯಕರ ತಂಡ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನೀಪುರದ ಶ್ರೀ ಮದ್ದೂರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರ್.ಜೆ ಸುಗಮ ಸಂಗೀತ ಕಲಾ ತಂಡದ ಗಾಯಕರು ಭಕ್ತರ ಗಮನ ಸೆಳೆದರು.        ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನೀಪುರದ ಶ್ರೀ ಮದ್ದೂರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರ್.ಜೆ ಸುಗಮ ಸಂಗೀತ ಕಲಾ ತಂಡದ ಗಾಯಕರು ಭಕ್ತರ ಗಮನ ಸೆಳೆದರು.       ಭಕ್ತಿಗೀತೆ, ಭಾವಗೀತೆ, ಜಾನಪದಗೀತೆಗಳ ಸುಮಧುರ ಗಾಯನದ ಮೂಲಕ ಸುಮಾರು ೪ ಗಂಟೆ ಸಮಯ ಭಕ್ತರ ಮನಸ್ಸಿಗೆ ಮುದ ನೀಡುವಲ್ಲಿ ಗಾಯಕರು ಯಶಸ್ವಿಯಾದರು.  ಗಾಯಕ ಡಿ.ಆರ್ ಹರೀಶ್, ಜಾನಪದ ಕಲಾವಿದ ದಿವಾಕರ್, ತಬಲ ಮಾಸ್ಟರ್ ಶಿವರಾಜ್ ಮತ್ತು ರಮೇಶ್ ಅವರನ್ನೊಳಗೊಂಡ ತಂಡ ಭಕ್ತರ ಗಮನ ಸೆಳೆಯಿತು.       ಶ್ರೀ ಮದ್ದೂರಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಉಜ್ಜಿನಿಪುರ, ಕಾಗದನಗರ, ಹುಡ್ಕೋಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.

ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಶ್ರೀ ವಾದಿರಾಜರ ಆರಾಧನೆ

Image
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಶುಕ್ರವಾರ ವಾದಿರಾಜರ ಆರಾಧನೆ ವಿಜೃಂಭಣೆಯಿಂದ ಜರುಗಿತು.       ಭದ್ರಾವತಿ: ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಶುಕ್ರವಾರ ವಾದಿರಾಜರ ಆರಾಧನೆ ವಿಜೃಂಭಣೆಯಿಂದ ಜರುಗಿತು.       ಬೆಳಿಗ್ಗೆ ನಿರ್ಮಾಲ್ಯ ಹಾಗೂ ಅಭಿಷೇಕ ನಡೆಯಿತು. ನಂತರ ಅಲಂಕೃತಗೊಂಡ ರಥದಲ್ಲಿ ಶ್ರೀ ವಾದಿರಾಜರ, ಶ್ರೀ ಗುರುರಾಜರ ಮತ್ತು ಶ್ರೀ ಜಯತೀರ್ಥರ ಬೃಂದಾವನದೊಂದಿಗೆ ಹಾಗು ಶ್ರೀ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಮತ್ತು ನಗರದ ವಿವಿಧ ಭಜನಾ ಮಂಡಳಿಗಳೊಂದಿಗೆ ಇತಿಹಾಸ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದವರೆಗೆ ಉತ್ಸವ ಮೆರವಣಿಗೆ ನಡೆಸಲಾಯಿತು.       ಶ್ರೀನಿವಾಸ್ ಆಚಾರ್ ಅವರಿಂದ ಶ್ರೀ ವಾದಿರಾಜರ ಕುರಿತು ಉಪನ್ಯಾಸ ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನೆರವೇರಿತು. ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್ ಹಾಗೂ ಶ್ರೀನಿವಾಸ್ ಆಚಾರ್ ಧಾರ್ಮಿಕ ಆಚರಣೆಗಳ ನೇತೃತ್ವವಹಿಸಿದ್ದರು.       ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರುಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್ ಹಾಗೂ ನಿರಂಜನಾಚಾರ್ಯ, ಶುಭ ಗುರುರಾಜ ಮಾಧ...

ಶಾಲಾ ಮಕ್ಕಳಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

Image
ಭದ್ರಾವತಿಯಲ್ಲಿ ಅಪ್ಪರ್ ಹುತ್ತಾ  ಗೆಳೆಯರ ಬಳಗ ಟ್ರಸ್ಟ್ ವತಿಯಿಂದ  ಶಿವಮೊಗ್ಗ  ಶಂಕರ ಕಣ್ಣಿನ ಆಸ್ಪತ್ರೆ  ಸಹಯೋಗದೊಂದಿಗೆ ಶುಕ್ರವಾರ ನ್ಯೂಟೌನ್  ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಚಾಲನೆ ನೀಡಿದರು.       ಭದ್ರಾವತಿ : ಅಪ್ಪರ್ ಹುತ್ತಾ  ಗೆಳೆಯರ ಬಳಗ ಟ್ರಸ್ಟ್ ವತಿಯಿಂದ  ಶಿವಮೊಗ್ಗ  ಶಂಕರ ಕಣ್ಣಿನ ಆಸ್ಪತ್ರೆ  ಸಹಯೋಗದೊಂದಿಗೆ ಶುಕ್ರವಾರ ನ್ಯೂಟೌನ್  ಸೈಂಟ್ ಚಾರ್ಲ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.       ವಿಶೇಷವಾಗಿ ಶಾಲಾ ಮಕ್ಕಳ ಕಣ್ಣಿನ ಆರೋಗ್ಯ ಕುರಿತು ಹೆಚ್ಚಿನ ಕಾಳಜಿವಹಿಸಿ ಅತ್ಯಾಧುನಿಕ ಉಪಕರಣಗಳ ಬಳಕೆ ಮೂಲಕ ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಭವಿಷ್ಯದಲ್ಲಿ ಮಕ್ಕಳಿಗೆ ಎದುರಾಗಬಹುದಾದ ಸಮಸ್ಯೆಗಳಿಂದ ಮುಕ್ತಿ ನೀಡುವುದು ಈ ಶಿಬಿರದ ಉದ್ದೇಶವಾಗಿದೆ.       ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಶಿಬಿರಕ್ಕೆ ಚಾಲನೆ ನೀಡಿದರು. ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ಕಾರ್ಯ...

ಮಾ.೧೧ರಂದು `ಡಿಎಸ್‌ಎಸ್ ಬೆಂಗಳೂರು ಚಲೋ' : ಪೋಸ್ಟರ್ ಬಿಡುಗಡೆ

Image
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ  ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾರ ಭದ್ರಾವತಿ ನಗರದ ತಾಲೂಕು ಕಛೇರಿ ಆವರಣದಲ್ಲಿ `ಡಿಎಸ್‌ಎಸ್ ಬೆಂಗಳೂರು ಚಲೋ' ಪೋಸ್ಟರ್ ಬಿಡುಗಡೆಗೊಳಿಸಲಾಯಿತು.       ಭದ್ರಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮಾ.೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ  ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾರ ನಗರದ ತಾಲೂಕು ಕಛೇರಿ ಆವರಣದಲ್ಲಿ `ಡಿಎಸ್‌ಎಸ್ ಬೆಂಗಳೂರು ಚಲೋ' ಪೋಸ್ಟರ್ ಬಿಡುಗಡೆಗೊಳಿಸಲಾಯಿತು.       ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿರುವ ಅನುದಾನ ಇತರೆ ಉದ್ದೇಶಗಳಿಗೆ ಬಳಸಬಾರದು. ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ೨೫,೦೦೦ ಕೋ. ರು. ಹಿಂಪಡೆಯಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ  ಶೇ. ೨೪.೧ ರಷ್ಟು ಅನುದಾನ ಮೀಸಲಿರಿಸಬೇಕೆಂದು ಆಗ್ರಹಿಸಲಾಯಿತು.       ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಒಳಮಿಸಲಾತಿ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.       ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ , ಜ...

ಗುಜರಿ ವಾಹನಗಳಿಗೆ ಬೆಂಕಿ : ಲಕ್ಷಾಂತರ ರು. ನಷ್ಟ

Image
ಭದ್ರಾವತಿ ನಗರದ ತರೀಕೆರೆ ರಸ್ತೆ ಸಾದತ್ ದರ್ಗಾ ಸಮೀಪ ಗುಜರಿಗೆ ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವು ಹಳೆಯ ವಾಹನಗಳು ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ.      ಭದ್ರಾವತಿ: ನಗರದ ತರೀಕೆರೆ ರಸ್ತೆ ಸಾದತ್ ದರ್ಗಾ ಸಮೀಪ ಗುಜರಿಗೆ ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವು ಹಳೆಯ ವಾಹನಗಳು ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ.      ಮುಕ್ರಂ ಖಾನ್ ಎಂಬುವವರು ತರೀಕೆರೆ ರಸ್ತೆಯಲ್ಲಿ ಶೆಡ್ ಕಟ್ಟಿಕೊಂಡು ಗುಜರಿ ವ್ಯಾಪಾರ ನಡೆಸುತ್ತಿದ್ದಾರೆ. ಶೆಡ್ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ಕೂಡ ಇವರು ಹಲವು ಹಳೆಯ ವಾಹನಗಳನ್ನು ನಿಲ್ಲಿಸುತ್ತಿದ್ದರು.      ಗುರುವಾರ ಮಧಾಹ್ನ ೧೨ ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ವಾಹನ ನಿಲ್ಲಿಸಿದ್ದ ಖಾಲಿ ಜಾಗವನ್ನು ಆವರಿಸಿಕೊಂಡಿತು. ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಕ್ಕೆ ಹಬ್ಬುವ ಆತಂಕ ಮನೆಮಾಡಿತ್ತು. ಘಟನೆಯಲ್ಲಿ ಗುಜರಿಗೆ ಹಾಕಲಾಗಿದ್ದ ೨ ಕಾರ್, ೧ ಆಟೋ ರಿಕ್ಷಾ ಹಾಗು ೨೦ ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ.      ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ...

ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ

Image
ಭದ್ರಾವತಿ ಸಿದ್ದಾರೂಢ ನಗರದ ತಾಲೂಕು ಅಧಿಕಾರಿಗಳ ಸಂಘದ ವತಿಯಿಂದ ಸಾಮಾಜಿಕ ಸೇವಾ ಮನೋ ಸಂಕಲ್ಪದೊಂದಿಗೆ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.       ಭದ್ರಾವತಿ : ಸಿದ್ದಾರೂಢ ನಗರದ ತಾಲೂಕು ಅಧಿಕಾರಿಗಳ ಸಂಘದ ವತಿಯಿಂದ ಸಾಮಾಜಿಕ ಸೇವಾ ಮನೋ ಸಂಕಲ್ಪದೊಂದಿಗೆ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.       ಅಧಿಕಾರಿಗಳ ಸಂಘ ಹಲವಾರು ವರ್ಷಗಳಿಂದ ವಿವಿಧ ಸೇವಾ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿದ್ದು, ವಿಕಲಚೇತನರಿಗೆ ನೆರವಾಗುವ ನಿಟ್ಟಿನಲ್ಲಿ ಸಂಘದ ಕಾರ್ಯದರ್ಶಿ ವಿ. ಪ್ರಕಾಶ್‌ರವರು ತಮ್ಮ ಸ್ವಂತ ಹಣದಲ್ಲಿ ಮೂರು ಚಕ್ರದ ಸೈಕಲ್, ವಾಟರ್ ಬೆಡ್,  ಇಸ್ತ್ರಿ ಮಾಡುವ ಟೇಬಲ್ ಸೇರಿದಂತೆ ವಿವಿಧ ಸಲಕರಣೆಗಳನ್ನು ಸಂಘದ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.      ಸಂಘದ ಅಧ್ಯಕ್ಷ, ನಗರಸಭೆ ಪೌರಾಯುಕ್ತ ಕೆ.ಎನ್  ಹೇಮಂತ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಂಘದ ಉಪಾಧ್ಯಕ್ಷ, ನಿವೃತ್ತ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣ ಗೌಡ, ಸಂಘದ ಸಂಸ್ಥಾಪಕ ಸದಸ್ಯ ಎನ್.ಟಿ.ಸಿ ನಾಗೇಶ್, ಖಜಾಂಚಿ, ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ, ನಗರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪಿಡಿಒ ಕೇಶವಮೂರ್ತಿ ವಂದಿಸಿದರು.

ವಿಜೃಂಭಣೆಯಿಂದ ಜರುಗಿದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

Image
ವಿವಿಧ ಧಾರ್ಮಿಕ ಆಚರಣೆಗಳು, ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ  ಭದ್ರಾವತಿ ಶ್ರೀ ಕ್ಷೇತ್ರ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ರಥೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು    ಭದ್ರಾವತಿ: ಶ್ರೀ ಕ್ಷೇತ್ರ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ ರಥೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.     ಭದ್ರಾವತಿ-ತರೀಕೆರೆ ರಸ್ತೆ ಮಾರ್ಗ ಮಧ್ಯದಲ್ಲಿರುವ ತಾಲೂಕಿನ ಸುಣ್ಣದಹಳ್ಳಿ ಗ್ರಾಮದ ೮೦೦ ವರ್ಷಗಳ ಇತಿಹಾಸ ಪುರಾಣ ಪ್ರಸಿದ್ದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ.  ಪ್ರತಿ ವರ್ಷದಂತೆ ಈ ಬಾರಿ ಸಹ ದೇವಸ್ಥಾನದ ಆವರಣದಿಂದ ಆರಂಭಗೊಂಡ ರಥೋತ್ಸವ ಮಧ್ಯಾಹ್ನ ೧೨.೪೫ಕ್ಕೆ ಗ್ರಾಮದ ಅಗಸೆ ಬಾಗಿಲಿನವರೆಗೆ ಬಂದು ತಲುಪಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿದರು. ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು. ಸ್ವಾಮಿ ಪ್ರತಿಷ್ಠಾಪನೆಗೊಂಡ ಅಲಂಕೃತ ಭವ್ಯ ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಅಲ್ಲದೆ ಬೃಹತ್ ಓಂಕಾರ ಚಿತ್ತಾರ ಬಿಡಿಸಿ ಕರ್ಪೂರ ಹಚ್ಚಿ ಭಕ್ತಿಯಿಂದ ಕುಣಿದು ಸಂಭ್ರಮಿಸಲಾಯಿತು.     ರಥೋತ್ಸವ ನಂತರ ಅನ್ನ ಸಂತರ್ಪಣೆ ...

ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ

Image
ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಭದ್ರಾವತಿ : ನಗರದ ಚನ್ನಗಿರಿ ರಸ್ತೆಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಬ್ಯಾಂಕಿನ ಅಧ್ಯಕ್ಷ ಬಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೃಷ್ಣಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೃಷ್ಣಪ್ಪ ಬ್ಯಾಂಕಿನ ಹಿರಿಯ ನಿರ್ದೇಶಕರಾಗಿದ್ದು, ಈ ಹಿಂದಿನ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.       ಕಳೆದ ಸುಮಾರು ೧ ವರ್ಷದ ಹಿಂದೆ ನಿರ್ದೇಶಕಿ ಮೀರಾಬಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಅಧಿಕಾರ ಹಂಚಿಕೆ ಸೂತ್ರ ಅನ್ವಯಿಸಿಕೊಂಡು ನಿರ್ದೇಶಕರ ಮಂಡಳಿ ಆಡಳಿತ ಮುನ್ನಡೆಸಿಕೊಂಡು ಹೋಗುತ್ತಿದೆ.       ನೂತನ ಉಪಾಧ್ಯಕ್ಷ ಎಸ್. ಕೃಷ್ಣಪ್ಪರಿಗೆ ಬ್ಯಾಂಕಿನ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಿರ್ದೇಶಕರಾದ ಎಸ್. ವಿರುಪಾಕ್ಷಪ್ಪ, ಜಿ.ಎಂ ಚನ್ನಬಸಪ್ಪ, ಬಿ. ನಾಗೇಶ್, ಎಚ್.ಎಲ್ ಏಕಾಂತ, ಕೆ. ಶ್ರೀನಿವಾಸ್, ಎನ್.ಟಿ ಸಂಗನಾಥ, ಟಿ.ಎಸ್ ಮೌನೇಶ್ವರ, ಕೆ. ...

ಗುರು-ಹಿರಿಯರನ್ನು ಗೌರವಿಸುವ, ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ : ಬಿ.ಕೆ ಶಿವಕುಮಾರ್

Image
ಭದ್ರಾವತಿ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.       ಭದ್ರಾವತಿ: ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಅಲ್ಲದೆ ಹಿರಿಯರು ಅನಾಥಾಶ್ರಮಗಳನ್ನು ಅವಲಂಬಿಸುವ ಅಗತ್ಯತೆ ಇರುವುದಿಲ್ಲ ಎಂದು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು.       ಅವರು ಬುಧವಾರ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.       ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಅಗತ್ಯವಿದೆ. ಮನೆಗಳಲ್ಲಿ ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಹ ವಾತಾವರಣನಿರ್ಮಿಸಿಕೊಳ್ಳಬೇಕಾಗಿದೆ ಎಂದರು.       ಅನಿವಾ...

ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರಿಂದ ಗುರು ನಿವಾಸ ಉದ್ಘಾಟನೆ

Image
ಭದ್ರಾವತಿ ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಭದ್ರಾವತಿ : ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಈ ಸಂಬಂಧ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ,  ಶ್ರೀ ಜಗದ್ಗುರುಗಳ ಉಪಸ್ಥಿತಿಯಲ್ಲಿ ಪೂರ್ಣಾಹುತಿ, ಶ್ರೀ ಗುರುನಿವಾಸದ ಉದ್ಘಾಟನೆ ನಂತರ ಸನ್ನಿಧಿಯಲ್ಲಿ ಧೂಳಿಪಾದಪೂಜೆ, ಭಿಕ್ಷಾವಂದನೆ, ಗುರುಪಾದುಕಾಪೂಜೆ, ವಿವಿಧ ಸಂಘ ಸಂಸ್ಥೆಗಳಿಂದ ಫಲ ಸಮರ್ಪಣೆ ನಂತರ ಶ್ರೀ ಜಗದ್ಗುರುಗಳವರಿಂದ ಫಲ-ಮಂತ್ರಾಕ್ಷತೆ, ರಜತ ಮಹೋತ್ಸವದ ಅಂಗವಾಗಿ ಶ್ರೀಮಠದಲ್ಲಿ ಪ್ರಾರಂಭದಿಂದಲೂ ಹಾಗೂ ಈಗಲೂ ಸೇವೆ ಸಲ್ಲಿಸುತ್ತಿರುವವರಿಗೆ ಗೌರವ ಸಮರ್ಪಣೆ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ಹಾಗೂ ಮಹಾಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.    ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಪ್ರಮುಖರಾದ ಕೆ.ಎಸ್ ನಾಗರಾಜ್, ಶಾಂತಕುಮಾರ್, ಕೆ.ಆರ್ ನಾಗರಾಜ್, ಎ.ಎನ್ ಸುರೇಶ...

ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರಿಂದ ಗುರು ನಿವಾಸ ಉದ್ಘಾಟನೆ

Image
ಭದ್ರಾವತಿ ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಭದ್ರಾವತಿ : ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಬುಧವಾರ ಉದ್ಘಾಟಿಸಿದರು.       ಈ ಸಂಬಂಧ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ,  ಶ್ರೀ ಜಗದ್ಗುರುಗಳ ಉಪಸ್ಥಿತಿಯಲ್ಲಿ ಪೂರ್ಣಾಹುತಿ, ಶ್ರೀ ಗುರುನಿವಾಸದ ಉದ್ಘಾಟನೆ ನಂತರ ಸನ್ನಿಧಿಯಲ್ಲಿ ಧೂಳಿಪಾದಪೂಜೆ, ಭಿಕ್ಷಾವಂದನೆ, ಗುರುಪಾದುಕಾಪೂಜೆ, ವಿವಿಧ ಸಂಘ ಸಂಸ್ಥೆಗಳಿಂದ ಫಲ ಸಮರ್ಪಣೆ ನಂತರ ಶ್ರೀ ಜಗದ್ಗುರುಗಳವರಿಂದ ಫಲ-ಮಂತ್ರಾಕ್ಷತೆ, ರಜತ ಮಹೋತ್ಸವದ ಅಂಗವಾಗಿ ಶ್ರೀಮಠದಲ್ಲಿ ಪ್ರಾರಂಭದಿಂದಲೂ ಹಾಗೂ ಈಗಲೂ ಸೇವೆ ಸಲ್ಲಿಸುತ್ತಿರುವವರಿಗೆ ಗೌರವ ಸಮರ್ಪಣೆ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ಹಾಗೂ ಮಹಾಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.    ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಪ್ರಮುಖರಾದ ಕೆ.ಎಸ್ ನಾಗರಾಜ್, ಶಾಂತಕುಮಾರ್, ಕೆ.ಆರ್ ನಾಗರಾಜ್, ಎ.ಎನ್ ಸುರೇಶ...

ಗುರು-ಹಿರಿಯರನ್ನು ಗೌರವಿಸುವ, ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ : ಬಿ.ಕೆ ಶಿವಕುಮಾರ್

Image
ಭದ್ರಾವತಿ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.       ಭದ್ರಾವತಿ: ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಅಲ್ಲದೆ ಹಿರಿಯರು ಅನಾಥಾಶ್ರಮಗಳನ್ನು ಅವಲಂಬಿಸುವ ಅಗತ್ಯತೆ ಇರುವುದಿಲ್ಲ ಎಂದು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು.       ಅವರು ಬುಧವಾರ ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ೫ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.       ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಅಗತ್ಯವಿದೆ. ಮನೆಗಳಲ್ಲಿ ಗುರು-ಹಿರಿಯರನ್ನು ಗೌರವಿಸುವ ಹಾಗು ಅವರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತಹ ವಾತಾವರಣನಿರ್ಮಿಸಿಕೊಳ್ಳಬೇಕಾಗಿದೆ ಎಂದರು.       ಅನಿವಾ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ

Image
ಭದ್ರಾವತಿ: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ ದೊಡ್ಡಗೊಪ್ಪೇನ ಹಳ್ಳಿ(ಡಿಜೆ ಹಳ್ಳಿ) ಯಲ್ಲಿ ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ ಸಮಾವೇಶ ಉದ್ಘಾಟಿಸಿದರು. ಗ್ರಾಮದ ಪ್ರಮುಖರಾದ ಶಾಂತಪ್ಪ ಅಧ್ಯಕ್ಷತೆವಹಿಸಿದ್ದರು.  ತಾಲೂಕು ಯೋಜನಾಧಿಕಾರಿ ಪ್ರಕಾಶ್ ನಾಯ್ಕ್ ವೈ, ನ್ಯಾಯವಾದಿ ವಿಶ್ವನಾಥ್, ಗಂಗಣ್ಣ, ನಂಜುಂಡಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.  ದೀಪ ಸ್ವಾಗತಿಸಿ, ಯೋಜನೆಯ ಕೃಷಿ ಮೇಲ್ವಿಚಾರಕರು ಧನಂಜಯ ವಂದಿಸಿರು.    ಡಿ೩-ಬಿಡಿವಿಟಿ೨ ಭದ್ರಾವತಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ವಿದ್ಯಾಮಂದಿರ ವಲಯದ ಸಾಧನಾ ಸಮಾವೇಶ ದೊಡ್ಡಗೊಪ್ಪೇನ ಹಳ್ಳಿ(ಡಿಜೆ ಹಳ್ಳಿ) ಯಲ್ಲಿ ನಡೆಯಿತು.  Ananthakumara, Reporter, Kannadaprabha, NDK/31A, Near, Sri Satyasayi Baba school, Newtown, Bhadravathi:-577301(Tq) Shimoga(Dis) Mob: 9738801478 : 9482007466

ಸರ್ಕಾರಿ ಶಾಲೆ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಿಸಿ ಹುಟ್ಟುಹಬ್ಬ ಆಚರಣೆ

Image
ಭದ್ರಾವತಿ ನಗರದ ನ್ಯೂಟೌನ್ ನಿವಾಸಿ, ಸಮಾಜ ಸೇವಕ ಬಿ. ಜಗದೀಶ್-ಪುಷ್ಪ ದಂಪತಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಲೇಖನ ಸಾಮಾಗ್ರಿ ವಿತರಿಸಲಾಯಿತು.       ಭದ್ರಾವತಿ : ನಗರದ ನ್ಯೂಟೌನ್ ನಿವಾಸಿ, ಸಮಾಜ ಸೇವಕ ಬಿ. ಜಗದೀಶ್-ಪುಷ್ಪ ದಂಪತಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಲೇಖನ ಸಾಮಾಗ್ರಿ ವಿತರಿಸಲಾಯಿತು.       ಪುಷ್ಪ ತಮ್ಮ ೪೪ನೇ ವರ್ಷದ ಹುಟ್ಟುಹಬ್ಬಕ್ಕೆ ಮಕ್ಕಳಿಗೆ ಕಾರ್ಡ್ ಬೋರ್ಡ್, ಜಾಮಿಟ್ರಿ ಬಾಕ್ಸ್‌ಗಳನ್ನು ವಿತರಿಸಿ ಸಿಹಿ ಹಂಚಿಕೆ ಮಾಡಿದರು. ಶಾಲಾಭಿವೃದ್ಧಿ ಪ್ರಮುಖರಾದ ಯೇಸು ಮಾತನಾಡಿ, ಹುಟ್ಟುಹಬ್ಬ ಅದ್ದೂರಿ ಎಲ್ಲಾದರೂ ಆಚರಿಸಿಕೊಳ್ಳಬಹುದಾಗಿದೆ. ಆದರೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಸಂಭ್ರಮ ಹಂಚಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.       ದಲಿತ ಮುಖಂಡರಾದ ದಾಸ್, ರವಿಕುಮಾರ್, ಯತೀಶ್, ಬಾಬು, ರಾಘಣ್ಣ, ಪ್ರಭು, ಮಣಿ, ಮಹಂತೇಶ, ವೇಲು, ಪ್ರಶಾಂತ್, ಅಭಿ, ಶ್ಯಾಮ್, ಹೇಮಂತ್, ಶಾಲೆಯ ಮುಖ್ಯ ಶಿಕ್ಷಕಿ ಹಾಗು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಟೈಮ್ಸ್ ಸ್ಪೂರ್ತಿ ಇಂಟರ್‌ನ್ಯಾಷನಲ್ ಸ್ಕೂಲ್ ವಾಹನ ಚಾಲಕರು ಸೇರಿದಂತೆ ಇನ್ನಿತರರು ಉಪಸ್ಥ...

ಮಾ.೪ರಂದು ಸುರಕ್ಷಾ ಜೀವನ ವೃದ್ಧಾಶ್ರಮ, ಅನಾಥಾಶ್ರಮದ ವಾರ್ಷಿಕೋತ್ಸವ

Image
ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸುರಕ್ಷಾ ಜೀವನ ಸೇವಾ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಮಾತನಾಡಿದರು.       ಭದ್ರಾವತಿ : ನಗರದ ನ್ಯೂಟೌನ್ ಮೆಸ್ ಸರ್ಕಲ್ ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮದ ವಾರ್ಷಿಕೋತ್ಸವ ಮಾ.೪ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ತಿಳಿಸಿದರು.       ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ೫ ವರ್ಷಗಳಿಂದ ಟ್ರಸ್ಟ್ ವತಿಯಿಂದ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಟ್ರಸ್ಟ್ ಸೇವಾ ಕಾರ್ಯಕ್ಕೆ ಹೆಚ್ಚಿನ ಸಹಕಾರ ಎಲ್ಲೆಡೆ ಲಭಿಸುತ್ತಿದೆ ಎಂದರು.       ಟ್ರಸ್ಟ್ ವಯೋವೃದ್ಧರು ಹಾಗು ಅನಾಥರ ಬಗ್ಗೆ ಹೆಚ್ಚಿನ ಕಾಳಜಿವಹಿಸುತ್ತದೆ. ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸೇವಾ ಮನೋಭಾವ ಹೊಂದಿರುವ ಕಾರ್ಯಕರ್ತರು ಯಾವುದೇ ಫಲಾಫೇಕ್ಷೆ ಇಲ್ಲದೆ ಕುಟುಂಬ ಸದಸ್ಯರಂತೆ ಒಗ್ಗಟ್ಟಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಂಬಾ ಉತ್ತಮವಾದ ವಾತಾವರಣದಲ್ಲಿ ಟ್ರಸ್ಟ್ ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯವಿರುವ ಸೌಕರ್ಯಗಳನ್ನು ಹೊಂದಿದೆ. ಜನಪ್ರತಿನಿಧಿಗಳು, ದಾನಿಗಳು ಸೇರಿದಂತೆ ಸಮಾಜದ ಪ್ರತಿಯೊಬ್ಬರು ಹೆಚ್ಚಿನ ಸಹಕಾರ ನೀಡುವ ಮೂಲಕ ವೃದ್ದರು, ಅನಾ...

ಎತ್ತಿನ ಗಾಡಿಯಿಂದ ಕೆಳಗೆ ಬಿದ್ದು ಕೂಲಿ ಕಾರ್ಮಿಕ ಸಾವು

Image
     ಭದ್ರಾವತಿ: ಅಡಕೆ ಮರ ಕಡಿದುಕೊಂಡು ಎತ್ತಿನ ಗಾಡಿಯಲ್ಲಿ ಕೊಂಡೊಯ್ಯುವಾಗ ಕೂಲಿಕಾರ್ಮಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.       ನಗರದ ಜೇಡಿಕಟ್ಟೆ ಹೊಸೂರಿನಿಂದ ಶರವಣ(೫೩) ಎಂಬ ಕೂಲಿಕಾರ್ಮಿಕ ೨೦ ಅಡಿ ಉದ್ದದ ಅಡಕೆ ಮರ ಕಡಿದು ಎತ್ತಿನಗಾಡಿಯಲ್ಲಿ ಕೊಂಡೊಯ್ಯುವಾಗ ಜೇಡಿಕಟ್ಟೆಯ ವಿನಾಯಕ ಇಂಡಸ್ಟ್ರೀಸ್ ಬಳಿ ಎತ್ತಿನಗಾಡಿಯಿಂದ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ      ಇವರ ಮೃತದೇಹದ ಮರಣೋತ್ತರ ಪರೀಕ್ಷೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ವರದಿ ಬಂದ ನಂತರ ಇವರ ಸಾವಿನ ಕುರಿತು ಖಚಿತ ಮಾಹಿತಿ ಲಭ್ಯವಾಗಲಿದೆ. ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.