Posts

ಭದ್ರಾವತಿ ನಗರಸಭೆ ಘನತ್ಯಾಜ್ಯ ವಸ್ತು ನಿರ್ವಹಣೆ-2026 ನಿಯಮ ಜಾರಿ

Image
ಭದ್ರಾವತಿ ನಗರಸಭೆ ಮುಖ್ಯಾಂಶಗಳು: - ಘನತ್ಯಾಜ್ಯ ವಸ್ತುಗಳನ್ನು 4 ವಿಧಗಳಾಗಿ ಕಡ್ಡಾಯವಾಗಿ ಮೂಲದಲ್ಲಿಯೇ ವಿಂಗಡಿಸಿ. - ತ್ಯಾಜ್ಯ ವಿಂಗಡಣೆ ಮಾಡದೆ ಇರುವವರ ವಿರುದ್ಧ ದಂಡ. - ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ.     ಭದ್ರಾವತಿ : ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು -2026 ನಗರಸಭೆ ವ್ಯಾಪ್ತಿಯಲ್ಲಿ ಏ.1ರಿಂದ ಜಾರಿಗೆ ಬಂದಿದ್ದು, ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವುದು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು, ಅಲ್ಲದೆ ನೀರು ಮತ್ತು ವಿದ್ಯುತ್ ಸಂಪರ್ಕ ಸಹ ಕಡಿತಗೊಳಿಸಲಾಗುವುದು ಎಂದು ನಗರಸಭೆ ಆಡಳಿತ ಎಚ್ಚರಿಸಿದೆ. ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಸಚಿವಾಲಯ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು -2026 ಜಾರಿಗೆ ತಂದಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ನಗರಸಭೆ ವ್ಯಾಪ್ತಿಯ ನಿವಾಸಿಗಳು, ವ್ಯಾಪಾರೋದ್ಯಮಿಗಳು, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಮತ್ತು ಇತರೆ ವಾಣಿಜ್ಯ ಉದ್ದಿಮೆದಾರರು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ವಸ್ತುಗಳನ್ನು 4 ವಿಧಗಳಾಗಿ ಮೂಲದಲ್ಲಿಯೇ ವಿಂಗಡಿಸಿ ನಗರಸಭೆಯ ಆಟೋ ಟಿಪ್ಪರ್‌ಗಳಿಗೆ ನೀಡುವುದು ಕಡ್ಡಾಯವಾಗಿದೆ.     1. ಹಸಿ ತ್ಯಾಜ್ಯ : ಅಡಿಗೆ ಮನೆ ತ್ಯಾಜ್ಯ, ಆಹಾರ ತ್ಯಾಜ್ಯ, ತರಕಾರಿ ತ್ಯಾಜ್ಯ, ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ, ಹೂವಿನ ತ್ಯಾಜ್ಯ, ಗಾರ್ಡನ್ ತ್ಯಾಜ್ಯ ಇತರೆ ಕರಗುವ ತ್ಯಾಜ್ಯ ವ...

ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರಿಗೆ ಸನ್ಮಾನ 

Image
ಭದ್ರಾವತಿ ನಗರದ ಜನ್ನಾಪುರ ಎಸ್.ಜೆ ರಸ್ತೆಯ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಅಭಿನಂದನಾ ಕಾರ್ಯಕ್ರಮವನ್ನು ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಅನನ್ಯ ಶಾಸ್ತ್ರಿ ಉದ್ಘಾಟಿಸಿದರು.        ಭದ್ರಾವತಿ : ನಗರದ ಜನ್ನಾಪುರ ಎಸ್.ಜೆ ರಸ್ತೆಯ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಅನನ್ಯ ಶಾಸ್ತ್ರಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.       ಅನನ್ಯ ಶಾಸ್ತ್ರಿಯವರು ಕೆಲವು ತಿಂಗಳ ಹಿಂದೆ ನ್ಯಾಯಾಧೀಶರ ಹುದ್ದೆ ಪರೀಕ್ಷೆಯಲ್ಲಿ ಅತಿಹೆಚ್ಚು  ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದು, ಇವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.      ಸನ್ಮಾನ ಸ್ವೀಕರಿಸಿದ ಅನನ್ಯ ಶಾಸ್ತ್ರಿಯವರು ತಮ್ಮ ಸಾಧನೆಯ ಹಾದಿಯನ್ನು ಸ್ಮರಿಸುವ ಮೂಲಕ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.      ಸೊಸೈಟಿ ಅಧ್ಯಕ್ಷೆ ಎಸ್. ಶ್ವೇತಾ ಅಧ್ಯಕ್ಷತೆ ವಹಿಸಿದ್ದರು.  ಸೊಸೈಟಿ ಮಾಜಿ ಅಧ್ಯಕ್ಷ ಆನಂದ ರಾವ್, ಉಪಾಧ್ಯಕ್ಷ ಡಿ. ಗುರುಪ್ರಸಾದ್, ಕಾರ್ಯದರ್ಶಿ ಎಂ.ವಿ ಶಶಿಧರ್, ನಿರ್ದೇಶಕರಾದ ಇಂದ್ರಸೇನರಾವ್, ಶ್ರೀವತ...

ಜಿಂಕೆ ಮಾಂಸ ಮಾರಾಟ : ಮೂವರ ಬಂಧನ

Image
20 ಕೆ.ಜಿ ಜಿಂಕೆ ಮಾಂಸ ವಶ, ಪ್ರಮುಖ ಆರೋಪಿ ನಾಪತ್ತೆ  ಜಿಂಕೆ ಮಾಂಸ ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ, ಅವರಿಂದ ಸುಮಾರು 20 ಕೆ.ಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.       ಭದ್ರಾವತಿ : ಜಿಂಕೆ ಮಾಂಸ ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ, ಅವರಿಂದ ಸುಮಾರು 20 ಕೆ.ಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.      ಅಂತರಗಂಗೆ ವಿಭಾಗ, ಬೊಮ್ಮನಕಟ್ಟೆ ಬೀಟ್ ವ್ಯಾಪ್ತಿಯ ನಗರದ ಬಿ.ಎಚ್ ರಸ್ತೆ, ಹುತ್ತಾ ಬಸ್ ನಿಲ್ದಾಣದ ಬಳಿ ಹಾಗು 206 ರಾಷ್ಟ್ರೀಯ ಹೆದ್ದಾರಿ, ಮೂರ್ತಿ ಹೋಟೆಲ್ ಮುಂಭಾಗ ಮಾಂಸ ಮಾರಾಟದಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.      ನಗರಸಭೆ ವ್ಯಾಪ್ತಿಯ ಸೀಗೆಬಾಗಿ, ಸೈಯದ್ ಕಾಲೋನಿ ನಿವಾಸಿ ಮುನ್ನ(45), ಸುರಗಿತೋಪು 2ನೇ ಕ್ರಾಸ್ ನಿವಾಸಿ ಚಂದ್ರಶೇಖರ್(49) ಮತ್ತು ಹೊಸ ಸಿದ್ದಾಪುರ, ೫ನೇ ಕ್ರಾಸ್ ಮಿಲ್ಕ್ ಡೈರಿ ಬಳಿ ನಿವಾಸಿ ಮೂರ್ತಿ(50) ಬಂಧಿತರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಕಾಚಗೊಂಡನಹಳ್ಳಿ ಗ್ರಾಮದ ಆರ್ಮುಗಂ ನಾಪತ್ತೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.       ಕಾಡಿನಲ್ಲಿ ಜಿಂಕೆಯನ್ನು ಭೇಟಿಯಾಡಿ ಕೊಂದು ಅದರ ಮಾಂಸವನ್ನು ನಗರಕ್ಕೆ ತಂದು ಮಾರಾಟ ಮಾಡಲಾಗುತ್ತ...

ಶಾಂತಿ, ಸೌಹಾರ್ದತೆ, ಸಂಭ್ರಮದಿಂದ ಪ್ರತಿಯೊಂದು ಹಬ್ಬ ಆಚರಿಸಿ : ಪ್ರಕಾಶ್ ರಾಥೋಡ್ 

Image
ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ಪಾಂಡುರಂಗ ಕಲ್ಯಾಣ ಮಂಟಪದಲ್ಲಿಬಕ್ರೀದ್ ಹಬ್ಬದ ಅಂಗವಾಗಿ ಪೊಲೀಸ್ ಉಪವಿಭಾಗದಿಂದ ಶಾಂತಿ ಸಭೆ ಏರ್ಪಡಿಸಲಾಗಿತ್ತು.       ಭದ್ರಾವತಿ : ಸಮಾಜದಲ್ಲಿ ಪ್ರತಿಯೊಂದು ಹಬ್ಬ ಶಾಂತಿ, ಸೌಹಾರ್ದತೆ, ಸಂಭ್ರಮದಿಂದ ಆಚರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇದನ್ನು ಎಲ್ಲರೂ ಅರಿತುಕೊಳ್ಳಬೇಕೆಂದು ನಗರದ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹೇಳಿದರು.      ಅವರು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ಪಾಂಡುರಂಗ ಕಲ್ಯಾಣ ಮಂಟಪದಲ್ಲಿಬಕ್ರೀದ್ ಹಬ್ಬದ ಅಂಗವಾಗಿ ಪೊಲೀಸ್ ಉಪವಿಭಾಗದಿಂದ ಏರ್ಪಡಿಸಲಾಗಿದ್ದ ಶಾಂತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.       ಯಾವುದೇ ಧರ್ಮದ ಹಬ್ಬವಿರಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಯಿಂದ ಆಚರಿಸಲು ಮುಂದಾಗಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಹ್ವಾನ ನೀಡಬಾರದು. ತಾಲೂಕಿನಾದ್ಯಂತ ಬಕ್ರೀದ್ ಹಬ್ಬ ಯಶಸ್ವಿಯಾಗಿ ನಡೆಯಲು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ. ಒಂದು ವೇಳೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.      ಪ್ರಮುಖರಾದ ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್,  ಅಂಜುಮನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಅಯುಬ್ ಖಾನ್...

ಭಾರ ಎತ್ತುವ ಸ್ಪರ್ಧೆಯಲ್ಲಿ ಸಹ ಪ್ರಾಧ್ಯಾಪಕ ಶಿವರುದ್ರಪ್ಪರಿಗೆ 11ನೇ ಬಾರಿ ಚಿನ್ನದ ಪದಕ

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭದ್ರಾವತಿ ನಗರದ ನ್ಯೂಟೌನ್ ನಿವಾಸಿ, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ ಭಾರ ಎತ್ತುವ ಸ್ಪರ್ಧೆ(ಪವರ್ ಲಿಫ್ಟಿಂಗ್) ಚಿನ್ನದ ಪದಕ ಪಡೆದುಕೊಂಡಿದ್ದಾರೆ.      ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನಗರದ ನ್ಯೂಟೌನ್ ನಿವಾಸಿ, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ ಭಾರ ಎತ್ತುವ ಸ್ಪರ್ಧೆ(ಪವರ್ ಲಿಫ್ಟಿಂಗ್) ಚಿನ್ನದ ಪದಕ ಪಡೆದುಕೊಂಡಿದ್ದಾರೆ.      ಶಿವರುದ್ರಪ್ಪರವರು ವೈಯಕ್ತಿಕ ವಿಭಾಗದಲ್ಲಿ 105 ಕೆ.ಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇವರು ಭಾರ ಎತ್ತುವ ಸ್ಪರ್ಧೆಯಲ್ಲಿ 11ನೇ ಬಾರಿಗೆ ಚಿನ್ನದ ಪದಕ ಪಡೆದಿರುವುದು ವಿಶೇಷವಾಗಿದ್ದು, ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.      ಶಿವರುದ್ರಪ್ಪರನ್ನು ಕರ್ನಾಟಕ ರಾಜ್ಯ ಸರ್ಕಾರಿ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Image
     ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವೀರಶೈವ ಲಿಂಗಾಯತ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿಯನ್ನು ಮಹಾಸಭೆ ವೆಬ್‌ಸೈಟ್ www. aivlm.org  ನಲ್ಲಿ ಆನ್ ಲೈನ್‌ ಮೂಲಕ ಮೇ. 25ರೊಳಗೆ ಸಲ್ಲಿಸಬೇಕು. ಅಂಚೆ ಅಥವಾ ಕೋರಿಯರ್‌ ಮೂಲಕ ಅರ್ಜಿ ಸಲ್ಲಿಸಿದಲ್ಲಿ ಸ್ವಿಕರಿಸುವುದಿಲ್ಲ. ಅರ್ಹರು ತಕ್ಷಣ ಅರ್ಜಿ ಸಲ್ಲಿಸುವ ಮೂಲಕ ಮಹಾಸಭಾ ಹಮ್ಮಿಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಮಹಾಸಭಾ ತಾಲೂಕು  ಅಧ್ಯಕ್ಷ  ಕೆ.ಎಸ್ ವಿಜಯ ಕುಮಾರ್ ಕೋರಿದ್ದಾರೆ.      ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು, ಕೆ.ಎಸ್ ವಿಜಯ ಕುಮಾರ್, ಮೊ:  9845855233 ಅಥವಾ ಪ್ರಧಾನ ಕಾರ್ಯದರ್ಶಿ ನಟರಾಜ್ ಹೆಬ್ಬಂಡಿ, ಮೊ.7353380123 ಸಂಖ್ಯೆಗೆ ಸಂಪಕಿಶಬಹುದಾಗಿದೆ. 

ಉಚಿತ ಸಾಮೂಹಿಕ ವಿವಾಹದಿಂದ ಕೌಟುಂಬಿಕ ವ್ಯವಸ್ಥೆ ಗಟ್ಟಿ, ಹಿಂದೂ ಧಾರ್ಮಿಕ ಪರಂಪರೆ ಉಳಿವು 

Image
ವಿಎಚ್‌ಪಿ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಬಿ.ಕೆ ಮೋಹನ್  ಭದ್ರಾವತಿ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಭಾನುವಾರ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.       ಭದ್ರಾವತಿ : ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಮೂಲಕ ಹಿಂದೂ ಧರ್ಮದ ಧಾರ್ಮಿಕ ಪರಂಪರೆ ಭವಿಷ್ಯದ ಪೀಳಿಗೆಗೆ ತಿಳಿಸಿಕೊಡುವ ಜೊತೆಗೆ ಕೌಟುಂಬಿಕ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.      ಅವರು ಭಾನುವಾರ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.      ಸಾಮೀಜಿಗಳು, ಗಣ್ಯರು ಸೇರಿದಂತೆ ಬಂಧು-ಬಳಗದವರ ಸಮ್ಮುಖದಲ್ಲಿ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳ ಮೂಲಕ ವಿವಾಹವಾಗುವ ಭಾಗ್ಯ ಎಲ್ಲರಿಗೂ ಲಭಿಸುವುದಿಲ್ಲ. ಉಚಿತ ಸಾಮೂಹಿಕ ಮಹೋತ್ಸವ ನೂತನ ವಧು-ವರರಲ್ಲಿ ಹೆಚ್ಚಿನ ಜವಾಬ್ದಾರಿ ಮೂಡಿಸುತ್ತದೆ. ಭವಿಷ್ಯದಲ್ಲಿ ಇಬ್ಬರು...

ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಸಂಗಮೇಶ್ವರ್ 

Image
ಭದ್ರಾವತಿ ಬಾರಂದೂರು ಗ್ರಾಮದ ಬಯಲು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಭಾನುವಾರ ಗುರುತಿನ ಚೀಟಿ ವಿತರಣೆ, ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಉನ್ನತ ಹುದ್ದೆಯಲ್ಲಿರುವವರಿಗೆ ಸನ್ಮಾನ ಹಾಗು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಶ್ರಮ ಜೀವಿಗಳಾದ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.      ಅವರು ಭಾನುವಾರ ಬಾರಂದೂರು ಗ್ರಾಮದ ಬಯಲು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಆಯೋಜಿಸಲಾಗಿದ್ದ ಗುರುತಿನ ಚೀಟಿ ವಿತರಣೆ, ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಉನ್ನತ ಹುದ್ದೆಯಲ್ಲಿರುವವರಿಗೆ ಸನ್ಮಾನ ಹಾಗು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.      ಕಾರ್ಮಿಕರ ಯಾವುದೇ ರೀತಿಯ ಸ...

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಚನ್ನಗಿರಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಚಾಲನೆ 

Image
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಭದ್ರಾವತಿ ನಗರದ ಚನ್ನಗಿರಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೊನೆಗೂ ನಗರಸಭೆ ಸಭೆ ಆಡಳಿತ ಮುಂದಾಗಿದೆ.  ವರ್ತಕರ ತೀವ್ರ ವಿರೋಧದ ನಡೆವೆಯೂ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.       ಭದ್ರಾವತಿ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಗರದ ಚನ್ನಗಿರಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೊನೆಗೂ ನಗರಸಭೆ ಸಭೆ ಆಡಳಿತ ಮುಂದಾಗಿದೆ.  ವರ್ತಕರ ತೀವ್ರ ವಿರೋಧದ ನಡೆವೆಯೂ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.      ನಗರದ ಹೃದಯ ಭಾಗದಲ್ಲಿರುವ ಚನ್ನಗಿರಿ ರಸ್ತೆ, ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ಮಾಧವಚಾರ್ ವೃತ್ತದಿಂದ ಹಾಲಪ್ಪ ವೃತ್ತದವರೆಗೆ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಅಧಿಕವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ವರ್ಷಗಳ ಹಿಂದೆಯೇ ರಸ್ತೆ ಅಗಲೀಕರಣ ಕಾರ್ಯಕ್ಕೆ ನಗರಸಭೆ ಆಡಳಿತ ಮುಂದಾಗಿದ್ದು, ರಸ್ತೆಯ ಮಧ್ಯ ಭಾಗದಿಂದ ಎರಡು ಕಡೆ ಅಳತೆ ಗುರುತು ಮಾಡಲಾಗಿದೆ. ರಸ್ತೆಯ ಎರಡೂ ಬದಿ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯ ಕೈಗೊಳ್ಳಬೇಕಾಗಿದೆ. ಆದರೆ ಇದಕ್ಕೆ ಸ್ಥಳೀಯರು ಹಾಗು ವರ್ತಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಲವು ಬಾರಿ ಗುರುತು ಕಾರ್ಯ ಕೈಗೊಂಡಿದ್ದರೂ ಸಹ ವಿರೋಧದಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲು ಸಾಧ್ಯವಾಗದೆ ಕೈಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ನಡ...

ಪಿಡಬ್ಲ್ಯೂಡಿ ನಿವೃತ್ತ ವ್ಯವಸ್ಥಾಪಕ ಶಾಮಣ್ಣ ನಿಧನ 

Image
ಶಾಮಣ್ಣ       ಭದ್ರಾವತಿ : ನಗರದ ವಾರ್ಡ್ ನಂ.೩ರ ಡಾ. ರಾಜಕುಮಾರ್ ರಸ್ತೆ, ಗೌಳಿಗರ ಬೀದಿ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ವ್ಯವಸ್ಥಾಪಕ ಶಾಮಣ್ಣ(೭೯) ನಿಧನ ಹೊಂದಿದರು.      ವಿಕಲಚೇತನರಾದ ಇವರು ಅವಿವಾಹಿತರಾಗಿದ್ದು, ಚಿರಪರಿಚಿತರಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಹೊಳೆಹೊನ್ನೂರು ರಸ್ತೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.      ಇವರ ನಿಧನಕ್ಕೆ ಪ್ರಮುಖರಾದ ಎಂ.ಎಸ್ ಜನಾರ್ಧನಾ ಅಯ್ಯಂಗಾರ್, ಎಸ್. ನರಸಿಂಹಚಾರ್, ಮುರುಳಿ ಭಟ್ಟರು, ವಿಶ್ವ ಹಿಂದೂ ಪರಿಷದ್ ಪ್ರಮುಖರಾದ  ಹಾ. ರಾಮಪ್ಪ, ಹಳೇನಗರ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಭಜನ ಮಂಡಳಿ ಹಾಗು ವೇದ ಪಾಠ ಶಾಲೆ ಮತ್ತು ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.  

ಆಸ್ಪತ್ರೆ ಮುಂಭಾಗ ತ್ಯಾಜ್ಯ ಎಸೆಯದಂತೆ ರಂಗೋಲಿ ಬಿಡಿಸಿ ಜಾಗೃತಿ 

Image
ಆಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯ ದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಲು ಭದ್ರಾವತಿ ನಗರಸಭೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ತಮ್ಮದೇ ಆದ ವಿಶಿಷ್ಟ ರೀತಿಯ ಪ್ರಯೋಗದ ಮೂಲಕ ಗಮನ ಸೆಳೆದಿದ್ದಾರೆ.      ಭದ್ರಾವತಿ : ಆಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಲು ನಗರಸಭೆ ಸಿಬ್ಬಂದಿಗಳು ಹಾಗೂ ಸಮುದಾಯ ಸಂಚಾಲಕರು ತಮ್ಮದೇ ಆದ ವಿಶಿಷ್ಟ ರೀತಿಯ ಪ್ರಯೋಗದ ಮೂಲಕ ಗಮನ ಸೆಳೆದಿದ್ದಾರೆ.     ನಗರಸಭೆ ವಾರ್ಡ್ ನಂಬರ್ ೨೨ರ ಉಜ್ಜನಿಪುರ ಮುಖ್ಯ ರಸ್ತೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಹಲವು ಬಾರಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಿಗೆ ನಗರಸಭೆ ವತಿಯಿಂದ ಸೂಚಿಸಿದ್ದರೂ ಸಹ ತ್ಯಾಜ್ಯ ಎಸೆಯುವುದು ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ನಗರಸಭೆ ಸಮುದಾಯ ಸಂಚಾಲಕರು ಹಾಗೂ ಪೌರಕಾರ್ಮಿಕರು ತ್ಯಾಜ್ಯ ಎಸೆಯುವ ಸ್ಥಳವನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸುವ ಮೂಲಕ ಸಾರ್ವಜನಿಕರಲ್ಲಿ ತ್ಯಾಜ್ಯ ಎಸೆಯಂತೆ ಅರಿವು ಮೂಡಿಸಿ ಸ್ವಚ್ಛತೆ ಕಾಪಾಡಿಕೊಳ್ಳಲು ಮನವಿ ಮಾಡಿದರು.      ಒಂದು ವೇಳೆ ಮುಂದಿನ ದಿನಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ನಗರಸಭೆ ವತಿಯಿಂದ ೫,೦೦೦ ರು. ದಂಡ ವಿಧಿಸುವುದಾಗಿ ಎಚ್ಚರಿಸಿದರು. ಅಲ್ಲದೆ ತ್ಯಾಜ್ಯ ಎಸೆಯ...

ವಿನಾಕಾರಣ ಯಾವುದೋ ನೆಪ್ಪವೊಡ್ಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡದಿರಿ 

Image
೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್  ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು.       ಭದ್ರಾವತಿ: ವಿನಾಕಾರಣ ತಾಲೂಕು ಆಡಳಿತ ಯಾವುದೋ ನೆಪವೊಡ್ಡಿ ಕ್ಷೇತ್ರದಲ್ಲಿ ೫೦-೬೦ ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಹಕ್ಕು ಪತ್ರ ನೀಡದಿರುವುದು ಸರಿಯಲ್ಲ. ಯಾವುದೇ ರೀತಿಯ ಸಮಸ್ಯೆಗಳು ಇದ್ದರೂ ಸಹ ಬಗೆಹರಿಸಿಕೊಂಡು ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲು ಮುಂದಾಗಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.      ಅವರು ಬುಧವಾರ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.      ಕ್ಷೇತ್ರದಲ್ಲಿರುವ ಅರ್ಹ ಫಲಾನುಭವಿಗಳಿಗೆ ಮೊದಲು ಹಕ್ಕು ಪತ್ರ ನೀಡಿ. ಎಲ್ಲದಕ್ಕೂ ಅರಣ್ಯ ಇಲಾಖೆ ನೆಪಮಾಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಅರಣ್ಯ ಇಲಾಖೆಯವರು ಮನೆ ಕಟ್ಟಿಕೊಳ್ಳುವಾಗ ಸುಮ್ಮನಿರುತ್ತಾರೆ. ಜಾಗಕ್ಕ...

ಹಾಲಪ್ಪ ವೃತ್ತದಲ್ಲಿ ವಿಭಜಕ ನಿರ್ಮಾಣಕ್ಕೆ ಜೆಡಿಎಸ್ ವಿರೋಧ : ಕಾಮಗಾರಿ ಅರ್ಧಕ್ಕೆ ಸ್ಥಗಿತ 

Image
ನಗರಸಭೆ ಸಭಾಂಗಣದಲ್ಲಿ ಮೇ.೨೧ರ ಗುರುವಾರ ಸಭೆ ನಡೆಸಿ ಮುಂದಿನ ತೀರ್ಮಾನ  ಭದ್ರಾವತಿ: ಕರ್ನಾಟಕ ರತ್ನ, ವರನಟ ಡಾ. ರಾಜಕುಮಾರ್ ರಸ್ತೆ(ಬಿ.ಎಚ್ ರಸ್ತೆ), ಹಾಲಪ್ಪ ವೃತ್ತದಲ್ಲಿ ನಗರಸಭೆಯಿಂದ ರಸ್ತೆ ಮಧ್ಯ ಭಾಗದಲ್ಲಿ ವಿಭಜಕ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಜಾತ್ಯಾತೀತ ಜನತಾದಳ ಮುಖಂಡರು ಬುಧವಾರ ಕಾಮಗಾರಿ ಸ್ಥಳದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಮೇ.೨೧ರ ಗುರುವಾರ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಲಿದೆ.      ಹಾಲಪ್ಪ ವೃತ್ತದಲ್ಲಿ ರಸ್ತೆ ಕಿರಿದಾಗಿದ್ದು, ಈಗಾಗಲೇ ಅಪಘಾತಗಳು ಸಂಭವಿಸುತ್ತಿವೆ. ಇಂತಹ ಸ್ಥಳದಲ್ಲಿ ರಸ್ತೆ ವಿಭಜಕ ನಿರ್ಮಿಸುವುದರಿಂದ ಮತ್ತಷ್ಟು ಅಪಘಾತಗಳು ಹೆಚ್ಚಾಗಲಿವೆ. ರಸ್ತೆ ವಿಭಜಕ ಅವೈಜ್ಞಾನಿಕವಾಗಿದ್ದು, ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.      ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ನೇತೃತ್ವದಲ್ಲಿ ಸುಮಾರು ೧ ಗಂಟೆಗೂ ಹೆಚ್ಚು ಸಮಯ ನಗರಸಭೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಯಿತು. ಅಂತಿಮವಾಗಿ ಈ ಸಂಬಂಧ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿ, ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿದರು.      ಜೆಡಿಎಸ್ ಪಕ್ಷದ ಪ್ರಮುಖರಾದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ, ನಗರಸಭೆ ಸದಸ್ಯರಾದ ಉದಯ್ ಕುಮಾರ್, ಆರ್. ಮೋಹನ್ ಕುಮಾರ್, ಎಸ್. ...

ಸರ್ಕಾರಕ್ಕೆ ೩ ವರ್ಷ : ಶಾಸಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ 

Image
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ೩ ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ಭದ್ರಾವತಿ  ನಗರದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.       ಭದ್ರಾವತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ೩ ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ನಗರದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.      ಪಕ್ಷದ ಹಿಂದುಳಿದ ವರ್ಗಗಳ(ಒಬಿಸಿ) ಜಿಲ್ಲಾ ಘಟಕದಿಂದ ಶಾಸಕರ ಗೃಹ ಕಛೇರಿಯಲ್ಲಿ ಲಾಡು ತಿನ್ನಿಸುವ ಮೂಲಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸಲಿ. ಸರ್ಕಾರ ೫ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸಂಭ್ರಮ ವ್ಯಕ್ತಪಡಿಸಲಾಯಿತು.      ಹಿಂದುಳಿದ ವರ್ಗಗಳ ಪ್ರಮುಖರಾದ ಬಿ. ಗಂಗಾಧರ್, ನರಸಿಂಹಮೂರ್ತಿ, ಮಹಮದ್ ರಫಿ, ಶಬ್ಬೀರ್ ಅಹಮದ್, ಧರ್ಮಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ 

Image
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಅಕಾಲಿಕ ಗಾಳಿ ಮಳೆಯಿಂದಾಗಿ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.       ಭದ್ರಾವತಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಅಕಾಲಿಕ ಗಾಳಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.      ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೆ ಒಳಗಾದವರಿಗೆ ಧೈರ್ಯ ತುಂಬಿದರು. ಅಲ್ಲದೆ ಅಧಿಕಾರಿಗಳಿಗೆ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ವರದಿ ನೀಡುವಂತೆ ಸೂಚಿಸಿದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಗು ಸಂಬಂಧಪಟ್ಟ ಸಚಿವರುಗಳೊಂದಿಗೆ ಚರ್ಚಿಸಿ ಸಿ ಸರ್ಕಾರದ ನಿಯಮಾವಳಿ ಪ್ರಕಾರ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.      ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ತಾಲ...

ಎಂಪಿಎಂ ನಿವೃತ್ತ ನೌಕರ ದೇವದತ್ತ ನಿಧನ 

Image
ದೇವದತ್ತ       ಭದ್ರಾವತಿ : ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಉಜ್ಜನಿಪುರ ನಿವಾಸಿ ಗಂಧಮ್ ಜಾರ್ಜ್ ದೇವದತ್ತ ಸೋಮವಾರ ರಾತ್ರಿ ನಿಧನ ಹೊಂದಿದರು.      ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಎಂಪಿಎಂ ಕಾರ್ಖಾನೆಯ ಚಿಪ್ಪರ್ ಮೆಕಾನಿಕ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಉಜ್ಜನಿಪುರ ನೆಕ್ಸ್ಟ್ ಟು ಚರ್ಚ್ ಆಫ್ ಕ್ರಿಸ್ಟ್ ಸೆಕೆಂಡ್ ದೇವಾಲಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಂಗಳವಾರ ಸಂಜೆ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಯೂನೈಟೆಡ್ ಪ್ರೊಟೆಸ್ಟೆಂಟ್ ಸಮಾಧಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಇವರ ನಿಧನಕ್ಕೆ ಎಂಪಿಎಂ ನಿವೃತ್ತ ಕಾರ್ಮಿಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಮೇ.೨೦ರಂದು ಕೆಡಿಪಿ ಸಭೆ 

Image
     ಭದ್ರಾವತಿ : ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮೇ.೨೦ರ ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ.      ತಾಲೂಕು ಮಟ್ಟದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ೨೦ ಅಂಶಗಳು ಸೇರಿದಂತೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಇದಾಗಿದ್ದು, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಂಡು ಜ.೧ ರಿಂದ ಮಾ.೩೧ರವರೆಗಿನ ವರದಿ ಸಲ್ಲಿಸುವ ಮೂಲಕ ಸಭೆ ಯಶಸ್ವಿಗೊಳಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ. 

ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿ : ಶಾರದ ಅಪ್ಪಾಜಿ ನೇತೃತ್ವದ ತಂಡ ಪರಿಶೀಲನೆ

Image
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಭದ್ರಾವತಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಸೋಮವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.       ಭದ್ರಾವತಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಸೋಮವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.       ಸಂಜೆ ವೇಳೆ ಗುಡುಗು ಸಹಿತ ಗಾಳಿ ಮಳೆಯಾಗುತ್ತಿದ್ದು, ನಗರ ಹಾಗು ಗ್ರಾಮೀಣ ಭಾಗದಲ್ಲಿ ಹಾನಿ ಉಂಟಾಗಿದೆ. ಹಳ್ಳಕೊಳ್ಳಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಗಾಳಿ ಮಳೆಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿ ಬಿದ್ದಿವೆ. ಕೆಲವೆಡೆ ಮನೆಯ ಮೇಲ್ಛಾವಣಿಗಳು ಹಾರಿ ಹೋಗಿರುವ ಘಟನೆಗಳು ನಡೆದಿವೆ. ಅಲ್ಲದೆ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿದ್ದು, ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ. ಎಲ್ಲೆಡೆ ಭತ್ತದ ಕೊಯ್ಲು ಆರಂಭಗೊಂಡಿದ್ದು, ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಭಂಡಾರಹಳ್ಳಿ ರೈತ ಶ್ರೀಧರ್‌ರವರು ೧ ಎಕರೆ ಜಮೀನಿನಲ...

ಎಂಪಿಎಂ ಅರಣ್ಯ ವ್ಯಾಪ್ತಿಯ ಸಹಾಯಕ ಅರಣ್ಯಾಧಿಕಾರಿ ಅಕ್ರಮದ ವಿರುದ್ಧ ತನಿಖೆ ನಡೆಸಿ

Image
ಮುಖ್ಯಮಂತ್ರಿಗಳಿಗೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮನವಿ  ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ತಾಂತ್ರಿಕ ಸಹಾಯಕ ಮತ್ತು ಸಹಾಯಕ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಬಿ ಪಾಲಾಕ್ಷಿರವರ ಅಕ್ರಮಗಳ ಬಗ್ಗೆ ಉನ್ನತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಹಾಗು ಸೇವೆಯಿಂದ ತಕ್ಷಣ ಬಿಡುಗಡೆಗೊಳಿಸುವಂತೆ ಜನ್ನಾಪುರ ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.       ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ತಾಂತ್ರಿಕ ಸಹಾಯಕ ಮತ್ತು ಸಹಾಯಕ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಬಿ ಪಾಲಾಕ್ಷಿರವರ ಅಕ್ರಮಗಳ ಬಗ್ಗೆ ಉನ್ನತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಹಾಗು ಸೇವೆಯಿಂದ ತಕ್ಷಣ ಬಿಡುಗಡೆಗೊಳಿಸುವಂತೆ ಜನ್ನಾಪುರ ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  ಎನ್.ಬಿ ಪಾಲಾಕ್ಷಿರವರು ಸರ್ಕಾರಿ ನೌಕರಿಯಲ್ಲಿ ನಿವೃತ್ತಿ ಹೊಂದಿದ್ದು, ನಿವೃತ್ತಿಯ ನಂತರದಲ್ಲಿ ಸರ್ಕಾರದ ಆದೇಶದ ಮೇರೆಗೆ ನಗರದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ತಾಂತ್ರಿಕ ಸಹಾಯಕ ಮತ್ತು...

ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಸಾವು

Image
     ಭದ್ರಾವತಿ: ನಗರದ ತರೀಕೆರೆ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ನಾಗರಾಜ್(೪೮) ಎಂಬುವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.        ಶನಿವಾರ ಸಂಜೆ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರವಾಹನದಲ್ಲಿ ಹಿಂಬದಿ ಕುಳಿತಿದ್ದ ಇವರ ಸಹೋದರರ ಮಗಳಿಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.       ನಾಗರಾಜ್‌ರವರು ನೆಹರೂ ನಗರದಲ್ಲಿರುವ ಸಂಬಂಧಿಕರ ಮನೆಗೆ ಸಹೋದರನ ಮಗಳನ್ನು ಕೂರಿಸಿಕೊಂಡು ಹೋಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. 

ಸಮಾನ ಅವಕಾಶ, ನೆರವು ನೀಡಬೇಕೆಂಬ ಉದ್ದೇಶದಿಂದ ಹಲವು ಯೋಜನೆಗಳು ಜಾರಿಗೆ

Image
ಯೋಜನೆಗಳ ಸದ್ಬಳಕೆಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಕರೆ  ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್‌ರವರ ಕಚೇರಿ ಆವರಣದಲ್ಲಿ ೨೦೨೪-೨೫ನೇ ಸಾಲಿನ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಆಯ್ಕೆಯಾದ ಭದ್ರಾವತಿ ತಾಲೂಕಿನ ಮೂವರು ಸೇರಿದಂತೆ ೬ ಮಂದಿ ವಿಕಲಚೇತನ ಫಲಾನುಭವಿಗಳಿಗೆ ಸಹಾಯಕ ಸಾಧನಗಳನ್ನು ವಿತರಿಸಲಾಯಿತು .       ಭದ್ರಾವತಿ: ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಮತ್ತು ನೆರವು ದೊರಕಬೇಕೆಂಬ ಉದ್ದೇಶದಿಂದ ವಯೋವೃದ್ಧರು, ವಿಕಲಚೇನರು, ಅಶಕ್ತರಿಗಾಗಿ ಹಲವಾರು ಯೋಜನೆಗಳು ರೂಪುಗೊಂಡಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಕರೆ ನೀಡಿದರು.      ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ತಮ್ಮ ಕಚೇರಿ ಆವರಣದಲ್ಲಿ ೨೦೨೪-೨೫ನೇ ಸಾಲಿನ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಆಯ್ಕೆಯಾದ ತಾಲೂಕಿನ ಮೂವರು ಸೇರಿದಂತೆ ೬ ಮಂದಿ ವಿಕಲಚೇತನ ಫಲಾನುಭವಿಗಳಿಗೆ ಸಹಾಯಕ ಸಾಧನಗಳನ್ನು ವಿತರಿಸಿ ಮಾತನಾಡಿದರು.       ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿಗಳಾದ ದರ್ಶನ್ ಮತ್ತು ಶರವಣ ಹಾಗು ಮಲ್ಲಾಪುರ ನಿವಾಸಿ ಲಕ್ಷ್ಮೀ ಮತ್ತು ಶಿವಮೊಗ್ಗ ನಿವಾಸಿ ಮುನಿಯಪ್ಪ ಒಟ್ಟು ೪ ವಿಕಲಚೇತನರಿಗೆ ತ್ರಿಚಕ್ರ ವಾಹನ...

ಪ್ರಗತಿಪರ ಚಿಂತಕ, ಹೋರಾಟಗಾರ ಡಿ.ಸಿ ಮಾಯಣ್ಣ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ : ಬಿ.ಕೆ ಮೋಹನ್

Image
"ಐ ಲವ್ ಯೂ ನಮ್ಮ ಭದ್ರಾವತಿ" ನಾಮಫಲಕ  ಶಾಸಕ ಸಂಗಮೇಶ್ವರ್ ಅನಾವರಣ  ಭದ್ರಾವತಿಯಲ್ಲಿ ಅಪ್ಪರ್‌ಹುತ್ತಾ ವೃತ್ತಕ್ಕೆ ``ಕಾಮ್ರೇಡ್ ಮಾಯಣ್ಣ ವೃತ್ತ'' ಹೆಸರು ನಾಮಕರಣ ಹಾಗೂ "ಐ ಲವ್ ಯೂ ನಮ್ಮ ಭದ್ರಾವತಿ" ಶಾಸಕ ಬಿ.ಕೆ.ಸಂಗಮೇಶ್ವರ್ ಉದ್ಘಾಟಿದರು.      ಭದ್ರಾವತಿ; ನಗರದಲ್ಲಿ ಕಾರ್ಮಿಕ ಮುಖಂಡ, ಪ್ರಗತಿಪರ ಚಿಂತಕ ಡಿ.ಸಿ ಮಾಯಣ್ಣರವರು ಸ್ವಾಭಿಮಾನದ ಬದುಕು ನಡೆಸುವ ಮೂಲಕ ಕಾರ್ಮಿಕರ ಅನೇಕ ಸಮಸ್ಯೆಗಳಿಗೆ ಹೋರಾಟದ ಮೂಲಕ ನ್ಯಾಯ ದೊರಕಿಸಿಕೊಟ್ಟಿದ್ದರು ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ನಗರದ ವಾರ್ಡ್ ನಂ.೨ರ ವ್ಯಾಪ್ತಿಯ ಅಪ್ಪರ್‌ಹುತ್ತಾ ವೃತ್ತಕ್ಕೆ "ಕಾಮ್ರೇಡ್ ಮಾಯಣ್ಣ ವೃತ್ತ" ಹೆಸರು ನಾಮಕರಣ ಹಾಗೂ ``ಐ ಲವ್ ಯೂ ನಮ್ಮ ಭದ್ರಾವತಿ" ನಾಮಫಲಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.    ಡಿ.ಸಿ ಮಾಯಣ್ಣನವರು ಕಾರ್ಮಿಕ ವರ್ಗಕ್ಕೆ ಮಾತ್ರವಲ್ಲ ಕ್ಷೇತ್ರದ ಶಾಸಕರು ಸೇರಿದಂತೆ ಪ್ರತಿಯೊಬ್ಬರಿಗೂ ಮಾರ್ಗದರ್ಶಕರಾಗಿದ್ದರು. ನಗರದಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲೆಂದು ಅಪ್ಪರ್‌ಹುತ್ತಾ ವೃತ್ತಕ್ಕೆ ``ಕಾಮ್ರೇಡ್ ಮಾಯಣ್ಣ ವೃತ್ತ'' ಹೆಸರು ನಾಮಕರಣ ಮಾಡಲಾಗಿದೆ ಎಂದರು      ಸಹೋದರ ಬಿ.ಕೆ ಸಂಗಮೇಶ್ವರ್ ೩ ಬಾರಿ ಶಾಸಕರಾಗಿ ಆಯ್ಕೆಯಾದರೂ ಸರ್ಕಾರ ನಮ್ಮದಾಗಿರದ ಕಾರಣ ಕ್ಷೇತ್ರದ ಅಭಿವೃದ್ದಿ ಸಾಧ್ಯವಾ...

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು : ೨೩ ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ

Image
ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಚನ್ನಪ್ಪ ಆಗ್ರಹ  ಚನ್ನಪ್ಪ       ಭದ್ರಾವತಿ: ಬಿಜೆ.ಪಿ ಸರ್ಕಾರದ ಅಧಿಕಾರದ ಅವಧಿಯಲ್ಲಿ ಹಲವು ಬಾರಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಹಿಂದೆ ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದೆ. ಆದರೆ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಇದೀಗ ಪುನಃ ಸಿಬಿಐ ತನಿಖೆಗೆ ವಹಿಸಲಾಗಿದ್ದು, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ನಾಟಕವಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ ಆರೋಪಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಇದರ ಹೊಣೆಯನ್ನು ಕೇಂದ್ರ ಸರ್ಕಾರ ಹೊರುವ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಕ್ಷದ ಮೂಲಕ ಆಗ್ರಹಿಸಿದ್ದಾರೆ.       ವೈದ್ಯಕೀಯ ಶಿಕ್ಷಣ ಪ್ರವೇಶಾತಿಗೆ ಮೇ.೩, ೨೦೨೬ರಂದು ನಡೆದ ನೀಟ್ ಪರೀಕ್ಷೆಯನ್ನು ದೇಶದ ೨೩ ಲಕ್ಷ ವಿದ್ಯಾರ್ಥಿಗಳು ಎದುರಿಸಿದ್ದು, ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದೀಗ ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ರದ್ದು ಪಡಿಸುವ ಮೂಲಕ ದೇಶದ ೨೩ ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆಯಲ್ಲಿ ಚಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.       ವಿರ್ದ್ಯಾಥಿಗಳು ಹಗಲು-ರಾತ್ರಿ ...

ಹಿಂದೂ ಧರ್ಮಕ್ಕೆ ಮರಳಿದ ಯುವತಿ : ಮೇ.೨೪ರಂದು ವಿವಾಹ

Image
ಹಿಂದೂ ಧರ್ಮದ ಯುವಕನನ್ನು ಮದುವೆಯಾಗುತ್ತಿರುವ ಕ್ರೈಸ್ತ ಧರ್ಮದ ಯುವತಿಯನ್ನು ಗುರುವಾರ ಮರಳಿ ಮಾತೃ ಧರ್ಮಕ್ಕೆ ಕರೆತರುವಲ್ಲಿ ಭದ್ರಾವತಿ ವಿಶ್ವ ಹಿಂದೂ ಪರಿಷತ್ ಯಶಸ್ವಿಯಾಗಿದೆ.       ಭದ್ರಾವತಿ: ಹಿಂದೂ ಧರ್ಮದ ಯುವಕನನ್ನು ಮದುವೆಯಾಗುತ್ತಿರುವ ಕ್ರೈಸ್ತ ಧರ್ಮದ ಯುವತಿಯನ್ನು ಗುರುವಾರ ಮರಳಿ ಮಾತೃ ಧರ್ಮಕ್ಕೆ ಕರೆತರುವಲ್ಲಿ ವಿಶ್ವ ಹಿಂದೂ ಪರಿಷತ್ ಯಶಸ್ವಿಯಾಗಿದೆ.       ನಗರಸಭೆ ವ್ಯಾಪ್ತಿಯ ಸೀಗೇಬಾಗಿ, ಹನುಮಂತನಗರದ ಬಡ ಕುಟುಂಬದ ನಿವಾಸಿಯಾಗಿರುವ ಯುವತಿ ತಾಲೂಕಿನ ಅಂತರಗಂಗೆ ಕೆ.ಎಚ್ ನಗರ ನಿವಾಸಿ ಎಂ. ಶಿವಕುಮಾರ್‌ನನ್ನು ಪ್ರೀತಿಸುತ್ತಿದ್ದು, ಇಬ್ಬರು ವಿವಾಹವಾಗಲು ಬಯಸಿ ಉಚಿತ ಸಾಮೂಹಿಕ ವಿವಾಹದಲ್ಲಿ ಅವಕಾಶ ಕಲ್ಪಿಸಿಕೊಡುವಂತೆ ವಿಶ್ವ ಹಿಂದೂ ಪರಿಷತ್‌ಗೆ ಕೋರಿದ್ದರು.       ವಿಶ್ವ ಹಿಂದೂ ಪರಿಷತ್ ವಿವಾಹವನ್ನು ಹಿಂದೂ ಧರ್ಮದ ಸಂಪ್ರದಾಯದಂತೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಯುವತಿಗೆ ಹಿಂದೂ ಧರ್ಮ ಸ್ವೀಕರಿಸುವಂತೆ ತಿಳಿಸಿದ್ದರು.       ಯುವತಿಯ ಕುಟುಂಬದವರು ಮೂಲತಃ ಹಿಂದೂ ಧರ್ಮದವರಾಗಿದ್ದು, ಯಾವುದೋ ಕಾರಣಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಯುವತಿಗೆ ತಾಯಿ ಮಾತ್ರ ಇದ್ದು, ಯುವತಿ ಸ್ವಯಂ ಪ್ರೇರಣೆಯಿಂದ ಹಿಂದೂ ಧರ್ಮಕ್ಕೆ ಮರಳುವುದಾಗಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಜನ್ನಾಪುರದ ಶ್ರೀ ಮಹಾ...

ಉತ್ತಮ ಮಾರ್ಗದಿಂದ ಮನುಷ್ಯನ ಜೀವನ, ವ್ಯಕ್ತಿತ್ವ ನಿರ್ಮಾಣ : ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ

Image
ಭದ್ರಾವತಿ ಸಿದ್ದಾರೂಢ ನಗರದ ನಿವಾಸಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯನವರ ನಿವಾಸದಲ್ಲಿ ೭೦ನೇ ವರ್ಷದ ಭೀಮರಥ ಶಾಂತಿ ಹಾಗು ಬಿ.ಆರ್ ಸುಮುಖ ಮತ್ತು ಎನ್.ಜಿ ಕುಂದನ್‌ರವರ ಲಿಂಗ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಇಷ್ಟಲಿಂಗ ಪೂಜಾ ಕಾರ್ಯಕ್ರಮದದಲ್ಲಿ ಸಿದ್ದಲಿಂಗಯ್ಯ-ನಾಗರತ್ನ ದಂಪತಿ ಸನ್ಮಾನಿಸಿ ವಿವಿಧ ಮಠಗಳ ಮಠಾಧೀಶರು ಆಶೀರ್ವದಿಸಿದರು.       ಭದ್ರಾವತಿ: ಮನುಷ್ಯನ ಜೀವನ ಮತ್ತು ವ್ಯಕ್ತಿತ್ವ ಆತನ ನಡೆ, ನುಡಿ, ಆಚಾರ-ವಿಚಾರ, ಕರ್ಮ ಕಾರ್ಯಗಳನ್ನು ಬಿಂಬಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಉತ್ತಮ ಮಾರ್ಗದಲ್ಲಿ ಮುನ್ನಡೆಯಬೇಕೆಂದು ಎಡೆಯೂರು ಬಾಳೆಹೊನ್ನೂರು ಶಾಖಾ ಮಠದ ಷ.ಬ್ರ. ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿಯವರು ಕರೆ ನೀಡಿದರು.      ಶ್ರೀಗಳು ಸಿದ್ದಾರೂಢ ನಗರದ ನಿವಾಸಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯನವರ ನಿವಾಸದಲ್ಲಿ ಏರ್ಪಡಿಸಲಾಗಿದ್ದ ೭೦ನೇ ವರ್ಷದ ಭೀಮರಥ ಶಾಂತಿ ಹಾಗು ಬಿ.ಆರ್ ಸುಮುಖ ಮತ್ತು ಎನ್.ಜಿ ಕುಂದನ್‌ರವರ ಲಿಂಗ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಇಷ್ಟಲಿಂಗ ಪೂಜಾ ಕಾರ್ಯಕ್ರಮದದಲ್ಲಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.      ನಾವು ನಮ್ಮ ಜೀವನದಲ್ಲಿ ಧರ್ಮದ ಆಚರಣೆಗಳನ್ನು ಮಾಡಿದಾಗ ಶಾಂತಿ ನೆಮ್ಮದಿಯಿಂದ ಕೂ...

ಕ್ರೈಸ್ತ ಮುಖಂಡ ಶಾಜಿ ನಿಧನ

Image
ಶಾಜಿ       ಭದ್ರಾವತಿ: ನಗರದ ದೊಣಬಘಟ್ಟ ರಸ್ತೆ, ಕವಲಗುಂದಿ ನಿವಾಸಿ, ಕ್ಯಾಥೋಲಿಕ್ ಕ್ರೈಸ್ತ ಸಮಾಜದ ಮುಖಂಡ ಶಾಜಿ(೫೪) ಮಂಗಳವಾರ ನಿಧನ ಹೊಂದಿದರು.       ಪತ್ನಿ, ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ನ್ಯೂಟೌನ್ ಬೈಪಾಸ್ ರಸ್ತೆ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ನೆರವೇರಿಸಲಾಯಿತು. ಮೂಲತಃ ಕೇರಳದವರಾದ ಶಾಜಿ ನಗರಸಭೆ ೩ನೇ ವಾರ್ಡ್ ಸದಸ್ಯ ಎ. ಜಾರ್ಜ್‌ರವರ ಸಹೋದರಿಯನ್ನು ಮದುವೆಯಾಗಿದ್ದರು. ತಾಲೂಕು ಪಂಚಾಯಿತಿ ಸಮೀಪದ ನಿರ್ಮಲ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.       ಶಾಜಿಯವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಪರವಾನಗಿ ಭೂಮಾಪಕರು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ

Image
ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ       ಭದ್ರಾವತಿ:  ಒಂದು ಬಾರಿ ವಿಶೇಷ ನೇಮಕಾತಿ ಉಪಕ್ರಮದಲ್ಲಿ ಸಕ್ರಮಗೊಳಿಸುವ ಸಂಬಂಧ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರದಲ್ಲಿ ಭಾಗವಹಿಸಿರುವ ಪರವಾನಗಿ ಭೂಮಾಪಕರುಗಳು ತಕ್ಷಣ ಕರ್ತವ್ಯಕ್ಕೆ ಹಾಜರುವಂತೆ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ಸೂಚಿಸಿದ್ದಾರೆ.       ಪರವಾನಗಿ ಭೂಮಾಪಕರು ಕಳೆದ ಕೆಲವು ತಿಂಗಳಿನಿಂದ ಮುಷ್ಕರದಲ್ಲಿ ತೊಡಗಿಸಿಕೊಂಡು ಕರ್ತವ್ಯಕ್ಕೆ ಹಾಜರಾಗದಿರುವುದನ್ನು ಖಂಡಿಸಿ ಹಾಗು ಭೂ ದಾಖಲೆಗಳ ಸಂಬಂಧ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಒಂದೆಡೆ ಹೋರಾಟ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಒಂದೆಡೆ ಹೋರಾಟಕ್ಕೆ ಸ್ಪಂದನೆ ವ್ಯಕ್ತವಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಬೆಂಗಳೂರು, ಆಯುಕ್ತರು ಈ ಸಂಬಂಧ ಮೇ.೧೧ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.    ಕರ್ತವ್ಯಕ್ಕೆ ಹಾಜರಾಗದೇ ಅಳತೆ ಕೆಲಸ ನಿರ್ವಹಿಸದೇ ಪರವಾನಗಿ ಭೂ. ಮಾಪಕರು ಸರ್ಕಾರದ ವಿರುದ್ಧ ಫೆ.೨೭ರಿಂದ ಈವರೆಗೂ ಮುಷ್ಕರ ಕೈಗೊಂಡಿರುವುದರಿಂದ ರೈತರಿಗೆ ಹಾಗೂ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗಿದೆ....

ತಳ್ಳಿಕಟ್ಟೆ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ : ಲಕ್ಷಾಂತರ ರು. ಹಾನಿ

Image
ಸ್ಥಳಕ್ಕೆ ಶಾಸಕ ಸಂಗಮೇಶ್ವರ್ ಭೇಟಿ, ಸ್ಥಳದಲ್ಲಿಯೇ ೫೦ ಸಾವಿರ ರು. ನೆರವು  ಭದ್ರಾವತಿ ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ.       ಭದ್ರಾವತಿ : ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ.       ಗ್ರಾಮದ ನಿವಾಸಿ ಹಾಲಪ್ಪರವರ ಶ್ರೀ ಏಳು ಕೋಟಿ ನಿಲಯದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದ ಮೆನೆಯ ಮೇಲ್ಛಾವಣಿ ಹಾಗು ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.       ಭದ್ರಾವತಿ  ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರ...

ಖಾಸಗಿ ಸರ್ವೆಯರ್‌ಗಳಿಂದ ನಿರ್ಲಕ್ಷ್ಯತನ : ರೈತರ ಸಾವಿರಾರು ಅರ್ಜಿಗಳು ಬಾಕಿ

Image
ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ, ಮನವಿ  ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಂಡು ಸರ್ಕಾರಕ್ಕೆ ಉಪತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.        ಭದ್ರಾವತಿ: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು.       ಮಂಗಳವಾರ ತಾಲೂಕು ಕಛೇರಿ ಮುಂಭಾಗ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹದ ನೇತೃತ್ವವಹಿಸಿ ಮಾತನಾಡಿದರು. ತಿಂಗಳುಗಟ್ಟಲೆ ಕೆಲಸಕ್ಕೆ ಹಾಜರಾಗದೆ ರೈತರ ಜಮೀನುಗಳನ್ನು ಸರ್ವೆ ಮಾಡದೆ ನಿರ್ಲಕ್ಷ್ಯವಹಿಸಿರುವ ಕಾರಣ ಸರ್ವೆ ಮಾಡಿಕೊಡಲು ಸಲ್ಲಿ...

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ : ಮೇ.೧೫ರವರೆಗೆ ಪ್ರವೇಶ ವಿಸ್ತರಣೆ

Image
     ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ  2026-27   ನೇ ಸಾಲಿನ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ ಯೋಜನೆ ಅಡಿಯಲ್ಲಿ)  On line  ಮುಖಾಂತರ ಅರ್ಜಿ ಸಲ್ಲಿಸಲು ಮೇ. 15 ರವರೆಗೆ ವಿಸ್ತರಿಸಲಾಗಿದೆ.      ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶ ಪಡೆಯಲು ಮೇ.೧೫ರವರೆಗೆ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗು ಅನುತ್ತೀರ್ಣ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರವೇಶ ಬಯಸುವಂತಹ ವಿದ್ಯಾರ್ಥಿಗಳು  Web:www.cite.karnataka.gov.in  ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರನ್ನು ಸಂಪರ್ಕಿಸುವುದು. ದೂರವಾಣಿ ಸಂಖ್ಯೆ:  08282-200080, 9980129595, 9880085914 ಕ್ಕೆ ಕರೆ ಮಾಡಬಹುದಾಗಿದೆ.

ಜನಪದ ಹುಟ್ಟಿದ್ದು ಹೆಣ್ಣಿಂದ : ಡಾ. ಸಾಸ್ವೆಹಳ್ಳಿ ಸತೀಶ್

Image
ಎರಡು ದಿನಗಳ ಜನಪದ ಗೀತೆಗಳ ಕಲಿಕಾ ಶಿಬಿರ ಭದ್ರಾವತಿ ತಾಲೂಕಿನ ಅಂತರಗಂಗೆ ಸಮುದಾಯ ಭವನದಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ  ಎರಡು ದಿನಗಳ ಜನಪದ ಗೀತೆಗಳ ಕಲಿಕಾ ಶಿಬಿರ  ಆಯೋಜಿಸಲಾಗಿತ್ತು.      ಭದ್ರಾವತಿ :  ಜನಪದ ಹುಟ್ಟಿದ್ದೇ ಹೆಣ್ಣು ಮಕ್ಕಳಿಂದ. ಜನಪದ ನಮ್ಮ ಬದುಕು, ನಮ್ಮ ಸಂಪ್ರದಾಯ, ನಮ್ಮ ಸಂಸ್ಕಾರ, ನಮ್ಮ ಸಂಸ್ಕೃತಿಯಾಗಿದೆ ಎಂದು ತಾಲೂಕಿನ ಅಂತರಗಂಗೆ ಕೆಪಿಎಸ್ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು.        ಅವರು ಅಂತರಗಂಗೆ ಸಮುದಾಯ ಭವನದಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಆಯೋಜಿಸಲಾಗಿದ್ದ ಎರಡು ದಿನ ಜನಪದ ಗೀತೆಗಳ ಕಲಿಕಾ ಶಿಬಿರ ಉದ್ಘಾಟಿಸಿ ಮಾತನಾಡಿದರು.  .  ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ತನ್ನ ನೋವಿಗಾಗಿ ಹಾಡಿದ ಪದಗಳು, ತನ್ನ ಸಂತೋಷಕ್ಕಾಗಿ ಹಾಡಿದ ಪದಗಳು, ವ್ಯವಸಾಯ ಹಾಗೂ ಗದ್ದೆ ಕೆಲಸ ಮಾಡುವಾಗ ಹಾಡಿದ ಹಾಡುಗಳೇ ಜನಪದ ಹಾಡುಗಳು. ಈ ಹಿನ್ನಲೆಯಲ್ಲಿ ಜನಪದ ಹುಟ್...

ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳು : ಜೆಡಿಎಸ್‌ನಿಂದ ನಗರಸಭೆ ಮುಂಭಾಗ ಪ್ರತಿಭಟನೆ

Image
ತಕ್ಷಣ ಕ್ರಮ ಕೈಗೊಳ್ಳಲು ಪೌರಾಯುಕ್ತ ಕೆ.ಎನ್ ಹೇಮಂತ್‌ಗೆ ಮನವಿ  ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು, ತಕ್ಷಣ ಸಮಸ್ಯೆಗಳನ್ನು ಪರಿಹರಿಸಿ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಆಗ್ರಹಿಸಿ ಸೋಮವಾರ ಜಾತ್ಯಾತೀತ ಜನತಾದಳ ತಾಲೂಕು ಘಟಕದಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತ ಕೆ.ಎನ್ ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ :  ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು, ತಕ್ಷಣ ಸಮಸ್ಯೆಗಳನ್ನು ಪರಿಹರಿಸಿ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಆಗ್ರಹಿಸಿ ಸೋಮವಾರ ಜಾತ್ಯಾತೀತ ಜನತಾದಳ ತಾಲೂಕು ಘಟಕದಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತ ಕೆ.ಎನ್ ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಯಿತು.    ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಹುತ್ತಾವರೆಗೆ ರಸ್ತೆ ಮಧ್ಯೆ ಹೊಸದಾಗಿ ವಿಭಜಕ ಗೋಡೆಯನ್ನು (ಡಿವೈಡರ್ ವಾಲ್) ನಿರ್ಮಾಣ ಮಾಡಿದ್ದು, ಅದು ವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವುದಿಲ್ಲ. ಅಷ್ಟೇ ಅಲ್ಲದೇ ಇತ್ತೀಚೆಗೆ ವಿಭಜಕ ಮಾರ್ಗದಲ್ಲಿ ಬೀದಿದೀಪ ಆಳವಡಿಸಲು ಕಾಂಕ್ರೀಟ್ ಬೆಡ್ ಹಾಕಲಾಗಿದ್ದು, ಅದು ಎರಡೂ ಬದಿಯಲ್ಲಿ ಡಿವೈಡರ್ ಅಳತೆ ಮೀರಿ ಚಾಚಿರುತ್ತದೆ ಇದರಿಂದಾಗಿ ಅಪಘಾತಗಳಾಗುತ್ತಿದ್ದು, ತಕ್ಷಣ ಸರಿಪಡಿಸುವುದು.  ನೀರಿನ ತೆರಿಗೆ ಮಾದರಿಯಲ್ಲಿ ಆಸ್ತಿತೆರಿಗೆ ಪಾವ...

ಅಂಬೇಡ್ಕರ್‌ರವರು ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನ ರಕ್ಷಿಸಿ ಬಿ.ಕೆ ಮೋಹನ್

Image
ಭದ್ರಾವತಿ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ ಬಾಪೂಜಿ ಹರಿಜನ (ಮಾದರ) ಸೇವಾ ಸಂಘದಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನೋತ್ಸವ ಮತ್ತು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ೧೧೯ನೇ ಜನ್ಮದಿನೋತ್ಸವ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.      ಭದ್ರಾವತಿ : ಭಾರತರತ್ನ, ಶ್ರೇಷ್ಠ ಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನ ರಕ್ಷಸಿ ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ನಗರದ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ ಬಾಪೂಜಿ ಹರಿಜನ (ಮಾದರ) ಸೇವಾ ಸಂಘದಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನೋತ್ಸವ ಮತ್ತು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ೧೧೯ನೇ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.       ಅಂಬೇಡ್ಕರ್‌ರವರು ಈ ದೇಶಕ್ಕೆ ನೀಡಿರುವ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನದಿಂದಾಗಿ ನಾವೆಲ್ಲರೂ ಇಂದು ನೆಮ್ಮದಿಯಾಗಿ ಬದುಕಲು ಸಾಧ್ಯವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅ...