ಭದ್ರಾವತಿ ತಾಲೂಕಿನ ಮೇದಾರ ಸಮಾಜದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಸಂಕಷ್ಟಕ್ಕೆ ಒಳಗಾಗಿರುವವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ: ತಾಲೂಕಿನ ಮೇದಾರ ಸಮಾಜದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಕುಕ್ಕುವಾಡೇಶ್ವರಿ ದೇವಸ್ಥಾನದಲ್ಲಿ ಸಂಕಷ್ಟಕ್ಕೆ ಒಳಗಾಗಿರುವವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ತಹಸೀಲ್ದಾರ್ ಸೋಮಶೇಖರ್, ನಗರಸಭೆ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು. ಸಮಾಜದ ಪ್ರಮುಖರಾದ ಚಂದ್ರಶೇಖರ್, ಕೂಡ್ಲಿಗೆರೆ ಎಸ್ ಮಹದೇವ, ಕೃಷ್ಣಪ್ಪ, ನರಸಿಂಹಯ್ಯ, ಎಚ್. ವಿಶ್ವನಾಥ್, ಭಾಗ್ಯಮ್ಮ(ಶಿಕ್ಷಕರು), ಬಿ.ಎಸ್ ಮಂಜುನಾಥ್ ಮತ್ತು ಸಿ. ಮಂಜುನಾಥ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ದೇವಸ್ಥಾನದಲ್ಲಿ ಅಮ್ಮನವರಿಗೆ ಈ ಸಂಬಂಧ ವಿಶೇಷ ಪೂಜೆ ಸಲ್ಲಿಸಲಾಯಿತು.
No comments:
Post a Comment