ಭದ್ರಾವತಿ, ಮೇ. ೧೪: ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಹೊಸಮನೆ ರಸ್ತೆ ಅಗಲೀಕರಣ ಕಾರ್ಯ ಕೈಗೊಂಡಿರುವ ಕಾರಣ ರಸ್ತೆಯ ಇಕ್ಕೆಲಗಳಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ.15ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೊಸಮನೆ ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಕುವೆಂಪು ನಗರ, ಹನುಮಂತ ನಗರ, ತ್ಯಾಗರಾಜ ನಗರ, ವಿಜಯ ನಗರ, ಅಶ್ವತ್ಥ ನಗರ, ಕಬಳಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಹೊಸಮನೆ ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಕುವೆಂಪು ನಗರ, ಹನುಮಂತ ನಗರ, ತ್ಯಾಗರಾಜ ನಗರ, ವಿಜಯ ನಗರ, ಅಶ್ವತ್ಥ ನಗರ, ಕಬಳಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment