ಶನಿವಾರ, ಮೇ 23, 2020

ರಂಜಾನ್ : ಶಾಂತಿ ಸಭೆ

ರಂಜಾನ್ ಹಬ್ಬದ ಹಿನ್ನಲೆಯಲ್ಲಿ ನಗರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಲು ಶನಿವಾರ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. 
ಭದ್ರಾವತಿ, ಮೇ. ೨೩: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ನಗರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಲು ಶನಿವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ಈ ಬಾರಿ ದೇಶಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ  ಮುಸ್ಲಿಂ ಸಮುದಾಯದ ಪ್ರತಿಯೊಬ್ಬರು ರಂಜಾನ್ ಹಬ್ಬವನ್ನು ಮನೆಯಲ್ಲಿಯೇ ಇದ್ದು ಸರಳವಾಗಿ ಆಚರಿಸುವ ಮೂಲಕ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಲಾಯಿತು.
ಹಳೇನಗರ ಪೊಲೀಸ್ ಠಾಣಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಯಿತು. ಮುಸ್ಲಿಂ ಸಮುದಾಯದ ಪ್ರಮುಖರಾದ ಸಿ.ಎಂ ಖಾದರ್, ಜಹೀರ್‌ಜಾನ್, ಜೆಬಿಟಿ ಬಾಬು, ಹಫೀಜ್ ಉರ್ ರಹಮಾನ್, ಮುರ್ತುಜಾ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ