ಬುಧವಾರ, ಮೇ 6, 2020

ಅಪಘಾತ : ಪಾದಚಾರಿ ವೃದ್ಧ ಸಾವು

ಭದ್ರಾವತಿ: ಪಾದಚಾರಿ ವೃದ್ಧರೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ನ್ಯೂಟೌನ್ ಶ್ರೀ ಸತ್ಯ ಸಾಯಿ ಬಾಬಾ ಮಂದಿರ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಟಿ.ಎನ್ ತಿಮ್ಮಪ್ಪ(೮೦) ಮೃತಪಟ್ಟಿದ್ದು, ಇವರು ಬೆಳಿಗ್ಗೆ ೮.೩೦ರ ಸಮಯದಲ್ಲಿ ವಾಯು ವಿಹಾರಕ್ಕೆ ತೆರಳಿದ್ದಾಗ ಶ್ರೀ ಸತ್ಯ ಸಾಯಿ ಬಾಬಾ ಮಂದಿರದ ಶಾಲಾ ಆಟದ ಮೈದಾನ ಎದುರು ಘಟನೆ ನಡೆದಿದೆ. ತಕ್ಷಣ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನ ಸವಾರ ಸಹ ತೀವ್ರ ಗಾಯಗೊಂಡಿದ್ದು, ಈ ಸಂಬಂಧ ಮೃತರ ಪುತ್ರ ಎ.ಟಿ ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ