Thursday, May 28, 2020

ಗೊಂದಿ ನಾಲೆಗೆ ಹಾರಿ ತಾಯಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ

ಭದ್ರಾವತಿಯಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತದೇಹಗಳನ್ನು ಗುರುವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಿಂದಿರುಗಿಸಲಾಯಿತು. 
ಭದ್ರಾವತಿ, ಮೇ. ೨೮: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 
ನಗರಸಭೆ ವ್ಯಾಪ್ತಿಯ ನೆಹರು ನಗರ ನಿವಾಸಿ ಚಂದ್ರಕಲಾ(೩೩), ಹೆಣ್ಣು ಮಕ್ಕಳಾದ ಶ್ವೇತಾ(೮) ಮತ್ತು ರೋಹಿಣಿ(೪) ಮೃತಪಟ್ಟಿದ್ದಾರೆ. ಬುಧವಾರ ಸಂಜೆ ಕೋಡಿಹಳ್ಳಿ ಗ್ರಾಮದ ಗೊಂದಿ ನಾಲೆಗೆ ಹಾರಿದ್ದು, ಇದನ್ನು ಸ್ಥಳೀಯರು ಗಮನಿಸಿ ಹುಡುಕಾಟ ನಡೆಸಿದ ಹಿನ್ನಲೆಯಲ್ಲಿ ೩ ಮೃತ ದೇಹಗಳು ಪತ್ತೆಯಾಗಿವೆ. 
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಮೃತದೇಹಗಳ ಶವ ಪರೀಕ್ಷೆ ನಡೆದು ವಾರಸುದಾರರಿಗೆ ಹಿಂದಿರುಗಿಸಲಾಯಿತು. 
ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪತಿ ವೆಂಕಟೇಶ್ ವಿರುದ್ಧ ದೂರು ದಾಖಲಾಗಿದೆ ಎಂದು ವಾರ್ಡ್ ನಗರಸಭೆ ಹಿರಿಯ ಸದಸ್ಯ ಆರ್. ಕರುಣಾಮೂರ್ತಿ ತಿಳಿಸಿದ್ದಾರೆ. 


No comments:

Post a Comment