ಭದ್ರಾವತಿ ತಾಲೂಕಿನ ಮೈದೊಳಲು, ಆನವೇರಿ, ಮಲ್ಲಾಪುರ ಗ್ರಾಮಗಳಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್. ಗಾಯತ್ರಿ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ಕೋಟ್ಬಾ ಕಾಯ್ದೆಯಡಿ ದಾಳಿ ಶನಿವಾರ ನಡೆಸಲಾಯಿತು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಟರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರು ಹಾಗೂ ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
ಭದ್ರಾವತಿ, ಮೇ. ೯: ಕೋಟ್ಬಾ ಕಾಯ್ದೆಯಡಿ ತಾಲೂಕಿನ ಗ್ರಾಮೀಣ ಪ್ರದೇಶದ ಅಂಗಡಿ ಮುಂಗಟ್ಟುಗಳ ಮೇಲೆ ಶನಿವಾರ ದಾಳಿ ನಡೆಸಿ ಒಟ್ಟು ೧೬ ಪ್ರಕರಣಗಳನ್ನು ದಾಖಲಿಸಿಕೊಂಡು ೨,೮೦೦ ರು. ದಂಡ ವಸೂಲಾತಿ ಮಾಡಲಾಗಿದೆ.
ತಾಲೂಕಿನ ಮೈದೊಳಲು, ಆನವೇರಿ, ಮಲ್ಲಾಪುರ ಗ್ರಾಮಗಳಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್. ಗಾಯತ್ರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್, ಕಿರಿಯ ಆರೋಗ್ಯ ಸಹಾಯಕರಾದ ಆನಂದಮೂರ್ತಿ, ಉಮೇಶ್ ಹಾಗೂ ಹೊಳೆಹೊನ್ನೂರು ಪೊಲೀಸ್ ಠಾಣೆ ಸಹಾಯಕ ಠಾಣಾಧಿಕಾರಿ, ಕೃಷ್ಣ ನಾಯ್ಕ, ತಂಬಾಕು ನಿಯಂತ್ರಣ ವಿಭಾಗ ಹೇಮಂತ್ರಾಜ್ ಅರಸ್, ಚಾಲಕರಾದ ಪ್ರಶಾಂತ್ ಮತ್ತು ಭರತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಟರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರು ಹಾಗೂ ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
No comments:
Post a Comment