Wednesday, May 6, 2020

ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ಬುಧವಾರದಿಂದ ದಂಡ ವಿಧಿಸಲಾಗುತ್ತಿದೆ.
ಭದ್ರಾವತಿ, ಮೇ. ೬: ಸರ್ಕಾರದ ಆದೇಶದಂತೆ ನಗರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಸದವರು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ಬುಧವಾರದಿಂದ ತಂಡ ವಿಧಿಸಲಾಗುತ್ತಿದೆ.
ನಗರಸಭೆ ಸೇರಿದಂತೆ ಸರ್ಕಾರಿ ಕಛೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಬರುವ ಸಾರ್ವಜನಿಕರಿಗೆ ಹಾಗೂ ರಸ್ತೆಗಳಲ್ಲಿ ವಾಹನ ಚಲಾಯಿಸುವವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ೧೦೦ ರು. ದಂಡ ವಿಧಿಸಲಾಗುತ್ತಿದೆ. ಪೌರಾಯುಕ್ತ ಮನೋಹರ್ ನೇತೃತ್ವದಲ್ಲಿ ಪರಿಸರ ಅಭಿಯಂತರ ರುದ್ರೇಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಗೋವಿಂದ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ಕೈಗೊಂಡು ದಂಡ ವಿಧಿಸುತ್ತಿದೆ.
ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಸರ್ಕಾರದ ಆದೇಶದಂತೆ  ದಂಡ ವಿಧಿಸಲಾಗುತ್ತಿದ್ದು, ಸಾರ್ವಜನಿಕರು ಕೊರೋನಾ ವೈರಸ್ ನಿರ್ಮೂಲನೆಗೆ ಸಹಕರಿಸುವಂತೆ ಕೋರಲಾಗಿದೆ. 

No comments:

Post a Comment