ಭದ್ರಾವತಿ ನಗರಸಭೆ ವ್ಯಾಪ್ತಿಯ ಉಂಬ್ಳೆಬೈಲ್ ರಸ್ತೆಯಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಕ್ವಾರಂಟೈನ್ ಆಗಿ ಬಳಕೆ ಮಾಡಿಕೊಳ್ಳುವುದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಭದ್ರಾವತಿ, ಮೇ. ೧೦: ನಗರಸಭೆ ವ್ಯಾಪ್ತಿಯ ಉಂಬ್ಳೆಬೈಲ್ ರಸ್ತೆಯಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಹೊರ ರಾಜ್ಯಗಳಿಂದ ಬಂದ ತಾಲೂಕಿನ ನಿವಾಸಿಗಳನ್ನು ನಿಗಾದಲ್ಲಿರಿಸಲು ಕ್ವಾರಂಟೈನ್ ಆಗಿ ಸಿದ್ದಗೊಳಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ನಿವಾಸಿಗಳು ರಾತ್ರೋರಾತಿ ಏಕಾಏಕಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ನಗರಸಭೆ ಸದಸ್ಯ ಗುಣಶೇಖರ್, ಮುಖಂಡರಾದ ಉಮೇಶ್ ಸೇರಿದಂತೆ ಇನ್ನಿತರರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಯಾವುದೇ ಕಾರಣಕ್ಕೂ ವಿದ್ಯಾರ್ಥಿ ನಿಲಯಗಳನ್ನು ಬಳಸಿಕೊಳ್ಳಬಾರದು. ಜನವಸತಿ ಪ್ರದೇಶವಾಗಿರುವ ಕಾರಣ ಬೇರೆಡೆ ಕ್ವಾರಂಟೈನ್ ತೆರೆಯುವಂತೆ ಆಗ್ರಹಿಸಿದರು. ಜಿಲ್ಲಾಡಳಿತ ಬೇರೆಡೆ ಕ್ವಾರಂಟೈನ್ ತೆರೆಯುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
Visl hospitalnalli ಉಪಯೋಗಿಸಬಹುದು visl guest house kuuda ಬಳಸಬಹುದು .
ReplyDeleteMpm ವಸತಿ ಗೃಹ ಕೂಡಾ ಬಳಸಬಹುದು .