Friday, May 1, 2020

ಕಡುಬಡವರಿಗೆ ಸ್ವಂತ ಖರ್ಚಿನಲ್ಲಿ ದಿನಸಿ ಸಾಮಗ್ರಿ ವಿತರಣೆ


ಭದ್ರಾವತಿ ಜನ್ನಾಪುರದ ನಿವಾಸಿ, ಸ್ಥಳೀಯ ಮುಖಂಡರಾದ ಎ.ಜಿ ರಾಧಮ್ಮರವರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿನ ಕಡು ಬಡವರನ್ನು ಗುರುತಿಸಿ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ೨೦ ಕುಟುಂಬಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಿ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. 
ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿರುವ ಪರಿಣಾಮ ಶ್ರೀಸಾಮಾನ್ಯರು ಅದರಲೂ ಕಡು ಬಡವರ ಸ್ಥಿತಿ ದಿನ ದಿಂದ ದಿನಕ್ಕೆ ಹದಗೆಡುತ್ತಿದ್ದು, ಕಡು ಬಡವರ ಸಂಕಷ್ಟಕ್ಕೆ ಸ್ಪಂದಿಸಿ ನಗರದಲ್ಲಿ ಕೆಲವು ದಾನಿಗಳು ಸ್ವಯಂ ಪ್ರೇರಣೆಯಿಂದ ನೆರವಿಗೆ ಮುಂದೆ ಬರುತ್ತಿದ್ದಾರೆ.
ನಗರದ ಜನ್ನಾಪುರದ ನಿವಾಸಿ, ಸ್ಥಳೀಯ ಮುಖಂಡರಾದ ಎ.ಜಿ ರಾಧಮ್ಮರವರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿನ ಕಡು ಬಡವರನ್ನು ಗುರುತಿಸಿ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ೨೦ ಕುಟುಂಬಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಿ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.
ಮುಂದಿನ ದಿನಗಳಲ್ಲಿ ತಮ್ಮ ಕೈಲಾದಷ್ಟು ಮಟ್ಟಿಗೆ ಬಡವರಿಗೆ ಇನ್ನೂ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಎ.ಜಿ ರಾಧಮ್ಮರವರ ಕಾರ್ಯಕ್ಕೆ ಪತಿ ಪ್ರಭಾಕರ್ ಕೈ ಜೋಡಿಸಿದ್ದಾರೆ.  

No comments:

Post a Comment