Wednesday, May 13, 2020

ಹೊರ ರಾಜ್ಯ, ಜಿಲ್ಲೆಗಳಿಂದ ಕಣ್ತಪ್ಪಿ ಬಂದವರ ಬಗ್ಗೆ ಮಾಹಿತಿ ನೀಡಿ

ಭದ್ರಾವತಿ, ಮೇ. ೧೩: ಕೊರೋನಾ ವೈರಸ್ ಹಿನ್ನಲೆಯಲ್ಲಿ ದೇಶಾದ್ಯಂತ ಘೋಷಿಸಲಾಗಿದ್ದ ಲಾಕ್‌ಡೌನ್ ಇದೀಗ ಸಡಿಲಗೊಳ್ಳುತ್ತಿದ್ದು, ಬೇರೆ ಬೇರೆ ರಾಜ್ಯ, ಜಿಲ್ಲೆಗಳಿಗೆ ತೆರಳಿದ್ದ ಕ್ಷೇತ್ರದ ನಿವಾಸಿಗಳು ಪುನಃ ಕ್ಷೇತ್ರಕ್ಕೆ ಹಿಂದಿರುಗುತ್ತಿದ್ದಾರೆ. ಕೆಲವರು ಕಾಲ್ನಡಿಗೆ ಮೂಲಕ, ಮತ್ತೆ ಕೆಲವರು ಸ್ವಂತ ವಾಹನಗಳ ಮೂಲಕ ಬರುತ್ತಿದ್ದಾರೆ. ಇವರೆಲ್ಲರ ಆರೋಗ್ಯ ತಪಾಸಣೆ ನಡೆಸುವ ಅಗತ್ಯವಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಕೆಲವರು ಕಾಲ್ನಡಿಗೆ ಮೂಲಕ, ಮತ್ತೆ ಕೆಲವರು ಸ್ವಂತ ವಾಹನಗಳ ಮೂಲಕ ಆರೋಗ್ಯ ತಪಾಸಣೆ ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಇದ್ದು, ಇವರನ್ನು ಗುರುತಿಸಿ ಆರೋಗ್ಯ ತಪಾಸಣೆ ನಡೆಸಿ ಪ್ರತ್ಯೇಕಿಸುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ, ಅಕ್ಕ-ಪಕ್ಕದ ಮನೆಗಳಿಗೆ ಯಾರಾದರೂ ಬಂದಿರುವ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ತಕ್ಷಣ ದೂರವಾಣಿ ಸಂಖ್ಯೆ ೦೮೨೮೨-೨೬೬೩೫೬ ಸಂಖ್ಯೆಗೆ ಕರೆ ಮಾಡುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.


No comments:

Post a Comment