ಭದ್ರಾವತಿ ಜನ್ನಾಪುರದಲ್ಲಿರುವ ಓಂ ಸಾಯಿ ಇಂಡಿಯನ್ ಡಿಸ್ಟ್ರಿಬ್ಯೂಟರ್ಸ್ ಗ್ರಾಹಕರಿಗೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಲು ಹೆಚ್ಚುವರಿ ಹಣ ಪಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ದೂರು ಸಲ್ಲಿಸಿ ಒತ್ತಾಯಿಸಿದ್ದಾರೆ.
ಅನಿಲ ಸಿಲಿಂಡರ್ ನಿಗದಿತ ದರಕ್ಕೆ ಪೂರೈಕೆ ಮಾಡದೆ ೭೪೩ ರು. ಇದ್ದರೆ, ೭೭೦ ರು. ಪಡೆಯಲಾಗುತ್ತಿದೆ. ಹೆಚ್ಚುವರಿಯಾಗಿ ಸುಮಾರು ೨೭ ಹೆಚ್ಚು ಪಡೆಯಲಾಗುತ್ತಿದೆ. ಆದರೆ ೭೪೩ ರು.ಗಳಿಗೆ ರಶೀದಿ ನೀಡಲಾಗುತ್ತಿದೆ. ಪ್ರಸ್ತುತ ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ಡೌನ್ ಘೋಷಿಸಿದ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲೂ ಹೆಚ್ಚುವರಿ ಹಣ ವಸೂಲಾತಿ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಮೋಹನ್ಕುಮಾರ್, ಎಚ್. ಮಂಜುನಾಥ್, ಎಸ್. ಶಿವು, ಪ್ರಕಾಶ್, ಸುಬ್ಬೇಗೌಡ, ಅಲಿಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment