Saturday, May 2, 2020

ಕೋಟ್ಪಾ ಕಾಯ್ದೆಯಡಿ ೧೨ ಪ್ರಕರಣ ದಾಖಲು : ೧,೬೮೦ ರು. ದಂಡ ವಸೂಲಾತಿ

ಭದ್ರಾವತಿಯ ವಿವಿದೆಡೆ ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು. 
ಭದ್ರಾವತಿ, ಮೇ. ೩: ನಗರದ ವಿವಿದೆಡೆ ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೧೨ ಪ್ರಕರಣಗಳನ್ನು ದಾಖಲಿಸಿಕೊಂಡು ೧,೬೮೦ ರು. ದಂಡ ವಸೂಲಾತಿ ಮಾಡಲಾಗಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದಲ್ಲಿ ತರೀಕೆರೆ ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಇನ್ನಿತರೆಡೆ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ಸರ್ವಮಂಗಳ ಹಾಗೂ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತ, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಹಾಯಕರಾದ ನೀಲೇಶ್ ರಾಜ್, ಬಿ.ವಿ ರೇವತಿ, ಆರೋಗ್ಯ ಶಿಕ್ಷಣಾಧಿಕಾರಿ ಮಧುಮತಿ ಹಾಗೂ ಕಿರಿಯ ಆರೋಗ್ಯ ಸಹಾಯಕ ಆಕಾಶ್, ತಂಬಾಕು ನಿಯಂತ್ರಣ ವಿಭಾಗದ  ಹೇಮಂತ್‌ರಾಜ್ ಅರಸ್, ಸುನೀಲ್ ಮತ್ತು ರಘು ಪಾಲ್ಗೊಂಡಿದ್ದರು.
ತಂಬಾಕು ದುಷ್ಟರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹಾಗೂ ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.

No comments:

Post a Comment