Monday, June 1, 2020

೨೦೦೩ರ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸಾಂಕೇತಿಕ ಹೋರಾಟ

ಭದ್ರಾವತಿ, ಜೂ. ೧: ಕೇಂದ್ರ ಸರ್ಕಾರ ೨೦೦೩ರ ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಿ ವಿದ್ಯುತ್ ಉತ್ಪಾದನೆ ಮತ್ತು ವಿತರಣೆ ಎರಡನ್ನು ಖಾಸಗಿಕರಣಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ನಗರದಲ್ಲಿ ಮೆಸ್ಕಾಂ ನೌಕರರು ಸೋಮವಾರ ಸಾಂಕೇತಿಕ ಹೋರಾಟ ನಡೆಸಿದರು.
ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಹೋರಾಟ ನಡೆಸಿದರು. ರಾಜ್ಯ ಸಂಘದ ಕರೆಯ ಮೇರೆಗೆ ಸ್ಥಳೀಯ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ನೇತೃತ್ವದಲ್ಲಿ ನೌಕರರು ಸಾಂಕೇತಕ್ಕೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.


No comments:

Post a Comment