Friday, June 12, 2020

ಬಿಜೆಪಿ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

ಭದ್ರಾವತಿ ಬಿಜೆಪಿ ಮಹಿಳಾ ಮೋರ್ಚಾ ನೂತನ ಅಧ್ಯಕ್ಷೆ ಕಲ್ಪನ
ಭದ್ರಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಜಯರಾಜ್ 
ಭದ್ರಾವತಿ, ಜೂ. ೧೨: ತಾಲೂಕಿನ ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನೇಮಕಗೊಂಡಿದ್ದಾರೆ. 
ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಕಲ್ಪನ, ಪ್ರಧಾನ ಕಾರ್ಯದರ್ಶಿಯಾಗಿ ಮಂಜುಳ, ಯುವ ಮೋರ್ಚಾ ಅಧ್ಯಕ್ಷರಾಗಿ ಎಂ. ವಿಜಯರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಕುಲ್ ರೇವಣಕರ್, ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಜೆ. ಸುಬ್ರಮಣಿ, ಆರ್.ಪಿ ವೆಂಕಟೇಶ್, ಎಸ್.ಸಿ ಮೋರ್ಚಾ ಅಧ್ಯಕ್ಷ ಗಣೇಶ್‌ರಾವ್, ಮುರುಳಿ, ರೈತ ಮೋರ್ಚಾ ಅಧ್ಯಕ್ಷರಾಗಿ ನಾಗರಾಜರಾವ್ ಅಂಬೋರೆ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಆರ್ ಮೋಹನ್‌ಕುಮಾರ್, ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಇಮ್ರಾನ್ ಆಲಿ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಜಾಬೀರ್ ನೇಮಕಗೊಂಡಿದ್ದಾರೆಂದು ಪಕ್ಷದ ತಾಲೂಕು ಮಂಡಲದ ಅಧ್ಯಕ್ಷ ಎಂ. ಪ್ರಭಾಕರ್ ತಿಳಿಸಿದ್ದಾರೆ. 

No comments:

Post a Comment