ಭದ್ರಾವತಿ, ಜೂ. ೨: ನಗರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ದಿ ಇಂಡಿಯನ್ ಎಕಾನೊಮಿಕ್ ಅಸೋಸಿಯೇಷನ್ ಸಹಕಾರದೊಂದಿಗೆ ಎರಡು ದಿನಗಳ ಅಂತರರಾಷ್ಟ್ರೀಯ ವೆಬಿನಾರ್(ಆನ್ ಲೈನ್ ವಿಚಾರ ಸಂಕಿರಣ) ಆಯೋಜಿಸಲಾಗಿದೆ.
ಜೂ.೪ ಮತ್ತು ೮ ರಂದು ಬೆಳಿಗ್ಗೆ ೧೧ ಗಂಟೆಯಿಂದ ‘ಕೋವಿಡ್-೧೯’ ಫಿಸ್ಕಲ್ ಮ್ಯಾನೇಜ್ಮೆಂಟ್, ವೇಸ್ ಅಂಡ್ ಚಾಲೆಂಚೆಸ್ ಅಹೆಡ್ (Covid-19 Fiscal Management Ways & Challenges ahead) ವಿಷಯ ಕುರಿತ ವಿಚಾರ ಸಂಕಿರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ಅರ್ಥಶಾಸ್ತ್ರಜ್ಞರಾದ ಪ್ರೊ. ಎನ್.ಆರ್ ಭಾನುಮೂರ್ತಿ, ಬಾಂಗ್ಲಾದೇಶದ ಪ್ರೊ. ನಜುರುಲ್ ಇಸ್ಲಾಂ, ಜಮ್ಮು ಮತ್ತು ಕಾಶ್ಮೀರದ ಪ್ರೊ. ಸುಪ್ರಾನ್ ಶರ್ಮ, ಚೈನ್ನೈನ ಪ್ರೊ. ಚಂದ್ರಮೋಹನ್ ಭಾಗವಹಿಸಲಿದ್ದಾರೆ.
ದೇಶ-ವಿದೇಶಗಳಿಂದ ಸುಮಾರು ೧೨೦ ಪ್ರಬಂಧಗಳು ಆನ್ಲೈನ್ ಮೂಲಕ ಮಂಡನೆಯಾಗಲಿವೆ. ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ ವೆಬಿನಾರ್ ಉದ್ಘಾಟಿಸಲಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿರುವರು. ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್, ಪ್ರಾಧ್ಯಾಪಕರಾದ ಡಾ. ಬಿ.ಎಂ ನಾಸಿರ್ಖಾನ್, ಪ್ರೊ. ಮೊಹಮ್ಮದ್ ನಜೀಬ್, ಡಾ. ಧನಂಜಯ, ಡಾ. ಆರ್. ಸೀಮಾ, ಡಾ. ದಾಕ್ಷಾಯಣಿ ಎಂ. ಡೋಂಗ್ರೆ, ಪ್ರೊ. ಎಸ್. ವರದರಾಜ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ.
No comments:
Post a Comment