ಭದ್ರಾವತಿ, ಜೂ. ೧೦: ತಾಲೂಕಿನ ಹಳ್ಳಿಕೆರೆಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪುರುಷ ಮತ್ತು ಮಹಿಳಾ ರೈತರಿಗೆ ಜೂಮ್ ಆಪ್ ಬಳಸಿ ಆನ್ಲೈನ್ ಮೂಲಕ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಸುಕಿನ ಜೋಳದಲ್ಲಿ ಸುಧಾರಿತ ಬೇಸಾಯ ಕ್ರಮಗಳು ಕುರಿತು ಜೂ.೧೧ರಂದು ಬೆಳಿಗ್ಗೆ ೧೧.೩೦ ರಿಂದ ೧೨.೧೫ರ ವರೆಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ಬೇಸಾಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾರಾಯಣ ಮಾವರ್ಕರ್ ಮಾಹಿತಿ ನೀಡಲಿದ್ದು, ಅಡಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವಪ್ಪನವರ್ ಜೂ.೧೨ರಂದು ಮಧ್ಯಾಹ್ನ ೩.೩೦ ರಿಂದ ೪.೧೫ರ ವರೆಗೆ ಅಡಕೆ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಬೇಸಾಯ ಕ್ರಮಗಳು ಕುರಿತು ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಮುಸುಕಿನ ಜೋಳದಲ್ಲಿ ಸುಧಾರಿತ ಬೇಸಾಯ ಕ್ರಮಗಳು ಕುರಿತು ಜೂ.೧೧ರಂದು ಬೆಳಿಗ್ಗೆ ೧೧.೩೦ ರಿಂದ ೧೨.೧೫ರ ವರೆಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ಬೇಸಾಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾರಾಯಣ ಮಾವರ್ಕರ್ ಮಾಹಿತಿ ನೀಡಲಿದ್ದು, ಅಡಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅಡಿವಪ್ಪನವರ್ ಜೂ.೧೨ರಂದು ಮಧ್ಯಾಹ್ನ ೩.೩೦ ರಿಂದ ೪.೧೫ರ ವರೆಗೆ ಅಡಕೆ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಬೇಸಾಯ ಕ್ರಮಗಳು ಕುರಿತು ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
No comments:
Post a Comment