ಗುರುವಾರ, ಜೂನ್ 18, 2020

‘ಮಾಸ್ಕ್ ದಿನ’ : ಕೊರೋನಾ ನಿರ್ಮೂಲನೆಗೆ ಸಹಕರಿಸಲು ಶಾಸಕ ಸಂಗಮೇಶ್ವರ್ ಕರೆ

ಭದ್ರಾವತಿಯಲ್ಲಿ ಗುರುವಾರ ನಗರಸಭೆ ವತಿಯಿಂದ ರಂಗಪ್ಪ ವೃತ್ತದಲ್ಲಿ ‘ಮಾಸ್ಕ್ ದಿನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. 
ಭದ್ರಾವತಿ, ಜೂ. ೧೮: ಮಹಾಮಾರಿ ಕೊರೋನಾ ವೈರಸ್ ನಿರ್ಮೂಲನೆಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು. 
ಅವರು ಗುರುವಾರ ನಗರಸಭೆ ವತಿಯಿಂದ ರಂಗಪ್ಪ ವೃತ್ತದಲ್ಲಿ ‘ಮಾಸ್ಕ್ ದಿನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 
ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಮಾಸ್ಕ್ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಬಳಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದರು. 
ನಗರಸಭೆ ಪೌರಾಯುಕ್ತ ಮನೋಹರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ನಗರಸಭೆ ಪರಿಸರ ಇಂಜಿನಿಯರ್ ರುದ್ರೇಗೌಡ, ಪೊಲೀಸ್ ನಗರ ವೃತ್ತ ನಿರೀಕ್ಷಕ ನಂಜಪ್ಪ, ಕಂದಾಯಾಧಿಕಾರಿ ಪ್ರಶಾಂತಿ, ಶಿರಸ್ತೆದಾರ್ ಮಂಜಾನಾಯ್ಕ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು, ಮಹಿಳಾ ಒಕ್ಕೂಟಗಳ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ