Monday, June 29, 2020

ನಟರಾಜ್ ನಿಧನ

ನಟರಾಜ್ 
ಭದ್ರಾವತಿ, ಜೂ. ೨೯: ನಗರದ ಜನ್ನಾಪುರ ಲಿಂಗಾಯಿತರ ಬೀದಿ ನಿವಾಸಿ, ಹಳೇನಗರದ ಟಿಎಂಎಇಎಸ್ ಕೈಗಾರಿಕಾ ತರಬೇತಿ ಕೇಂದ್ರದ ಕಿರಿಯ ತರಬೇತಿ ಅಧಿಕಾರಿ ಎಂ. ನಟರಾಜ್(೫೪) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
  ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನ ವನದಲ್ಲಿ ವಾಯು ವಿಹಾರಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಪತ್ನಿ ಹಾಗೂ ಸಹೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಐಟಿಐ ಪ್ರಾಂಶುಪಾಲ ದಾನಪ್ಪ ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ನಗರದ ಇನ್ನಿತರರು ಗಣ್ಯರು ಸಂತಾಪ ಸೂಚಿಸಿದ್ದಾರೆ. 

No comments:

Post a Comment