ಭದ್ರಾವತಿ, ಜೂ. ೧೮: ನಗರದ ವೀರಶೈವ ಸೇವಾ ಸಮಿತಿ ವತಿಯಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನದ ಗುದ್ದಲಿ ಪೂಜೆ ಜೂ.೧೯ರ ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ.
ಸುಮಾರು ೫೦ ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳುತ್ತಿದ್ದು, ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿರುವರು.
No comments:
Post a Comment