Friday, June 5, 2020

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತಾ ಸಭೆ : ಸಾರಿಗೆ ವ್ಯವಸ್ಥೆ ಕುರಿತು ಚರ್ಚೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ ಹಿನ್ನಲೆಯಲ್ಲಿ ಪರಿಶೀಲನಾ ಸಭೆ ಶುಕ್ರವಾರ ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ನಡೆಯಿತು.   
ಭದ್ರಾವತಿ, ಜೂ. ೫: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ ಹಿನ್ನಲೆಯಲ್ಲಿ ಪರಿಶೀಲನಾ ಸಭೆ ಶುಕ್ರವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ನಡೆಯಿತು. 
ಒಂದೆಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಲಾಕ್‌ಡೌನ್ ಸಡಿಲಗೊಳಿಸಲಾಗಿದೆ. ಆದರೂ ಸಹ ಪೂರ್ಣಪ್ರಮಾಣದಲ್ಲಿ ಸಡಿಲಗೊಳ್ಳದ ಕಾರಣ ಹಲವು ಸಮಸ್ಯೆಗಳು ಎದುರಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳು ಹಾಜರಾಗಲು ಅನುಕೂಲವಾಗುವ ಸ್ಥಿತಿ ರೂಪಿಸಿಕೊಳ್ಳುವುದು ಶಿಕ್ಷಣ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. 
  ಸಭೆಯಲ್ಲಿ ಪ್ರಮುಖವಾಗಿ ಮಕ್ಕಳು ಪರೀಕ್ಷೆಗೆ  ಹಾಜರಾಗಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಕೈಗೊಳ್ಳುವ ಸಂಬಂಧ ಚರ್ಚಿಸಲಾಯಿತು. ಎಲ್ಲೆಡೆ ಪೂರ್ಣ ಪ್ರಮಾಣದಲ್ಲಿ ಸಾರಿಗೆ ಸೌಲಭ್ಯವಿಲ್ಲದ ಕಾರಣ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ಬಸ್ ಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಾರ್ಗ ನಕ್ಷೆ ರಚಿಸುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು. 
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಶಿರಸ್ತೆದಾರ್ ಮಂಜಾನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಚಿದಾನಂದ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್, ಶಿಕ್ಷಣ ಸಂಯೋಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.                                                      

No comments:

Post a Comment