Sunday, June 14, 2020

ಅಧಿಕಾರಕ್ಕಾಗಿ ಅರಳಿಕೊಪ್ಪ ಅಧ್ಯಕ್ಷೆಯಿಂದ ದ್ರೋಹ : ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಆರೋಪ

ಮಾಜಿ ಶಾಸಕ ಎಂ.ಜೆ ಅಪ್ಪಾಜಿ 
ಭದ್ರಾವತಿ, ಜೂ. ೧೪: ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಎಂಬುವರು ಈ ಹಿಂದೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರಲಿಲ್ಲ. ಕಳೆದ ಒಂದು ವರ್ಷದ ಹಿಂದೆ ನಮ್ಮ ಬೆಂಬಲ ಕೋರಿ ಬಂದಿದ್ದು, ನಂತರ ಅಧಿಕಾರಕ್ಕಾಗಿ ದ್ರೋಹವೆಸಗಿದ್ದಾರೆಂದು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಆರೋಪಿಸಿದ್ದಾರೆ. 
ಅವರು ಪತ್ರಿಕೆಯೊಂದಿಗೆ ಮಾತನಾಡಿ, ಈಕೆ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವುದಾಗಿ ತಿಳಿದು ಬಂದಿದೆ. ಹಣ ಬಲದ ಮೇಲೆ ಈಕೆ ಅರಳಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದು, ಎಂದಿಗೂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರಲಿಲ್ಲ. ಈಕೆಯ ಅಕ್ರಮಗಳಿಗೆ ನಾನು ಬೆಂಬಲ ನೀಡದ ಕಾರಣ ಇದೀಗ ಜೆಡಿಎಸ್ ಪಕ್ಷ ಬಿಟ್ಟಿರುವುದಾಗಿ ಸುಳ್ಳು ಹೇಳಿಕೊಳ್ಳುತ್ತಿದ್ದು, ಈಕೆ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಇದೀಗ ಪುನಃ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವುದು ಹೊಸದೇನಲ್ಲ. ಈ ಹಿನ್ನಲೆಯಲ್ಲಿ ಹೆಚ್ಚಿನ ಮಾನ್ಯತೆ ಕೊಡುವ ಅವಶ್ಯಕತೆ ಇಲ್ಲ ಎಂದರು. 

No comments:

Post a Comment