ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಜೂ. ೧೭: ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ದೇಶವನ್ನು ಅತಿಕ್ರಮಣ ಮಾಡುತ್ತಿರುವ ಚೀನಾ ದೇಶದ ಸೈನಿಕರ ವಿರುದ್ಧ ನಮ್ಮ ದೇಶದ ಸೈನಿಕರು ಹೋರಾಟ ನಡೆಸಿ ಹುತಾತ್ಮರಾಗಿರುವುದು ನೋವಿನ ಸಂಗತಿಯಾಗಿದೆ. ವೀರ ಯೋಧರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
ಚೀನಾ ಆರ್ಥಿಕವಾಗಿ ಸದೃಢವಾಗಲು ಭಾರತ ದೇಶ ಕಾರಣವಾಗಿದ್ದು, ಚೀನಾದಲ್ಲಿ ತಯಾರಾದ ಬಹುತೇಕ ಉತ್ಪನ್ನಗಳು ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಇದೀಗ ದೇಶದ ವಿರುದ್ಧ ಚೀನಾ ತಿರುಗಿ ಬಿದ್ದಿರುವುದು ಖಂಡನೀಯವಾಗಿದ್ದು, ಚೀನಾ ವರ್ತನೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ ತಕ್ಷಣದಿಂದ ದೇಶದ ಜನರು ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕೆಂದು ಮನವಿ ಮಾಡಿದ್ದಾರೆ.
No comments:
Post a Comment