ಭದ್ರಾವತಿ, ಜೂ. ೬ : ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ಗೆ ೧೫ ಸಾವಿರ ರು. ಪರಿಹಾರ ಧನ ಘೋಷಿಸಿದೆ.
ಹಣ್ಣಿನ ಬೆಳೆಗಳಾದ ಅನಾನಸ್, ಪಪ್ಪಾಯಿ, ಅಂಜೂರ, ಕಲ್ಲಂಗಡಿ, ಬಾಲೆ, ಖರ್ಬೂಜ ಮತ್ತು ತರಕಾರಿ ಬೆಳೆಗಳಾದ ಬೂದುಗುಂಬಳ, ಎಲೆಕೋಸು, ಹೂಕೋಸು, ಹಸಿರುಮೆಣಸಿನಕಾಯಿ, ಟೊಮ್ಯಾಟೊ ಬೆಳೆಗಳನ್ನು ಬೆಳೆದು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ರೈತರು ಪರಿಹಾರ ಧನ ಪಡೆಯಲು ಅರ್ಹರಾಗಿದ್ದು, ಬೆಳೆಗಾರರು ಜೂ. ೧೬ ರೊಳಗಾಗಿ ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್, ರೈತರ ಬ್ಯಾಂಕ್ ಖಾತೆ ಪಾಸ್ ಬುಕ್ ನಕಲು ಪ್ರತಿ ಹಾಗೂ ಸ್ವಯಂ ದೃಢೀಕೃತ ಘೋಷಣಾ ಪತ್ರದೊಂದಿಗೆ ಅರ್ಜಿ ಸಲ್ಲಿಸುವುದು.
ಓರ್ವ ರೈತ ಒಂದು ಹೆಕ್ಟೇರ್ವರೆಗೆ ಮಾತ್ರ ೧೫ ಸಾವಿರ ರು. ಪರಿಹಾರ ಧನ ಪಡೆಯಲು ಅವಕಾಶವಿದೆ. ಬಾಳೆ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್ ೨ನೇ ವಾರದ ನಂತರದ ಕಟಾವಿಗೆ ಬಂದಿರುವ ಬೆಳೆಗೆ ಮಾತ್ರ ಪರಿಹಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ನಗರದ ತರೀಕೆರೆ ರಸ್ತೆಯಲ್ಲಿರುವ ತೋಟಗಾರಿಕಾ ಇಲಾಖೆ ಕಛೇರಿ ಸಂಪರ್ಕಿಸಲು ಕೋರಲಾಗಿದೆ.
No comments:
Post a Comment