Tuesday, June 16, 2020

೨೨೦ ಎಂಪಿಎಂ ಕಾರ್ಮಿಕರಿಗೆ ಉದ್ಯೋಗದ ಭರವಸೆ

ಭದ್ರಾವತಿಯಲ್ಲಿ ಮಂಗಳವಾರ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಮಿಕರು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ತಾಲೂಕು ಪಂಚಾಯಿತಿ ಆವರಣದಲ್ಲಿ ಭೇಟಿ ಮಾಡಿ ತಮ್ಮ ಅಳಲು ವ್ಯಕ್ತಪಡಿಸಿದರು. 
ಭದ್ರಾವತಿ, ಜೂ. ೧೬: ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆಯದೆ ಸೇವೆ ಸಲ್ಲಿಸುತ್ತಿರುವ ಸುಮಾರು ೨೨೦ ಕಾಯಂ ಕಾರ್ಮಿಕರಿಗೆ ಶಾಶ್ವತ ಭದ್ರತೆ ಕಲ್ಪಿಸಿಕೊಡುವಂತೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮಂಗಳವಾರ ಒತ್ತಾಯಿಸಲಾಯಿತು. 
ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಮಿಕರು ತಾಲೂಕು ಪಂಚಾಯಿತಿ ಆವರಣದಲ್ಲಿ ಸಂಸದರನ್ನು ಭೇಟಿ ಮಾಡಿ, ಪ್ರಸ್ತುತ ಕಾರ್ಖಾನೆಯಲ್ಲಿ ಹೆಚ್ಚಿನ ಸೇವಾವಧಿ ಹೊಂದಿರುವ ಸುಮಾರು ೨೨೦ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಕಾರ್ಖಾನೆಯನ್ನು ಪುನಃ ಆರಂಭಿಸುವ ಭರವಸೆ ನೀಡಿದೆ. ಆದರೆ ೨೨೦ ಕಾರ್ಮಿಕರಿಗೆ ಉದ್ಯೋಗದ ಯಾವುದೇ ಭದ್ರತೆ ಇಲ್ಲವಾಗಿದೆ. ಈ ಕುರಿತು ಕಾರ್ಖಾನೆ ವ್ಯವಸ್ಥಾಪಕರನ್ನು ಪ್ರಶ್ನಿಸಿದಾಗ ಅವರಿಂದ ಉದ್ಯೋಗ ಭದ್ರತೆ ನೀಡುವ ಯಾವುದೇ ಭರವಸೆ ವ್ಯಕ್ತವಾಗಿಲ್ಲ. ಇದರಿಂದಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. 
ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಕಾರ್ಖಾನೆಯನ್ನು ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಆಸಕ್ತಿ ತೋರಿಸಿರುವಾಗ ೨೨೦ ಕಾರ್ಮಿಕರನ್ನು ಸಹ ಉಳಿಸಿಕೊಳ್ಳಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ. ಸದ್ಯದಲ್ಲಿಯೇ ಈ ಸಂಬಂಧ ಸಭೆ ಕರೆಯುವುದಾಗಿ ಭರವಸೆ ನೀಡಿದರು.

No comments:

Post a Comment