ಭದ್ರಾವತಿ ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೨೬: ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್ಗೆ ಮನವಿ ಸಲ್ಲಿಸಲಾಯಿತು.
ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಸ್ಥಳೀಯ ನಿವಾಸಿಗಳ ಸಹಿ ಸಂಗ್ರಹಿಸಿ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಪೌರಾಯುಕ್ತರು ಮುಂದಿನ ಒಂದು ವಾರದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು. ಮಹಿಳಾ ಮುನ್ನಡೆ ತಾಲೂಕು ಸಂಚಾಲಕಿ ಎನ್. ನಾಗವೇಣಿ ಸದಸ್ಯರಾದ ಗೌರಿ, ಲಕ್ಷ್ಮಿ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment