Monday, June 1, 2020

ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ವೈರಸ್ ಸೋಂಕಿನ ಭೀತಿ

ಹಳೇನಗರ ಠಾಣೆಗೆ ಸ್ಯಾನಿಟೈಸರ್, ಜಿಲ್ಲಾ ರಕ್ಷಣಾಧಿಕಾರಿ ಭೇಟಿ 

ಭದ್ರಾವತಿ, ಜೂ. ೧: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಇದೀಗ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೂ ಸೋಂಕಿನ ಭೀತಿ ಎದುರಾಗಿದೆ.
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದ್ದ ಘರ್ಷಣೆ ಹಿನ್ನಲೆಯಲ್ಲಿ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಶಿವಮೊಗ್ಗ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಗಳಿಗೆ ಸೋಮವಾರ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳಲ್ಲಿ ಆತಂಕ ಎದುರಾಗಿದೆ.
ಸೋಂಕಿಗೆ ಒಳಗಾಗಿರುವ ಓರ್ವ ಸಿಬ್ಬಂದಿ ಎರಡು ದಿನ ಹಳೇನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇದರಿಂದಾಗಿ ಇಲ್ಲಿನ ಸಿಬ್ಬಂದಿಗಳಿಗೂ ಸೋಂಕಿನ ಭೀತಿ ಉಂಟಾಗಿದೆ. ಮುಂಜಾಗ್ರತೆ ಕ್ರಮವಾಗಿ ಠಾಣೆಗೆ ಭಾನುವಾರ ರಾತ್ರಿ ಸ್ಯಾನಿಟೈಸರ್ ಮಾಡಿಸಿದ್ದು, ಸ್ವಚ್ಛತೆ ಕೈಗೊಳ್ಳಲಾಗಿದೆ. ಸೋಮವಾರ ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿಗಳು ಠಾಣೆ ಹೊರ ಭಾಗದಲ್ಲೇ ಇದ್ದು, ಠಾಣೆಯೊಳಗೆ ಪ್ರವೇಶಿಸಿಲ್ಲ.


No comments:

Post a Comment