ಎಸ್ಎಸ್ಎಲ್ಸಿ ಪರೀಕ್ಷೆ ಜೂ.೨೫ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದೊಂದಿಗೆ ಭದ್ರಾವತಿ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಒಂದು ಸಾವಿರ ಮಾಸ್ಕ್ಗಳನ್ನು ಸೋಮವಾರ ವಿವಿಧ ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.
ಭದ್ರಾವತಿ, ಜೂ. ೨೨: ಎಸ್ಎಸ್ಎಲ್ಸಿ ಪರೀಕ್ಷೆ ಜೂ.೨೫ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದೊಂದಿಗೆ ನಗರದ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಒಂದು ಸಾವಿರ ಮಾಸ್ಕ್ಗಳನ್ನು ಸೋಮವಾರ ವಿವಿಧ ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಕುಮಾರಪ್ಪ ನೇತೃತ್ವದಲ್ಲಿ ನಡೆದ ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಎ.ಎನ್ ಕಾರ್ತಿಕ್, ಖಜಾಂಚಿ ಎಂ. ನಾಗರಾಜ ಶೇಟ್, ಎರಡನೇ ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ, ವಲಯ ಅಧ್ಯಕ್ಷ ಹೆಬ್ಬಂಡಿ ನಾಗರಾಜ್, ಕೆ.ವಿ ಚಂದ್ರಶೇಖರ್, ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment