Friday, July 31, 2020

ಉಕ್ಕಿನ ನಗರದಲ್ಲಿ ಕೊರೋನಾ ಸ್ಪೋಟ : ಒಂದೇ ದಿನ ೧೮ ಸೋಂಕು ಪತ್ತೆ


ಭದ್ರಾವತಿ, ಜು. ೩೧: ಉಕ್ಕಿನ ನಗರದಲ್ಲಿ ಕೊರೋನಾ ಸೋಂಕು ಸ್ಪೋಟಗೊಳ್ಳುತ್ತಿದ್ದು, ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಒಂದೇ ದಿನ ೧೮ ಪ್ರಕರಣಗಳು ಪತ್ತೆಯಾಗಿವೆ. 
ಕಾಗದನಗರದ ೬ನೇ ವಾರ್ಡ್‌ನಲ್ಲಿ ೩೫ ವರ್ಷದ ಪುರುಷ, ಬಿ.ಎಚ್ ರಸ್ತೆಯಲ್ಲಿ ೪೫ ವರ್ಷದ ವ್ಯಕ್ತಿ, ದೊಡ್ಡಗೊಪ್ಪೇನಹಳ್ಳಿಯಲ್ಲಿ ೨೫ ವರ್ಷದ ಯುವಕ, ಗಾಂಧಿನಗರದಲ್ಲಿ ೭೭ ವರ್ಷದ ವೃದ್ಧೆ, ಉಜ್ಜನಿಪುರದಲ್ಲಿ ೧೯ ವರ್ಷದ ಯುವತಿ, ಭೂತನಗುಡಿಯಲ್ಲಿ ೩೦ ಮತ್ತು ೩೪ ವರ್ಷದ ಇಬ್ಬರು ಸಹೋದರರು, ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಿಲ್ಟ್ರಿಕ್ಯಾಂಪ್‌ನಲ್ಲಿ ವಾಸವಿರುವ ೨೮ ವರ್ಷದ ಪುರುಷ, ದೊಡ್ಡೇರಿ ಗ್ರಾಮದಲ್ಲಿ ೫೨ ವರ್ಷದ ವ್ಯಕ್ತಿ, ಆಂಜನೇಯ ಅಗ್ರಹಾರದಲ್ಲಿ ೩೫ ವರ್ಷದ ಪುರುಷ, ಅಂಬೇಡ್ಕರ್ ನಗರದಲ್ಲಿ ೫೪ ವರ್ಷ ವ್ಯಕ್ತಿ, ಸೀಗೆಬಾಗಿಯಲ್ಲಿ ೩೯ ವರ್ಷದ ಮಹಿಳೆ, ಅರಳಿಹಳ್ಳಿ ಬಸಲೀಕಟ್ಟೆ ಗ್ರಾಮದಲ್ಲಿ ೬೫ ವರ್ಷದ ವ್ಯಕ್ತಿ, ಸಿದ್ದರೂಢನಗರದಲ್ಲಿ ೬೨ ವ್ಯಕ್ತಿ ಹಾಗೂ ೫೮ ವರ್ಷದ ಈತನ ಪತ್ನಿ, ಖಾಜಿಮೊಹಲ್ಲಾ ಕೋಟೆ ಏರಿಯಾದಲ್ಲಿ ೬೯ ವರ್ಷದ ವೃದ್ಧೆ, ಅರಣ್ಯ ಇಲಾಖೆ ಕರ್ತವ್ಯ ನಿರ್ವಹಿಸುತ್ತಿರುವ ತರೀಕೆರೆ ಗೋಪಾಲ ಕಾಲೋನಿ ನಿವಾಸಿ ೩೩ ವರ್ಷದ ಪುರುಷ ಹಾಗೂ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದ ಶಿವಮೊಗ್ಗ ಅಶೋಕ ನಗರದ ೨೬ ವರ್ಷದ ಯುವಕ ಸೋಂಕಿಗೆ ಒಳಗಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ನಿಗದಿತ ಕೋವಿಡ್ ೧೯ ಆಸ್ಪತ್ರೆಗೆ ದಾಖಲಿಸಲಾಗಿದೆ.  
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.

ಇತಿಹಾಸ ವಿಷಯ ಬದಲಾವಣೆ ತಪ್ಪು ನಿರ್ಧಾರ : ಮುಸ್ವೀರ್ ಬಾಷ

ಮುಸ್ವೀರ್ ಬಾಷ
ಭದ್ರಾವತಿ, ಜು. ೩೧: ರಾಜ್ಯ ಸರ್ಕಾರ ಪ್ರಾರ್ಥಮಿಕ ಹಾಗೂ ಪ್ರೌಢ ಶಿಕ್ಷಣ ಇತಿಹಾಸ ಪಠ್ಯ ಪುಸ್ತಕದಲ್ಲಿ ಕೆಲವು ವಿಷಯಗಳನ್ನು ಬದಲಾವಣೆ ಮಾಡಿರುವುದು ಮೂಲ ಇತಿಹಾಸ ಅಧ್ಯಾಯನಕ್ಕೆ ಧಕ್ಕೆಯನ್ನುಂಟು ಮಾಡಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಸರಿಯಾಗಿ ಇತಿಹಾಸ ಅರ್ಥ ಮಾಡಿಕೊಳ್ಳುವುದು ಅಸಾಧ್ಯವಾಗಿದೆ ಎಂದು ಎನ್‌ಎಸ್‌ಯುಐ ಮುಖಂಡ ಮುಸ್ವೀರ್ ಬಾಷ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಇತಿಹಾಸ ಪಠ್ಯ ಪುಸ್ತಕದಲ್ಲಿ ಕೈ ಬಿಟ್ಟಿರುವ ಸಂಗೊಳ್ಳಿ ರಾಯಣ್ಣ, ಟಿಪ್ಪುಸುಲ್ತಾನ್, ರಾಣಿಅಬಕ್ಕ ಮತ್ತು ಹೈದರಾಲಿ ವಿಷಯಗಳನ್ನು ಅಧ್ಯಯನ ಮಾಡದೆ ಇತಿಹಾಸ ಪೂರ್ಣಗೊಳ್ಳುವುದಿಲ್ಲ. ಇದು ವಿದ್ಯಾರ್ಥಿಗಳಿಗೆ ಮೂಲ ಇತಿಹಾಸದಿಂದ ವಂಚನೆ ಮಾಡಿದಂತೆ. ಈ ಹಿನ್ನಲೆಯಲ್ಲಿ  ರಾಜ್ಯ ಸರ್ಕಾರ ಈ ಕೂಡಲೇ ತಮ್ಮ ನಿರ್ಧಾರ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದ್ದಾರೆ. 

ರಾಮ ಮಂದಿರ ಭೂಮಿ ಪೂಜೆ ವೀಕ್ಷಣೆಗೆ ಎಲ್‌ಇಡಿ ವ್ಯವಸ್ಥೆ

ಭದ್ರಾವತಿ, ಜು. ೩೧: ಅಯೋಧ್ಯೆ ಶ್ರೀರಾಮ ಜನ್ಮ ಭೂಮಿಯಲ್ಲಿ ಆ.೫ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಶ್ರೀರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಎಲ್‌ಇಡಿ ಪರದೆ ವ್ಯವಸ್ಥೆ ಕೈಗೊಳ್ಳಲಾಗಿದೆ. 
ಹೊಸಮನೆ ಮುಖ್ಯರಸ್ತೆಯಲ್ಲಿರುವ ಸಮಿತಿಯ ಹಿಂದೂ ಮಹಾಸಭಾ ಸಭಾಭವನದಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಪ್ರಧಾನ ಕಾರ್ಯದರ್ಶಿ ಟಿ.ಎಸ್ ಭವಾನಿಕುಮಾರ್ ಕೋರಿದ್ದಾರೆ.

೫.೫೦ ಕೋ. ರು. ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಭದ್ರಾವತಿ ತಾಲ್ಲೂಕಿನ ಸಿಂಗನಮನೆ, ತಾವರಘಟ್ಟ ಮತ್ತು ಮಾಳೇನಹಳ್ಳಿ ಗ್ರಾಮಗಳಲ್ಲಿ ಒಟ್ಟು ಸುಮಾರು ೫.೫೦ ಕೋ. ರು.  ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಬಾಕ್ಸ್ ಡ್ರೈನೇಜ್ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. 
ಭದ್ರಾವತಿ, ಜು. ೩೧:  ತಾಲ್ಲೂಕಿನ ಸಿಂಗನಮನೆ, ತಾವರಘಟ್ಟ ಮತ್ತು ಮಾಳೇನಹಳ್ಳಿ ಗ್ರಾಮಗಳಲ್ಲಿ ಒಟ್ಟು ಸುಮಾರು ೫.೫೦ ಕೋ. ರು.  ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಬಾಕ್ಸ್ ಡ್ರೈನೇಜ್ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. 
ಗ್ರಾಮೀಣ ಭಾಗದಲ್ಲೂ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗಿದ್ದು, ಈಗಾಗಲೇ ಬಹುತೇಕ ರಸ್ತೆಗಳು ಪೂರ್ಣಗೊಂಡಿವೆ. ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. 
ಸಿಂಗನಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ಉಮಾ, ಸದಸ್ಯರಾದ ಟಿ.ಡಿ ಶಶಿಕುಮಾರ್, ಜೆ. ಸುಜಾತ ಸೇರಿದಂತೆ ಗ್ರಾಮದ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಗರಕ್ಕೆ ಅಂತರಾಷ್ಟ್ರೀಯ ಹಿಂದೂ ಪರಿಷತ್ ರಾಜ್ಯ ಸಂಘಟನಾ ಪ್ರಮುಖ್ ಪ್ರವೀಣ್ ವಾಲ್ಕೆ ಆಗಮನ

ರಾಷ್ಟ್ರೀಯ ಬಜರಂಗದಳ ಕಾರ್ಯ ಚಟುವಟಿಕೆ ಪರಿಶೀಲನೆ

ಅಂತರಾಷ್ಟ್ರೀಯ ಹಿಂದೂ ಪರಿಷತ್ ರಾಜ್ಯ ಸಂಘಟನಾ ಪ್ರಮುಖರಾದ ಪ್ರವೀಣ್‌ವಾಲ್ಕೆ ಭದ್ರಾವತಿ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಬಜರಂಗದಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. 
ಭದ್ರಾವತಿ, ಜು. ೩೧: ಅಂತರಾಷ್ಟ್ರೀಯ ಹಿಂದೂ ಪರಿಷತ್ ರಾಜ್ಯ ಸಂಘಟನಾ ಪ್ರಮುಖರಾದ ಪ್ರವೀಣ್‌ವಾಲ್ಕೆ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಬಜರಂಗದಳ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. 
ಹೊಸಮನೆ ಓಂ ಹಿಂದು ಕೋಟೆ ರಾಮಮಂದಿರದಲ್ಲಿ ನಡೆದ ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಸೂಚಿಸಿದರು. 
ಜಿಲ್ಲಾಧ್ಯಕ್ಷ ಬಿ.ವಿ. ಚಂದನ್ ರಾವ್, ಜಿಲ್ಲಾ ಗೋರಕ್ಷಾ ಪ್ರಮುಖ್ ಚರಣ್ ದೇವಾಂಗ, ಜಿಲ್ಲಾ ಮಾಧ್ಯಮ ಪ್ರಮುಖ್ ಲತೇಶ್ ಶೆಟ್ಟಿ, ಶಿವಮೊಗ್ಗ ತಾಲೂಕು ಅಧ್ಯಕ್ಷ ಕಿರಣ್ ಗೌಡ, ಭದ್ರಾವತಿ ತಾಲೂಕು ಅಧ್ಯಕ್ಷ ಮನು ಗೌಡ, ಗ್ರಾಮಾಂತರ ಅಧ್ಯಕ್ಷ ನವೀನ್ ಕುಮಾರ್ ಹಾಗೂ ಇನ್ನಿತರರಿಗೆ ಜವಾಬ್ದಾರಿಗಳನ್ನು ಘೋಷಿಸಿದರು.  
ಓಂ  ಹಿಂದೂ ಕೋಟೆ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಯೋಗೇಶ್, ರಂಗನಾಥ, ಟೀ ಗೋಪಾಲ, ಪರಶುರಾಮ್ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. 

ಬಿಜೆಪಿ ಓಬಿಸಿ ಮೋರ್ಚಾದಿಂದ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷ ಓಬಿಸಿ ಮೋರ್ಚಾ ವತಿಯಿಂದ ನಗರಸಭೆ ವ್ಯಾಪ್ತಿ ಹಳೇನಗರದ ೬ನೇ ವಾರ್ಡ್ ಜಟ್‌ಪಟ್‌ನಗರದಲ್ಲಿರುವ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. 
ಭದ್ರಾವತಿ, ಜು. ೩೧: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷ ಓಬಿಸಿ ಮೋರ್ಚಾ ವತಿಯಿಂದ ನಗರಸಭೆ ವ್ಯಾಪ್ತಿ ಹಳೇನಗರದ ೬ನೇ ವಾರ್ಡ್ ಜಟ್‌ಪಟ್‌ನಗರದಲ್ಲಿರುವ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. 
ಒಬಿಸಿ ಮೋರ್ಚಾ ಜಿಲ್ಲಾ ಪ್ರಮುಖರಾದ ಅರುಣ್ ಕುಮಾರ್, ಜಿಲ್ಲಾಧ್ಯಕ್ಷ ಮಾಲತೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಅಧ್ಯಕ್ಷ ಸುಬ್ರಮಣಿ ಅಧ್ಯಕ್ಷತೆ ವಹಿಸಿದ್ದರು. 
  ತಾಲೂಕು ಬಿಜೆಪಿ ಮಂಡಲ ಉಪಾಧ್ಯಕ್ಷ ಮಂಜಪ್ಪ, ಕಾರ್ಯದರ್ಶಿ ಕೆ.ಆರ್ ಸತೀಶ್, ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಆರ್.ಪಿ ವೆಂಕಟೇಶ್, ಉಪಾಧ್ಯಕ್ಷರಾದ ಈಶ್ವರ್, ರಮೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕಲ್ಪನಾ, ಪ್ರಮುಖರಾದ ರುದ್ರಪ್ಪ, ತೀರ್ಥಪ್ಪ, ಪರಶುರಾಮ್, ಮುರುಳಿ, ಕರಿಬಸಪ್ಪ, ರವಿ, ನಾಗೇಂದ್ರಪ್ರಸಾದ್ ಮತ್ತು ಚಂದ್ರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

Thursday, July 30, 2020

ಜು.೩೧ರಿಂದ ಪ್ರೌಢಶಾಲಾ ಶಿಕ್ಷಕರಿಗೆ ಜೀವನ ಕೌಶಲ ಆನ್‌ಲೈನ್ ತರಬೇತಿ ಕಾರ್ಯಕ್ರಮ

ಭದ್ರಾವತಿ, ಜು. ೩೦: ಎಲ್ಲೆಡೆ ಕೋವಿಡ್-೧೯ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮನೆಯಿಂದಲೇ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಿರುವ ಹಿನ್ನಲೆಯಲ್ಲಿ ಹಾಗೂ ಸರ್ಕಾರದ ಆದೇಶದಂತೆ ತಾಲೂಕಿನ ಪ್ರೌಢಶಾಲಾ ಶಿಕ್ಷಕರಿಗೆ ಜೀವನ ಕೌಶಲ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಜು.೩೧ ರಿಂದ ಆ.೧೩ರ ವರೆಗೆ ಹಮ್ಮಿಕೊಳ್ಳಲಾಗಿದೆ. 
ಆನ್‌ಲೈನ್ ತರಬೇತಿ ಪ್ರತಿದಿನ ಬೆಳಿಗ್ಗೆ ೧೧ ರಿಂದ ೧೨.೩೦ರವರೆಗೆ ನಡೆಯಲಿದ್ದು, ಜು.೩೧ರಂದು ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮ ಅನುಷ್ಠಾನ ಏಕೆ? ಹೇಗೆ? ವಿಷಯ ಕುರಿತು ಬಿಆರ್‌ಸಿ ಗಣೇಶ್ ಮಾಹಿತಿ ನೀಡಲಿದ್ದಾರೆ. 
ಆ.೩ರಂದು ಸೇತುಬಂಧ ಮತ್ತು ಎಸ್‌ಎಪಿ ಪರಿಚಯ ಕುರಿತು ಅಂತರಗಂಗೆಯ ಇಮ್ತಿಯಾಜ್ ಅಹ್ಮದ್ ಹಾಗೂ ೪ರಂದು ಹದಿಹರೆಯ/ತಾರುಣ್ಯ ಪರಿಚಯ, ಸವಾಲು, ಹದಿಹರೆಯ ಸಾಧಕರು, ವೈಯಕ್ತಿಕ ನೈರ್ಮಲ್ಯ, ಸಕಾರಾತ್ಮಕ ಮನೋಭಾವನೆ ಕುರಿತು ಸ್ತ್ರೀರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಮಾಹಿತಿ ನೀಡಲಿದ್ದಾರೆ. 
೫ರಂದು ಜೀವನ ಕೌಶಲಗಳು-ಮಹತ್ವ ಡಬ್ಲ್ಯೂಎಚ್‌ಓ ಅನುಮೋದಿಸಿರುವ ೧೦ ಜೀವನ ಕೌಶಲಗಳು ಏನು?ಏಕೆ?ಹೇಗೆ? ವಿಷಯ ಕುರಿತು ಅರಹತೊಳಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಅಣ್ಣಪ್ಪ ಮಾಹಿತಿ ನೀಡಲಿದ್ದು, ೬ರಂದು ರಚನಾವಾದಿ ತರಗತಿ ಪ್ರಕ್ರಿಯೆ ಚರ್ಚೆ ಶಾಲಾ ಅಭ್ಯಾಸಗಳಲ್ಲಿ ಮೌಲ್ಯಮಾಪನ ಕುರಿತು ಹಳೇನಗರ ಕನಕ ವಿದ್ಯಾಸಂಸ್ಥೆಯ ಸಹ ಶಿಕ್ಷಕ ಪ್ರಶಾಂತ್ ಸಣ್ಣಕ್ಕಿ ಮಾಹಿತಿ ನೀಡಲಿದ್ದಾರೆ.
೭ರಂದು ಕೆಎಸ್‌ಕ್ಯೂಎಎಸಿ/ಸಿಎಸ್‌ಎಎಸ್ ಸಾಮರ್ಥ್ಯಗಳ ಪರಿಚಯ, ಪ್ರಶ್ನೆ ಸ್ವರೂಪದ ನೆಲೆಗಳು, ಕಲಿಕಾ ಫಲಗಳು, ಏನು?ಯಾವುವು?ಏಕೆ?ಹೇಗೆ? ವಿಷಯ ಕುರಿತು ಚಿಕ್ಕಮಗಳೂರು ಕಡೂರು ತಾಲೂಕಿನ ಜಿಗಣೇಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎ.ಜಿ ರಾಜಶೇಖರ್ ಮಾಹಿತಿ ನೀಡಲಿದ್ದು, ೧೦ರಂದು ಎನ್‌ಸಿಎಫ್-೨೦೦೫, ಸಿಸಿಇ ಅರ್ಥ ಮತ್ತು ಹೊಸ ಆಯಾಮಗಳ ಚರ್ಚೆ, ಕಲಿಕೆ ಹಾಗೂ ಮೌಲ್ಯಮಾಪನ ಕುರಿತು ಹೊಳೆಹೊನ್ನೂರು ಸರ್ಕಾರಿ ಉರ್ದು ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಶಬನಾ ಅಂಜುಂ ಮಾಹಿತಿ ನೀಡಲಿದ್ದಾರೆ. 
೧೧ರಂದು ಸಿಸಿಇ ಮೌಲ್ಯಮಾಪನದ ತಂತ್ರಗಳು, ಸಾಧನಗಳು, ಸಾಂದರ್ಭಿಕ ದಾಖಲೆಗಳ ನಿರ್ವಹಣೆ ಮತ್ತು ನಿಯೋಜಿತ ಕಾರ್ಯಗಳು ವಿಷಯ ಕುರಿತು ಯಡೇಹಳ್ಳಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಜಯಕುಮಾರ್ ಮಾಹಿತಿ ನೀಡಲಿದ್ದು, ೧೨ರಂದು ಎಸ್‌ಡಿಪಿ ಮತ್ತು ಫಲಿತಾಂಶ ಕ್ರಿಯಾ ಯೋಜನೆ ಶಾಲಾ ಗ್ರಂಥಾಲಯ ಮತ್ತು ಶಾಲಾ ವಿವಿಧ ಕ್ಲಬ್‌ಗಳ ನಿರ್ವಹಣೆ ಹೇಗೆ? ಏಕೆ? ವಿಷಯ ಕುರಿತು ಹಳೇನಗರ ಸಂಚಿಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಹ ಶಿಕ್ಷಕ ದಿವಾಕರ್ ಮತ್ತು ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು, ರಸ್ತೆ ಬಳಕೆದಾರರ ವರ್ತನೆಗಳು ಮತ್ತು ಪ್ರಥಮ ಚಿಕಿತ್ಸೆ ಕುರಿತು ಕಾಗದನಗರ ಪೇಪರ್‌ಟೌನ್ ಪ್ರೌಢಶಾಲೆ ಸಹ ಶಿಕ್ಷಕ ಮಂಜುನಾಥ್ ಮಾಹಿತಿ ನೀಡಲಿದ್ದಾರೆ. 

ರೋಟರಿ ಕ್ಲಬ್ ವತಿಯಿಂದ ರೈತ ಮಿತ್ರ : ಭತ್ತದ ನಾಟಿ ಮೂಲಕ ರೈತರ ಸಂಕಷ್ಟಗಳಿಗೆ ಸ್ಪಂದನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳು ರೈತರೊಂದಿಗೆ ಭತ್ತದ ನಾಟಿಯಲ್ಲಿ ತೊಡಗುವ ಮೂಲಕ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. 
ಭದ್ರಾವತಿ, ಜು. ೩೦: ಹಲವಾರು ಸೇವಾ ಕಾರ್ಯಗಳೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡಿರುವ ರೋಟರಿ ಕ್ಲಬ್ ರೈತರ ನೆರವಿಗೂ ಮುಂದಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹಲವಾರು ವರ್ಷಗಳಿಂದ ರೈತ ಮಿತ್ರ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. 
ಈ ಬಾರಿ ನಗರಸಭೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ಕ್ಲಬ್‌ನ ಪದಾಧಿಕಾರಿಗಳು ರೈತರೊಂದಿಗೆ ಭತ್ತದ ನಾಟಿಯಲ್ಲಿ ತೊಡಗುವ ಮೂಲಕ ರೈತರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. 
ಕ್ಲಬ್ ಅಧ್ಯಕ್ಷ ಬಿ.ಎಂ. ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಿರೀಶ್, ವಲಯ ಪ್ರತಿನಿಧಿ ಡಾ. ಕೆ. ನಾಗರಾಜ್, ಸುಂದರ್ ಬಾಬು ಹಾಗೂ ಸ್ಥಳೀಯ ಪುರುಷ ಹಾಗೂ ಮಹಿಳಾ ರೈತರು ಉಪಸ್ಥಿತರಿದ್ದರು. 



ಕೊರೋನಾ ಸೋಂಕು : ನಗರಸಭೆ ವ್ಯಾಪ್ತಿಯಲ್ಲಿ ಒಂದೇ ದಿನ ೧೦ ಪ್ರಕರಣ

ಭದ್ರಾವತಿ, ಜು. ೩೦:  ಉಕ್ಕಿನ ನಗರದಲ್ಲಿ ಕೆಲವು ದಿನಗಳಿಂದ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ನಗರಸಭೆ ವ್ಯಾಪ್ತಿಯಲ್ಲಿ ೧೦ ಪ್ರಕರಣಗಳು ದಾಖಲಾಗಿವೆ. 
  ವೇಲೂರ್‌ಶೆಡ್‌ನಲ್ಲಿ ೧೯ ಮತ್ತು ೨೩ ವರ್ಷದ ಇಬ್ಬರು ಯುವಕರಿಗೆ, ಅರಣ್ಯ ಕಛೇರಿ ಬಳಿ ೩೦ ವರ್ಷದ ಯುವಕ ಮತ್ತು ೬೫ ವರ್ಷದ ವ್ಯಕ್ತಿಗೆ, ಚಾಮೇಗೌಡ ಏರಿಯಾದಲ್ಲಿ ೨೭ ವರ್ಷದ ಮಗಳು ಹಾಗೂ ೬೨ ವರ್ಷದ ತಂದೆಗೆ, ಜೈಭೀಮಾ ನಗರದಲ್ಲಿ ೨೬ ವರ್ಷದ ವ್ಯಕ್ತಿಗೆ, ಭೋವಿಕಾಲೋನಿಯಲ್ಲಿ ೫೫ ವರ್ಷದ ಗುತ್ತಿಗೆದಾರನಿಗೆ ಮತ್ತು ೪೦ ವರ್ಷದ ಮಹಿಳೆಗೆ ಹಾಗೂ ನೃಪತುಂಗ ನಗರದಲ್ಲಿ ೬೦ ವರ್ಷದ ಮಹಿಳೆಗೆ ಸೋಂಕು ತಗುಲಿದೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಹಿರಿಯ ಆರೋಗ್ಯ ನಿರೀಕ್ಷರಾದ ಲತಾಮಣಿ, ಆರ್.ಬಿ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 
 

ಪ್ರತಿಯೊಬ್ಬರೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಅಗತ್ಯವಿದೆ : ಹಿರೇಮಠ್

ಪತ್ರಕರ್ತರಿಗೆ ಉಚಿತ ಇಮ್ಯೂನ್ ಕಿಟ್ ವಿತರಣೆ 

ನಿದಿಗೆಯಲ್ಲಿರುವ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ತಯಾರಿಸಿರುವ (ಇಮ್ಯೂನ್ ಕಿಟ್) ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನು ಗುರುವಾರ ಪತ್ರಕರ್ತರಿಗೆ ಉಚಿತವಾಗಿ ನೀಡಲಾಯಿತು. 
ಭದ್ರಾವತಿ, ಜು. ೩೦:  ನಿದಿಗೆಯಲ್ಲಿರುವ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ತಯಾರಿಸಿರುವ (ಇಮ್ಯೂನ್ ಕಿಟ್) ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಪ್ರತಿಯೊಬ್ಬರಿಗೂ ಕೊರೋನಾ ಸೇರಿದಂತೆ ಹಲವಾರು ರೋಗಗಳಿಗೆ ದಿವ್ಯೌಷಧವಾಗಿದೆ ಎಂದು ಆಡಳಿತಾಧಿಕಾರಿ ಹಿರೇಮಠ್ ತಿಳಿಸಿದರು. 
ಅವರು ಗುರುವಾರ ಹಳೇನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಪತ್ರಕರ್ತರಿಗೆ ಉಚಿತವಾಗಿ ಔಷಧಿ ವಿತರಿಸಿ ಮಾತನಾಡಿದರು.  ಭಾರತ ಸರ್ಕಾರದ ಆಯುಷ್ ಇಲಾಖೆಯ ಮಾರ್ಗಸೂಚಿಯಂತೆ ಔಷಧಿ ತಯಾರಿಸಲಾಗಿದ್ದು, ಈ ಔಷಧ ಶೇ.೧೦೦ಕ್ಕೆ ೧೦೦ರಷ್ಟು ರೋಗ ನಿರೋಧಕ ಶಕ್ತಿ ಉಂಟುಮಾಡುವ ವಿಶ್ವಾಸವಿದೆ. ಕೊರೋನಾ ವೈರಸ್ ಪರಿಣಾಮದಿಂದಾಗಿ ಪ್ರಸ್ತುತ ಎಲ್ಲರೂ ಸಂಕಷ್ಟ ಎದುರಿಸುವಂತಾಗಿದ್ದು, ಇದರಿಂದ ಮುಕ್ತಿ ಹೊಂದಲು ಅನುಕೂಲವಾಗುವ ನಿಟ್ಟಿನಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಆಶಯದೊಂದಿಗೆ ಔಷಧ ಸಿದ್ದಪಡಿಸಲಾಗಿದೆ. ಎಲ್ಲರೂ ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. 
ವ್ಯದ್ಯ ಡಾ. ಸಂತೋಷ್‌ಕುಮಾರ್ ಮಾತನಾಡಿ, ಪ್ರಸ್ತುತ ಪ್ರತಿಯೊಬ್ಬರೂ ಸಹ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕಾದ ಅಗತ್ಯವಿದೆ. ಹಿಂದೆ ಮನುಷ್ಯನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೋಗ ನಿರೋಧಕ ಶಕ್ತಿ ಇತ್ತು. ಪ್ರಸ್ತುತ ಸಾಮಾನ್ಯ ವೈರಸ್ ವಿರುದ್ಧ ಸಹ ಹೋರಾಡುವಷ್ಟು ಸಾಮರ್ಥ್ಯ  ಇಲ್ಲವಾಗಿದೆ. ಈ ಹಿನ್ನಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಯಾರಿಸಲಾಗಿರುವ ಔಷಧ ಬಹಳ ಉಪಯುಕ್ತವಾಗಿದೆ ಎಂದರು. 
ಡಾ. ವಿನಯ್ ಮಾತನಾಡಿ, ಸಂಸ್ಥೆವತಿಯಿಂದ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಶಕ್ತಿ ಮೀರಿ ಈ ಔಷಧಿಯನ್ನು ಸಿದ್ದಪಡಿಸಲಾಗಿದೆ. ಸಾಮಾನ್ಯವಾಗಿ ಸ್ಥಳೀಯವಾಗಿ ಲಭ್ಯವಿರುವ ದಿನಬಳಕೆ ವಸ್ತುಗಳನ್ನು ಬಳಸಿ ತಯಾರಿಸಿದ್ದು, ಈ ಔಷಧಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗದಂತೆ ನೋಡಿಕೊಳ್ಳಲಿದೆ. ಆರಂಭಿಕ ಹಂತದಲ್ಲಿ ಈ ಔಷಧಿಯನ್ನು ಸಂಸ್ಥೆ ವತಿಯಿಂದ ಉಚಿತವಾಗಿ ಕೊರೋನಾ ವಾರಿಯರ್ಸ್‌ಗಳಿಗೆ ನೀಡಬೇಕೆಂಬ ಉದ್ದೇಶದೊಂದಿಗೆ ಪತ್ರಕರ್ತರಿಗೆ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಇತರರಿಗೆ ಇದರ ಮಹತ್ವ ತಿಳಿಸಬೇಕೆಂದು ಮನವಿ ಮಾಡಿದರು. 
ಡಾ. ಪ್ರಶಾಂತ್, ಡಾ. ಅರುಣಕುಮಾರಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತರಾದ ಕಣ್ಣಪ್ಪ, ಗಣೇಶ್‌ರಾವ್ ಸಿಂಧ್ಯಾ, ಶಿವಶಂಕರ್, ರವೀಂದ್ರನಾಥ್(ಬ್ರದರ‍್ಸ್), ಟಿ.ಎಸ್ ಆನಂದಕುಮಾರ್, ಬದರಿನಾರಾಯಣ ಶ್ರೇಷ್ಠಿ, ಬಸವರಾಜ್, ಫಿಲೋಮಿನಾ, ಅನಂತಕುಮಾರ್, ಸುದರ್ಶನ್, ಶೈಲೇಶ್ ಕೋಠಿ, ಕೆ.ಎಸ್ ಸುಧೀಂದ್ರ, ನಾರಾಯಣ್, ಮೋಹನ್‌ಕುಮಾರ್, ಸೈಯದ್ ಖಾನ್, ವ್ಯವಸ್ಥಾಪಕ ಸುಬ್ರಮಣಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಜಾತಿನಿಂದನೆ, ಜೀವ ಬೆದರಿಕೆ ದೂರು ದಾಖಲಿಸಿಕೊಳ್ಳದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಶಿರಸ್ತೇದಾರ್ ಮೂಲಕ ಮನವಿ 

ಪೊಲೀಸರು ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಶಿರಸ್ತೇದಾರ್ ಮಲ್ಲಿಕಾರ್ಜುನಯ್ಯ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜು. ೩೦: ಪೊಲೀಸರು ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಶಿರಸ್ತೇದಾರ್ ಮಲ್ಲಿಕಾರ್ಜುನಯ್ಯ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಲಾಯಿತು. 
ತಾಲೂಕಿನ ಹೆಬ್ಬಂಡಿ ಲಕ್ಷ್ಮೀಪುರ ಗ್ರಾಮದ ಸರ್ವೆ ನಂ. ೩೭/೧ ರಲ್ಲಿ ೦-೩೧ ಗುಂಟೆ ಜಮೀನು ಮತ್ತು ಸರ್ವೆ ನಂ. ೩೭/೬ರಲ್ಲಿ ೦-೨೯ ಗುಂಟೆ ಜಮೀನು ಹೊಂದಿರುವ ಸೀನಪ್ಪರವರು ತಮ್ಮ ಹೆಸರಿನಲ್ಲಿ ಆರ್‌ಟಿಸಿ ಮ್ಯೂಟೇಷನ್ ಹಾಗೂ ಮೂಲ ದಾಖಲೆಗಳನ್ನು ಹೊಂದಿದ್ದಾರೆ. ಅಲ್ಲದೆ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆಯೊಂದಿಗೆ ತನಿಖೆ ನಡೆಸಿ ಜಮೀನು ಸೀನಪ್ಪನವರಿಗೆ ಸೇರಿದೆ ಎಂದು ಖಚಿತಪಡಿಸಿದ್ದಾರೆ. ಆದರೂ ಸಹ ಲಕ್ಷ್ಮೀಪುರದ ನಿವಾಸಿಗಳಾದ ಕೆಂಪಮ್ಮ, ಮಗ ನಾಗರಾಜ ಹಾಗೂ ಮೊಮ್ಮಕ್ಕಳಾದ ಗೌತಮಿ, ರಾಘವೇಂದ್ರ, ಬೇಬಿಯಮ್ಮ, ಲಕ್ಷ್ಮಮ್ಮ, ದೇವೇಂದ್ರ ಸೇರಿದಂತೆ ಇನ್ನಿತರರು  ಪರಿಶಿಷ್ಟ ಜಾತಿ ಬೋವಿ ಜನಾಂಗಕ್ಕೆ ಸೇರಿರುವ ಸೀನಪ್ಪರವರಿಗೆ ಜಾತಿ ನಿಂದನೆ ಮಾಡುವ ಜೊತೆಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಯಿತು. 
ಈ ಸಂಬಂಧ ಸೀನಪ್ಪರವರು ನ್ಯೂಟೌನ್ ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ, ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಹ ಸಲ್ಲಿಸಿರುತ್ತಾರೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡಿಲ್ಲ. ಅಲ್ಲದೆ ಜೀವ ಬೆದರಿಕೆ ಹೊಂದಿರುವ ಸೀನಪ್ಪರವರಿಗೆ ಸೂಕ್ತ ರಕ್ಷಣೆ ಸಹ ನೀಡಿಲ್ಲ ಎಂದು ದೂರಲಾಯಿತು. 

      ತಕ್ಷಣ ಪೊಲೀಸರು ಜಾತಿನಿಂದನೆ ಪ್ರಕರಣ ದಾಖಲಿಸಿಕೊಳ್ಳಬೇಕು. ಸೀನಪ್ಪರವರ ಜಮೀನಿನಲ್ಲಿರುವ ಮನೆಯಲ್ಲಿ ಅಕ್ರಮವಾಗಿ ವಾಸವಾಗಿರುವ ಕೆಂಪಮ್ಮ ಮತ್ತು ಕುಟುಂಬದವರನ್ನು ತಕ್ಷಣ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು. 
ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವ ವಹಿಸಿದ್ದರು. ಕಾರ್ಯಾಧ್ಯಕ್ಷ ಅರುಣ್‌ಕುಮಾರ್, ಉಪಾಧ್ಯಕ್ಷರಾದ ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಸಂಚಾಲಕರಾದ ಗಾಯಕ್‌ವಾಡ್, ಸುಬ್ಬೇಗೌಡ, ಆನಂದಮೂರ್ತಿ, ಸಂಯುಕ್ತ ಜನಾತದಳ ಯುವ ಮುಖಂಡ ಶಶಿಕುಮಾರ್ ಎಸ್. ಗೌಡ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ಸೀನಪ್ಪ, ಲಕ್ಷ್ಮಮ್ಮ, ಮಂಜಪ್ಪ, ನಾಗರಾಜಪ್ಪ, ನಾಗರತ್ನಮ್ಮ, ಪುಷ್ಪ, ಎಸ್. ಸುರೇಶ್, ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Wednesday, July 29, 2020

ಭದ್ರಾವತಿಯಲ್ಲಿ ೭ ಕೊರೋನಾ ಸೋಂಕು ಪತ್ತೆ

ಭದ್ರಾವತಿ, ಜು. ೨೯: ಉಕ್ಕಿನ ನಗರದಲ್ಲಿ ಕೆಲವು ದಿನಗಳಿಂದ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬುಧವಾರ ಸಹ ನಗರಸಭೆ ವ್ಯಾಪ್ತಿಯಲ್ಲಿ ೩ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ೪ ಒಟ್ಟು ೭ ಪ್ರಕರಣಗಳು ಪತ್ತೆಯಾಗಿವೆ. 
ತಾಲೂಕಿನಲ್ಲಿ ಕೆಲವು ದಿನಗಳಿಂದ ಸುಮಾರು ೫ಕ್ಕೂ ಅಧಿಕ ಸೋಂಕು ಪ್ರಕರಣಗಳು ಕಂಡು ಬರುತ್ತಿವೆ. ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿ ಸುಮಾರು ೪೫ ವರ್ಷದ ವ್ಯಕ್ತಿ, ಹೊಸಮನೆ ಅಶ್ವತ್ಥ್ ನಗರದಲ್ಲಿ ೭೫ ವರ್ಷದ ವೃದ್ಧೆ ಮತ್ತು ಸಿ.ಎನ್ ರಸ್ತೆಯಲ್ಲಿ ೬೫ ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ನಿಗದಿತ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಗ್ರಾಮಾಂತರ ಭಾಗದಲ್ಲಿ ೪ ಪ್ರಕರಣಗಳು ಪತ್ತೆಯಾಗಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಾಗಿದೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಹಿರಿಯ ಆರೋಗ್ಯ ನಿರೀಕ್ಷರಾದ ಲತಾಮಣಿ, ಆರ್.ಬಿ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 

ಬಿಜೆಪಿ ಪಕ್ಷದ ವತಿಯಿಂದ ಹೊಸ ಸಿದ್ದಾಪುರದಲ್ಲಿ ವನಮಹೋತ್ಸವ

ಭದ್ರಾವತಿ, ಜು. ೨೯: ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ಬುಧವಾರ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ವನ ಮಹೋತ್ಸವ ಆಚರಿಸಲಾಯಿತು. 
ಯುವ ಮುಖಂಡ ಜಿ.ಆರ್ ಪ್ರವೀಣ್ ಪಟೇಲ್, ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಮಂಜಪ್ಪ, ಜಯರಾಮ, ಪುಟ್ಟೇಗೌಡ, ಸುಬ್ರಮಣಿ, ಚಂದ್ರಪ್ಪ, ಪರಮೇಶ್ವರಪ್ಪ, ನಂಜಪ್ಪ, ಹನುಮಂತಪ್ಪ, ಈಶ್ವರ, ವೆಂಕಟೇಶ್, ನವೀನ, ಷಣ್ಮುಖಂ, ಜಗದೀಶ್, ಸರೋಜಮ್ಮ, ಪ್ರೇಮಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಹಳೇನಗರ ಭಾಗದಲ್ಲಿ ೨ ದಿನ ವಿದ್ಯುತ್ ವ್ಯತ್ಯಯ

ಭದ್ರಾವತಿ, ಜು. ೨೯: ನಗರಸಭೆ ವ್ಯಾಪ್ತಿಯ ಹಳೇನಗರ ಭಾಗದಲ್ಲಿ ಅಮೃತ್ ನಗರ ಯೋಜನೆಯಡಿ ರಾಜಕಾಲುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರ ಜೊತೆಗೆ ಕಾಮಗಾರಿಗೆ ಅಡ್ಡಲಾಗಿರುವ ಬೀದಿ ದೀಪ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಸಹ  ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜು. ೩೦ ಮತ್ತು ೩೧ರಂದು ವಿದ್ಯುತ್ ವ್ಯತ್ಯಯವಾಗಲಿದೆ. 
ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫.೩೦ರ ವರೆಗೆ ಹಳೇನಗರ ಭಾಗದ ಸಿದ್ದಾರೂಢ ನಗರ, ಶಂಕರ ಮಠ ರಸ್ತೆ, ಕನಕ ನಗರ, ಕೆಎಸ್‌ಆರ್‌ಟಿಸಿ ಬಸ್ ಘಟಕದ ಸುತ್ತಮುತ್ತ, ಸಿಲ್ವರ್ ಪಾರ್ಕ್, ಅಂಬೇಡ್ಕರ್ ನಗರ, ಕೋಟೆ ಏರಿಯಾ ೫ನೇ ಕ್ರಾಸ್, ಹೊಸ ಸೇತುವೆ ರಸ್ತೆ, ಕಾಳಿದಾಸ ಬಡಾವಣಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತ ಮನೋಹರ್ ಕೋರಿದ್ದಾರೆ. 


ಸುರಗಿತೋಪಿನಲ್ಲಿ ವಾರ್ಡ್ ಮಟ್ಟದ ಕಾರ್ಯಪಡೆ ಅಸ್ತಿತ್ವಕ್ಕೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಕೋವಿಡ್-೧೯ ನಿಯಂತ್ರಣ ಸಂಬಂಧ ನೂತನವಾಗಿ ವಾರ್ಡ್ ಮಟ್ಟದ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ. 
ಭದ್ರಾವತಿ, ಜು. ೨೯: ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ಕೋವಿಡ್-೧೯ ನಿಯಂತ್ರಣ ಸಂಬಂಧ ನೂತನವಾಗಿ ವಾರ್ಡ್ ಮಟ್ಟದ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ. 
ನಗರಸಭೆ ಸಮುದಾಯ ಸಂಘಟನಾ ಅಧಿಕಾರಿಗಳಾದ ಸುಹಾಸಿನಿ, ಈಶ್ವರಪ್ಪ, ಸ್ಥಳೀಯ ಪ್ರಮುಖರಾದ ನಿರ್ಮಲ ಕುಮಾರಿ, ಉಮೇಶ್, ಕಿರಣ್, ಪರಮೇಶ್, ಅನು, ಚೇತನ್‌ಕುಮಾರ್, ಅಪ್ರೋಜ್ ಮತ್ತು ನಗರಸಭೆ ಸದಸ್ಯೆ ಕೆ.ಆರ್ ಭಾಗ್ಯಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಪುಟ್ಟಮ್ಮ, ಸುಜಾತ, ಲಕ್ಕವ್ವ ಬೀರದಾರ್, ಆಶಾ ಕಾರ್ಯಕರ್ತೆ ಸವಿತಾ, ಪೊಲೀಸ್ ಸಿಬ್ಬಂದಿಗಳಾದ ನಾಯ್ಕ್, ವಿಕ್ರಂ, ವೈದ್ಯ ಡಾ. ಚಂದ್ರೇಗೌಡ ಸೇರಿದಂತೆ ಇನ್ನಿತರರು ಕಾರ್ಯಪಡೆಯಲ್ಲಿದ್ದು, ಮೊದಲ ಸಭೆಯಲ್ಲಿ ಸಮುದಾಯಕ್ಕೆ ಕೊರೋನಾ ಸೋಂಕು ಕುರಿತು ಜಾಗೃತಿ ಮೂಡಿಸುವುದು ಹಾಗೂ ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವುದು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಚರ್ಚಿಸಲಾಯಿತು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಇಮ್ಯೂನ್ ಕಿಟ್ ಬಿಡುಗಡೆ

ನಿದಿಗೆಯಲ್ಲಿರುವ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ತಯಾರಿಸಿರುವ (ಇಮ್ಯೂನ್ ಕಿಟ್) ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನು ಬುಧವಾರ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು. 
ಭದ್ರಾವತಿ, ಜು. ೨೯: ನಿದಿಗೆಯಲ್ಲಿರುವ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ತಯಾರಿಸಿರುವ (ಇಮ್ಯೂನ್ ಕಿಟ್) ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಬಿಡುಗಡೆ ಸಮಾರಂಭ ಬುಧವಾರ ನಗರಸಭೆ ಸರ್.ಎಂ ವಿಶ್ವೇಶ್ವರಾಯ ಸಭಾಂಗಣದಲ್ಲಿ ನಡೆಯಿತು.
ಶಾಸಕ ಬಿ.ಕೆ ಸಂಗಮೇಶ್ವರ್ ಔಷಧಿ ಬಿಡುಗಡೆಗೊಳಿಸಿದರು. ತಹಸೀಲ್ದಾರ್ ಶಿವಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ಹಿರಿಯ ಉಪ ನೊಂದಾಣಾಧಿಕಾರಿ ಲಕ್ಷ್ಮೀಪತಿ ಹಾಗೂ ಟಿಎಂಎಇ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

Tuesday, July 28, 2020

ಕಳಪೆ ಗುಣಮಟ್ಟದ ಬೆಲ್ಲ ತಯಾರಿಕೆ : ೨ ಆಲೆಮನೆಗಳ ಮೇಲೆ ದಾಳಿ

ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ೨ ಅಲೆಮನೆಗಳ ಮೇಲೆ ತಹಸೀಲ್ದಾರ್ ಶಿವಕುಮಾರ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿರುವುದು. 
ಭದ್ರಾವತಿ, ಜು. ೨೮: ತಾಲೂಕಿನ ಅರಳಿಹಳ್ಳಿ ಗ್ರಾಮದ ೨ ಅಲೆಮನೆಗಳ ಮೇಲೆ ತಹಸೀಲ್ದಾರ್ ಶಿವಕುಮಾರ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿರುವ ಘಟನೆ ನಡೆದಿದೆ. 
ಕಳಪೆ ಗುಣಮಟ್ಟದ ಸಕ್ಕರೆ ಹಾಗೂ ಇನ್ನಿತರ ರಾಸಾಯನಿಕ ಪದಾರ್ಥಗಳನ್ನು ಬಳಸಿ ಬೆಲ್ಲ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರ ಮೇರೆಗೆ ಅನುಸೂಯಮ್ಮ ಮತ್ತು ಬಿ. ರಾಜು ಎಂಬುವರಿಗೆ ಸೇರಿದ ೨ ಆಲೆಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ಸಂದರ್ಭದಲ್ಲಿ ಸುಮಾರು ೧೫೦ ಸಕ್ಕರೆ ಚೀಲ ಹಾಗೂ ಬೆಲ್ಲ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ಪದಾರ್ಥಗಳು ಪತ್ತೆಯಾಗಿವೆ. ೨ ಆಲೆಮನೆಗಳನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. 
ಕಾರ್ಯಾಚರಣೆ ತಂಡದಲ್ಲಿ ಶಿರಸ್ತೇದಾರ್ ಮಂಜಾನಾಯ್ಕ, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ದೇವರಾಜ್, ರಾಜಸ್ವ ನಿರೀಕ್ಷಕ ಜಗದೀಶ್ ಸೇರಿದಂತೆ  ಇನ್ನಿತರರು ಪಾಲ್ಗೊಂಡಿದ್ದರು. 


ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

 ( ಜು.೨೯ ಅಂತರಾಷ್ಟ್ರೀಯ ಹುಲಿ ದಿನ ಅಂಗವಾಗಿ ವಿಶೇಷ ವರದಿ)

ಸುಮಾರು ೪೦ ಹುಲಿಗಳು, ವಾರ್ಷಿಕ ೧ ಕೋ. ರು. ಆದಾಯ 

* ಅನಂತಕುಮಾರ್ 
ಭದ್ರಾ ಅಭಯಾರಣ್ಯದಲ್ಲಿ ವನ್ಯ ಜೀವಿ ಸಮಿತಿ ಸದಸ್ಯರು, ಛಾಯಾಗ್ರಾಹಕರು ಆಗಿರುವ ಬಿಆರ್‌ಪಿ ನಿವಾಸಿ ಸ್ವರೂಪ್ ಜೈನ್‌ರವರು ಛಾಯಾಗ್ರಹಣದ ಮೂಲಕ ಸೆರೆ ಹಿಡಿದಿರುವ ಹುಲಿ ಚಿತ್ರಗಳು. 
ಭದ್ರಾವತಿ, ಜು. ೨೮: ನಮ್ಮ ದೇಶದ ರಾಷ್ಟ್ರ ಪಾಣಿ ಹುಲಿ ವಾಸಿಸಲು ಯೋಗ್ಯವಾದ ಸ್ಥಳಗಳಲ್ಲಿ ತಾಲೂಕಿನ ಭದ್ರಾ ಅಭಯಾರಣ್ಯ ಸಹ ಒಂದಾಗಿದ್ದು, ಅರಣ್ಯ ಇಲಾಖೆಯ ವನ್ಯಜೀವಿ ಇಲಾಖೆ ಮಾಹಿತಿ ಪ್ರಕಾರ ಪ್ರಸ್ತುತ ಅಭಯಾರಣ್ಯದಲ್ಲಿ ಸುಮಾರು ೪೦ ಹುಲಿಗಳಿವೆ. 
ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳ ಪೈಕಿ ಹುಲಿ ಸಹ ಒಂದಾಗಿದ್ದು, ಇವುಗಳ ಸಂರಕ್ಷಣೆಗಾಗಿ ಸರ್ಕಾರ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕಳೆದ ಸುಮಾರು ೧ ವರ್ಷದ ಹಿಂದೆ ಹುಲಿ ಗಣತಿಗೆ ಮುಂದಾಗಿದ್ದು, ವಿಶೇಷ ತಂತ್ರಜ್ಞಾನ ಬಳಸಿ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಆದರೆ ಇಂದಿಗೂ ಹುಲಿ ಗಣತಿ ನಿಖರ ಮಾಹಿತಿ ಲಭ್ಯವಾಗಿಲ್ಲ. 
ಭದ್ರಾ ಅಭಯಾರಣ್ಯದ ಅಧಿಕಾರಿಗಳ ಮಾಹಿತಿ ಪ್ರಕಾರ ಛಾಯಾಗ್ರಹಣ(ಫೋಟೋಗ್ರಫಿ)ದ ಮೂಲಕ ಸೆರೆ ಹಿಡಿಯಲಾದ ಚಿತ್ರಗಳ ಆಧಾರದ ಮೇಲೆ ಇದುವರೆಗೂ ಸುಮಾರು ೪೦ ಹುಲಿಗಳಿರುವ ಮಾಹಿತಿ ಇದೆ. ಹುಲಿಗಳ ಜೊತೆಗೆ ಚಿರತೆ, ನರಿ ಸೇರಿದಂತೆ ಇನ್ನಿತರ ಪ್ರಾಣಿಗಳು ಅಭಯಾರಣ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿವೆ. 
ಭದ್ರಾ ಅಭಯಾರಣ್ಯ :-
ತಾಲ್ಲೂಕಿನಲ್ಲಿ ಸುಮಾರು ೧೭೫ ಚ.ಕಿ.ಮೀ ವಿಸ್ತೀರ್ಣವನ್ನು ಹಂಚಿಕೊಂಡಿರುವ ಭದ್ರಾ ಆಭಯಾರಣ್ಯ ೧೯೯೮ ರಿಂದ ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲ್ಪಟ್ಟಿದೆ. ದೇಶದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಹೊಂದಿದ್ದು, ೨೦೧೩ರ ಗಣತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು ೩೨೦ಕ್ಕೂ ಅಧಿಕ ಹುಲಿಗಳಿದ್ದು, ಈ ಪೈಕಿ ಭದ್ರಾ ಅಭಯಾರಣ್ಯದಲ್ಲಿ ಸುಮಾರು ೨೬ ಹುಲಿಗಳಿವೆ. ಇದೀಗ ೪೦ಕ್ಕೆ ಏರಿಕೆಯಾಗಿದ್ದು, ಇಂದಿಗೂ ಹುಲಿಗಳ ವಾಸಕ್ಕೆ ಯೋಗ್ಯವಾದ ಅರಣ್ಯವೆಂದು ಗುರುತಿಸಲಾಗಿದೆ. 

        ೫ ಹುಲಿ ಮೀಸಲು ಅರಣ್ಯ : 
ರಾಜ್ಯದಲ್ಲಿ ಒಟ್ಟು ೫ ಹುಲಿ ಮೀಸಲು ಅರಣ್ಯಗಳಿದ್ದು,  ಬಂಡೀಪುರ ರಾಷ್ಟ್ರೀಯ ಉದ್ಯಾನವನ-೮೭೨.೨೪ ಚ.ಕಿ.ಮೀ(೧೯೭೩ರಲ್ಲಿ), ಭದ್ರಾ ವನ್ಯಜೀವಿ ಅಭಯಾ ರಣ್ಯ -೫೦೦.೧೬ ಚ.ಕಿ.ಮೀ(೧೯೯೮ರಲ್ಲಿ), ನಾಗರಹೊಳೆ ರಾಷ್ಟ್ರೀಯ ಉದ್ಯಾನವನ -೬೪೩.೩೯ ಚ.ಕಿ.ಮೀ (೨೦ ೦೦ದಲ್ಲಿ), ಆನ್ಶಿ ರಾಷ್ಟ್ರೀಯ ಉದ್ಯಾನವನ- ದಾಂಡೇಲಿ ವನ್ಯಜೀವಿ ಅಭಯಾರಣ್ಯ-೪೭೫ ಚ.ಕಿ.ಮೀ (೨೦ ೦೬ರಲ್ಲಿ) ಮತ್ತು ಬಿಆರ್ಟಿ ವನ್ಯಜೀವಿ ಅಭಯಾರಣ್ಯ -೫೩೯.೫೨ ಚ.ಕಿ.ಮೀ (೨೦೧೧ರಲ್ಲಿ)ಗಳಾಗಿವೆ.
ಭದ್ರಾ ಅಭಯಾರಣ್ಯ ಒಟ್ಟು ವಿಸ್ತೀರ್ಣ ೫೦೦.೨೬ ಚ.ಕಿ. ಮೀ: 
ಭದ್ರಾ ಸಂರಕ್ಷಿತ ವನ್ಯಜೀವಿ ಅಭಯಾರಣ್ಯವು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುಮಾರು ೫೦೦.೧೬ ಚ.ಕಿ. ಮೀ.ಗಳಷ್ಟು ವಿಸ್ತೀರ್ಣ ಹೊಂದಿದೆ. ಈ ಅಭಯಾ ರಣ್ಯವು ಭದ್ರಾ ನದಿಯ ಪರಿಸರದಲ್ಲಿ ಇರುವುದರಿಂದ ಭದ್ರಾ ಅಭಯಾರಣ್ಯವೆಂದೇ ಕರೆಯಲಾಗುತ್ತದೆ. ೧೯೫೧ರಲ್ಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲಾಗಿದ್ದ ಈ ಅಭಯಾ ರಣ್ಯವು ನಂತರ ೧೯೯೮ರಲ್ಲಿ ದೇಶದ ೨೫ನೇ ಹುಲಿ ಸಂರಕ್ಷಿತ ಪ್ರದೇಶವೆಂದು ಸರಕಾರ ಆದೇಶಿಸಿತು. ಮೊದಲು ಜಗರ ಕಣಿವೆ ಎಂದೇ ಹೆಸರಾಗಿದ್ದ ಈ ಅರಣ್ಯವು ನಂತರ ೧೯೭೪ರಲ್ಲಿ ಭದ್ರಾ ಅಭಯಾರಣ್ಯವೆಂದು ಮರುನಾಮಕರಣ ಗೊಂಡಿತು. ಹಲವಾರು ವನ್ಯಜೀವಿಗಳು, ಕಾಡುಪ್ರಾಣಿಗಳು, ಪಕ್ಷಿಗಳು, ಹಾವುಗಳನ್ನು, ಪಾತರಗಿತ್ತಿ ಸೇರಿದಂತೆ ವಿವಿಧ ಜಾತಿಯ ಗಿಡ, ಮರಗಳೊಂದಿಗೆ ಪ್ರಕೃತಿ ಸೌಂದರ್ಯದೊಂದಿಗೆ ನೋಡಿ ಆನಂದಿಸಬಹುದಾದ ಸುಂದರ ತಾಣ ಭದ್ರಾ ಅಭಯಾರಣ್ಯವಾಗಿದೆ. ೧೨೦ಕ್ಕೂ ವಿವಿಧ ಜಾತಿಯ ಗಿಡ, ಮರಗಳಿಗೆ ಆಶ್ರಯ ನೀಡಿರುವ ಈ ಅರಣ್ಯ ಪ್ರದೇಶ ಪ್ರವಾಸಿಗರಿಗೆ ಹೇಳಿ ಮಾಡಿಸಿದ ತಾಣದಂತಿದೆ.
೧ ಲಕ್ಷಕ್ಕೂ ಅಧಿಕ ಚಿತ್ರ ಸೆರೆ : 
ವನ್ಯ ಜೀವಿ ಸಮಿತಿ ಸದಸ್ಯರು, ಛಾಯಾಗ್ರಾಹಕರು ಆಗಿರುವ ಬಿಆರ್‌ಪಿ ನಿವಾಸಿ ಸ್ವರೂಪ್ ಜೈನ್‌ರವರು ಪ್ರತಿವಾರ ಅಭಯಾರಣ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹುಲಿ ಸೇರಿದಂತೆ ಬಗೆ ಬಗೆಯ ವನ್ಯ ಜೀವಿಗಳನ್ನು ಛಾಯಾಗ್ರಹಣದ ಮೂಲಕ ಸೆರೆ ಹಿಡಿದು ಸಂಗ್ರಹಿಸಿಟ್ಟು ಕೊಳ್ಳುತ್ತಿದ್ದಾರೆ. ಇದುವರೆಗೂ ಸುಮಾರು ೧ ಲಕ್ಷಕ್ಕೂ ಅಧಿಕ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದಾರೆ.  
೧ ಕೋ. ರು. ಆದಾಯ: 
ಭದ್ರಾ ಅಭಯಾರಣ್ಯದ ಅಧಿಕಾರಿಗಳ ಮಾಹಿತಿ ಪ್ರಕಾರ ಸಫಾರಿ ಸೇರಿದಂತೆ ಇನ್ನಿತರ ಪ್ರವಾಸಿ ಮೂಲಗಳಿಂದ ಇಲಾಖೆಗೆ ಒಟ್ಟು ವಾರ್ಷಿಕ ಸುಮಾರು ೧ ಕೋ. ರು. ಆದಾಯ ಬರುತ್ತಿದೆ. ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೆಲವು ತಿಂಗಳುಗಳಿಂದ ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. 
ಸರ್ಕಾರ ಶೀಘ್ರದಲ್ಲಿಯೇ ಎಲ್ಲಾ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡುವ ವಿಶ್ವಾಸ ಅರಣ್ಯ ಇಲಾಖೆ ಹೊಂದಿದ್ದು, ಈ ನಡುವೆ ಪ್ರವಾಸಿಗರನ್ನು ಸೆಳೆಯಲು ಅರಣ್ಯ ಇಲಾಖೆ ವಿಶೇಷ ಯೋಜನೆಗಳನ್ನು ರೂಪಿಸಿಕೊಳ್ಳಬೇಕಾದ ಅನಿವಾರ್ಯತೆ ಸಹ ಇದೀಗ ಎದುರಾಗಿದೆ. 

ಭದ್ರಾವತಿಯಲ್ಲಿ ಒಂದೇ ದಿನ ೭ ಸೋಂಕು ಪತ್ತೆ

ಭದ್ರಾವತಿ, ಜು. ೨೮: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಂಗಳವಾರ ಒಂದೇ ದಿನ ೭  ಪ್ರಕರಣಗಳು ದಾಖಲಾಗಿವೆ.
ಗಾಂಧಿನಗರದಲ್ಲಿ  ೪೩ ವರ್ಷದ ವ್ಯಕ್ತಿ, ಹೊಸಬುಳ್ಳಾಪುರದಲ್ಲಿ ೩೪ ವರ್ಷದ ವ್ಯಕ್ತಿ, ಮಾಚೇನಹಳ್ಳಿ ೩೫ ವರ್ಷ ವ್ಯಕ್ತಿ, ಹೊಸಮನೆ ವಿಜಯನಗರದಲ್ಲಿ ೩೦ ವರ್ಷದ ವ್ಯಕ್ತಿ, ಹುತ್ತಾ ಕಾಲೋನಿಯಲ್ಲಿ ೩೬ ವರ್ಷದ ವ್ಯಕ್ತಿ ಹಾಗೂ ಕೂಡ್ಲಿಗೆರೆ ಗ್ರಾಮದಲ್ಲಿ ೩೧ ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಅರಣ್ಯ ಇಲಾಖೆಯಲ್ಲಿ ೩ ಮಂದಿಗೆ ಸೋಂಕು: 
ತಾಲೂಕಿನ ಭದ್ರಾವತಿ ಉಪ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೩ ಮಂದಿಗೆ ಸೋಂಕು ತಗುಲಿದೆ. ಕೆಲವು ದಿನಗಳ ಹಿಂದೆ ತಳ್ಳಿಕಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಾರ್ಡ್‌ಯೊಬ್ಬರಿಗೆ ಸೋಂಕು ತಗುಲಿತ್ತು. ಇದೀಗ ಕೊರಲಕೊಪ್ಪ ಸಸ್ಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರಿಗೆ ಹಾಗೂ ಕೂಡ್ಲಿಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರಿಗೆ ಸೋಂಕು ತಗುಲಿದೆ. 
ಕಛೇರಿ ಸೀಲ್‌ಡೌನ್ ಮಾಡಿಲ್ಲ: 
ಅರಣ್ಯ ಇಲಾಖೆಯ ೩ ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರು ವಲಯ ಅರಣ್ಯಾಧಿಕಾರಿಗಳ ಕಛೇರಿಗೆ  ಬಂದು ಹೋಗಿರುತ್ತಾರೆ. ಆದರೂ ಸಹ ಇದುವರೆಗೂ ಕಛೇರಿಯನ್ನು ಸೀಲ್‌ಡೌನ್ ಮಾಡಿಲ್ಲ. ಅಲ್ಲದೆ ಸ್ಯಾನಿಟೈಜರ್ ಸಹ ಕೈಗೊಂಡಿಲ್ಲ. ಇದರಿಂದಾಗಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇತರೆ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 


ಬಿಜೆಪಿ ಶಕ್ತಿ ಕೇಂದ್ರದಿಂದ ರುದ್ರಭೂಮಿಯಲ್ಲಿ ವನಮಹೋತ್ಸವ

ಭದ್ರಾವತಿಯಲ್ಲಿ ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ಹುತ್ತಾ ಮಹಾ ಶಕ್ತಿ ಕೇಂದ್ರದವತಿಯಿಂದ ಮಂಗಳವಾರ ಹಿಂದೂ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. 
ಭದ್ರಾವತಿ, ಜು. ೨೯: ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ನಗರದ ಹುತ್ತಾ ಮಹಾ ಶಕ್ತಿ ಕೇಂದ್ರದವತಿಯಿಂದ ಮಂಗಳವಾರ ಹಿಂದೂ ರುದ್ರಭೂಮಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. 
ಎಂಪಿಎಂ ಕಬ್ಬು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಕವಲಗುಂದಿ ರಾಜಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಚನ್ನೇಶ್, ಮುಖಂಡರಾದ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್, ಕೆ.ಆರ್ ಸತೀಶ್, ಮೂರ್ತಿ, ಸತೀಶ್‌ಕುಮಾರ್, ಅನ್ನಪೂರ್ಣ ಸಾವಂತ್, ಶೋಭಾ ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು. 

ಮದ್ಯದಂಗಡಿ ವಿರುದ್ಧ ಕ್ರಮಕ್ಕೆ ಆಗ್ರಹ


ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿಂಭಾಗ ಹೊಸ ಆನೆಕೊಪ್ಪ ಗ್ರಾಮದಲ್ಲಿ ತೆರೆಯಲಾಗಿರುವ ಎಂಎಸ್‌ಐಎಲ್ ಮದ್ಯಂಗಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಬೇರೆಡೆಗೆ ಸ್ಥಳಾಂತರಿಸುವಂತೆ ಸಂಯುಕ್ತ ಜನತಾದಳ ರಾಜ್ಯ ಯುವ ಮುಖಂಡ ಶಶಿಕುಮಾರ್ ಎಸ್ ಗೌಡ ತಹಸೀಲ್ದಾರ್‌ಗೆ  ಆಗ್ರಹಿಸಿದ್ದಾರೆ.
ಭದ್ರಾವತಿ, ಜು. ೨೮: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿಂಭಾಗ ಹೊಸ ಆನೆಕೊಪ್ಪ ಗ್ರಾಮದಲ್ಲಿ ತೆರೆಯಲಾಗಿರುವ ಎಂಎಸ್‌ಐಎಲ್ ಮದ್ಯಂಗಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಬೇರೆಡೆಗೆ ಸ್ಥಳಾಂತರಿಸುವಂತೆ ಸಂಯುಕ್ತ ಜನತಾದಳ ರಾಜ್ಯ ಯುವ ಮುಖಂಡ ಶಶಿಕುಮಾರ್ ಎಸ್ ಗೌಡ ತಹಸೀಲ್ದಾರ್‌ಗೆ  ಆಗ್ರಹಿಸಿದ್ದಾರೆ. 
ಅವರು ಮಂಗಳವಾರ ಉಪತಹಸೀಲ್ದಾರ್ ರಂಗಮ್ಮ ಅವರಿಗೆ ಮನವಿ ಸಲ್ಲಿಸಿದ್ದು, ತಾಲೂಕಿನಲ್ಲಿ ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಕೆಲವು ದಿನಗಳ ಹಿಂದೆ ಹೊಸ ಆನೆಕೊಪ್ಪ ಗ್ರಾಮಸ್ಥರು ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿದ್ದಾರೆ.
ಈ ಮದ್ಯದಂಗಡಿಯಿಂದ ಪ್ರತಿದಿನ ಇಲ್ಲಿನ ನಿವಾಸಿಗಳಿಗೆ ಕಿರಿಕಿರಿಯಾಗುತ್ತಿದೆ. ಎಂಆರ್‌ಪಿ ದರಗಿಂತ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ಮದ್ಯ ಸೇವೆನೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಲಾಗಿದೆ. ಈ ಹಿನ್ನಲೆಯಲ್ಲಿ ಈ ಮದ್ಯದಂಗಡಿ ವಿರುದ್ಧ ಅಬಕಾರಿಗಳು ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಆ.೧೦ರಂದು ತಾಲೂಕು ಕಛೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದೆಂದು ಎಚ್ಚರಿಸಿದ್ದಾರೆ. 

Monday, July 27, 2020

ಭದ್ರಾವತಿಯಲ್ಲಿ ಒಂದೇ ದಿನ ೧೭ ಸೋಂಕು ಪತ್ತೆ

ಭದ್ರಾವತಿ, ಜು. ೨೭: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ೧೭ ಪ್ರಕರಣಗಳು ದಾಖಲಾಗಿವೆ.
ಉಜ್ಜನಿಪುರದಲ್ಲಿ ೬೫ ವರ್ಷದ ಮಹಿಳೆ ಮತ್ತು ೩೪ ವರ್ಷದ ಪುರುಷ,  ಹಳೇನಗರ ಮರಾಠ ಬೀದಿಯಲ್ಲಿ ೬೨ ವರ್ಷದ ವ್ಯಕ್ತಿ ಮತ್ತು ೫೫ ವರ್ಷದ ಮಹಿಳೆ, ಬೊಮ್ಮನಕಟ್ಟೆಯಲ್ಲಿ ೪೫ ವರ್ಷದ ವ್ಯಕ್ತಿ, ಹುತ್ತಾ ಕಾಲೋನಿ ೩೭ ವರ್ಷದ ಪುರುಷ, ಅಂಬೇಡ್ಕರ್ ನಗರದಲ್ಲಿ ೪೪ ವರ್ಷದ ವ್ಯಕ್ತಿ, ಗಾಂಧಿನಗರದಲ್ಲಿ ೫೫ ವರ್ಷದ ಮಹಿಳೆ, ಜೈ ಭೀಮ ನಗರದಲ್ಲಿ ೫೭ ವರ್ಷದ ಮಹಿಳೆ, ಸೀಗೆಬಾಗಿಯಲ್ಲಿ ೪೧ ವರ್ಷದ ಪುರುಷ, ಹೊಳೆ ನೇರಳೆಕೆರೆ ೬೫ ವರ್ಷದ ವ್ಯಕ್ತಿ, ದೊಣಬಘಟ್ಟ ತಡಸದಲ್ಲಿ ೪೨ ವರ್ಷದ ಮಹಿಳೆ, ಹೊಳೆಹೊನ್ನೂರಿನಲ್ಲಿ ೨೪ ವರ್ಷದ ಯುವತಿ, ಬಿಆರ್’ಪಿ ಗ್ಯಾರೇಜ್ ಕ್ಯಾಂಪ್’ನಲ್ಲಿ 25 ಹಾಗೂ 65 ವರ್ಷದ ಇಬ್ಬರು ಪುರುಷರು ಮತ್ತು ಹುಣಸೆ ಕಟ್ಟಿ  ಜಂಕ್ಷನ್’ನಲ್ಲಿ 26 ವರ್ಷದ ಯುವಕ  ಒಟ್ಟು ೧೭ ಮಂದಿ ಸೋಂಕಿಗೆ ಒಳಗಾಗಿದ್ದಾರೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 

ನಂದಿನ ಹಾಲಿನ ಉತ್ಪನ್ನಗಳ ಮಾರಾಟ ಕೇಂದ್ರ ಉದ್ಘಾಟನೆ

ಭದ್ರಾವತಿ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿ ನೂತನವಾಗಿ ಶ್ರೀ ಕಮಲ್ ಎಂಟರ್‌ಪ್ರೈಸಸ್ ವತಿಯಿಂದ ಆರಂಭಗೊಂಡಿರುವ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
ಭದ್ರಾವತಿ, ಜು. ೨೭: ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿ ನೂತನವಾಗಿ ಶ್ರೀ ಕಮಲ್ ಎಂಟರ್‌ಪ್ರೈಸಸ್ ವತಿಯಿಂದ ಆರಂಭಗೊಂಡಿರುವ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
ನಂದಿನಿ ಹಾಲಿನ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಮಜ್ಜಿಗೆ ಹಾಗೂ ಸಿಹಿ ತಿನಿಸುಗಳ ಅಧಿಕೃತ ಮಾರಾಟಗಾರರಾಗಿದ್ದು, ಸುತ್ತಮುತ್ತಲಿನ ಚಿಲ್ಲರೆ ವ್ಯಾಪಾರಿಗಳು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. 
ಮಾರಾಟ ಕೇಂದ್ರದ ಮಾಲೀಕ ಪಿ.ಸಿ ಜೈನ್, ಪ್ರಮುಖರಾದ ಅಮಿತ್‌ಕುಮಾರ್ ಜೈನ್, ಬಿ. ಮೂರ್ತಿ, ಎಂ. ರವಿ, ಮಿಥುನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಸೈನಿಕರ ಸೇವೆ ಎಂದಿಗೂ ಅಮರ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ  ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು. 
ಭದ್ರಾವತಿ, ಜು. ೨೭: ವೀರ ಸೈನಿಕರ ದೇಶ ಸೇವೆ ಎಂದಿಗೂ ಅಮರ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಜನ್ನಾಪುರ ಜಯಶ್ರೀ ವೃತ್ತದ ಬಳಿ ಹಮ್ಮಿಕೊಳ್ಳಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
ಭಾರತೀಯ ಯೋಧರು ಸುಮಾರು ೧೮೦೦ ಮೀಟರ್ ಎತ್ತರದ ಕಾರ್ಗಿಲ್ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರ ವಿರುದ್ಧ ಹೋರಾಟ ನಡೆಸಿ ವಿಜಯ ಸಾಧಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿ ಹೋರಾಟ ನಡೆಸುವ ಯೋಧರಿಗೆ ಭಾರತ ಮಾತೆ ಮತ್ತಷ್ಟು ಶಕ್ತಿಯನ್ನು ನೀಡುವ ಮೂಲಕ ದೇಶವನ್ನು ಅತಿಕ್ರಮಣ ಮಾಡುವವರ ವಿರುದ್ಧ ಹೋರಾಟ ಮುಂದುವರೆಸಬೇಕಾಗಿದೆ. ಪ್ರಸ್ತುತ ಚೀನಾ ಸಹ ದೇಶದ ಗಡಿ ಭಾಗವನ್ನು ಅತಿಕ್ರಮಣ ಮಾಡುತ್ತಿದ್ದು, ಚೀನಾ ದೇಶದ ವಿರುದ್ಧ ಸಹ ನಮ್ಮ ಸೈನಿಕರು ಹೋರಾಟ ನಡೆಸುತ್ತಿದ್ದು, ಈಗಾಗಲೇ ಅನೇಕ ಸೈನಿಕರು ಹುತಾತ್ಮರಾಗಿದ್ದಾರೆ. ಇವರ ಬಲಿದಾನ ಎಂದಿಗೂ ವ್ಯರ್ಥವಾಗಬಾರದು. ಈ ನಿಟ್ಟಿನಲ್ಲಿ ಆಡಳಿತ ನಡೆಸುವ ಸರ್ಕಾರ ಸೇರಿದಂತೆ ದೇಶದ ಎಲ್ಲಾ ಪ್ರಜೆಗಳು ಸೈನಿಕರ ಹೋರಾಟಕ್ಕೆ ಮತ್ತಷ್ಟು ಬಲ ತುಂಬಬೇಕೆಂದರು. 
ಮಾಜಿ ಸೈನಿಕರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ದೇಶದ ಯೋಧರ ಹೋರಾಟ ರೋಮಾಂಚನಕಾರಿಯಾಗಿದ್ದು, ಸುಮಾರು ೬೦ ದಿನ ನಡೆದ ಈ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ನಾವೆಲ್ಲರೂ ಸ್ಮರಿಸಿಕೊಂಡು ಗೌರವ ಸೂಚಿಸಬೇಕಾಗಿವುದು ಕರ್ತವ್ಯವಾಗಿದೆ ಎಂದರು. 
ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಪ್ರೀತಿ ಕಾರ್ಗಿಲ್ ಯುದ್ಧ ಕುರಿತು ವಿವರಿಸಿದರು. ಮಾಜಿ ಸೈನಿಕರ ಪತ್ನಿಯರು ನೂತನವಾಗಿ ರಚಿಸಿಕೊಂಡಿರುವ ಮಹಿಳಾ ಸೇವಾ ಸಂಘದ ಅಧ್ಯಕ್ಷೆ ಶಶಿಕಲಾ ವೀರ ಯೋಧರ ಕುರಿತು ಮಾತನಾಡಿದರು. 
ನಗರಸಭೆ ಪೌರಾಯುಕ್ತ ಮನೋಹರ್, ಸಂಘದ ಕಾರ್ಯದರ್ಶಿ ವಿನೊದ್ ಪೂಜಾರಿ, ಉಪಾಧ್ಯಕ್ಷ ಬೋರೇಗೌಡ, ಯುವ  ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ನಿರ್ದೇಶಕ ಗಿರಿ ಕಾರ್ಯಕ್ರಮ ನಿರೂಪಿಸಿದರು. ನಗರದ ವಿವಿಧೆಡೆಗಳಿಂದ ಮಾಜಿ ಸೈನಿಕರು ಪಾಲ್ಗೊಂಡಿದ್ದರು.  

Sunday, July 26, 2020

ಸಿಂಗಮನೆ ಗ್ರಾಮ ಪಂಚಾಯಿತಿ ಚವಳಿ ಕ್ಯಾಂಪ್‌ನಲ್ಲಿ ಕೊರೋನಾ ಸೋಂಕು ಪತ್ತೆ

ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ಚವಳಿ ಕ್ಯಾಂಪ್‌ನಲ್ಲಿ ಬಟ್ಟೆ ವ್ಯಾಪಾರಿಯೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಗ್ರಾ.ಪಂ. ವತಿಯಿಂದ ಸ್ಯಾನಿಟೈಜರ್ ಕೈಗೊಳ್ಳಲಾಯಿತು. 
ಭದ್ರಾವತಿ, ಜು. ೨೬: ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿಯಲ್ಲಿ ಕೊರೋನಾ ಸೋಂಕು ಪ್ರಕರಣವೊಂದು ಭಾನುವಾರಪತ್ತೆಯಾಗಿದೆ. 
ಕಳೆದ ಕೆಲವು ದಿನಗಳ ಹಿಂದೆ ಇದೆ ಗೋಣಿಬೀಡು ಗ್ರಾಮದಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಚವಳಿ ಕ್ಯಾಂಪ್‌ನಲ್ಲಿ ಸೋಂಕು ಪತ್ತೆಯಾಗಿದೆ. ತಮಿಳುನಾಡಿಗೆ ಹೋಗಿ ಬಂದಿರುವ ಬಟ್ಟೆ ವ್ಯಾಪಾರಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸೋಂಕು ಪತ್ತೆಯಾದ ಮನೆಯ ಸುತ್ತಮುತ್ತ ಕಂಟೈನ್ಮೆಂಟ್ ವಲಯವನ್ನಾಗಿಸಿದ್ದು, ಗ್ರಾಮ ಪಂಚಾಯಿತಿ ಆಡಳಿತ ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಜರ್ ಮಾಡಿ ಸೀಲ್‌ಡೌನ್‌ಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ. 
ವಿಐಎಸ್‌ಎಲ್ ಕೋವಿಡ್-೧೯ ಕಾರ್ಯಾರಂಭ: 
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯನ್ನು ಕೆಲವು ದಿನಗಳ ಹಿಂದೆ ೫೦ ಹಾಸಿಗೆಯುಳ್ಳ ಕೋವಿಡ್-೧೯ ಚಿಕಿತ್ಸಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿತ್ತು. ಕಳೆದ ೨ ದಿನಗಳಿಂದ ಚಿಕಿತ್ಸಾ ಕೇಂದ್ರ ಕಾರ್ಯಾರಂಭಗೊಂಡಿದ್ದು, ವೈದ್ಯರು, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 

ಸರ್ಕಾರಿ ನೌಕರರ ಹಿತರಕ್ಷಣೆಯೊಂದಿಗೆ ಶೈಕ್ಷಣಿಕ ಅಭಿವೃದ್ಧಿಗೆ ಗಮನ

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಗೆ ಅಭಿನಂದನೆ 

ಭದ್ರಾವತಿ ತಾಲೂಕಿನ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಸ್ಪಂದಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದರು. 
ಭದ್ರಾವತಿ, ಜು. ೨೬: ರಾಜ್ಯಾದ್ಯಂತ ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ಹೆಚ್ಚಿನ ಆಸಕ್ತಿ ವಹಿಸುವ ಜೊತೆಗೆ ಭದ್ರಾವತಿ ತಾಲೂಕಿನ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಸ್ಪಂದಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದರು. 
ನಗರದ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆಯ ಸಮಗ್ರ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳಿಗೆ ರಾಜ್ಯ ಸರ್ಕಾರದಿಂದ ೧ ಕೋ. ರು, ಅನುದಾನ ಬಿಡುಗಡೆ ಮಾಡಿಸುವವಲ್ಲಿ ಸಿ.ಎಸ್ ಷಡಾಕ್ಷರಿಯವರು ಯಶಸ್ವಿಯಾಗಿದ್ದು, ಅಲ್ಲದೆ ವಿದ್ಯಾಸಂಸ್ಥೆಗೆ ಸೇರಿದ ನಗರಸಭೆ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿರುವ ೩ ಎಕರೆ ಜಮೀನನ್ನು ಸುಮಾರು ೧ ಕೋ. ರು. ಗಳಿಗೆ ಸುಮಾರು ೧೦ ವರ್ಷಗಳ ಹಿಂದೆ ಮಾರಾಟ ಮಾಡಲು ಯತ್ನಿಸಿದ್ದ ಪ್ರಕ್ರಿಯೆಯನ್ನು ತಡೆದು ಭವಿಷ್ಯದ ಶೈಕ್ಷಣಿಕ ಅಭಿವೃಧ್ಧಿ ಚಟುವಟಿಗಳಿಗೆ ಉಳಿಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ತಾಲೂಕಿನ ಸರ್ಕಾರದ ವಿವಿಧ ಇಲಾಖೆಗಳ ಸಂಘಟನೆಯ ಪದಾಧಿಕಾರಿಗಳು ಷಡಾಕ್ಷರಿಯವರನ್ನು ಅಭಿನಂದಿಸಿ ಗೌರವಿಸಿದರು. 
ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರುಗಳಾದ ಕೆ. ಶಾಮಣ್ಣ, ಡಾ.ಜಿ.ಎಂ ನಟರಾಜ್, ಬಿ.ಎಲ್ ರಂಗಸ್ವಾಮಿ ಹಾಗು ವಿವಿಧ ಇಲಾಖೆಗಳ ಪದಾಧಿಕಾರಿಗಳಾದ ಎಸ್.ಕೂಬಾನಾಯ್ಕ, ಬಿ. ಸಿದ್ದಬಸಪ್ಪ, ಲೋಹಿತೇಶ್ವರಪ್ಪ, ಬಸವಂತರಾವ್ ದಾಳೆ, ಎನ್. ಧನಂಜಯ, ಯು.ಮಹಾದೇವಪ್ಪ, ಎಂ.ಎಸ್.ಮಲ್ಲಿಕಾರ್ಜುನ , ರೇವಣಪ್ಪ, ನಿಸ್ಸಾರ್ ಖಾನ್, ಜಗದೀಶ್, ರಾಜಾನಾಯ್ಕ್, ದೇವೇಂದ್ರ ನಾಯ್ಕ್, ಎನ್.ಡಿ ಮಂಜುನಾಥ್, ಶಿವಕುಮಾರ್, ಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Saturday, July 25, 2020

ಮಕ್ಕಳ ವೈದ್ಯ ಸೇರಿ ೬ ಮಂದಿಗೆ ಕೊರೋನಾ ಸೋಂಕು

ಭದ್ರಾವತಿಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಕೊರೋನಾ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. 
ಭದ್ರಾವತಿ, ಜು. ೨೫: ತಾಲೂಕಿನಲ್ಲಿ  ಕೊರೋನಾ ಸೋಂಕು ಪ್ರಕರಣಗಳು ಮುಂದುವರೆದಿದ್ದು, ಶನಿವಾರ ಪುನಃ ೬ ಪ್ರಕರಣಗಳು ಪತ್ತೆಯಾಗಿವೆ. ಕೊರೋನಾ ವಾರಿಯರ್ಸ್ ಮಕ್ಕಳ ವೈದ್ಯನಿಗೂ ಸೋಂಕು ತಗುಲಿದೆ. 
ಸಿಎಂಎಸ್ ಚಿತ್ರ ಮಂದಿರ ಹಿಂಭಾಗದ ೬೨ ವರ್ಷದ ಮಕ್ಕಳ ವೈದ್ಯ, ಹೊಸಮನೆ ವಿಜಯನಗರ ಕಾಚಗೊಂಡನಹಳ್ಳಿಯಲ್ಲಿ ೨೨ ವರ್ಷದ ಹುಡುಗ, ಗೌಳಿಗರ ಬೀದಿಯಲ್ಲಿ ೬೨ ವರ್ಷದ ವ್ಯಾಪಾರಿ, ಹೊನ್ನಟ್ಟಿಹೊಸೂರು ಗ್ರಾಮದಲ್ಲಿ ೩೩, ತಡಸ ಗ್ರಾಮದಲ್ಲಿ ೩೮ ವರ್ಷದ ಪುರುಷ ಮತ್ತು ಸಿಂಗನಮನೆ ಗ್ರಾಮದಲ್ಲಿ ೫೪ ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 

ಕಾರ್ಗಿಲ್ ಯೋಧರ ಸ್ಮರಣೆ : ಆಕರ್ಷಕ ಕಲಾಕೃತಿ ರಚನೆ

ಕಾರ್ಗಿಲ್ ಯೋಧರ ಸ್ಮರಣೆಗಾಗಿ ಭದ್ರಾವತಿ ಹಳೇನಗರದ ನಿವಾಸಿ ಸೂಕ್ಷ್ಮ ಕೆತ್ತನೆಗಳ ಕಲಾವಿದ ಸಚಿನ್ ಎಂ. ವರ್ಣೇಕರ್ ಈ ಬಾರಿ ಕಲಾಕೃತಿ ರಚಿಸಿರುವುದು. 
ಭದ್ರಾವತಿ, ಜು. ೨೫: ಕಾರ್ಗಿಲ್ ಯೋಧರ ಸ್ಮರಣೆಗಾಗಿ ಹಳೇನಗರದ ನಿವಾಸಿ ಸೂಕ್ಷ್ಮ ಕೆತ್ತನೆಗಳ ಕಲಾವಿದ ಸಚಿನ್ ಎಂ. ವರ್ಣೇಕರ್ ಈ ಬಾರಿ ಕಲಾಕೃತಿ ರಚಿಸಿದ್ದು, ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 
ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಪ್ರಶಸ್ತಿ ಪುರಸ್ಕೃತ ಸಚಿನ್, ಅತಿ ಚಿಕ್ಕದಾದ ೦.೮ ಇಂಚು ಎತ್ತರ ಮತ್ತು ೦.೨೪೦ ಗ್ರಾಂ. ತೂಕದ ಬಂಗಾರದಿಂದ ತಯಾರಿಸಲಾದ ಆಕರ್ಷಕ ಕಲಾಕೃತಿಯನ್ನು ರಚಿಸುವ ಮೂಲಕ ಗಮನ ಸೆಳೆದಿದ್ದು, ಈ ಹಿಂದೆ ಅತಿ ಚಿಕ್ಕದಾದ ಶಿವಲಿಗ, ಆಯೋಧ್ಯೆ ರಾಮಮಂದಿರ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ  ಮಂಜುನಾಥಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಮಾದರಿಗಳ ಕಲಾಕೃತಿ ರಚಿಸಿದ್ದಾರೆ. 
ಕರ್ನಾಟಕ ರಾಮ್ ಸೇನಾ ಸಂಘಟನೆ ತಾಲೂಕು ಅಧ್ಯಕ್ಷರು ಸಹ ಆಗಿರುವ ಸಚಿನ್ ಭಾರತೀಯ ಸೈನಿಕರ ಮೇಲೆ ಅಪಾರ ಗೌರವ ಹೊಂದಿದ್ದು, ಸೈನಿಕರ ಹೋರಾಟ ಸ್ಮರಸಿಕೊಂಡು ಅವರಿಗೆ ಮತ್ತಷ್ಟು ಸ್ಪೂರ್ತಿ ತಂದು ಕೊಡುವ ನಿಟ್ಟಿನಲ್ಲಿ ಈ ಬಾರಿ ಕಲಾಕೃತಿ ರಚಿಸಿದ್ದಾರೆ. 

ವಿಕಲಚೇತನ ಸಂಕಷ್ಟಕ್ಕೆ ಸ್ಪಂದಿಸಿದ ಶ್ರೀ ಚನ್ನವೀರಸ್ವಾಮಿ ಮಠ

ಭದ್ರಾವತಿ ತಾಲೂಕಿನ ಅರಕರೆ ಗ್ರಾಮದ ಶ್ರೀ ಚನ್ನವೀರಸ್ವಾಮಿ ಮಠ ವತಿಯಿಂದ ವಿಕಲಚೇತನ ಬಾಲಕನೊಬ್ಬನಿಗೆ ಗಾಲಿ ಕುರ್ಚಿ ವಿತರಿಸಲಾಯಿತು. 
ಭದ್ರಾವತಿ, ಜು. ೨೫: ತಾಲೂಕಿನ ಅರಕರೆ ಗ್ರಾಮದ ಶ್ರೀ ಚನ್ನವೀರಸ್ವಾಮಿ ಮಠ ವಿಕಲಚೇತನ ಬಾಲಕನೊಬ್ಬನ ಸಂಕಷ್ಟಕ್ಕೆ ಸ್ಪಂದಿಸಿದೆ. 
ಡಿ.ಬಿ ಹಳ್ಳಿ ಗ್ರಾಮದ ತಿಮ್ಮಯ್ಯ ಎಂಬುವರ ಮಗ ಶ್ರೀನಿವಾಸ ಅಂಗ ವೈಕಲ್ಯದಿಂದ ಬಳಲುತ್ತಿದ್ದು, ಈ ಬಾಲಕನ ಸಂಕಷ್ಟಕ್ಕೆ ಸ್ಪಂದಿಸಿ ಅಗತ್ಯವಿರುವ ಗಾಲಿ ಕುರ್ಚಿ ವಿತರಿಸಲಾಯಿತು. 
ಮಠದ ಪೀಠಾಧ್ಯಕ್ಷ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅರಕೆರೆ ಭೈರೇಶ್‌ಕುಮಾರ್ ಹಾಗೂ ಭಕ್ತರು ಉಪಸ್ಥಿತರಿದ್ದರು. 

ಕೊನೆಗೂ ಅನ್ನದಾನದ ಪ್ರತಿಮೆಗೆ ಮುಕ್ತಿ : ಆ.5ರಂದು ಸರ್.ಎಂ.ವಿ ಪ್ರತಿಮೆ ಲೋಕಾರ್ಪಣೆ

ಭದ್ರಾವತಿಯಲ್ಲಿ ಆ.5ರಂದು ಲೋಕಾರ್ಪಣೆಗೊಳ್ಳಲಿರುವ ಸರ್.ಎಂ ವಿಶ್ವೇಶ್ವರಯ್ಯನವರ ಪ್ರತಿಮೆಯೊಂದಿಗೆ ಶಿಲ್ಪ ಕಲಾವಿದ ಎಸ್.ಜಿ ಶಂಕರಮೂರ್ತಿ ಉಪಸ್ಥಿತರಿರುವುದು. 
ಭದ್ರಾವತಿ, ಜು. 25: ಸುಮಾರು 2 ವರ್ಷಗಳಿಂದ ಲೋಕಾರ್ಪಣೆಗೊಳ್ಳದೆ ನೆನೆಗುದಿಗೆ ಬಿದ್ದಿರುವ ನಗರದ ರೈಲ್ವೆ ನಿಲ್ದಾಣದ ಬಳಿ ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ನಿಲ್ದಾಣದ ದ್ವಾರಬಾಗಿಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ನಗರದ ಅನ್ನದಾತ, ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯನವರ ಪ್ರತಿಮೆಗೆ ಕೊನೆಗೂ ಮುಕ್ತಿ ಲಭಿಸಿದೆ. 
ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ ನಗರದ ಹಿರಿಯ ಬಿಜೆಪಿ ಮುಖಂಡ ಎನ್. ವಿಶ್ವನಾಥರಾವ್ ನೇಮಕಗೊಂಡ ನಂತರ  ನಗರದ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಂತ ಹಂತವಾಗಿ ನಡೆಯುತ್ತಿದ್ದು, ನಿಲ್ದಾಣದ ಒಳ ಹಾಗೂ ಹೊರ ಭಾಗದಲ್ಲಿ ರೈಲ್ವೆ ಇಲಾಖೆ ಅನುದಾನದ ಜೊತೆಗೆ ಲೋಕಸಭಾ ಸದಸ್ಯರು, ಸ್ಥಳೀಯ ಶಾಸಕರು, ನಗರಸಭೆ ಆಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆರ್ಥಿಕ ನೆರವಿನೊಂದಿಗೆ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. 
ಈ ನಡುವೆ ನಗರದ ಅನ್ನದಾತ, ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ಈ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸಿದ್ದರೂಢನಗರದ ರಂಗದಾಸೋಹಿ, ಹಿರಿಯ ಶಿಲ್ಪ ಕಲಾವಿದ ಎಸ್.ಜಿ ಶಂಕರಮೂರ್ತಿ ವಹಿಸಿಕೊಂಡಿದ್ದರು. ಮೇ, 2018ರಂದು ಸುಮಾರು 8.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಶೀಘ್ರವಾಗಿ ಮುಕ್ತಾಯಗೊಳಿಸಿದ್ದರು. ನಂತರ ನಿಗದಿತ ಸ್ಥಳದಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೊಂಡರೂ ಸಹ  ಲೋಕಾರ್ಪಣೆಗೊಳ್ಳದೆ ನೆನೆಗುದಿಗೆ ಬಿದ್ದಿತ್ತು. ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಪ್ರತಿಮೆ ಅನಾವರಣಗೊಳಿಸುವಂತೆ ಹಲವು ಬಾರಿ ಒತ್ತಾಯಿಸಿದ್ದವು. 
ಇದೀಗ ಆ.05ರಂದು ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Friday, July 24, 2020

ಭದ್ರಾವತಿ : ನಗರ ವ್ಯಾಪ್ತಿಯಲ್ಲಿ ೪, ಗ್ರಾಮಾಂತರದಲ್ಲಿ ೩ ಸೋಂಕು ಪತ್ತೆ

ಭದ್ರಾವತಿ, ಜು. ೨೪: ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಕಡಿಮೆಯಾಗಿಲ್ಲ. ಪ್ರತಿ ದಿನ  ಪ್ರಕರಣಗಳು ದಾಖಲಾಗುತ್ತಿದ್ದು, ಶುಕ್ರವಾರ ಸಹ ೭ ಪ್ರಕರಣಗಳು ಪತ್ತೆಯಾಗಿವೆ. 
ನಗರಸಭೆ ವ್ಯಾಪ್ತಿಯಲ್ಲಿ ಹೊಸಮನೆ ೪ನೇ ತಿರುವಿನಲ್ಲಿ ೮ ವರ್ಷದ ಬಾಲಕ, ಎನ್‌ಎಂಸಿ ಬಡಾವಣೆಯಲ್ಲಿ ೪೬ ವರ್ಷದ ವ್ಯಕ್ತಿ, ವಿಜಯನಗರದ ಮೊದಲನೇ ತಿರುವಿನಲ್ಲಿ ೭೩ ವರ್ಷದ ವೃದ್ಧ, ಕಾಗದನಗರದ ೬ನೇ ತಿರುವಿನಲ್ಲಿ ೩೨ ವರ್ಷದ ವ್ಯಕ್ತಿ ಹಾಗೂ ಗ್ರಾಮಾಂತರ ಭಾಗದಲ್ಲಿ ಕಾರೇಹಳ್ಳಿ ಗ್ರಾಮದಲ್ಲಿ ೩೬ ವರ್ಷದ ಮಹಿಳೆ, ಬೆಳ್ಳಿಗೆರೆ ಬೈರು ಕ್ಯಾಂಪ್‌ನಲ್ಲಿ ೨೬ ವರ್ಷದ ಮತ್ತು ತಮ್ಮಡ್ಡಿಹಳ್ಳಿಯಲ್ಲಿ ೨೪ ವರ್ಷದ ಯುವಕರು ಸೋಂಕಿಗೆ ಒಳಗಾಗಿದ್ದಾರೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.೨೯ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಹೋರಾಟ

ಆಶಾ ಕಾರ್ಯಕರ್ತೆಯರಿಂದ ಮುಖ್ಯಮಂತ್ರಿಗಳಿಗೆ ಮನವಿ 

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ೧೫ನೇ ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಹಾಗೂ ಜು.೨೯ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ನಡೆಸುವ ಸಂಬಂಧ ಶುಕ್ರವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜು. ೨೪:  ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ೧೫ನೇ ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಹಾಗೂ ಜು.೨೯ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಹೋರಾಟ ನಡೆಸುವ ಸಂಬಂಧ ಶುಕ್ರವಾರ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು. 
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ೧೨ ಸಾವಿರ ರು. ಗೌರವ ಧನ, ಕೋವಿಡ್-೧೯ರ ವಿರುದ್ಧ ಹೋರಾಟ ನಡೆಸಲು ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಆಗ್ರಹಿಸಿದರು. 
ಕಳೆದ ಸುಮಾರು ೨ ತಿಂಗಳಿನಿಂದ ನಿರಂತರವಾಗಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುತ್ತಿದೆ. ತಕ್ಷಣ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು. 
ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ಎಸ್. ಆಶಾ, ವಿ. ಲಕ್ಷ್ಮಿ, ಕೆ.ಸಿ ಕಲ್ಪನಾ, ಕವಿತ, ನೀಲಾಂಬಿಕ, ಬಿ. ಮಂಜುಳ, ಎಸ್. ಶಾಂತಿ, ಆರ್. ನಾಗರತ್ನಬಾಯಿ, ಶಕೀಲಬಾನು, ಮಂಗಳಮ್ಮ, ಯಶಸ್ವಿನಿ, ಎಚ್. ನೇತ್ರಾವತಿ,  ಪಿ. ಶೃತಿ, ಕೆ. ಹೇಮಾವತಿ, ಆರ್. ಮಂಜುಳ, ಫಜಲುನ್ನಿಸಾ, ಎಸ್. ಮಮತ, ರಮೀಜಾ, ಎಂ. ಮಂಜುಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮನೆ ಹಿಂಭಾಗ ನರ್ಸರಿ ಮಾದರಿ ಅಕ್ರಮ ಗಾಂಜಾ ಬೆಳೆ : ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ

೧೦ ಕೆ.ಜಿ, ೩೦೦ ಗ್ರಾಂ. ಗಾಂಜಾ ಬೆಳೆ, ಓರ್ವ ವ್ಯಕ್ತಿ ವಶಕ್ಕೆ 

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮನೆಯೊಂದರ ಮೇಲೆ ಗ್ರಾಮಾಂತರ ಠಾಣೆ  ಪೊಲೀಸರು ದಾಳಿ ನಡೆಸಿ ನರ್ಸರಿ ಮಾದರಿಯಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಬೆಳೆ ವಶಪಡಿಸಿಕೊಂಡಿರುವುದು. 
ಭದ್ರಾವತಿ, ಜು. ೨೪ : ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮನೆಯೊಂದರ ಮೇಲೆ ಗ್ರಾಮಾಂತರ ಠಾಣೆ  ಪೊಲೀಸರು ದಾಳಿ ನಡೆಸಿ ನರ್ಸರಿ ಮಾದರಿಯಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಬೆಳೆ ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. 
ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸ್ ಉಪಾಧೀಕ್ಷಕ ಸುಧಾಕರನಾಯ್ಕ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ದೇವರಾಜ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ಕೂಡ್ಲಿಗೆರೆ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ ಹಿಂಭಾಗ ವಾಸವಿರುವ ಯುವರಾಜ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದು, ಮನೆಯ ಹಿಂಭಾಗದಲ್ಲಿ ಬೆಳೆಯಲಾಗಿದ್ದ ಸುಮಾರು ೧೦ ಕೆ.ಜಿ ೩೦೦ ಗ್ರಾಂ. ತೂಕದ ಗಾಂಜಾ ಬೆಳೆ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಯುವರಾಜ್(೩೮)ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

ಮದ್ಯದಂಗಡಿಯಿಂದ ನಿವಾಸಿಗಳಿಗೆ ಕಿರಿಕಿರಿ : ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಭದ್ರಾವತಿ ನಗರಸಭೆ ಉಜ್ಜನಿಪುರ ವಾರ್ಡ್ ವ್ಯಾಪ್ತಿಗೆ ಒಳಪಡುವ ಹೊಸ ಆನೆಕೊಪ್ಪ ಗ್ರಾಮದಲ್ಲಿ ತೆರೆಯಲಾಗಿರುವ ಎಂಎಸ್‌ಐಎಲ್ ಮದ್ಯಂಗಡಿಯಿಂದ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. 
ಭದ್ರಾವತಿ, ಜು. ೨೪: ನಗರಸಭೆ ಉಜ್ಜನಿಪುರ ವಾರ್ಡ್ ವ್ಯಾಪ್ತಿಗೆ ಒಳಪಡುವ ಹೊಸ ಆನೆಕೊಪ್ಪ ಗ್ರಾಮದಲ್ಲಿ ತೆರೆಯಲಾಗಿರುವ ಎಂಎಸ್‌ಐಎಲ್ ಮದ್ಯಂಗಡಿಯಿಂದ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. 
ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಬಡ ಕುಟುಂಬದವರು ವಾಸಿಸುತ್ತಿದ್ದು, ಮದ್ಯಂಗಡಿಯಿಂದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಮಹಿಳೆಯರು ರಸ್ತೆಯಲ್ಲಿ ಸಂಚರಿಸಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಸಮೀಪದಲ್ಲಿಯೇ ದೇವಸ್ಥಾನವಿದ್ದು, ಮದ್ಯವ್ಯಸನಿಗಳು ಎಲ್ಲಿಬೇಕೆಂದರಲ್ಲಿ ಗುಂಪು ಗುಂಪಾಗಿ ಸೇರಿಕೊಂಡು ಮದ್ಯ ಸೇವನೆ ಮಾಡುತ್ತಿದ್ದಾರೆ. ಮದ್ಯ ಸೇವನೆ ನಂತರ ರಸ್ತೆಗಳಲ್ಲಿ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಕೂಗಾಡುವುದು, ಮನೆಗಳಿಗೆ ನುಗ್ಗುವುದು ಹಾಗೂ ಅಸಹ್ಯವಾಗಿ ವರ್ತಿಸುತ್ತಿದ್ದಾರೆ. ಮದ್ಯದ ಖಾಲಿ ಬಾಟಲಿ, ಪ್ಯಾಕೇಟ್, ಕುಡಿದ ಪ್ಲಾಸ್ಟಿಕ್ ಲೋಟಗಳನ್ನು ಎಲ್ಲಿಬೇಕೆಂದರಲ್ಲಿ ಎಸೆಯುತ್ತಿದ್ದು, ಇವುಗಳನ್ನು ಚಿಕ್ಕ ಮಕ್ಕಳು  ಆಟವಾಡಲು ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ ಮದ್ಯ ಕುಡಿದ ಪ್ಲಾಸ್ಟಿಕ್ ಲೋಟವನ್ನು ನೀರು ಕುಡಿಯಲು ಬಳಕೆ ಮಾಡುತ್ತಿದ್ದಾರೆಂದು ನಿವಾಸಿಗಳು ಆರೋಪಿಸಿದರು. 
ಈಗಾಗಲೇ ಅತಿಯಾದ ಮದ್ಯಸೇವನೆಯಿಂದ ಜಗದೀಶ್ ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ. ತಕ್ಷಣ ಈ ಮದ್ಯದಂಗಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 
ಸ್ಥಳಕ್ಕೆ ಆಗಮಿಸಿದ ನಗರಸಭೆ ಪೌರಾಯುಕ್ತ ಮನೋಹರ್, ಕಾಗದನಗರ ಪೊಲೀಸ್ ಠಾಣಾಧಿಕಾರಿ ಭಾರತಿ ನಿವಾಸಿಗಳ ಸಮಸ್ಯೆ ಆಲಿಸಿ ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಗರಸಭಾ ಸದಸ್ಯ ವೆಂಕಟಯ್ಯ ಉಪಸ್ಥಿತರಿದ್ದರು. 
       ಜಿಲ್ಲಾಧಿಕಾರಿಗಳಿಗೆ ವರದಿ: 
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಬಕಾರಿ ನಿರೀಕ್ಷಕ ಧರ್ಮಪ್ಪ, ಮದ್ಯಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. 

Thursday, July 23, 2020

ಆಕಸ್ಮಿಕ ಅಗ್ನಿ ದುರಂತ: ಇಬ್ಬರಿಗೆ ಸುಟ್ಟ ಗಾಯ

ಭದ್ರಾವತಿ, ಜು. ೨೩: ತಾಲೂಕಿನ ಹಳೇ ಕೂಡ್ಲಿಗೆರೆ ಗ್ರಾಮದ ಮನೆಯೊಂದರಲ್ಲಿ ಗುರುವಾರ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ತಹಸೀಲ್ದಾರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಭದ್ರಾವತಿ, ಜು. ೨೩: ತಾಲೂಕಿನ ಹಳೇ ಕೂಡ್ಲಿಗೆರೆ ಗ್ರಾಮದ ಮನೆಯೊಂದರಲ್ಲಿ ಗುರುವಾರ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಶೇ.೮೦ರಷ್ಟು ಹಾಗೂ ವ್ಯಕ್ತಿಯೊಬ್ಬರಿಗೆ ಶೇ.೫೦ರಷ್ಟು ಸುಟ್ಟ ಗಾಯಗಳಾಗಿವೆ. 
ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಶಿವಕುಮಾರ್ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್  ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 
ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಗ್ರಾಮ ಲೆಕ್ಕಿಗ ನಾರಾಯಣ ಗೌಡ ತಹಸೀಲ್ದಾರ್ ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಉಕ್ಕಿನ ನಗರದಲ್ಲಿ ಪುನಃ ಸೋಂಕು ಹೆಚ್ಚಳ : ಒಂದೇ ದಿನ 19 ಪ್ರಕರಣ ಪತ್ತೆ

ಭದ್ರಾವತಿ, ಜು. ೨೩: ತಾಲೂಕಿನಲ್ಲಿ ಕೊರೋನಾ ಸೋಂಕು ಮತ್ತಷ್ಟು ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಗುರುವಾರ ಒಂದೇ ದಿನ 19 ಪ್ರಕರಣ ದಾಖಲಾಗಿವೆ. 
ನಗರಸಭೆ ವ್ಯಾಪ್ತಿಯ ನ್ಯೂಟೌನ್ ಭಾಗದಲ್ಲಿ 42 ವರ್ಷದ ಮಹಿಳೆ, ಹುಡ್ಕೋ ಕಾಲೋನಿಯಲ್ಲಿ 22 ವರ್ಷ ಯುವತಿ, 48 ವರ್ಷದ ಮಹಿಳೆ, ಬೋವಿ ಕಾಲೋನಿಯಲ್ಲಿ 65 ವರ್ಷದ ವ್ಯಕ್ತಿ, ಬಿ.ಎಚ್ ರಸ್ತೆ ವಿಜಯ ಬ್ಯಾಂಕ್  ಬಳಿ 29 ವರ್ಷದ ಯುವಕ, ಹೊಸಮನೆ ಎನ್‌ಎಂಸಿ ಬಡಾವಣೆಯಲ್ಲಿ 58 ವರ್ಷದ ವ್ಯಕ್ತಿ, ಹೊಸಮನೆ ಮುಖ್ಯರಸ್ತೆಯಲ್ಲಿ 75 ವರ್ಷ ವೃದ್ಧ, ಶಿವರಾಮ ನಗರದಲ್ಲಿ 17 ವರ್ಷದ ಯುವತಿ, 19 ವರ್ಷದ ಯುವಕ, ೫೮ ಮತ್ತು ೩೮ ವರ್ಷದ ಮಹಿಳೆ ಮತ್ತು ಖಲಂದರ್ ನಗರದಲ್ಲಿ 66 ವರ್ಷದ ಮಹಿಳೆ ಹಾಗೂ 74 ವರ್ಷದ ವೃದ್ಧ ಸೋಂಕಿಗೆ ಒಳಗಾಗಿದ್ದಾರೆ. 
ಉಳಿದಂತೆ ಗ್ರಾಮಾಂತರ ಭಾಗದಲ್ಲಿ ದೇವರನರಸೀಪುರ ಗ್ರಾಮದ 6 ವರ್ಷದ ಹೆಣ್ಣು ಮಗು, 32 ವರ್ಷದ ಮಹಿಳೆ ಹಾಗೂ ಬಾರಂದೂರು ಗ್ರಾಮದಲ್ಲಿ 44 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.  ಒಟ್ಟು  ತಾಲೂಕಿನಲ್ಲಿ 19  ಸೋಂಕು ಕಂಡುಬಂದಿದೆ.
   ಕಳೆದ 2 ದಿನಗಳ ಹಿಂದೆ ಒಂದೇ ದಿನ 10 ಪ್ರಕರಣ ಪತ್ತೆಯಾಗಿತ್ತು. ಇದೀಗ ಏಕಾಏಕಿ 19ಕ್ಕೆ ಏರಿಕೆಯಾಗಿದೆ. ಇದರಿಂದಾಗಿನಗರ ಹಾಗೂ ಗ್ರಾಮಾಂತರ ಭಾಗದ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.

ನೂತನ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್

ಡಾ. ಜಿ. ಮಂಜುನಾಥ್ 
ಭದ್ರಾವತಿ, ಜು. ೨೩: ತಾಲೂಕು ಪಂಚಾಯಿತಿ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಜಿ. ಮಂಜುನಾಥ್ ಅಧಿಕಾರ ವಹಿಸಿಕೊಂಡಿದ್ದಾರೆ.
ಡಾ. ಜಿ. ಮಂಜುನಾಥ್ ಗ್ರೇಡ್-೧ ಅಧಿಕಾರಿಯಾಗಿದ್ದು, ಸಾಕಷ್ಟು ವೃತ್ತಿ ಸೇವಾನುಭವ ಹೊಂದಿದ್ದಾರೆ. ಸುಮಾರು 2 ತಿಂಗಳಿನಿಂದ ಖಾಲಿ ಇದ್ದ ಹುದ್ದೆಗೆ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.  ಇದುವರೆಗೂ ಪ್ರಭಾರ ಅಧಿಕಾರಿಯಾಗಿದ್ದ   ಡಾ. ಕೊಟ್ರೇಶಪ್ಪ ಅವರಿಂದ  ಅಧಿಕಾರ ಸ್ವೀಕರಿಸಿದರು.  

‘ರಾಜ ಗೃಹ’ ಧ್ವಂಸ ಪ್ರಕರಣಕ್ಕೆ ಖಂಡನೆ, ಸ್ಪೃಶ್ಯ ಸಮುದಾಯಗಳನ್ನು ಎಸ್‌ಸಿ ಪಟ್ಟಿಯಿಂದ ಕೈ ಬಿಡಲು ಆಗ್ರಹ

 ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್‌ರವರ ‘ರಾಜ ಗೃಹ’ದ ಧ್ವಂಸ ಪ್ರಕರಣ ಖಂಡಿಸಿ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಸಮುದಾಯಗಳನ್ನು ಕೈಬಿಡುವಂತೆ ಆಗ್ರಹಿಸಿ ಭದ್ರಾವತಿಯಲ್ಲಿ ಹೊಲೆಯ ಮತ್ತು ಮಾದಿಗ ಸಮನ್ವಯ ಸಮಿತಿ ವತಿಯಿಂದ ಗುರುವಾರ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜು. ೨೩: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್‌ರವರ ‘ರಾಜ ಗೃಹ’ದ ಧ್ವಂಸ ಪ್ರಕರಣ ಖಂಡಿಸಿ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಸಮುದಾಯಗಳನ್ನು ಕೈಬಿಡುವಂತೆ ಆಗ್ರಹಿಸಿ ಹೊಲೆಯ ಮತ್ತು ಮಾದಿಗ ಸಮನ್ವಯ ಸಮಿತಿ ವತಿಯಿಂದ ಗುರುವಾರ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 
ಸಮಿತಿಯ ಪ್ರಮುಖರು ಮಾತನಾಡಿ, ‘ರಾಜ ಗೃಹ’ದ ಧ್ವಂಸ ಪ್ರಕರಣ ಅಂಬೇಡ್ಕರ್‌ರವರ ಆದರ್ಶ, ತತ್ವ, ಸಿದ್ದಾಂತ ಹಾಗೂ ಆಶಯಗಳಿಗೆ ವಿರುದ್ಧವಾಗಿದ್ದು, ಇದೊಂದು ದೇಶ ದ್ರೋಹ ಪ್ರಕರಣವಾಗಿದೆ. ಈ ಹಿನ್ನಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 
ಸ್ಪೃಶ್ಯ ಸಮುದಾಯಗಳಾದ ಭೋವಿ, ಕೊರಮ, ಕೊರಚ, ಲಂಬಾಣಿ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಸರ್ವೋಚ್ಛ ನ್ಯಾಯಾಲಯ ಈಗಾಗಲೇ ಆದೇಶಿಸಿದೆ. ಆದರೂ ಸಹ ಈ ಜಾತಿಗಳನ್ನು ಕೈಬಿಡುವಲ್ಲಿ ಮೀನಾಮೇಷ ಮಾಡಲಾಗುತ್ತಿದೆ. ಇಂದಿನ ಸರ್ಕಾರಗಳು ಸ್ಪೃಶ್ಯ ಸಮುದಾಯಗಳನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಮುಂದಾಗಿವೆ ಎಂದು ಆರೋಪಿಸಿದರು. 
ಪ್ರಮುಖರಾದ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳು ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ. ಶ್ರೀನಿವಾಸನ್, ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಬಸಪ್ಪ, ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್, ಬಾಪೂಜಿ ಹರಿಜನ ಸೇವಾ ಸಂಘದ ಅಧ್ಯಕ್ಷ ಚಂದ್ರಪ್ಪ, ಮುಖಂಡರಾದ ಎಚ್. ಜಯರಾಜ್,  ಶಿಕ್ಷಕರಾದ ಎ. ತಿಪ್ಪೇಸ್ವಾಮಿ, ಯು. ಮಹದೇವಪ್ಪ, ಆನಂದಮೂರ್ತಿ, ತಾಲೂಕು ಕಸಾಪ ಕಾರ್ಯದರ್ಶಿ ಸಿ. ಚನ್ನಪ್ಪ,  ಆದಿತ್ಯಶ್ಯಾಮ, ಜಗದೀಶ್, ಎಚ್.ಎಂ ಮಹಾದೇವಯ್ಯ, ರಾಜೇಂದ್ರ, ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Wednesday, July 22, 2020

ಭದ್ರಾವತಿಯಲ್ಲಿ ೫ ಕೊರೋನಾ ಸೋಂಕು ಪತ್ತೆ

ಭದ್ರಾವತಿ, ಜು. ೨೨: ತಾಲೂಕಿನಲ್ಲಿ ಬುಧವಾರ ಪುನಃ ೫ ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಪೈಕಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ಓರ್ವ ಕೆಎಸ್‌ಆರ್‌ಟಿಸಿ ನೌಕರ ಸೇರಿದ್ದಾರೆ. 
ಹಳೇನಗರದ ಕಂಚಿಬಾಗಿಲು ವೃತ್ತದ ಅಂಬೇಡ್ಕರ್ ನಗರದ ೨೮ ವರ್ಷದ ಪೊಲೀಸ್ ಸಿಬ್ಬಂದಿ ಮತ್ತು ೪೮ ವರ್ಷದ ವ್ಯಕ್ತಿಗೆ, ನ್ಯೂಟೌನ್ ಬೆಣ್ಣೆಕೃಷ್ಣ ಸರ್ಕಲ್ ಬಳಿ ೩೯ ವರ್ಷದ ವ್ಯಕ್ತಿಗೆ, ೫೫ ವರ್ಷದ ಕೆಎಸ್‌ಆರ್‌ಟಿಸಿ ನೌಕರನಿಗೆ ಮತ್ತು ಸಿರಿಯೂರು ತಾಂಡದ ೧೫ ವರ್ಷದ ಹುಡುಗನಿಗೆ ಸೋಂಕು ತಗುಲಿದೆ. 
ಮಂಗಳವಾರ ೧೦ ಪ್ರಕರಣ ದಾಖಲಾಗಿತ್ತು. ಬುಧವಾರ ೫ಕ್ಕೆ ಇಳಿದಿದ್ದು, ಇತ್ತೀಚೆಗೆ ಗ್ರಾಮೀಣ ಭಾಗದಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಗ್ರಾಮೀಣ ಭಾಗದ ಜನರು ಸಹ ಆತಂಕಕ್ಕೆ ಒಳಗಾಗುವಂತಾಗಿದೆ. 

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು

ಭದ್ರಾವತಿ, ಜು. ೨೨: ನಗರದ ಹೊಸಮನೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್  ಸಿಬ್ಬಂದಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ಬುಧವಾರ ಪತ್ತೆಯಾಗಿದ್ದು, ಇದರಿಂದಾಗಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಾಗಿದೆ. 
ಸುಮಾರು ೨೭ ವರ್ಷದ ಪೊಲೀಸ್ ಸಿಬ್ಬಂದಿಗೆ ಕಳೆದ ೪ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಕೊರೋನಾ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಗಂಟಲು ಮಾದರಿಯನ್ನು ಪ್ರಯೋಗಾಯಲಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಸೋಂಕು ತಗುಲಿರುವುದು ಖಚಿತವಾಗಿದ್ದು, ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಕಳೆದ ಕೆಲವು ದಿನಗಳ ಹಿಂದೆ ಹೊಸಮನೆ ಎನ್‌ಎಂಸಿ ಬಡಾವಣೆ ಶಾಸಕ ಬಿ.ಕೆ ಸಂಗಮೇಶ್ವರ್ ನಿವಾಸದ ಸಮೀಪದ ರಸ್ತೆಯೊಂದರಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಆ ವ್ಯಾಪ್ತಿಯನ್ನು ಕಂಟೈನ್ಮೆಂಟ್  ವಲಯವನ್ನಾಗಿಸಲಾಗಿತ್ತು. ಈ ಪ್ರದೇಶದಲ್ಲಿ ಇದೀಗ ಸೋಂಕಿಗೆ ಒಳಗಾಗಿರುವ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ. 


ಕಸಾಪ ವತಿಯಿಂದ ಆನ್‌ಲೈನ್ ಮುಖಾಂತರ ಗಾಯನ ಸ್ಪರ್ಧೆ

ಭದ್ರಾವತಿ, ಜು. ೨೨: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮೊದಲ ಬಾರಿಗೆ ಆನ್‌ಲೈನ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ೭೪ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶ ಭಕ್ತಿಗೀತೆಗಳ(ತಾಳ, ಪರಿಕರಗಳು, ಕೊರೋಕಿ) ಇಲ್ಲದೆ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. 
೧೪ ವರ್ಷದೊಳಗಿನ ಕಿರಿಯರ ಮತ್ತು ೧೫ ವರ್ಷ ಮೇಲ್ಪಟ್ಟ ಹಿರಿಯರ ಎರಡು ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ೩ ರಿಂದ ೪ ನಿಮಿಷದ ಗಾಯನದ ವಿಡಿಯೋ ಮಾಡಿ ಕಳಿಸಿಕೊಡಬೇಕು. ವಿಡಿಯೋ ಮಾಡುವಾಗ ಮೊದಲು ಸ್ಪರ್ಧಿಯ ಹೆಸರು, ವಿಳಾಸ ತಿಳಿಸಬೇಕು. ಗಾಯನದ ವಿಡಿಯೋ ಕ್ಲಿಪ್ ಮೊ: ೯೭೩೧೧೫೭೭೯೩ ಅಥವಾ ೯೪೪೯೯೫೧೩೦೦ ವಾಟ್ಸ್‌ಆಪ್ ನಂಬರ್‌ಗೆ ಜು.೩೦, ಸಂಜೆ ೫ ಗಂಟೆಯೊಳಗೆ ಕಳಿಸಿ ಕೊಡಬೇಕು. 
ವಿಜೇತರಾದ ಮೊದಲ ಮಂದಿಗೆ ಆ.೧೫ರ ಸ್ವಾತಂತ್ರ್ಯ ದಿನಾಚರಣೆಯಂದು ಬಹುಮಾನಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್, ಮೊ: ೯೭೩೧೧೫೭೭೯೩, ಕಾರ್ಯದರ್ಶಿ ಚನ್ನಪ್ಪ, ಮೊ: ೯೪೪೯೯೫೧೩೦೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಸಹೋದರನಿಂದಲೇ ಅನ್ಯಾಯ : ಬೀದಿಗೆಬಿದ್ದ ಕುಟುಂಬ

ಇಬ್ಬರು ಅಂಧ ವಿಕಲಚೇತನ ಮಕ್ಕಳನ್ನು ಹೊಂದಿರುವ ಭದ್ರಾವತಿ ತಾಲೂಕಿನ ಅಗರದಹಳ್ಳಿ ಗ್ರಾಮದ ನಿವಾಸಿ ಖಾಜಾವಲಿ ಕುಟುಂಬ. 
ಭದ್ರಾವತಿ, ಜು. ೨೨: ಇಬ್ಬರು ಅಂಧ ವಿಕಲಚೇತನ ಮಕ್ಕಳನ್ನು ಹೊಂದಿರುವ ತಾಲೂಕಿನ ಅಗರದಹಳ್ಳಿ ಗ್ರಾಮದ ಕುಟುಂಬವೊಂದರ ಬದುಕು ಇದೀಗ ಬೀದಿಗೆ ಬೀಳುವ ಹಂತಕ್ಕೆ ತಲುಪಿದ್ದು, ೧ ಎಕರೆ ಬಗರ್‌ಹುಕುಂ ಸಾಗುವಳಿ ಜಮೀನಿಗಾಗಿ ತಾಲೂಕು ದಂಡಾಧಿಕಾರಿಗಳ ಮೊರೆ ಹೋಗಿದೆ. 
ಅಗರದಹಳ್ಳಿ ಗ್ರಾಮದ ನಿವಾಸಿ ಖಾಜಾವಲಿ ಕುಟುಂಬ ಸಂಕಷ್ಟಕ್ಕೆ ಒಳಗಾಗಿದೆ. ಬಹಳ ವರ್ಷಗಳಿಂದ ಖಾಜಾವಲಿ ತನ್ನ ಅಣ್ಣ ಸಹೋದರ ಅಬ್ದುಲ್ ಜೊತೆ ವಾಸಿಸುತ್ತಿದ್ದು, ರಜೀಯಾ ಬೇಗಂ ಎಂಬ  ಮಹಿಳೆಯನ್ನು ವಿವಾಹವಾಗಿ ಇಬ್ಬರು ಅಂಧ ವಿಕಲಚೇತನ ಮಕ್ಕಳನ್ನು ಹೊಂದಿದ್ದಾರೆ. ಈ ಕುಟುಂಬಕ್ಕೆ ಕಾನೂನು ಪ್ರಕಾರ ಬರಬೇಕಾದ ೧ ಎಕರೆ ಜಮೀನು ಲಭಿಸಿಲ್ಲ. ಅಣ್ಣನಿಂದಲೇ ಅನ್ಯಾಯಕ್ಕೆ ಒಳಗಾಗಿದೆ. 
ಘಟನೆ ವಿವರ: 
ಖಾಜಾವಲಿ ಮತ್ತು ಅಬ್ದುಲ್ ಇಬ್ಬರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾಗ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಸರ್ವೆ ನಂ.೩೨ರಲ್ಲಿ  ೨ ಎಕರೆ ಬಕರ್‌ಹುಕುಂ ಸಾಗುವಳಿ ಜಮೀನು ಹೊಂದಿದ್ದು, ಸರ್ಕಾರ ಕಾನೂನು ಪ್ರಕಾರ ಒಂದು ಕುಟುಂಬಕ್ಕೆ ೧ ಎಕರೆ ಬಗರ್‌ಹುಕುಂ ಜಮೀನು ಮಂಜೂರಾತಿ ಮಾಡಿದ್ದು, ಆದರೆ ಈ ೨ ಎಕರೆ ಜಮೀನು ಮಾತ್ರ ಸಹೋದರ ಅಬ್ದುಲ್ ಕುಟುಂಬಕ್ಕೆ ನೀಡಲಾಗಿದೆ. ಅಲ್ಲದೆ ಜಮೀನು ದಾಖಲೆ ಪತ್ರಗಳನ್ನು ಸಹ ಮಾಡಿಕೊಡಲಾಗಿದೆ. ೨ ಎಕರೆ ಜಮೀನಿನಲ್ಲಿ ೧ ಎಕರೆ ಖಾಜಾವಲಿ ಕುಟುಂಬಕ್ಕೆ ನೀಡದೆ ಅನ್ಯಾಯ ವೆಸಗಲಾಗಿದೆ. 
ಸಹೋದರ ಅಬ್ದುಲ್ ತನ್ನ ಬಳಿ ದಾಖಲೆ ಪತ್ರಗಳು ಇರುವ ಕಾರಣ ಖಾಜಾವಲಿ ಕುಟುಂಬ ಜಮೀನು ಸಾಗುವಳಿ ಮಾಡದಂತೆ ತಡೆಯೊಡ್ಡುತ್ತಿದೆ. ಇದರಿಂದಾಗಿ ಆತಂಕಕ್ಕೆ ಒಳಗಾಗಿರುವ ಕುಟುಂಬ ರೈತ ಸಂಘದ ಬಳಿ ತನ್ನ ಸಂಕಷ್ಟ ಹೇಳಿಕೊಂಡಿದೆ. 
ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬದ ನೆರವಿಗೆ ರೈತ ಸಂಘದ ಹಿರಿಯ ಮುಖಂಡ ಯಶವಂತರಾವ್ ಘೋರ್ಪಡೆ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಂದಾಗಿದ್ದು, ಬುಧವಾರ ಈ ಸಂಬಂಧ ಅನ್ಯಾಯಕ್ಕೆ ಒಳಗಾಗಿರುವ ಕುಟುಂಬದೊಂದಿಗೆ ತಾಲೂಕು ಕಛೇರಿಗೆ ಆಗಮಿಸಿ ತಹಸೀಲ್ದಾರ್ ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಡುವಂತೆ ಮನವಿ ಮಾಡಿದ್ದಾರೆ. 
ಅಧಿಕಾರಿಗಳಿಂದ ಕಾನೂನು ಉಲ್ಲಂಘನೆ: 
ರೈತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಪತ್ರಿಕೆಯೊಂದಿಗೆ ಮಾತನಾಡಿ, ಅಧಿಕಾರಿಗಳು ಕಾನೂನು ಉಲ್ಲಂಘಿಸಿ ಜಮೀನು ಮಂಜೂರಾತಿ ಮಾಡಿದ್ದಾರೆ. ನಡೆದಿರುವ ತಪ್ಪನ್ನು ಅವರೇ ಸರಿಪಡಿಸಿ ಕೊಡಬೇಕು. ಇಬ್ಬರು ಅಂಧ ಮಕ್ಕಳೊಂದಿಗೆ ಜೀವನ ನಡೆಸುವುದೇ ಕಷ್ಟಕರವಾಗಿ ಈ ನಡುವೆ ಈ ಕುಟುಂಬಕ್ಕೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಬೆದರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕುಟುಂಬದ ನೆರವಿಗೆ ತಾಲೂಕು ಆಡಳಿತ ಮುಂದಾಗಬೇಕು. ತಹಸೀಲ್ದಾರ್‌ರವರು ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದರು. 

Tuesday, July 21, 2020

ಉಕ್ಕಿನ ನಗರದಲ್ಲಿ ಕೊರೋನಾ ಸ್ಪೋಟ : ಒಂದೇ ದಿನ ೧೦ ಪ್ರಕರಣ

ಭದ್ರಾವತಿಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಕೊರೋನಾ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. 
ಭದ್ರಾವತಿ, ಜು. ೨೧: ಉಕ್ಕಿನ ನಗರದಲ್ಲಿ ಕೊರೋನಾ ಸೋಂಕು ಮಂಗಳವಾರ ಸ್ಪೋಟಗೊಂಡಿದ್ದು, ಇದೆ ಮೊದಲ ಬಾರಿಗೆ ಒಂದೇ ದಿನ ೧೦ ಪ್ರಕರಣಗಳು ದಾಖಲಾಗಿವೆ. 
ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೂ ೭ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಇದೀಗ ಏಕಾಏಕಿ ೧೦ ಪ್ರಕರಣಗಳು  ಅದರಲ್ಲೂ ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿರುವುದು ಇಲ್ಲಿನ ನಿವಾಸಿಗಳಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. 
ಹಳೇನಗರದ ಖಲಂದರ್ ನಗರದಲ್ಲಿ ೪೦ ವರ್ಷದ ವ್ಯಕ್ತಿ, ಜಟ್‌ಪಟ್ ನಗರದಲ್ಲಿ ೧೬ ವರ್ಷದ ಹುಡುಗ, ಹೊಸಸಿದ್ದಾಪುರದಲ್ಲಿ ೩೮ ವರ್ಷದ ಯುವತಿ, ಕಾಗದನಗರ ೧ನೇ ವಾರ್ಡ್‌ನ ೫೦ ವರ್ಷದ ವ್ಯಕ್ತಿ, ಉಪ್ಪಾರ ಬೀದಿಯಲ್ಲಿ ೨೬ ವರ್ಷದ ಯುವತಿ, ಗೋಣಿಬೀಡಿನಲ್ಲಿ ೩೭ ವರ್ಷದ ಮಹಿಳೆ, ಹೊಸಮನೆ ಎನ್‌ಎಂಸಿ ಬಡಾವಣೆಯಲ್ಲಿ ೬೩ ಮಹಿಳೆ, ವೀರಾಪುರದಲ್ಲಿ ೬೫ ವರ್ಷದ ಮಹಿಳೆ ಮತ್ತು ಹೊಸಮನೆ ಶಿವಾಜಿ ಸರ್ಕಲ್ ಬಳಿ ೪೨ ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. 
        ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ,  ಆರೋಗ್ಯ ನಿರೀಕ್ಷಕಿ ಲತಾಮಣಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ. 
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಮತ್ತು ದೇವರನರಸೀಪುರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
       ಚಿಕಿತ್ಸಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿವಕುಮಾರ್ ಭೇಟಿ, ಪರಿಶೀಲನೆ : 
ಯಾವುದೇ ರೋಗ ಲಕ್ಷಣಗಳಿಲ್ಲದ ಕೊರೋನಾ ಸೋಂಕು ಪ್ರಕರಣಗಳ ಚಿಕಿತ್ಸೆಗಾಗಿ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಮತ್ತು ದೇವರನರಸೀಪುರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಶಿವಕುಮಾರ್ ಉಪಸ್ಥಿತರಿದ್ದರು. 

ಎರಡು ದಿನ ರೈತರಿಗೆ ಆನ್‌ಲೈನ್ ಮೂಲಕ ತರಬೇತಿ ಕಾರ್ಯಾಗಾರ

ಭದ್ರಾವತಿ, ಜು. ೨೧: ತಾಲೂಕಿನ ಹಳ್ಳಿಕೆರೆಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜು.೨೨ ಮತ್ತು ೨೪ರಂದು ಎರಡು ದಿನ ರೈತರಿಗೆ  ಆನ್‌ಲೈನ್ ಮೂಲಕ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 
ಜು.೨೨ರ ಮಧ್ಯಾಹ್ನ ೩ ಗಂಟೆಯಿಂದ ಮಧ್ಯಾಹ್ನ ೪ವರೆಗೆ ಹವಾಮಾನ ಮತ್ತು ಕೃಷಿ ವಿಷಯ ಕುರಿತು ಶಿವಮೊಗ್ಗ ಕೃಷಿ ತೋಟಗಾರಿಕೆ ವಿಶ್ವ ವಿದ್ಯಾನಿಲಯದ ಗ್ರಾಮೀಣ್ ಕೃಷಿ ಮೌಸಮ್ ಪ್ರಾಜೆಕ್ಟ್ ತಾಂತ್ರಿಕ ಅಧಿಕಾರಿ ಡಾ. ಪ್ರದೀಪ್ ಗೋಪಕ್ಕಲಿ ಮಾಹಿತಿ ನೀಡಲಿದ್ದು, ಗೂಗಲ್ ಮೀಟ್ ಲಾಗಿನ್ ಐ.ಡಿ ಡಬ್ಲ್ಯೂಟಿಎಸ್-ಎಐಎಸ್‌ಕೆ-ಎಎಂಎನ್(Wts-aisk-amn), ಲಿಂಕ್ಎಚ್‌ಟಿಟಿಪಿಎಸ್://ಮೀಟ್.ಗೂಗಲ್. ಕಾಂ. ಡಬ್ಲ್ಯೂ/ಡಬ್ಲ್ಯೂಟಿಎಸ್-ಎಐಎಸ್‌ಕೆ-ಎಎಂಎನ್(https://meet.google.com/Wts-aisk-amn) ಸಂಪರ್ಕಿಸಬಹುದಾಗಿದೆ. 
೨೪ರಂದು ಮಧ್ಯಾಹ್ನ ೩.೩೦ ರಿಂದ ೫ ಗಂಟೆ ವರೆಗೆ ಭತ್ತದ ಬೆಳೆಯಲ್ಲಿ ತಾಂತ್ರೀಕರಣ ವಿಷಯ ಕುರಿತು ತಾಲೂಕು ಕೃಷಿ ಇಲಾಕೆ ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕ ಬಿ. ರಾಕೇಶ್ ಮಾಹಿತಿ ನೀಡಲಿದ್ದು, ಲಾಗಿನ್  ಐ.ಡಿ ಕೆ.ಎಚ್.ಎಫ್-ಸಿಡಿವಿಎ-ಬಿಎಓ(khf-cdva-bao), ಲಿಂಕ್ ಎಚ್‌ಟಿಟಿಪಿಎಸ್://ಮೀಟ್.ಗೂಗಲ್.ಕಾಂ.ಡಬ್ಲ್ಯೂ/ಕೆ.ಎಚ್.ಎಫ್-ಸಿಡಿವಿಎ-ಬಿಎಓ(https://meet.google.com/khf-cdva-bao) ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ. 


ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಹಾಲಿ-ಮಾಜಿ ಶಾಸಕರ ಬಣಗಳ ನಡುವೆ ಮಾತಿನ ಚಕಮಕಿ

ತಾವರಘಟ್ಟ ಗ್ರಾಮದಲ್ಲಿ ಬಿಗುವಿನ ವಾತಾವರಣ, 

ಪೊಲೀಸರಿಂದ  ಲಘು ಲಾಟಿ ಪ್ರಹಾರ 

ಭದ್ರಾವತಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡುತ್ತಿರುವುದು. 
ಭದ್ರಾವತಿ: ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ಎರಡು ಬಣಗಳ ನಡುವೆ ಮಂಗಳವಾರ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ. 
ತಾವರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. ೨೯(ಹಳೇ ಸರ್ವೆ ನಂ.೧೪)ರ ಗೋಮಾಳ ಜಾಗದಲ್ಲಿ ಸ್ಮಶಾನ ನಿರ್ಮಾಣಕ್ಕೆ ಸರ್ಕಾರದಿಂದ ೧ ಎಕರೆ ೨೦ ಗುಂಟೆ ಜಮೀನು ಮಂಜೂರಾತಿಯಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ಸರ್ವೆ ಕಾರ್ಯ ನಡೆಸಲು ಗ್ರಾಮಕ್ಕೆ ತೆರಳಿದ್ದಾಗ ಗೋಮಾಳ ಒತ್ತುವರಿ ಮಾಡಿರುವ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಭದ್ರಾವತಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಬೆಂಬಲಿಗರು ಪ್ರತಿಭಟನೆ ನಡೆಸಿರುವುದು. 
     ಇದರಿಂದಾಗಿ ಸ್ಥಳಕ್ಕೆ ಆಗಮಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಮಶಾನಕ್ಕೆ ಜಾಗ ಬಿಟ್ಟುಕೊಡುವಂತೆ ಮನವಿ ಮಾಡಿದ್ದು, ಇದಕ್ಕೆ ಒಪ್ಪಂದ ರೈತರು ಗೋಮಾಳದಲ್ಲಿ ಖಾಲಿ ಜಾಗವಿದ್ದು, ಆ ಜಾಗವನ್ನು ಬಳಸಿಕೊಳ್ಳುವಂತೆ ಪಟ್ಟು ಹಿಡಿದಿದ್ದಾರೆ. 
ಒತ್ತುವರಿ ರೈತರ ಪರವಾಗಿ ಮಾಜಿ ಶಾಸಕ ಅಪ್ಪಾಜಿ ಬೆಂಬಲಕ್ಕೆ ಬಂದ ಹಿನ್ನಲೆಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದಾಗಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಟಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು ಎಂದು ಪ್ರತ್ಯಕ್ಷದರ್ಶಿಗಳು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. 
ಗೋಮಾಳ ಜಾಗದ ವಿಸ್ತೀರ್ಣದ ಬಗ್ಗೆ ಸ್ಪಷ್ಟ ಮಾಹಿತಿ ಯಾರ ಬಳಿಯೂ ಇಲ್ಲ. ಪ್ರಸ್ತುತ ಗೋಮಾಳ ಜಾಗದ ಸುತ್ತಮುತ್ತ ೫ ಮಂದಿ ರೈತರು ಜಮೀನು ಹೊಂದಿದ್ದು, ಈ ರೈತರಿಂದ ಗೋಮಾಳ ಜಾಗ ಒತ್ತುವರಿ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ರೈತರ ಖಾತೆಯಲ್ಲಿ ದಾಖಲಾಗಿರುವ ಮಾಹಿತಿಯಂತೆ ಸರ್ವೆ ಕಾರ್ಯ ನಡೆಸಿ ಉಳಿದ  ಜಾಗವನ್ನು ಸ್ಮಶಾನಕ್ಕೆ ಬಿಟ್ಟು ಕೊಡಲಿ ಎಂಬುದು ಗ್ರಾಮಸ್ಥರ ವಾದವಾಗಿದೆ. 
ಭದ್ರಾವತಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣಗೊಂಡ ಹಿನ್ನಲೆಯಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. 
       ಆದರೆ ಒತ್ತುವರಿ ಮಾಡಿರುವ ರೈತರು ಈಗಾಗಲೇ ಒತ್ತುವರಿ ಮಾಡಿರುವ ಜಾಗದಲ್ಲಿ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಖಾಲಿ ಇರುವ ಜಾಗವನ್ನು ಸ್ಮಶಾನಕ್ಕೆ ಬಳಿಸಿಕೊಳ್ಳುವಂತೆ ಪಟ್ಟು ಹಿಡಿದ್ದಾರೆ.