ಭದ್ರಾವತಿ ಎಂಪಿಎಂ ಕಾರ್ಖಾನೆಗೆ ಬುಧವಾರ ಭೇಟಿ ನೀಡಿದ ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಜು. ೧: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕಾರ್ಖಾನೆಯನ್ನು ಆರಂಭಿಸಲು ಹಲವು ದಿಕ್ಕಿನಲ್ಲಿ ಚರ್ಚಿಸಲಾಗುತ್ತಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಅವರು ಬುಧವಾರ ಕಾರ್ಖಾನೆಗೆ ಭೇಟಿ ನೀಡಿ ಎಂಪಿಎಂ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಮುಚ್ಚಲು ಬಿಡುವುದಿಲ್ಲ ಎಂಬ ಸಂದೇಶವನ್ನು ಈಗಾಗಲೇ ಮುಖ್ಯಮಂತ್ರಿಗಳು ನೀಡಿದ್ದಾರೆ. ದೇಶ ಹಾಗೂ ರಾಜ್ಯಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ಬೃಹತ್ ಕೈಗಾರಿಕೆಯೊಂದು ಪ್ರಸ್ತುತ ಸ್ಥಗಿತಗೊಂಡಿರುವುದು ನೋವಿನ ವಿಚಾರವಾಗಿದೆ. ಈ ಕಾರ್ಖಾನೆಯನ್ನು ಹೇಗಾದರೂ ಮಾಡಿ ಪುನಶ್ಚೇತನಗೊಳಿಸುವ ಮೂಲಕ ಇಲ್ಲಿನ ನಿರುದ್ಯೋಗಿಗಳಿಗೆ, ಯುವಕರಿಗೆ ಉದ್ಯೋಗ ಕಲ್ಪಿಸಿಕೊಡಬೇಕಾಗಿದೆ ಎಂದರು.
ಸಚಿವರಾಗಿ ಅಧಿಕಾರ ವಹಿಸಗೊಂಡ ನಂತರ ಆರಂಭದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಬೇಕಾಗಿತ್ತು. ಆದರೆ ಕೊರೋನಾ ಹಿನ್ನಲೆಯಲ್ಲಿ ಬರಲು ಸಾಧ್ಯವಾಗಲಿಲ್ಲ. ಬೆಂಗಳೂರಿನಲ್ಲಿ ಈಗಾಗಲೇ ಹಲವಾರು ಬಾರಿ ಸಭೆಗಳನ್ನು ನಡೆಸಿ ಕಾರ್ಖಾನೆಯ ಸ್ಥಿತಿಗತಿಗಳನ್ನು ಅರಿತುಕೊಳ್ಳಲಾಗಿದೆ. ಮುಖ್ಯಮಂತ್ರಿಗಳು ಖುದ್ದಾಗಿ ಹೆಚ್ಚಿನ ಆಸಕ್ತಿ ವಹಿಸಿ ಕಾರ್ಖಾನೆಗೆ ಈ ಹಿಂದೆ ಅರಣ್ಯ ಇಲಾಖೆಯಿಂದ ಪಡೆಯಲಾಗಿದ್ದ ಅರಣ್ಯ ಭೂಮಿಯನ್ನು ಪುನಃ ಕಾರ್ಖಾನೆಗೆ ಉಳಿಸಿಕೊಂಡಿದ್ದಾರೆ. ಇದು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಮೊದಲ ಪ್ರಯತ್ನವಾಗಿದೆ. ಈಗಾಗಲೇ ಕಾರ್ಖಾನೆಗೆ ಹಲವು ಖಾಸಗಿ ಕಂಪನಿಗಳು ಭೇಟಿ ಪರಿಶೀಲನೆ ನಡೆಸಿವೆ. ಸರ್ಕಾರ ಸಹ ಮಾತುಕತೆ ನಡೆಸಿದೆ. ಮುಂದಿನ ದಿನಗಳಲ್ಲಿ ಕಾರ್ಖಾನೆಯನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ವಹಿಸುವುದು ಅಥವಾ ಗುತ್ತಿಗೆ ಆಧಾರದಲ್ಲಿ ನೀಡುವುದು ಸೇರಿದಂತೆ ಇನ್ನಿತರ ವಿಚಾರಗಳ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಆರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಪ್ರಸ್ತುತ ಕಾರ್ಖಾನೆ ವಿವಿಧ ಬ್ಯಾಂಕ್ಗಳಲ್ಲಿ ಹೊಂದಿರುವ ಸಾಲ, ಕಚ್ಛಾ ಸಾಮಗ್ರಿಗಳು, ಕಾರ್ಮಿಕರ ಸ್ಥಿತಿಗಳು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಹೇಗಾದರೂ ಮಾಡಿ ಕಾರ್ಖಾನೆಯನ್ನು ಪುನಃ ಆರಂಭಿಸಿ ಕ್ಷೇತ್ರದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ ಶೆಟ್ಟಣ್ಣನವರ್, ಮುಖಂಡರಾದ ಜಿ. ಧರ್ಮಪ್ರಸಾದ್, ಟಿ. ಚಂದ್ರೇಗೌಡ ಸೇರಿದಂತೆ ಇನ್ನಿತರರು ಮಾತನಾಡಿದರು.
ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ಜಿಲ್ಲಾಧಿಕಾರಿ ಶಿವಕುಮಾರ್, ಕರ್ನಾಟಕ ರಾಜ್ಯ ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Please open first other next open the factory please help the youths and educatsted people please open the factory 5 years told him factory reopen but not open please this year open the factory please open
ReplyDelete