Thursday, July 2, 2020

ವೈದ್ಯರ ಸೇವೆ ಎಂದಿಗೂ ಅವಿಸ್ಮರಣೀಯ : ಎನ್. ಕೃಷ್ಣಪ್ಪ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
ಭದ್ರಾವತಿ, ಜು. ೨: ಜಗತ್ತಿನಾದ್ಯಂತ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂತಹ ಸಂದರ್ಭದಲ್ಲಿ ವೈದ್ಯರ ಸೇವೆ ಅವಿಸ್ಮರಣೀಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎನ್. ಕೃಷ್ಣಪ್ಪ ಹೇಳಿದರು. 
ಅವರು ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. 
ಕೊರೋನಾ ವೈರಸ್ ನಿರ್ಮೂಲನೆಯಲ್ಲಿ ವೈದ್ಯರ ಪಾತ್ರ ಪ್ರಮುಖವಾಗಿದೆ. ತಾಲೂಕಿನಲ್ಲಿ ವೈದ್ಯರು ಯಾವುದೇ ಭೀತಿ ಇಲ್ಲದೆ ಪ್ರಾಮಾಣಿಕ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಸೇವೆ ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿದ್ಯಾಸಂಸ್ಥೆ ವತಿಯಿಂದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. 
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ಮಾತನಾಡಿ, ಜನರು ತಮ್ಮ ಜವಾಬ್ದಾರಿಗಳನ್ನು ಅರಿತು ನಡೆದುಕೊಂಡಲ್ಲಿ ಮಾತ್ರ ಕೊರೋನಾ ವೈರಸ್ ನಿಮೂರ್ಲನೆ ಸಾಧ್ಯ. ಕೊರೋನಾ ವೈರಸ್‌ಗೆ ಯಾರು ಸಹ ಭೀತಿಪಡುವ ಅಗತ್ಯವಿಲ್ಲ. ಎಲ್ಲರೂ ಜಾಗ್ರತೆಯಿಂದ ನಡೆದುಕೊಳ್ಳಬೇಕೆಂದರು. 
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್‌ರಾಜ್, ಕಿರಿಯ ಆರೋಗ್ಯ ಸಹಾಯಕ ಎಚ್.ಎಂ ನಾಗರಾಜಪ್ಪ, ಶ್ರೀಕಾಂತ್, ಎಸ್.ಜೆ. ಮಹೇಶ್ವರ, ಪಿ. ಕೃಷ್ಣ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಕೆ ಚಂದ್ರಪ್ಪ, ಉಪಾಧ್ಯಕ್ಷ ಅಶೋಕ್‌ರಾವ್, ಖಜಾಂಚಿ ಎಸ್.ಕೆ ಮೋಹನ್, ರಂಗನಾಥ ಪ್ರಸಾದ್, ಎಂ.ಡಿ ಮಲ್ಲಿಕಾರ್ಜುನ, ಎಂ.ಎಸ್ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment