Sunday, July 12, 2020

ರಾಮ್ ಸೇನಾ ಸಂಘಟನೆ ವತಿಯಿಂದ ವನಮಹೋತ್ಸವ

ಭದ್ರಾವತಿಯಲ್ಲಿ ಕರ್ನಾಟಕ ರಾಮ್ ಸೇನಾ ಜಿಲ್ಲಾ ಹಾಗೂ ತಾಲೂಕು ಘಟಕದವತಿಯಿಂದ ಮೂಲ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಆವರಣದಲ್ಲಿ ಭಾನುವಾರ ಧಾರ್ಮಿಕ ಆಚರಣೆಗಳೊಂದಿಗೆ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 
ಭದ್ರಾವತಿ, ಜು. ೧೨: ಪರಿಸರ ರಕ್ಷಣೆಗೆ ಕಾಳಜಿ ವಹಿಸಿರುವ ಕರ್ನಾಟಕ ರಾಮ್ ಸೇನಾ ಸಂಘಟನೆ ವತಿಯಿಂದ ರಾಜ್ಯಾದ್ಯಂತ ವಿಶೇಷವಾಗಿ ಧಾರ್ಮಿಕ ಆಚರಣೆಗಳೊಂದಿಗೆ ವನಮಹೋತ್ಸವ ಆಚರಿಸಲಾಗುತ್ತಿದ್ದು, ಭಾನುವಾರ ಜಿಲ್ಲಾ ಹಾಗು ತಾಲೂಕು ಘಟಕದ ವತಿಯಿಂದ ಮೂಲ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. 
ಪರಿಸರ ಸಂರಕ್ಷಣೆಯಲ್ಲಿ ದೇವರನ್ನು ಕಾಣಲು ಪ್ರಯತ್ನಿಸಿ ಎಂಬ ಸಂದೇಶದೊಂದಿಗೆ ಸಂಘಟನೆ ಪ್ರಮುಖರು, ಕಾರ್ಯಕರ್ತರು ಸಸಿಗಳನ್ನು ನೆಡುವ ಮೂಲಕ ಗಮನ ಸೆಳೆದರು. 
ಜಿಲ್ಲಾಧ್ಯಕ್ಷ ಉಮೇಶ್ ಗೌಡ, ತಾಲೂಕು ಅಧ್ಯಕ್ಷ ಸಚಿನ್ ವರ್ಣೇಕರ್, ತೆರಿಕೆರೆ ತಾಲೂಕು ಅಧ್ಯಕ್ಷ ಗುರು, ಮೂಲ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಅರ್ಚಕ ಕೇಶವಮೂರ್ತಿ ಹಾಗೂ ಸಂಘಟನೆಯ ಗೌರವಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 



No comments:

Post a Comment