Thursday, July 16, 2020

ಕೆರೆಗಳ ಬೌಂಡರಿ ನಿಗದಿಪಡಿಸಲು ಇಬ್ಬರು ಸರ್ವೆಯರ್ ನೇಮಕಗೊಳಿಸಲು ಮನವಿ

ಇಬ್ಬರು ಸರ್ವೆಯವರನ್ನು ನಿಯೋಜಿಸಿ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಪಡಿಸಬೇಕೆಂದು ಒತ್ತಾಯಿಸಿ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗುರುವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೧೬: ಇಬ್ಬರು ಸರ್ವೆಯವರನ್ನು ನಿಯೋಜಿಸಿ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಪಡಿಸಬೇಕೆಂದು ಒತ್ತಾಯಿಸಿ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗುರುವಾರ ತಹಸೀಲ್ದಾರ್ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
  ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ಕ್ಕೂ ಅಧಿಕ ಕೆರೆಗಳಿದ್ದು, ಸುಮಾರು ೨೫ ವರ್ಷಗಳಿಂದ ಬೌಂಡರಿ ನಿಗದಿಪಡಿಸದೇ ಇರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿರುವುದಿಲ್ಲ. ಪ್ರಸ್ತುತ ನಗರಸಭೆ ಪೌರಾಯುಕ್ತ ಮನೋಹರ್ ಕೆರೆಗಳ ಅಭಿವೃದ್ಧಿಗೆ ಉತ್ಸುಕರಾಗಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಅಂತರ್ಜಲಮಟ್ಟ ಹೆಚ್ಚಿಸಿ ದನಗಾಹಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ನಗರಸಭೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಮೀನುಗಾರಿಕೆ ಇಲಾಖೆ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಇವುಗಳ ಸಹಯೋಗದೊಂದಿಗೆ ಬೌಂಡರಿ ನಿಗದಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಿ ಕೊಡಬೇಕೆಂದು ಕೋರಲಾಗಿದೆ.
  ತಕ್ಷಣ ಇಬ್ಬರು ಸರ್ವೆಯವರನ್ನು ನೇಮಿಸಿ ಬೌಂಡರಿ ನಿಗದಿ ಪಡಿಸುವಂತೆ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದರು.

No comments:

Post a Comment