ಭದ್ರಾವತಿಯಲ್ಲಿ ಬುಧವಾರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಅತಿ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ೭ನೇ ಸ್ಥಾನ ಕಾಯ್ದುಕೊಂಡಿರುವ ಜಾವಳ್ಳಿ ಶ್ರೀ ಅರೋಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ,ಕೆ. ರಾಜ್ಶೇಖರ್ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಸನ್ಮಾನಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೧೫: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಅತಿ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ೭ನೇ ಸ್ಥಾನ ಕಾಯ್ದುಕೊಂಡಿರುವ ಜಾವಳ್ಳಿ ಶ್ರೀ ಅರೋಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ. ರಾಜ್ಶೇಖರ್ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಭಿನಂದಿಸಿದೆ.
ಗಾಂಧಿನಗರ ನಿವಾಸಿ ನ್ಯಾಯವಾದಿ ಎನ್.ಎಸ್ ಕುಮಾರ್ ಹಾಗೂ ಸಿ.ಎಸ್ ವಿಶಾಲಾಕ್ಷಿ ದಂಪತಿ ಪುತ್ರ ಕೆ. ರಾಜ್ಶೇಖರ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೬೦೦ಕ್ಕೆ ೫೮೬ ಅಂಕಗಳೊಂದಿಗೆ ಶೇ.೯೭.೬೭ ಫಲಿತಾಂಶ ಪಡೆದುಕೊಂಡಿದ್ದು, ಉತ್ತಮ ಸಾಧನೆ ಮಾಡಿದ್ದಾರೆ. ಇವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಬಿಳಿಕಿ ಹಿರೇಮಠ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಉಪಾಧ್ಯಕ್ಷ ವಾಗೀಶ್, ಜಿಲ್ಲಾ ನಿದೇ೯ಶಕರಾದ ಜಿ.ಸಿ ಸುಕುಮಾರ್ ಹಾಗೂ ಯುವ ಮುಖಂಡರಾದ ಎಚ್. ಮಂಜುನಾಥ್, ಆನಂದ್ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment