ಕೆ.ವಿ ಚಂದ್ರಶೇಖರ್, ಸಿ. ಸಿಂಚನ ನೇತೃತ್ವದ ತಂಡ ಅಧಿಕಾರ ಸ್ವೀಕಾರ
ಭದ್ರಾವತಿ ಲಯನ್ಸ್ ಮತ್ತು ಲಿಯೋ ಕ್ಲಬ್ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನ್ಯೂಟೌನ್ ಲಯನ್ಸ್ ಭವನದಲ್ಲಿ ನಡೆಯಿತು.
ಭದ್ರಾವತಿ, ಜು. ೧೮: ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನ್ಯೂಟೌನ್ ಲಯನ್ಸ್ ಭವನದಲ್ಲಿ ನಡೆಯಿತು.
ಮಾಜಿ ಜಿಲ್ಲಾ ಗವರ್ನರ್ ಡಾ. ಬಿ.ಎಸ್ ನಾಗಪ್ರಕಾಶ್ ಪದಗ್ರಹಣ ನೆರವೇರಿಸಿದರು. ನೂತನ ಅಧ್ಯಕ್ಷರಾಗಿ ಕೆ.ವಿ ಚಂದ್ರಶೇಖರ್, ಕಾರ್ಯದರ್ಶಿಯಾಗಿ ಆರ್. ರಾಮಮೂರ್ತಿ ಮತ್ತು ಖಜಾಂಚಿಯಾಗಿ ಎನ್ ಶಿವಕುಮಾರ್ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಿ. ಸಿಂಚನ, ಕಾರ್ಯದರ್ಶಿಯಾಗಿ ಆರ್. ನವೀನ್ ಮತ್ತು ಖಜಾಂಚಿಯಾಗಿ ಲಕ್ಷ್ಮೀ ಎಸ್ ಕುಮಾರ್ ಅಧಿಕಾರ ಸ್ವೀಕರಿಸಿದರು.
ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ, ವಲಯ ಅಧ್ಯಕ್ಷರಾದ ಅನಂತಕೃಷ್ಣ ನಾಯಕ್, ಕುಮಾರ್, ಮಾಜಿ ಜಿಲ್ಲಾ ಗವರ್ನರ್ ಬಿ. ದಿವಾಕರ ಶೆಟ್ಟಿ, ಮಾಜಿ ವಲಯ ಅಧ್ಯಕ್ಷರಾದ ಹೆಬ್ಬಂಡಿ ನಾಗರಾಜ್, ಏಸುದಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಿಕಟಪೂರ್ವ ಅಧ್ಯಕ್ಷ ಎಚ್.ಆರ್ ಕುಮಾರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎ.ಎನ್ ಕಾರ್ತಿಕ್ ಮತ್ತು ಖಜಾಂಚಿ ನಾಗರಾಜ್ ಶೇಟ್ ವಾರ್ಷಿಕ ಕಾರ್ಯ ಚಟುವಟಿಕೆಗಳನ್ನು ವಿವರಿಸಿ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಕ್ಲಬ್ ಹಿರಿಯ ಸದಸ್ಯರಾದ ಡಾ. ಯು. ಕರುಣಾಕರ ಶೆಟ್ಟಿ, ಡಾ. ರವೀಂದ್ರನಾಥ ಕೋಠಿ, ಎಚ್.ವಿ ಶಿವರುದ್ರಪ್ಪ, ಡಾ. ಜಿ.ಎಂ ನಟರಾಜ್, ವೆಂಕಟರಮಣ ಶೇಟ್, ದೇವರಾಜ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. ಭುವನೇಶ್ವರ್ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment