Monday, July 13, 2020

ತಾಂಡ ಸೀಲ್‌ಡೌನ್ : ಗ್ರಾಮಸ್ಥರ ನೆರವಿಗೆ ಮುಂದಾಗಲು ಆಗ್ರಹ


ಭದ್ರಾವತಿ, ಜು. ೧೩: ಮಹಾಮಾರಿ ಕೊರೋನಾ ವೈರಸ್ ಸೋಂಕು ತಾಲೂಕಿನ ಕಾರೇಹಳ್ಳಿ ತಾಂಡ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದಾಗಿ ಗ್ರಾಮಸ್ಥರು ಸಂಕಷ್ಟಕ್ಕೆ ಒಳಗಾಗಿದ್ದು, ತಕ್ಷಣ ಗ್ರಾಮಸ್ಥರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ತಾಲೂಕು ಬಂಜಾರ ಯುವಕ ಸಂಘ ಒತ್ತಾಯಿಸಿದೆ. 
ತಾಂಡದಲ್ಲಿ ಪರಿಶಿಷ್ಟ ಜಾತಿಯ ಲಂಬಾಣಿ ಕುಟುಂಬದವರು ಕೂಲಿಯನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ. ಸೀಲ್‌ಡೌನ್ ಪರಿಣಾಮ ಕಳೆದ ೪ ದಿನಗಳಿಂದ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಈ ಕುಟುಂಬದವರ ನೆರವಿಗೆ ಸರ್ಕಾರ ಮುಂದಾಗಬೇಕು. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸಂಘದ ಅಧ್ಯಕ್ಷ ಕೃಷ್ಣ ನಾಯ್ಕ, ಗೌರವಾಧ್ಯಕ್ಷ ಶಂಕ್ರಾನಾಯ್ಕ, ಕಾರ್ಯದರ್ಶಿ ಪ್ರವೀಣ್ ಕುಮಾರ್ ಮತ್ತು ಖಜಾಂಚಿ ನಾಗಾನಾಯ್ಕ ಆಗ್ರಹಿಸಿದ್ದಾರೆ. 

No comments:

Post a Comment