ಭದ್ರಾವತಿ, ಜು. ೨೩: ತಾಲೂಕಿನ ಹಳೇ ಕೂಡ್ಲಿಗೆರೆ ಗ್ರಾಮದ ಮನೆಯೊಂದರಲ್ಲಿ ಗುರುವಾರ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ತಹಸೀಲ್ದಾರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭದ್ರಾವತಿ, ಜು. ೨೩: ತಾಲೂಕಿನ ಹಳೇ ಕೂಡ್ಲಿಗೆರೆ ಗ್ರಾಮದ ಮನೆಯೊಂದರಲ್ಲಿ ಗುರುವಾರ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಶೇ.೮೦ರಷ್ಟು ಹಾಗೂ ವ್ಯಕ್ತಿಯೊಬ್ಬರಿಗೆ ಶೇ.೫೦ರಷ್ಟು ಸುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಶಿವಕುಮಾರ್ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಗ್ರಾಮ ಲೆಕ್ಕಿಗ ನಾರಾಯಣ ಗೌಡ ತಹಸೀಲ್ದಾರ್ ಭೇಟಿ ಸಂದರ್ಭದಲ್ಲಿ ಉಪಸ್ಥಿತರಿದ್ದರು.
No comments:
Post a Comment