Sunday, July 19, 2020

ಸೀಲ್‌ಡೌನ್ ಪ್ರದೇಶದ ನಿವಾಸಿಗಳಿಗೆ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿ ಎನ್‌ಎಂಸಿ ಮುಖ್ಯ ರಸ್ತೆಯ ಬಲಭಾಗದ ಉಡುಗಲಮ್ಮ ದೇವಸ್ಥಾನ ಸಮೀಪ ಭೋವಿಕಾಲೋನಿ ವಾಪ್ತಿಗೆ ಒಳಪಡುವ ಪ್ರದೇಶ ಸೀಲ್‌ಡೌನ್ ಪ್ರದೇಶದ ನಿವಾಸಿಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ಬಿಜೆಪಿ ಪಕ್ಷದ ನಿಕಟಪೂರ್ವ ಅಧ್ಯಕ್ಷ ರುಗಳಾದ ಜಿ. ಆನಂದ್ ಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ವಿತರಿಸಿ ಸಂಕಷ್ಟಕ್ಕೆ ಸ್ಪಂದಿಸಿದರು. 
ಭದ್ರಾವತಿ, ಜು. ೧೯: ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ನಗರಸಭೆ ವ್ಯಾಪ್ತಿಯ ಬಹುತೇಕ ಭಾಗಗಳು ಸೀಲ್‌ಡೌನ್‌ಗಳಾಗಿ ರೂಪುಗೊಳ್ಳುತ್ತಿವೆ. ಇದರಿಂದಾಗಿ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು, ನಗರದ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ದಾನಿಗಳು ಇವರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. 
ಎನ್‌ಎಂಸಿ ಮುಖ್ಯ ರಸ್ತೆಯ ಬಲಭಾಗದ ಉಡುಗಲಮ್ಮ ದೇವಸ್ಥಾನ ಸಮೀಪ ಭೋವಿಕಾಲೋನಿ ವಾಪ್ತಿಗೆ ಒಳಪಡುವ ಪ್ರದೇಶ ಸೀಲ್‌ಡೌನ್ ಮಾಡಲಾಗಿದ್ದು, ಇಲ್ಲಿನ ನಿವಾಸಿಗಳಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ಬಿಜೆಪಿ ಪಕ್ಷದ ನಿಕಟಪೂರ್ವ ಅಧ್ಯಕ್ಷ ರುಗಳಾದ ಜಿ. ಆನಂದ್ ಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ವಿತರಿಸಿ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. 
ನಿವಾಸಿಗಳು ಯಾವುದೇ ಕಾರಣಕ್ಕೂ ಆತಂಕಗೊಳ್ಳದೆ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು. ಪ್ರಮುಖರಾದ ಸುಬ್ಬಣ್ಣ, ಚೌಡಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment