Friday, July 24, 2020

ಮನೆ ಹಿಂಭಾಗ ನರ್ಸರಿ ಮಾದರಿ ಅಕ್ರಮ ಗಾಂಜಾ ಬೆಳೆ : ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ

೧೦ ಕೆ.ಜಿ, ೩೦೦ ಗ್ರಾಂ. ಗಾಂಜಾ ಬೆಳೆ, ಓರ್ವ ವ್ಯಕ್ತಿ ವಶಕ್ಕೆ 

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮನೆಯೊಂದರ ಮೇಲೆ ಗ್ರಾಮಾಂತರ ಠಾಣೆ  ಪೊಲೀಸರು ದಾಳಿ ನಡೆಸಿ ನರ್ಸರಿ ಮಾದರಿಯಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಬೆಳೆ ವಶಪಡಿಸಿಕೊಂಡಿರುವುದು. 
ಭದ್ರಾವತಿ, ಜು. ೨೪ : ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮನೆಯೊಂದರ ಮೇಲೆ ಗ್ರಾಮಾಂತರ ಠಾಣೆ  ಪೊಲೀಸರು ದಾಳಿ ನಡೆಸಿ ನರ್ಸರಿ ಮಾದರಿಯಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಬೆಳೆ ವಶಪಡಿಸಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. 
ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸ್ ಉಪಾಧೀಕ್ಷಕ ಸುಧಾಕರನಾಯ್ಕ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ದೇವರಾಜ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ಕೂಡ್ಲಿಗೆರೆ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ ಹಿಂಭಾಗ ವಾಸವಿರುವ ಯುವರಾಜ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದು, ಮನೆಯ ಹಿಂಭಾಗದಲ್ಲಿ ಬೆಳೆಯಲಾಗಿದ್ದ ಸುಮಾರು ೧೦ ಕೆ.ಜಿ ೩೦೦ ಗ್ರಾಂ. ತೂಕದ ಗಾಂಜಾ ಬೆಳೆ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಯುವರಾಜ್(೩೮)ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. 

No comments:

Post a Comment